Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಪೊರಕೆಯನ್ನ ಈ ದಿನ ಖರೀದಿಸಿದರೆ, ಜೀವನದಲ್ಲಿ ಎಂದಿಗೂ ಹಣದ ಕೊರತೆಯಾಗದು
ಪೊರಕೆ ಎಂಬುದು ಪ್ರತಿ ಮನೆಯಲ್ಲೂ ಸ್ವಚ್ಛಗೊಳಿಸಲು ಬಳಸುವ ವಸ್ತುವಾದರೂ ಸಹ, ಶಾಸ್ತ್ರದಲ್ಲಿ ಇದನ್ನು ಲಕ್ಷ್ಮಿ ದೇವಿಯ ಸಂಕೇತವೆಂದು ಹೇಳಲಾಗುತ್ತದೆ. ಅದೇ ಕಾರಣಕ್ಕೆ ಪೊರಕೆಯನ್ನು ಖರೀದಿಸಲು, ಬಳಸಲು ಕೆಲವೊಂದು ನಿಯಮಗಳನ್ನು ಮಾಡಿರುವುದು. ಇಂದು ಈ ಶಾಸ್ತ್ರ ಸಂಪ್ರದಾಯದ ಮಹತ್ವ ಕಡಿಮೆಯಾಗಿದ್ದರೂ ಸಹ, ಪೊರಕೆಗೆ ಇರುವ ದೈವಿಕ ಗುಣವಂತೂ ಸುಳ್ಳಲ್ಲ. ಅದೇ ಕಾರಣಕ್ಕೆ ಇಂದಿಗೂ ಪೊರಕೆ ತೊಳಿಯಬಾರದು, ದಾಟಬಾರದು ಎಂದು ಹೇಳುವುದು. ಇದಲ್ಲದೇ ಪೊರಕೆಗೆ ಸಂಬಂಧಿಸಿದಂತೆ ಇನ್ನೂ ಕೆಲವು ವಿಶೇಷ ನಿಯಮಗಳಿವೆ. ಇವುಗಳನ್ನು ಅನುಸರಿಸಿದರೆ, ನಿಮ್ ಜೀವನದಲ್ಲಿ ಸಂಪತ್ತಿನ ಕೊರತೆಯಾಗುವುದಿಲ್ಲ ಎಂಬುದು ನಂಬಿಕೆ.
ಶಾಸ್ತ್ರದ ಪ್ರಕಾರ, ಪೊರಕೆಗೆ ಸಂಬಂಧಿಸಿದ ನಿಯಮಗಳೇನು ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ಈ ದಿನ ಪೊರಕೆ ಎಸೆಯಬೇಡಿ:
ಹಿಂದೂ ಧರ್ಮದಲ್ಲಿ, ಪೊರಕೆಯನ್ನು ಲಕ್ಷ್ಮಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಗುರುವಾರ ಅಥವಾ ಶುಕ್ರವಾರದಂದು ಹಳೆಯ ಅಥವಾ ಹಾಳಾದ ಪೊರಕೆಯನ್ನು ಮನೆಯಿಂದ ಹೊರಗೆ ಹಾಕಬಾರದು. ಏಕೆಂದರೆ ಗುರುವಾರ ಮತ್ತು ಶುಕ್ರವಾರ ಕ್ರಮವಾಗಿ ವಿಷ್ಣು ಮತ್ತು ಲಕ್ಷ್ಮಿ ದೇವಿಗೆ ಸಂಬಂಧಿಸಿವೆ. ಆದ್ದರಿಂದ ಈ ದಿನ, ಪೊರಕೆಯನ್ನು ಮನೆಯಿಂದ ಹೊರಗೆ ಹಾಕಿದರೆ, ಲಕ್ಷ್ಮಿ ದೇವಿಯು ಕೋಪದಿಂದ ಮನೆಯಿಂದ ಹೊರಹೋಗುತ್ತಾಳೆ. ಇದಲ್ಲದೇ ವಿಷ್ಣುವಿನ ಕೃಪೆಯೂ ನಿಮ್ಮ ಮೇಲೆ ಇರಲಾರದು.

