Latest Updates
-
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ!
ಪೊರಕೆಯನ್ನ ಈ ದಿನ ಖರೀದಿಸಿದರೆ, ಜೀವನದಲ್ಲಿ ಎಂದಿಗೂ ಹಣದ ಕೊರತೆಯಾಗದು
ಪೊರಕೆ ಎಂಬುದು ಪ್ರತಿ ಮನೆಯಲ್ಲೂ ಸ್ವಚ್ಛಗೊಳಿಸಲು ಬಳಸುವ ವಸ್ತುವಾದರೂ ಸಹ, ಶಾಸ್ತ್ರದಲ್ಲಿ ಇದನ್ನು ಲಕ್ಷ್ಮಿ ದೇವಿಯ ಸಂಕೇತವೆಂದು ಹೇಳಲಾಗುತ್ತದೆ. ಅದೇ ಕಾರಣಕ್ಕೆ ಪೊರಕೆಯನ್ನು ಖರೀದಿಸಲು, ಬಳಸಲು ಕೆಲವೊಂದು ನಿಯಮಗಳನ್ನು ಮಾಡಿರುವುದು. ಇಂದು ಈ ಶಾಸ್ತ್ರ ಸಂಪ್ರದಾಯದ ಮಹತ್ವ ಕಡಿಮೆಯಾಗಿದ್ದರೂ ಸಹ, ಪೊರಕೆಗೆ ಇರುವ ದೈವಿಕ ಗುಣವಂತೂ ಸುಳ್ಳಲ್ಲ. ಅದೇ ಕಾರಣಕ್ಕೆ ಇಂದಿಗೂ ಪೊರಕೆ ತೊಳಿಯಬಾರದು, ದಾಟಬಾರದು ಎಂದು ಹೇಳುವುದು. ಇದಲ್ಲದೇ ಪೊರಕೆಗೆ ಸಂಬಂಧಿಸಿದಂತೆ ಇನ್ನೂ ಕೆಲವು ವಿಶೇಷ ನಿಯಮಗಳಿವೆ. ಇವುಗಳನ್ನು ಅನುಸರಿಸಿದರೆ, ನಿಮ್ ಜೀವನದಲ್ಲಿ ಸಂಪತ್ತಿನ ಕೊರತೆಯಾಗುವುದಿಲ್ಲ ಎಂಬುದು ನಂಬಿಕೆ.
ಶಾಸ್ತ್ರದ ಪ್ರಕಾರ, ಪೊರಕೆಗೆ ಸಂಬಂಧಿಸಿದ ನಿಯಮಗಳೇನು ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ಈ ದಿನ ಪೊರಕೆ ಎಸೆಯಬೇಡಿ:
ಹಿಂದೂ ಧರ್ಮದಲ್ಲಿ, ಪೊರಕೆಯನ್ನು ಲಕ್ಷ್ಮಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಗುರುವಾರ ಅಥವಾ ಶುಕ್ರವಾರದಂದು ಹಳೆಯ ಅಥವಾ ಹಾಳಾದ ಪೊರಕೆಯನ್ನು ಮನೆಯಿಂದ ಹೊರಗೆ ಹಾಕಬಾರದು. ಏಕೆಂದರೆ ಗುರುವಾರ ಮತ್ತು ಶುಕ್ರವಾರ ಕ್ರಮವಾಗಿ ವಿಷ್ಣು ಮತ್ತು ಲಕ್ಷ್ಮಿ ದೇವಿಗೆ ಸಂಬಂಧಿಸಿವೆ. ಆದ್ದರಿಂದ ಈ ದಿನ, ಪೊರಕೆಯನ್ನು ಮನೆಯಿಂದ ಹೊರಗೆ ಹಾಕಿದರೆ, ಲಕ್ಷ್ಮಿ ದೇವಿಯು ಕೋಪದಿಂದ ಮನೆಯಿಂದ ಹೊರಹೋಗುತ್ತಾಳೆ. ಇದಲ್ಲದೇ ವಿಷ್ಣುವಿನ ಕೃಪೆಯೂ ನಿಮ್ಮ ಮೇಲೆ ಇರಲಾರದು.

