Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಪೊರಕೆಯನ್ನ ಈ ದಿನ ಖರೀದಿಸಿದರೆ, ಜೀವನದಲ್ಲಿ ಎಂದಿಗೂ ಹಣದ ಕೊರತೆಯಾಗದು
ಪೊರಕೆ ಎಂಬುದು ಪ್ರತಿ ಮನೆಯಲ್ಲೂ ಸ್ವಚ್ಛಗೊಳಿಸಲು ಬಳಸುವ ವಸ್ತುವಾದರೂ ಸಹ, ಶಾಸ್ತ್ರದಲ್ಲಿ ಇದನ್ನು ಲಕ್ಷ್ಮಿ ದೇವಿಯ ಸಂಕೇತವೆಂದು ಹೇಳಲಾಗುತ್ತದೆ. ಅದೇ ಕಾರಣಕ್ಕೆ ಪೊರಕೆಯನ್ನು ಖರೀದಿಸಲು, ಬಳಸಲು ಕೆಲವೊಂದು ನಿಯಮಗಳನ್ನು ಮಾಡಿರುವುದು. ಇಂದು ಈ ಶಾಸ್ತ್ರ ಸಂಪ್ರದಾಯದ ಮಹತ್ವ ಕಡಿಮೆಯಾಗಿದ್ದರೂ ಸಹ, ಪೊರಕೆಗೆ ಇರುವ ದೈವಿಕ ಗುಣವಂತೂ ಸುಳ್ಳಲ್ಲ. ಅದೇ ಕಾರಣಕ್ಕೆ ಇಂದಿಗೂ ಪೊರಕೆ ತೊಳಿಯಬಾರದು, ದಾಟಬಾರದು ಎಂದು ಹೇಳುವುದು. ಇದಲ್ಲದೇ ಪೊರಕೆಗೆ ಸಂಬಂಧಿಸಿದಂತೆ ಇನ್ನೂ ಕೆಲವು ವಿಶೇಷ ನಿಯಮಗಳಿವೆ. ಇವುಗಳನ್ನು ಅನುಸರಿಸಿದರೆ, ನಿಮ್ ಜೀವನದಲ್ಲಿ ಸಂಪತ್ತಿನ ಕೊರತೆಯಾಗುವುದಿಲ್ಲ ಎಂಬುದು ನಂಬಿಕೆ.
ಶಾಸ್ತ್ರದ ಪ್ರಕಾರ, ಪೊರಕೆಗೆ ಸಂಬಂಧಿಸಿದ ನಿಯಮಗಳೇನು ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ಈ ದಿನ ಪೊರಕೆ ಎಸೆಯಬೇಡಿ:
ಹಿಂದೂ ಧರ್ಮದಲ್ಲಿ, ಪೊರಕೆಯನ್ನು ಲಕ್ಷ್ಮಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಗುರುವಾರ ಅಥವಾ ಶುಕ್ರವಾರದಂದು ಹಳೆಯ ಅಥವಾ ಹಾಳಾದ ಪೊರಕೆಯನ್ನು ಮನೆಯಿಂದ ಹೊರಗೆ ಹಾಕಬಾರದು. ಏಕೆಂದರೆ ಗುರುವಾರ ಮತ್ತು ಶುಕ್ರವಾರ ಕ್ರಮವಾಗಿ ವಿಷ್ಣು ಮತ್ತು ಲಕ್ಷ್ಮಿ ದೇವಿಗೆ ಸಂಬಂಧಿಸಿವೆ. ಆದ್ದರಿಂದ ಈ ದಿನ, ಪೊರಕೆಯನ್ನು ಮನೆಯಿಂದ ಹೊರಗೆ ಹಾಕಿದರೆ, ಲಕ್ಷ್ಮಿ ದೇವಿಯು ಕೋಪದಿಂದ ಮನೆಯಿಂದ ಹೊರಹೋಗುತ್ತಾಳೆ. ಇದಲ್ಲದೇ ವಿಷ್ಣುವಿನ ಕೃಪೆಯೂ ನಿಮ್ಮ ಮೇಲೆ ಇರಲಾರದು.

