Just In
- 1 hr ago ವೃಷಭ ರಾಶಿಗೆ ಗುರು ಸಂಚಾರ: 12ನೇ ಮನೆಯಲ್ಲಿ ಗುರು ಮಿಥುನ ರಾಶಿಯ ಮೇಲೆ ಬೀರುವ ಪ್ರಭಾವ ಹೇಗಿರಲಿದೆ?
- 1 hr ago ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- 14 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
- 15 hrs ago ವೃಷಭ ರಾಶಿಗೆ ದೇವಗುರುವಿನ ಸಂಚಾರ: ಮೇಷ ರಾಶಿಗಳಿಗೆ ಇದರ ಪ್ರಭಾವ ಹೇಗಿರಲಿದೆ?
Don't Miss
- News ರಜನಿಕಾಂತ್, ವಿಜಯ್ ಸೇತುಪಥಿ, ಧನುಷ್.. ಯಾರೆಲ್ಲಾ ವೋಟ್ ಹಾಕಿದ್ರು?
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Movies ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಾಯಿ ಪ್ರೀತಿಗೆ ಯಮನೇ ಸೋತನು, ಸತ್ತಿದ್ದ ಮಗ ಬದುಕಿ ಬಂದ
ಹಲವಾರು ಪವಾಡ ಕತೆಗಳ ಬಗ್ಗೆ ಕೇಳುತ್ತೇವೆ, ಕೆಲವರು ಆ ಪವಾಡಗಳ ಬಗ್ಗೆ ಹೇಳುವಾಗ ಹೀಗೆಲ್ಲಾ ಕೂಡ ನಡೆಯುವುದೇ ಎಂದು ಆಶ್ಚರ್ಯಚಕಿತರಾಗುತ್ತೇವೆ, ಹರಿಯಾಣದ ಒಂದು ಕುಟುಂಬದಲ್ಲಿ ಅಂಥದ್ದೊಂದು ಪವಾಡ ನಡೆದಿದೆ. ಆ ತಾಯಿಯ ಪ್ರೀತಿಗೆ ಯಮನೇ ಸೋತು ಆಕೆಯ ಮಗನನ್ನು ಹಿಂತಿರುಗಿಸಿದ್ದಾನೆ.
ತನ್ನ ಮಗನ ಪಾರ್ಥಿವ ಶರೀರದ ಮುಂದೆ ಕೂತಿರುವ ತಾಯಿಗೆ ಮಗ ಬದುಕಿ ಬರುತ್ತಾನೆ ಎಂಬ ನಂಬಿಕೆ. ಮಗನ ಮೇಲಿದ್ದ ಬಟ್ಟೆ ಸರಿಸಿ,ಮಗನ ಹಣೆಗೆ ಆಗಾಗ ಮುತ್ತಿಕ್ಕುತ್ತಾ ಮರಳಿ ಬಾ...ಮರಳಿ ಬಾ ಎಂದು ಕರೆಯುತ್ತಿದ್ದಳು. ಆದರೆ ಪವಾಡವೆಂಬಂತೆ ಹುಡುಗನ ಶರೀರದಲ್ಲಿ ಚಲನೆ ಕಂಡು ಬಂದಿದೆ, ಕೂಡಲೇ ಆತನ ಬಾಯಿಗೆ ಬಾಯಿಟ್ಟು ತಂದೆ ಉಸಿರು ನೀಡಿದ್ದಾರೆ, ಮತ್ತೊಬ್ಬರು ಹೃದಯ-ಶ್ವಾಸಕೋಶದ ಚೇತರಿಕೆಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ, ನಂತರ ಅವನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಈತ ಬದುಕುವ ಸಾಧ್ಯತೆ ಶೇ. 15ರಷ್ಟಿದೆ ಎಂದಿದ್ದಾರೆ. ಆದರೆ ಆ ತಾಯಿಯ ಮಡಿಲು ಬರಿದಾಗಲಿಲ್ಲ, ಹುಡುಗನಲ್ಲಿ ನಿಧಾನಕ್ಕೆ ಚೇತರಿಕೆ ಕಂಡು ಬಂದು ಸಾವನ್ನು ಗೆದ್ದು ಬಂದಿದ್ದಾನೆ.