ಪೊರಕೆಯನ್ನು ಈ ದಿನ ಖರೀದಿಸಿದರೆ ಶುಭ:
ಶಾಸ್ತ್ರಗಳ ಪ್ರಕಾರ, ಮಂಗಳವಾರ ಅಥವಾ ಶನಿವಾರ ಪೊರಕೆ ಖರೀದಿಸಲು ಉತ್ತಮ ಮತ್ತು ಮಂಗಳಕರ ದಿನವಾಗಿದೆ. ಹೀಗೆ ಮಾಡುವುದರಿಂದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಇದರೊಂದಿಗೆ ಸಂಪತ್ತು ಬರುತ್ತದೆ. ಅಷ್ಟೇ ಅಲ್ಲ ಲಕ್ಷ್ಮಿಯ ಕೃಪೆ ಸದಾ ಇರುತ್ತದೆ. ಅದೇ ಸಮಯದಲ್ಲಿ, ಈ ದಿನವನ್ನು ಹೊರತುಪಡಿಸಿ, ಕೃಷ್ಣ ಪಕ್ಷದಲ್ಲಿ ಪೊರಕೆ ಕೊಳ್ಳುವುದು ಒಳ್ಳೆಯದು. ಇದರಿಂದ ನಿಮ್ಮ ಮನೆಯಲ್ಲಿ ಎಂದಿಗೂ ಹಣದ ಕೊರತೆ ಉಂಟಾಗುವುದಿಲ್ಲ, ಲಕ್ಷ್ಮಿ ಸದಾ ನಿಮ್ಮ ಮನೆಯಲ್ಲಿ ನೆಲೆಸಿರುತ್ತಾಳೆ.

ಪೊರಕೆ ಬಗ್ಗೆ ಇರುವ ನಂಬಿಕೆಗಳು:
ಶಾಸ್ತ್ರಗಳ ಪ್ರಕಾರ, ಪೊರಕೆಯನ್ನು ತುಳಿಯುವುದು ಅಥವಾ ದಾಟುವುದು ಅಶುಭವೆಂದು ಪರಿಗಣಿಸಲಾಗುತ್ತದೆ, ಏಕೆಂದರೆ ಅದು ಲಕ್ಷ್ಮಿಯ ಸಂಕೇತ. ಮಾತ್ರವಲ್ಲ, ಪೊರಕೆಯನ್ನು ಮನೆಯಲ್ಲಿ ಯಾರಿಗೂ ಕಾಣದಂತಹ ಸ್ಥಳದಲ್ಲಿ ಇಡಬೇಕು. ಹಾಗಂತ ಪೊರಕೆಯನ್ನು ಹಾಸಿಗೆಯ ಕೆಳಗೆ ಇಡುವುದು ಸರಿಯಲ್ಲ. ಮನೆ ಎದುರು ಸಹ ಪೊರಕೆ ಇಡಬಾರದು. ಜೊತೆಗೆ, ಸೂರ್ಯಾಸ್ತದ ನಂತರ ಗುಡಿಸಬಾರದು ಎಂಬ ನಂಬಿಕೆಯಿದೆ. ಏಕೆಂದರೆ ಸೂರ್ಯಾಸ್ತದ ವೇಳೆ ಲಕ್ಷ್ಮಿ ಮನೆ ಪ್ರವೇಶಿಸುವ ಸಮಯ ಹಾಗೂ ಆಕೆಯನ್ನು ಪೂಜಿಸುವ ಸಮಯ. ಈ ವೇಳೆ ಗುಡಿಸುವುದರಿಂದ ಲಕ್ಷ್ಮಿ ದೇವಿಯು ಕೋಪಗೊಂಡು ಮನೆಯಿಂದ ಹೊರಹೋಗುತ್ತಾಳೆ.



Click it and Unblock the Notifications