Latest Updates
-
UGC NET ಪರೀಕ್ಷೆ: ಪರೀಕ್ಷೆಯ ಒತ್ತಡದ ನಡುವೆ ಮನೆಯಲ್ಲಿ ನೆಮ್ಮದಿ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈಗಲೇ ಈ ಕೆಲಸ ಮಾಡಿ! -
ಭಾರಿ ಮಳೆ, ವಿದ್ಯುತ್ ಕಡಿತ: ಸಂಕಷ್ಟದ ಸಮಯದಲ್ಲಿ ನಿಮ್ಮ ಆರೋಗ್ಯ ಮತ್ತು ಆಹಾರ ಸುರಕ್ಷತೆ ಕಾಪಾಡಿಕೊಳ್ಳುವುದು ಹೇಗೆ? -
ಮುಂಬೈನಲ್ಲಿ ವರುಣನ ಆರ್ಭಟ: ರೆಡ್ ಅಲರ್ಟ್ ಘೋಷಣೆ, ಪ್ರಯಾಣಿಕರೇ ಎಚ್ಚರ! -
ದೆಹಲಿ-ಎನ್ಸಿಆರ್ನಲ್ಲಿ ಧೂಳಿನ ಆರ್ಭಟ: ಹೊರಗೆ ಹೋಗುವ ಮುನ್ನ ಎಚ್ಚರ, ಮನೆಯಲ್ಲೇ ಫಿಟ್ ಆಗಿರಲು ಈ 8 ನಿಮಿಷದ ಟಿಪ್ಸ್! -
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ!
ಪೊರಕೆಯನ್ನ ಈ ದಿನ ಖರೀದಿಸಿದರೆ, ಜೀವನದಲ್ಲಿ ಎಂದಿಗೂ ಹಣದ ಕೊರತೆಯಾಗದು
ಪೊರಕೆ ಎಂಬುದು ಪ್ರತಿ ಮನೆಯಲ್ಲೂ ಸ್ವಚ್ಛಗೊಳಿಸಲು ಬಳಸುವ ವಸ್ತುವಾದರೂ ಸಹ, ಶಾಸ್ತ್ರದಲ್ಲಿ ಇದನ್ನು ಲಕ್ಷ್ಮಿ ದೇವಿಯ ಸಂಕೇತವೆಂದು ಹೇಳಲಾಗುತ್ತದೆ. ಅದೇ ಕಾರಣಕ್ಕೆ ಪೊರಕೆಯನ್ನು ಖರೀದಿಸಲು, ಬಳಸಲು ಕೆಲವೊಂದು ನಿಯಮಗಳನ್ನು ಮಾಡಿರುವುದು. ಇಂದು ಈ ಶಾಸ್ತ್ರ ಸಂಪ್ರದಾಯದ ಮಹತ್ವ ಕಡಿಮೆಯಾಗಿದ್ದರೂ ಸಹ, ಪೊರಕೆಗೆ ಇರುವ ದೈವಿಕ ಗುಣವಂತೂ ಸುಳ್ಳಲ್ಲ. ಅದೇ ಕಾರಣಕ್ಕೆ ಇಂದಿಗೂ ಪೊರಕೆ ತೊಳಿಯಬಾರದು, ದಾಟಬಾರದು ಎಂದು ಹೇಳುವುದು. ಇದಲ್ಲದೇ ಪೊರಕೆಗೆ ಸಂಬಂಧಿಸಿದಂತೆ ಇನ್ನೂ ಕೆಲವು ವಿಶೇಷ ನಿಯಮಗಳಿವೆ. ಇವುಗಳನ್ನು ಅನುಸರಿಸಿದರೆ, ನಿಮ್ ಜೀವನದಲ್ಲಿ ಸಂಪತ್ತಿನ ಕೊರತೆಯಾಗುವುದಿಲ್ಲ ಎಂಬುದು ನಂಬಿಕೆ.
ಶಾಸ್ತ್ರದ ಪ್ರಕಾರ, ಪೊರಕೆಗೆ ಸಂಬಂಧಿಸಿದ ನಿಯಮಗಳೇನು ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ಈ ದಿನ ಪೊರಕೆ ಎಸೆಯಬೇಡಿ:
ಹಿಂದೂ ಧರ್ಮದಲ್ಲಿ, ಪೊರಕೆಯನ್ನು ಲಕ್ಷ್ಮಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಗುರುವಾರ ಅಥವಾ ಶುಕ್ರವಾರದಂದು ಹಳೆಯ ಅಥವಾ ಹಾಳಾದ ಪೊರಕೆಯನ್ನು ಮನೆಯಿಂದ ಹೊರಗೆ ಹಾಕಬಾರದು. ಏಕೆಂದರೆ ಗುರುವಾರ ಮತ್ತು ಶುಕ್ರವಾರ ಕ್ರಮವಾಗಿ ವಿಷ್ಣು ಮತ್ತು ಲಕ್ಷ್ಮಿ ದೇವಿಗೆ ಸಂಬಂಧಿಸಿವೆ. ಆದ್ದರಿಂದ ಈ ದಿನ, ಪೊರಕೆಯನ್ನು ಮನೆಯಿಂದ ಹೊರಗೆ ಹಾಕಿದರೆ, ಲಕ್ಷ್ಮಿ ದೇವಿಯು ಕೋಪದಿಂದ ಮನೆಯಿಂದ ಹೊರಹೋಗುತ್ತಾಳೆ. ಇದಲ್ಲದೇ ವಿಷ್ಣುವಿನ ಕೃಪೆಯೂ ನಿಮ್ಮ ಮೇಲೆ ಇರಲಾರದು.

