Latest Updates
-
ಹೀಟ್ವೇವ್ ಎಚ್ಚರಿಕೆ: ಬಿಸಿಲ ಬೇಗೆಯಿಂದ ಬಚಾವಾಗಲು ಈ ಸರಳ ಆಹಾರ ಕ್ರಮಗಳನ್ನು ಮರೆಯದಿರಿ -
ದೆಹಲಿ ಬಿಸಿಲು: ಸುಡುವ ತಾಪಮಾನದಲ್ಲೂ ಸ್ಟೈಲಿಶ್ ಆಗಿ ಕಾಣಲು ವೈರಲ್ ಆಗ್ತಿವೆ ಈ ಸಿಂಪಲ್ ಹ್ಯಾಕ್ಸ್! -
ಮಳೆಗಾಲದ ಬೆಳಗಿನ ವರ್ಕೌಟ್: ನಿಮ್ಮ ಪ್ಲಾನ್ ಉಲ್ಟಾಪಲ್ಟಾ ಆಗದಿರಲಿ, ಈ ಮುನ್ನೆಚ್ಚರಿಕೆ ಮರೆಯದಿರಿ! -
ಲಿವ್-ಇನ್ ಸಂಬಂಧ ಮುರಿದರೆ ಕ್ರಿಮಿನಲ್ ಕೇಸ್? ಸುಪ್ರೀಂ ಕೋರ್ಟ್ನಿಂದ ಬಂತು ಬಿಗ್ ಶಾಕ್! -
ಉರಿಬಿಸಿಲಿನ ತಾಪಕ್ಕೆ ಸುಸ್ತಾದ್ರಾ? ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಹೀಟ್ ವೇವ್ ಎಚ್ಚರಿಕೆ: ಬಿಸಿಲಿನ ಬೇಗೆಯಿಂದ ಬಚಾವಾಗಲು ಈ ಪಾನೀಯಗಳೇ ಮದ್ದು! -
ಅನುಷ್ಕಾ ಶರ್ಮಾ ಐಪಿಎಲ್ ಲುಕ್: ಸಿಂಪಲ್ ಡ್ರೆಸ್ನಲ್ಲೇ ಮ್ಯಾಜಿಕ್ ಮಾಡಿದ್ದು ಹೇಗೆ? -
ಬಿಸಿಗಾಳಿ ಎಚ್ಚರಿಕೆ: ಏಪ್ರಿಲ್ ಬಿಸಿಲಿನಿಂದ ಪಾರಾಗಲು ನಿಮ್ಮ ಫಿಟ್ನೆಸ್ ರೂಟೀನ್ ಬದಲಾಯಿಸುವುದು ಹೇಗೆ? -
ಪೊಲೀಸ್ ಕಿರುಕುಳದಿಂದ ಬೇಸತ್ತಿದ್ದೀರಾ? ಪ್ರೇಮಿಗಳಿಗೆ ರಕ್ಷಣೆ ನೀಡಲು ಹೈಕೋರ್ಟ್ ಕೊಟ್ಟಿದೆ ಬಿಗ್ ರಿಲೀಫ್! -
ಬಿಸಿಲ ಬೇಗೆಯಿಂದ ತತ್ತರಿಸಿದೆಯೇ? ನಿಮ್ಮ ಮನೆ ಮತ್ತು ಗಿಡಗಳನ್ನು ತಂಪಾಗಿರಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್
ಪೊರಕೆಯನ್ನ ಈ ದಿನ ಖರೀದಿಸಿದರೆ, ಜೀವನದಲ್ಲಿ ಎಂದಿಗೂ ಹಣದ ಕೊರತೆಯಾಗದು
ಪೊರಕೆ ಎಂಬುದು ಪ್ರತಿ ಮನೆಯಲ್ಲೂ ಸ್ವಚ್ಛಗೊಳಿಸಲು ಬಳಸುವ ವಸ್ತುವಾದರೂ ಸಹ, ಶಾಸ್ತ್ರದಲ್ಲಿ ಇದನ್ನು ಲಕ್ಷ್ಮಿ ದೇವಿಯ ಸಂಕೇತವೆಂದು ಹೇಳಲಾಗುತ್ತದೆ. ಅದೇ ಕಾರಣಕ್ಕೆ ಪೊರಕೆಯನ್ನು ಖರೀದಿಸಲು, ಬಳಸಲು ಕೆಲವೊಂದು ನಿಯಮಗಳನ್ನು ಮಾಡಿರುವುದು. ಇಂದು ಈ ಶಾಸ್ತ್ರ ಸಂಪ್ರದಾಯದ ಮಹತ್ವ ಕಡಿಮೆಯಾಗಿದ್ದರೂ ಸಹ, ಪೊರಕೆಗೆ ಇರುವ ದೈವಿಕ ಗುಣವಂತೂ ಸುಳ್ಳಲ್ಲ. ಅದೇ ಕಾರಣಕ್ಕೆ ಇಂದಿಗೂ ಪೊರಕೆ ತೊಳಿಯಬಾರದು, ದಾಟಬಾರದು ಎಂದು ಹೇಳುವುದು. ಇದಲ್ಲದೇ ಪೊರಕೆಗೆ ಸಂಬಂಧಿಸಿದಂತೆ ಇನ್ನೂ ಕೆಲವು ವಿಶೇಷ ನಿಯಮಗಳಿವೆ. ಇವುಗಳನ್ನು ಅನುಸರಿಸಿದರೆ, ನಿಮ್ ಜೀವನದಲ್ಲಿ ಸಂಪತ್ತಿನ ಕೊರತೆಯಾಗುವುದಿಲ್ಲ ಎಂಬುದು ನಂಬಿಕೆ.
ಶಾಸ್ತ್ರದ ಪ್ರಕಾರ, ಪೊರಕೆಗೆ ಸಂಬಂಧಿಸಿದ ನಿಯಮಗಳೇನು ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ಈ ದಿನ ಪೊರಕೆ ಎಸೆಯಬೇಡಿ:
ಹಿಂದೂ ಧರ್ಮದಲ್ಲಿ, ಪೊರಕೆಯನ್ನು ಲಕ್ಷ್ಮಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಗುರುವಾರ ಅಥವಾ ಶುಕ್ರವಾರದಂದು ಹಳೆಯ ಅಥವಾ ಹಾಳಾದ ಪೊರಕೆಯನ್ನು ಮನೆಯಿಂದ ಹೊರಗೆ ಹಾಕಬಾರದು. ಏಕೆಂದರೆ ಗುರುವಾರ ಮತ್ತು ಶುಕ್ರವಾರ ಕ್ರಮವಾಗಿ ವಿಷ್ಣು ಮತ್ತು ಲಕ್ಷ್ಮಿ ದೇವಿಗೆ ಸಂಬಂಧಿಸಿವೆ. ಆದ್ದರಿಂದ ಈ ದಿನ, ಪೊರಕೆಯನ್ನು ಮನೆಯಿಂದ ಹೊರಗೆ ಹಾಕಿದರೆ, ಲಕ್ಷ್ಮಿ ದೇವಿಯು ಕೋಪದಿಂದ ಮನೆಯಿಂದ ಹೊರಹೋಗುತ್ತಾಳೆ. ಇದಲ್ಲದೇ ವಿಷ್ಣುವಿನ ಕೃಪೆಯೂ ನಿಮ್ಮ ಮೇಲೆ ಇರಲಾರದು.