ಪೊರಕೆಯನ್ನು ಈ ದಿನ ಖರೀದಿಸಿದರೆ ಶುಭ:
ಶಾಸ್ತ್ರಗಳ ಪ್ರಕಾರ, ಮಂಗಳವಾರ ಅಥವಾ ಶನಿವಾರ ಪೊರಕೆ ಖರೀದಿಸಲು ಉತ್ತಮ ಮತ್ತು ಮಂಗಳಕರ ದಿನವಾಗಿದೆ. ಹೀಗೆ ಮಾಡುವುದರಿಂದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಇದರೊಂದಿಗೆ ಸಂಪತ್ತು ಬರುತ್ತದೆ. ಅಷ್ಟೇ ಅಲ್ಲ ಲಕ್ಷ್ಮಿಯ ಕೃಪೆ ಸದಾ ಇರುತ್ತದೆ. ಅದೇ ಸಮಯದಲ್ಲಿ, ಈ ದಿನವನ್ನು ಹೊರತುಪಡಿಸಿ, ಕೃಷ್ಣ ಪಕ್ಷದಲ್ಲಿ ಪೊರಕೆ ಕೊಳ್ಳುವುದು ಒಳ್ಳೆಯದು. ಇದರಿಂದ ನಿಮ್ಮ ಮನೆಯಲ್ಲಿ ಎಂದಿಗೂ ಹಣದ ಕೊರತೆ ಉಂಟಾಗುವುದಿಲ್ಲ, ಲಕ್ಷ್ಮಿ ಸದಾ ನಿಮ್ಮ ಮನೆಯಲ್ಲಿ ನೆಲೆಸಿರುತ್ತಾಳೆ.

ಪೊರಕೆ ಬಗ್ಗೆ ಇರುವ ನಂಬಿಕೆಗಳು:
ಶಾಸ್ತ್ರಗಳ ಪ್ರಕಾರ, ಪೊರಕೆಯನ್ನು ತುಳಿಯುವುದು ಅಥವಾ ದಾಟುವುದು ಅಶುಭವೆಂದು ಪರಿಗಣಿಸಲಾಗುತ್ತದೆ, ಏಕೆಂದರೆ ಅದು ಲಕ್ಷ್ಮಿಯ ಸಂಕೇತ. ಮಾತ್ರವಲ್ಲ, ಪೊರಕೆಯನ್ನು ಮನೆಯಲ್ಲಿ ಯಾರಿಗೂ ಕಾಣದಂತಹ ಸ್ಥಳದಲ್ಲಿ ಇಡಬೇಕು. ಹಾಗಂತ ಪೊರಕೆಯನ್ನು ಹಾಸಿಗೆಯ ಕೆಳಗೆ ಇಡುವುದು ಸರಿಯಲ್ಲ. ಮನೆ ಎದುರು ಸಹ ಪೊರಕೆ ಇಡಬಾರದು. ಜೊತೆಗೆ, ಸೂರ್ಯಾಸ್ತದ ನಂತರ ಗುಡಿಸಬಾರದು ಎಂಬ ನಂಬಿಕೆಯಿದೆ. ಏಕೆಂದರೆ ಸೂರ್ಯಾಸ್ತದ ವೇಳೆ ಲಕ್ಷ್ಮಿ ಮನೆ ಪ್ರವೇಶಿಸುವ ಸಮಯ ಹಾಗೂ ಆಕೆಯನ್ನು ಪೂಜಿಸುವ ಸಮಯ. ಈ ವೇಳೆ ಗುಡಿಸುವುದರಿಂದ ಲಕ್ಷ್ಮಿ ದೇವಿಯು ಕೋಪಗೊಂಡು ಮನೆಯಿಂದ ಹೊರಹೋಗುತ್ತಾಳೆ.



Click it and Unblock the Notifications