ಪೊರಕೆಯನ್ನು ಈ ದಿನ ಖರೀದಿಸಿದರೆ ಶುಭ:
ಶಾಸ್ತ್ರಗಳ ಪ್ರಕಾರ, ಮಂಗಳವಾರ ಅಥವಾ ಶನಿವಾರ ಪೊರಕೆ ಖರೀದಿಸಲು ಉತ್ತಮ ಮತ್ತು ಮಂಗಳಕರ ದಿನವಾಗಿದೆ. ಹೀಗೆ ಮಾಡುವುದರಿಂದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಇದರೊಂದಿಗೆ ಸಂಪತ್ತು ಬರುತ್ತದೆ. ಅಷ್ಟೇ ಅಲ್ಲ ಲಕ್ಷ್ಮಿಯ ಕೃಪೆ ಸದಾ ಇರುತ್ತದೆ. ಅದೇ ಸಮಯದಲ್ಲಿ, ಈ ದಿನವನ್ನು ಹೊರತುಪಡಿಸಿ, ಕೃಷ್ಣ ಪಕ್ಷದಲ್ಲಿ ಪೊರಕೆ ಕೊಳ್ಳುವುದು ಒಳ್ಳೆಯದು. ಇದರಿಂದ ನಿಮ್ಮ ಮನೆಯಲ್ಲಿ ಎಂದಿಗೂ ಹಣದ ಕೊರತೆ ಉಂಟಾಗುವುದಿಲ್ಲ, ಲಕ್ಷ್ಮಿ ಸದಾ ನಿಮ್ಮ ಮನೆಯಲ್ಲಿ ನೆಲೆಸಿರುತ್ತಾಳೆ.

ಪೊರಕೆ ಬಗ್ಗೆ ಇರುವ ನಂಬಿಕೆಗಳು:
ಶಾಸ್ತ್ರಗಳ ಪ್ರಕಾರ, ಪೊರಕೆಯನ್ನು ತುಳಿಯುವುದು ಅಥವಾ ದಾಟುವುದು ಅಶುಭವೆಂದು ಪರಿಗಣಿಸಲಾಗುತ್ತದೆ, ಏಕೆಂದರೆ ಅದು ಲಕ್ಷ್ಮಿಯ ಸಂಕೇತ. ಮಾತ್ರವಲ್ಲ, ಪೊರಕೆಯನ್ನು ಮನೆಯಲ್ಲಿ ಯಾರಿಗೂ ಕಾಣದಂತಹ ಸ್ಥಳದಲ್ಲಿ ಇಡಬೇಕು. ಹಾಗಂತ ಪೊರಕೆಯನ್ನು ಹಾಸಿಗೆಯ ಕೆಳಗೆ ಇಡುವುದು ಸರಿಯಲ್ಲ. ಮನೆ ಎದುರು ಸಹ ಪೊರಕೆ ಇಡಬಾರದು. ಜೊತೆಗೆ, ಸೂರ್ಯಾಸ್ತದ ನಂತರ ಗುಡಿಸಬಾರದು ಎಂಬ ನಂಬಿಕೆಯಿದೆ. ಏಕೆಂದರೆ ಸೂರ್ಯಾಸ್ತದ ವೇಳೆ ಲಕ್ಷ್ಮಿ ಮನೆ ಪ್ರವೇಶಿಸುವ ಸಮಯ ಹಾಗೂ ಆಕೆಯನ್ನು ಪೂಜಿಸುವ ಸಮಯ. ಈ ವೇಳೆ ಗುಡಿಸುವುದರಿಂದ ಲಕ್ಷ್ಮಿ ದೇವಿಯು ಕೋಪಗೊಂಡು ಮನೆಯಿಂದ ಹೊರಹೋಗುತ್ತಾಳೆ.



Click it and Unblock the Notifications