Latest Updates
-
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್!
ಸುಭಾಷ್ ಚಂದ್ರ ಬೋಸ್ 125ನೇ ಜನ್ಮ ದಿನಾಚರಣೆ: ಪ್ರೇರಣಾತ್ಮಕ ನುಡಿಗಳು
ಸುಭಾಷ್ ಚಂದ್ರ ಬೋಸ್ ಭಾರತದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರು, ಬ್ರಿಟಿಷರಿಂದ ಭಾರತಕ್ಕೆ ಸ್ವಾತಂತ್ರ್ಯ ಪಡೆಯಲು ಹೋರಾಟ ಮಾಡಿದ ಅಗ್ರಗಣ್ಯ ಹೋರಾಟಗಾರರಲ್ಲಿ ಸುಭಾಷ್ ಚಂದ್ರ ಬೋಸ್ ಸಹ ಒಬ್ಬರು. ಒರಿಸ್ಸಾದ ಕಟಕ್ನಲ್ಲಿ ಬಂಗಾಳಿ ಕುಟುಂಬದಲ್ಲಿ 1897ರ ಜನವರಿ 23ರಂದು ಜನಿಸಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಶ್ರೀಮಂತ ಕುಟುಂಬದಿಂದ ಬಂದವರು. ಆದರೆ ಅವರು ತಮ್ಮ ದೇಶವನ್ನು ತುಂಬಾ ಪ್ರೀತಿಸುತ್ತಿದ್ದರು ಮತ್ತು ತಮ್ಮ ಇಡೀ ಜೀವನವನ್ನು ದೇಶಕ್ಕಾಗಿ ಅರ್ಪಿಸಿದ್ದರು.
ಇದೇ ಜನವರಿ 23ರಂದು ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ದೇಶದ ಜನತೆಗೆ ಸುಭಾಷ್ ಚಂದ್ರ ಬೋಸ್ ಅವರು ನೀಡಿದ್ದ ಪ್ರೇರಣಾತ್ಮಕ ಸಂದೇಶಗಳನ್ನು ಮುಂದೆ ನೋಡೋಣ:

1. ಅನ್ಯಾಯವನ್ನು ಸಹಿಸಿಕೊಳ್ಳುವುದು ಮತ್ತು ತಪ್ಪುಗಳೊಂದಿಗೆ ರಾಜಿ ಮಾಡಿಕೊಳ್ಳುವುದು ನಮ್ಮ ದೊಡ್ಡ ಅಪರಾಧ ಎಂಬುದು ನೆನಪಿಡಿ.
- ಸುಭಾಷ್ ಚಂದ್ರ ಬೋಸ್

2. ತಾಯಿಯ ಪ್ರೀತಿ ಅತ್ಯಂತ ಆಳವಾದದ್ದು ಏಕೆಂದರೆ ಅದರಲ್ಲಿ ಯಾವುದೇ ಸ್ವಾರ್ಥವಿಲ್ಲ ಮತ್ತು ನಾವು ಅದನ್ನು ಎಂದಿಗೂ ಹೋಲಿಸಲಾಗುವುದಿಲ್ಲ.
- ಸುಭಾಷ್ ಚಂದ್ರ ಬೋಸ್

3. ಸ್ವೀಕರಿಸಬೇಕಾದ ಸವಾಲುಗಳು ಇಲ್ಲದೇ ಇದ್ದರೆ, ಹೋರಾಟಗಳು ಇಲ್ಲದೇ ಹೋದರೆ ಜೀವನ ಅರ್ಧದಷ್ಟು ಆಸಕ್ತಿಯನ್ನು ಕಳೆದುಕೊಳ್ಳುತ್ತದೆ.
- ಸುಭಾಷ್ ಚಂದ್ರ ಬೋಸ್

4. ಒಬ್ಬ ವ್ಯಕ್ತಿ ತನ್ನ ಸಿದ್ಧಾಂತಕ್ಕಾಗಿ ಸಾವನ್ನಪ್ಪಬಹುದು. ಆದರೆ, ಆತನ ಮರಣಾನಂತರವೂ ಉಳಿಯುವ ಆ ಸಿದ್ಧಾಂತ ಸಾವಿರ ಜನರಲ್ಲಿ ಅವತರಿಸುತ್ತದೆ.
- ಸುಭಾಷ್ ಚಂದ್ರ ಬೋಸ್

5. ಇತಿಹಾಸದಲ್ಲಿ ಯಾವುದೇ ನಿಜವಾದ ಬದಲಾವಣೆ ಆಗಬೇಕಾದರೆ ಅದು ಕೇವಲ ಚರ್ಚೆಗಳಿಂದ ಸಾಧಿಸಲಾಗುವುದಿಲ್ಲ.
- ಸುಭಾಷ್ ಚಂದ್ರ ಬೋಸ್

6. ಒಬ್ಬ ವ್ಯಕ್ತಿಯು ಒಂದು ಉತ್ತಮ ಕಲ್ಪನೆಗಾಗಿ ಸಾಯಬಹುದು, ಆದರೆ ಆ ಕಲ್ಪನೆಯು ಅವನ ಮರಣದ ನಂತರ ಸಾವಿರ ಜನರಲ್ಲಿ ಅವತರಿಸುತ್ತದೆ.
- ಸುಭಾಷ್ ಚಂದ್ರ ಬೋಸ್

7. ಸ್ವಾತಂತ್ರ್ಯವನ್ನು ಯಾರೂ ಕೊಡುವುದಿಲ್ಲ, ಅದನ್ನು ನಾವೇ ಪಡೆದುಕೊಳ್ಳಬೇಕು.
- ಸುಭಾಷ್ ಚಂದ್ರ ಬೋಸ್

8. ಉತ್ಸಾಹವಿಲ್ಲದೆ ಯಾವ ಮಹತ್ತರವಾದ ಕೆಲಸವೂ ನಡೆದಿಲ್ಲ.
- ಸುಭಾಷ್ ಚಂದ್ರ ಬೋಸ್

9. ಜನ, ಹಣ ಮತ್ತು ವಸ್ತುಗಳು ಸ್ವತಃ ಜಯ ಅಥವಾ ಸ್ವಾತಂತ್ರ್ಯವನ್ನು ತರಲು ಸಾಧ್ಯವಿಲ್ಲ. ಧೈರ್ಯಶಾಲಿ ಕೆಲಸಗಳು ಮತ್ತು ಉಜ್ವಲ ಸಾಧನೆ ಮಾಡಬೇಕಾದರೆ ನಮ್ಮಲ್ಲಿ ನಾವು ಪ್ರೇರಕ ಶಕ್ತಿಯನ್ನು ಹೊಂದಿರಬೇಕು.
- ಸುಭಾಷ್ ಚಂದ್ರ ಬೋಸ್

10. ಅನ್ಯಾಯ ಮತ್ತು ತಪ್ಪಿನೊಂದಿಗೆ ರಾಜಿ ಮಾಡಿಕೊಳ್ಳುವುದು ಅತ್ಯಂತ ದೊಡ್ಡ ಅಪರಾಧ ಎಂಬುದನ್ನು ಮರೆಯಬೇಡಿ. ನೀವು ಪಡೆಯಲು ಬಯಸಿದರೆ, ನೀವು ನೀಡಬೇಕು ಎಂಬ ಶಾಶ್ವತ ಕಾನೂನನ್ನೂ ನೆನಪಿಡಿ.
- ಸುಭಾಷ್ ಚಂದ್ರ ಬೋಸ್



Click it and Unblock the Notifications