ಹರಿಯಾಣದ ಜಜ್ಜರ್ ಜಿಲ್ಲೆಯ ಕ್ವಿಲ್ಲಾ ಪ್ರದೇಶದ ಕುನಲ್ ಶರ್ಮರ ಮೊಮ್ಮಗನಿಗೆ ಟೈಫಾಯ್ಡ್ ಬಂದಿತು. ಆತನನ್ನು ಚಿಕಿತ್ಸೆಗಾಗಿ ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರು ಆತನ ಸಾವಿನ ಸುದ್ದಿಯನ್ನು ತಿಳಿಸಿದರು. ಮಗನ ಪಾರ್ಥೀವ ಶರೀರ ತಗೊಂಡು ಬಹದ್ದೂರ್ಗಢಕ್ಕೆ ಬಂದರು. ಹುಡುಗನ ಅಜ್ಜಿಗೆ ಮೊಮ್ಮಗನ ಕೊನೆಯ ದರ್ಶನ ಮಾಡಿಸಲು ಮಾವನ ಮನೆಯಲ್ಲಿ ಪಾರ್ಥೀವ ಶರೀರ ಇಡಲು ತೀರ್ಮಾನಿಸಿ ತೆಗೆದುಕೊಂಡು ಬಂದಿದ್ದರು.
ದುಃಖದಿಂದ ಆ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಹುಡುಗನ ತಾಯಿ ಮಗನ ಶವ ಶರೀರ ಹಿಡಿದು ಬಾ ಮಗನೇ.. ಬಾ ಎಂದು ಹಿಡಿದು ಅಲುಗಾಡಿಸಿದಾಗ ಆ ಶರೀರದಲ್ಲಿ ಚಲನೆ ಕಂಡು ಬಂದಿದೆ.
ಕೂಡಲೇ ಹುಡುಗನನ್ನು ಅಲ್ಲಿಂದ ಎತ್ತಿದ ಮನೆಯವರು ಆತನಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾರಂಭಿಸಿದರು. ಬಾಯಿಗೆ-ಬಾಯಿಟ್ಟು ಊದಿದರು, ಆತನ ಎದೆಗೆ ಮೆಲ್ಲನೆ ಗುದ್ದಿ ಹೃದಯ ಬಡಿಯುವಂತೆ ಮಾಡಿದರು, ನಂತರ ಸಮೀಪದ ಆಸ್ಪತ್ರೆಗೆ ಕೊಂಡೊಯ್ಯದ್ದರು. ಆಗಲೂ ಹುಡುಗ ಬದುಕುವ ಸಾಧ್ಯತೆ ತುಂಬಾನೆ ಕಡಿಮೆ ಇದೆ ಎಂದು ವೈದ್ಯರು ಹೇಳಿದ್ದರು. ತಾಯಿಗೆ ಮಗ ಬಂದೇ ಬರುತ್ತಾನೆ ಎಂಬ ನಂಬಿಕೆ ಇತ್ತು, ಆ ತಾಯಿಯ ನಂಬಿಕೆ ಹುಸಿಯಾಗಲಿಲ್ಲ, ಹುಡುಗ ಚೇತರಿಸಿಕೊಂಡು ಮನೆಗೆ ಹಿಂತಿರುಗಿದ್ದಾನೆ.
ಹೀಗೆ ಹುಡುಗ ಯಮನನ್ನೇ ಗೆದ್ದು ತಾಯಿ ಮಡಿಲು ಸೇರಿ ಪವಾಡಕ್ಕೆ ಕಾರಣನಾಗಿದ್ದಾನೆ.