Just In
- 10 min ago 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- 2 hrs ago ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- 11 hrs ago ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- 12 hrs ago ಮೀನ ರಾಶಿಯಲ್ಲಿ ಬುಧ ವಕ್ರೀಯ ಚಲನೆ ಮಾಡುವಾಗ ಈ 5 ರಾಶಿಯವರು ವೃತ್ತಿ ಜೀವನದ ಬಗ್ಗೆ ಜಾಗ್ರತೆ
Don't Miss
- Finance 2023 ಡಿಸೆಂಬರ್ ವೇಳೆಗೆ 160 ಲಕ್ಷ ಕೋಟಿ ರೂ. ದಾಟಿದ ಸರ್ಕಾರದ ಸಾಲ!
- Automobiles Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- News Karnataka Lok Sabha: 28 ಕ್ಷೇತ್ರಗಳ ಜಾತಿವಾರು ಅಭ್ಯರ್ಥಿಗಳು ಯಾರು? ಮಾಹಿತಿ ಇಲ್ಲಿದೆ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Movies "ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಕ್ಷಾಬಂಧನ 2021: ಈ ರಾಶಿಯವರಿಗೆ ಗಜಕೇಸರಿ ಯೋಗದಿಂದ ಅದೃಷ್ಟ ಬದಲಾಗಲಿದೆ!
ಸಹೋದರ-ಸಹೋದರಿಯರ ಸಂಬಂಧದ ಹಬ್ಬ ರಕ್ಷಾ ಬಂಧನ ಸಮೀಪಿಸುತ್ತಿದೆ. ಗಸ್ಟ್ 22ರಂದು ನಡೆಯಲಿರುವ ರಕ್ಷಾಬಂಧನವು ಈ ಬಾರಿ ಅನೇಕ ವಿಶೇಷತೆಗಳನ್ನು ಹೊತ್ತು ತಂದಿದೆ. ಒಂದು ಕಡೆ, ಈ ದಿನ ಯಾವುದೇ ಭದ್ರಾ ಅವಧಿ ಇರುವುದಿಲ್ಲ, ಭದ್ರಾ ಅವಧಿಯಲ್ಲಿ ರಾಖಿ ಕಟ್ಟಬಾರದು ಎಂದು ಹೇಳಲಾಗುತ್ತದೆ. ಆದ್ದರಿಂದ ಈ ವರ್ಷ, ಸಹೋದರಿಯರು ತಮ್ಮ ಸಹೋದರರಿಗೆ ದಿನವಡೀ ಯಾವುದೇ ಸಮಯದಲ್ಲಿ ರಾಖಿ ಕಟ್ಟಬಹುದು.
ಮತ್ತೊಂದೆಡೆ, ಈ ಬಾರಿ ರಕ್ಷಾಬಂಧನದಂದು, ಕುಂಭದಲ್ಲಿ ಚಂದ್ರನು ಇರುತ್ತಾನೆ ಮತ್ತು ಕುಂಭ ರಾಶಿಯಲ್ಲಿ ಗುರು ಹಿಮ್ಮುಖ ಚಲನೆಯಲ್ಲಿರುತ್ತಾನೆ. ಜ್ಯೋತಿಷ್ಯದ ಪ್ರಕಾರ, ಗುರು ಮತ್ತು ಚಂದ್ರನ ಈ ಸಂಯೋಗದಿಂದಾಗಿ ಗಜಕೇಸರಿ ಯೋಗವು ರೂಪುಗೊಳ್ಳುತ್ತಿದೆ. ಜ್ಯೋತಿಷ್ಯದಲ್ಲಿ ಗಜಕೇಸರಿ ಯೋಗವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಈ ದಿನ ಮಂಗಳಕರವಾದ ಕೆಲಸವನ್ನು ಮಾಡಿದರೆ, ಅದರಲ್ಲಿ ವಿಜಯ ಸಿಗುವ ಸಾಧ್ಯತೆಯಿದೆ. ಈ ಯೋಗವು ಕೆಲವು ರಾಶಿಚಕ್ರ ಚಿಹ್ನೆಗಳಿಗೆ ಬಹಳ ಶುಭಕರವಾಗಿದ್ದು, ಯಾವೆಲ್ಲಾ ಎಂಬುದನ್ನು ನೋಡೋಣ.
