Just In
Don't Miss
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಭಾಷ್ ಚಂದ್ರ ಬೋಸ್ 125ನೇ ಜನ್ಮ ದಿನಾಚರಣೆ: ಪ್ರೇರಣಾತ್ಮಕ ನುಡಿಗಳು
ಸುಭಾಷ್ ಚಂದ್ರ ಬೋಸ್ ಭಾರತದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರು, ಬ್ರಿಟಿಷರಿಂದ ಭಾರತಕ್ಕೆ ಸ್ವಾತಂತ್ರ್ಯ ಪಡೆಯಲು ಹೋರಾಟ ಮಾಡಿದ ಅಗ್ರಗಣ್ಯ ಹೋರಾಟಗಾರರಲ್ಲಿ ಸುಭಾಷ್ ಚಂದ್ರ ಬೋಸ್ ಸಹ ಒಬ್ಬರು. ಒರಿಸ್ಸಾದ ಕಟಕ್ನಲ್ಲಿ ಬಂಗಾಳಿ ಕುಟುಂಬದಲ್ಲಿ 1897ರ ಜನವರಿ 23ರಂದು ಜನಿಸಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಶ್ರೀಮಂತ ಕುಟುಂಬದಿಂದ ಬಂದವರು. ಆದರೆ ಅವರು ತಮ್ಮ ದೇಶವನ್ನು ತುಂಬಾ ಪ್ರೀತಿಸುತ್ತಿದ್ದರು ಮತ್ತು ತಮ್ಮ ಇಡೀ ಜೀವನವನ್ನು ದೇಶಕ್ಕಾಗಿ ಅರ್ಪಿಸಿದ್ದರು.
ಇದೇ ಜನವರಿ 23ರಂದು ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ದೇಶದ ಜನತೆಗೆ ಸುಭಾಷ್ ಚಂದ್ರ ಬೋಸ್ ಅವರು ನೀಡಿದ್ದ ಪ್ರೇರಣಾತ್ಮಕ ಸಂದೇಶಗಳನ್ನು ಮುಂದೆ ನೋಡೋಣ:
1. ಅನ್ಯಾಯವನ್ನು ಸಹಿಸಿಕೊಳ್ಳುವುದು ಮತ್ತು ತಪ್ಪುಗಳೊಂದಿಗೆ ರಾಜಿ ಮಾಡಿಕೊಳ್ಳುವುದು ನಮ್ಮ ದೊಡ್ಡ ಅಪರಾಧ ಎಂಬುದು ನೆನಪಿಡಿ.
- ಸುಭಾಷ್ ಚಂದ್ರ ಬೋಸ್
2. ತಾಯಿಯ ಪ್ರೀತಿ ಅತ್ಯಂತ ಆಳವಾದದ್ದು ಏಕೆಂದರೆ ಅದರಲ್ಲಿ ಯಾವುದೇ ಸ್ವಾರ್ಥವಿಲ್ಲ ಮತ್ತು ನಾವು ಅದನ್ನು ಎಂದಿಗೂ ಹೋಲಿಸಲಾಗುವುದಿಲ್ಲ.
- ಸುಭಾಷ್ ಚಂದ್ರ ಬೋಸ್
3. ಸ್ವೀಕರಿಸಬೇಕಾದ ಸವಾಲುಗಳು ಇಲ್ಲದೇ ಇದ್ದರೆ, ಹೋರಾಟಗಳು ಇಲ್ಲದೇ ಹೋದರೆ ಜೀವನ ಅರ್ಧದಷ್ಟು ಆಸಕ್ತಿಯನ್ನು ಕಳೆದುಕೊಳ್ಳುತ್ತದೆ.
- ಸುಭಾಷ್ ಚಂದ್ರ ಬೋಸ್
4. ಒಬ್ಬ ವ್ಯಕ್ತಿ ತನ್ನ ಸಿದ್ಧಾಂತಕ್ಕಾಗಿ ಸಾವನ್ನಪ್ಪಬಹುದು. ಆದರೆ, ಆತನ ಮರಣಾನಂತರವೂ ಉಳಿಯುವ ಆ ಸಿದ್ಧಾಂತ ಸಾವಿರ ಜನರಲ್ಲಿ ಅವತರಿಸುತ್ತದೆ.
- ಸುಭಾಷ್ ಚಂದ್ರ ಬೋಸ್
5. ಇತಿಹಾಸದಲ್ಲಿ ಯಾವುದೇ ನಿಜವಾದ ಬದಲಾವಣೆ ಆಗಬೇಕಾದರೆ ಅದು ಕೇವಲ ಚರ್ಚೆಗಳಿಂದ ಸಾಧಿಸಲಾಗುವುದಿಲ್ಲ.
- ಸುಭಾಷ್ ಚಂದ್ರ ಬೋಸ್
6. ಒಬ್ಬ ವ್ಯಕ್ತಿಯು ಒಂದು ಉತ್ತಮ ಕಲ್ಪನೆಗಾಗಿ ಸಾಯಬಹುದು, ಆದರೆ ಆ ಕಲ್ಪನೆಯು ಅವನ ಮರಣದ ನಂತರ ಸಾವಿರ ಜನರಲ್ಲಿ ಅವತರಿಸುತ್ತದೆ.
- ಸುಭಾಷ್ ಚಂದ್ರ ಬೋಸ್
7. ಸ್ವಾತಂತ್ರ್ಯವನ್ನು ಯಾರೂ ಕೊಡುವುದಿಲ್ಲ, ಅದನ್ನು ನಾವೇ ಪಡೆದುಕೊಳ್ಳಬೇಕು.
- ಸುಭಾಷ್ ಚಂದ್ರ ಬೋಸ್
8. ಉತ್ಸಾಹವಿಲ್ಲದೆ ಯಾವ ಮಹತ್ತರವಾದ ಕೆಲಸವೂ ನಡೆದಿಲ್ಲ.
- ಸುಭಾಷ್ ಚಂದ್ರ ಬೋಸ್
9. ಜನ, ಹಣ ಮತ್ತು ವಸ್ತುಗಳು ಸ್ವತಃ ಜಯ ಅಥವಾ ಸ್ವಾತಂತ್ರ್ಯವನ್ನು ತರಲು ಸಾಧ್ಯವಿಲ್ಲ. ಧೈರ್ಯಶಾಲಿ ಕೆಲಸಗಳು ಮತ್ತು ಉಜ್ವಲ ಸಾಧನೆ ಮಾಡಬೇಕಾದರೆ ನಮ್ಮಲ್ಲಿ ನಾವು ಪ್ರೇರಕ ಶಕ್ತಿಯನ್ನು ಹೊಂದಿರಬೇಕು.
- ಸುಭಾಷ್ ಚಂದ್ರ ಬೋಸ್
10. ಅನ್ಯಾಯ ಮತ್ತು ತಪ್ಪಿನೊಂದಿಗೆ ರಾಜಿ ಮಾಡಿಕೊಳ್ಳುವುದು ಅತ್ಯಂತ ದೊಡ್ಡ ಅಪರಾಧ ಎಂಬುದನ್ನು ಮರೆಯಬೇಡಿ. ನೀವು ಪಡೆಯಲು ಬಯಸಿದರೆ, ನೀವು ನೀಡಬೇಕು ಎಂಬ ಶಾಶ್ವತ ಕಾನೂನನ್ನೂ ನೆನಪಿಡಿ.
- ಸುಭಾಷ್ ಚಂದ್ರ ಬೋಸ್