ಪೊರಕೆಯನ್ನು ಈ ದಿನ ಖರೀದಿಸಿದರೆ ಶುಭ:
ಶಾಸ್ತ್ರಗಳ ಪ್ರಕಾರ, ಮಂಗಳವಾರ ಅಥವಾ ಶನಿವಾರ ಪೊರಕೆ ಖರೀದಿಸಲು ಉತ್ತಮ ಮತ್ತು ಮಂಗಳಕರ ದಿನವಾಗಿದೆ. ಹೀಗೆ ಮಾಡುವುದರಿಂದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಇದರೊಂದಿಗೆ ಸಂಪತ್ತು ಬರುತ್ತದೆ. ಅಷ್ಟೇ ಅಲ್ಲ ಲಕ್ಷ್ಮಿಯ ಕೃಪೆ ಸದಾ ಇರುತ್ತದೆ. ಅದೇ ಸಮಯದಲ್ಲಿ, ಈ ದಿನವನ್ನು ಹೊರತುಪಡಿಸಿ, ಕೃಷ್ಣ ಪಕ್ಷದಲ್ಲಿ ಪೊರಕೆ ಕೊಳ್ಳುವುದು ಒಳ್ಳೆಯದು. ಇದರಿಂದ ನಿಮ್ಮ ಮನೆಯಲ್ಲಿ ಎಂದಿಗೂ ಹಣದ ಕೊರತೆ ಉಂಟಾಗುವುದಿಲ್ಲ, ಲಕ್ಷ್ಮಿ ಸದಾ ನಿಮ್ಮ ಮನೆಯಲ್ಲಿ ನೆಲೆಸಿರುತ್ತಾಳೆ.

ಪೊರಕೆ ಬಗ್ಗೆ ಇರುವ ನಂಬಿಕೆಗಳು:
ಶಾಸ್ತ್ರಗಳ ಪ್ರಕಾರ, ಪೊರಕೆಯನ್ನು ತುಳಿಯುವುದು ಅಥವಾ ದಾಟುವುದು ಅಶುಭವೆಂದು ಪರಿಗಣಿಸಲಾಗುತ್ತದೆ, ಏಕೆಂದರೆ ಅದು ಲಕ್ಷ್ಮಿಯ ಸಂಕೇತ. ಮಾತ್ರವಲ್ಲ, ಪೊರಕೆಯನ್ನು ಮನೆಯಲ್ಲಿ ಯಾರಿಗೂ ಕಾಣದಂತಹ ಸ್ಥಳದಲ್ಲಿ ಇಡಬೇಕು. ಹಾಗಂತ ಪೊರಕೆಯನ್ನು ಹಾಸಿಗೆಯ ಕೆಳಗೆ ಇಡುವುದು ಸರಿಯಲ್ಲ. ಮನೆ ಎದುರು ಸಹ ಪೊರಕೆ ಇಡಬಾರದು. ಜೊತೆಗೆ, ಸೂರ್ಯಾಸ್ತದ ನಂತರ ಗುಡಿಸಬಾರದು ಎಂಬ ನಂಬಿಕೆಯಿದೆ. ಏಕೆಂದರೆ ಸೂರ್ಯಾಸ್ತದ ವೇಳೆ ಲಕ್ಷ್ಮಿ ಮನೆ ಪ್ರವೇಶಿಸುವ ಸಮಯ ಹಾಗೂ ಆಕೆಯನ್ನು ಪೂಜಿಸುವ ಸಮಯ. ಈ ವೇಳೆ ಗುಡಿಸುವುದರಿಂದ ಲಕ್ಷ್ಮಿ ದೇವಿಯು ಕೋಪಗೊಂಡು ಮನೆಯಿಂದ ಹೊರಹೋಗುತ್ತಾಳೆ.



Click it and Unblock the Notifications