ರಕ್ಷಾಬಂಧನದಂದು ರೂಪುಗೊಳ್ಳುವ ಗಜಕೇಸರಿ ಯೋಗವು ಯಾವೆಲ್ಲಾ ರಾಶಿಗಳಿಗೆ ಶುಭಕರವಾಗಿರುತ್ತವ ಎಂಬುದನ್ನು ಈ ಕೆಳಗೆ ನೀಡಲಾಗಿದೆ:
ಧನಸ್ಸು:
ಈ ರಾಶಿಯ ಜನರು ಆರ್ಥಿಕ ಲಾಭಗಳನ್ನು ಪಡೆಯುವ ಉತ್ತಮ ಅವಕಾಶಗಳನ್ನು ಹೊಂದಿರುತ್ತಾರೆ, ಜೊತೆಗೆ ಖ್ಯಾತಿಯು ಹೆಚ್ಚಾಗುತ್ತದೆ. ಕೆಲಸದಲ್ಲಿ ಯಶಸ್ಸು ಇರುತ್ತದೆ. ನಿಲ್ಲಿಸಿದ ಕೆಲಸವನ್ನು ಮುಂದುವರಿಸುತ್ತೀರಿ. ನೀವು ಸ್ವಲ್ಪ ಸಮಯದವರೆಗೆ ಪ್ರಮುಖ ವಹಿವಾಟುಗಳನ್ನು ಮಾಡಲು ಬಯಸಿದರೆ, ಅದನ್ನು ಈ ಸಮಯದಲ್ಲಿ ಮಾಡಬಹುದು. ಇದರಿಂದು ಒಳ್ಳೆಯ ಲಾಭ ಸಿಗುವುದು.
ಮೀನ:
ನಿಮ್ಮ ಜೀವನದಲ್ಲಿ ದೀರ್ಘಕಾಲದಿಂದ ಬಿಟ್ಟು ಬಿಡದೇ ಕಾಡುತ್ತಿದ್ದ ತೊಂದರೆಗಳಿಗೆ ವಿದಾಯ ಹೇಳುವ ಸಮಯ ಬಂದಿದೆ. ನಿಮ್ಮ ಆಸೆಗಳು ಅಥವಾ ಕನಸುಗಳು ನನಸಾಗಬಹುದು. ಹಣ ಉತ್ತಮವಾಗಿರಲಿದೆ. ನಿಮ್ಮ ಎಲ್ಲಾ ಕೆಲಸವನ್ನು ಸುಲಭವಾಗಿ ಮಾಡಿ ಮುಗಿಸುತ್ತೀರಿ ಮತ್ತು ಅದಕ್ಕಾಗಿ ನೀವು ಪ್ರಶಂಸೆಯನ್ನೂ ಪಡೆಯುತ್ತೀರಿ. ಒಟ್ಟಾರೆಯಾಗಿ, ಗಜ ಕೇಸರಿ ಯೋಗವು ನಿಮಗೆ ಅತ್ಯಂತ ಮಂಗಳಕರವಾಗಿದೆ.
ಕರ್ಕ:
ಈ ರಾಶಿಯ ಅಧಿಪತಿ ಚಂದ್ರನಾಗಿರುವುದರಿಂದ, ಆತ ಗುರುವಿನೊಂದಿಗೆ ಸಂಯೋಜನೆ ಹೊಂದಿ ಗಜಕೇಸರಿ ಯೋಗ ರೂಪುಗೊಳ್ಳುವುದರಿಂದ ಈ ಯೋಗವು ಕರ್ಕಾಟಕ ರಾಶಿಯವರಿಗೆ ಬಹಳ ಮಂಗಳಕರವಾಗಿರುತ್ತದೆ. ಅವರು ತಮ್ಮ ಕಾರ್ಯಗಳಿಂದ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಇದರಿಂದ ಆದಾಯ ಹೆಚ್ಚಾಗುತ್ತದೆ. ತಮ್ಮೆಲ್ಲಾ ಕೆಲಸಗಳಿಗೆ ಎಲ್ಲರ ಸಹಕಾರ ಸಿಗುತ್ತದೆ. ಜೀವನದಲ್ಲಿ ಸಂತೋಷ ಬರುತ್ತದೆ.