ಪೊರಕೆಯನ್ನು ಈ ದಿನ ಖರೀದಿಸಿದರೆ ಶುಭ:
ಶಾಸ್ತ್ರಗಳ ಪ್ರಕಾರ, ಮಂಗಳವಾರ ಅಥವಾ ಶನಿವಾರ ಪೊರಕೆ ಖರೀದಿಸಲು ಉತ್ತಮ ಮತ್ತು ಮಂಗಳಕರ ದಿನವಾಗಿದೆ. ಹೀಗೆ ಮಾಡುವುದರಿಂದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಇದರೊಂದಿಗೆ ಸಂಪತ್ತು ಬರುತ್ತದೆ. ಅಷ್ಟೇ ಅಲ್ಲ ಲಕ್ಷ್ಮಿಯ ಕೃಪೆ ಸದಾ ಇರುತ್ತದೆ. ಅದೇ ಸಮಯದಲ್ಲಿ, ಈ ದಿನವನ್ನು ಹೊರತುಪಡಿಸಿ, ಕೃಷ್ಣ ಪಕ್ಷದಲ್ಲಿ ಪೊರಕೆ ಕೊಳ್ಳುವುದು ಒಳ್ಳೆಯದು. ಇದರಿಂದ ನಿಮ್ಮ ಮನೆಯಲ್ಲಿ ಎಂದಿಗೂ ಹಣದ ಕೊರತೆ ಉಂಟಾಗುವುದಿಲ್ಲ, ಲಕ್ಷ್ಮಿ ಸದಾ ನಿಮ್ಮ ಮನೆಯಲ್ಲಿ ನೆಲೆಸಿರುತ್ತಾಳೆ.

ಪೊರಕೆ ಬಗ್ಗೆ ಇರುವ ನಂಬಿಕೆಗಳು:
ಶಾಸ್ತ್ರಗಳ ಪ್ರಕಾರ, ಪೊರಕೆಯನ್ನು ತುಳಿಯುವುದು ಅಥವಾ ದಾಟುವುದು ಅಶುಭವೆಂದು ಪರಿಗಣಿಸಲಾಗುತ್ತದೆ, ಏಕೆಂದರೆ ಅದು ಲಕ್ಷ್ಮಿಯ ಸಂಕೇತ. ಮಾತ್ರವಲ್ಲ, ಪೊರಕೆಯನ್ನು ಮನೆಯಲ್ಲಿ ಯಾರಿಗೂ ಕಾಣದಂತಹ ಸ್ಥಳದಲ್ಲಿ ಇಡಬೇಕು. ಹಾಗಂತ ಪೊರಕೆಯನ್ನು ಹಾಸಿಗೆಯ ಕೆಳಗೆ ಇಡುವುದು ಸರಿಯಲ್ಲ. ಮನೆ ಎದುರು ಸಹ ಪೊರಕೆ ಇಡಬಾರದು. ಜೊತೆಗೆ, ಸೂರ್ಯಾಸ್ತದ ನಂತರ ಗುಡಿಸಬಾರದು ಎಂಬ ನಂಬಿಕೆಯಿದೆ. ಏಕೆಂದರೆ ಸೂರ್ಯಾಸ್ತದ ವೇಳೆ ಲಕ್ಷ್ಮಿ ಮನೆ ಪ್ರವೇಶಿಸುವ ಸಮಯ ಹಾಗೂ ಆಕೆಯನ್ನು ಪೂಜಿಸುವ ಸಮಯ. ಈ ವೇಳೆ ಗುಡಿಸುವುದರಿಂದ ಲಕ್ಷ್ಮಿ ದೇವಿಯು ಕೋಪಗೊಂಡು ಮನೆಯಿಂದ ಹೊರಹೋಗುತ್ತಾಳೆ.



Click it and Unblock the Notifications