ಸುಖ, ಶಾಂತಿ, ಸಮೃದ್ಧಿಗಾಗಿ ಈ ವಸ್ತುಗಳನ್ನು ತಪ್ಪದೇ ದೇವರ ಕೋಣೆಯಲ್ಲಿಡಿ

ಹಿಂದೂ ಧರ್ಮದಲ್ಲಿ ಪೂಜೆಗೆ ವಿಶೇಷ ಮಹತ್ವವಿದೆ. ಜೊತೆಗೆ, ಪೂಜೆಗೆ ಬಳಸುವ ಕೆಲವು ವಸ್ತುಗಳನ್ನು ತುಂಬಾ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಪೂಜೆಯ ಕೋಣೆಯಲ್ಲಿ ಕೆಲ ವಸ್ತುಗಳನ್ನು ಇಡುವುದರಿಂದ ಧನಾತ್ಮಕ ಶಕ್ತಿ ನೆಲೆಸುತ್ತದೆ ಎಂದು ಹೇಳಲಾಗುತ್ತದೆ. ಇದಲ್ಲದೆ, ನಿಮ್ಮ ಸಂತೋಷ ಮತ್ತು ಸಮೃದ್ಧಿಯ ಮಾರ್ಗವು ತೆರೆಯುತ್ತದೆ. ಹಾಗಾದರೆ, ಕಡ್ಡಾಯವಾಗಿ ಇಡಲೇಬೇಕಾದ ಕೆಲವು ವಸ್ತುಗಳು ಯಾವುವು ಎಂಬುದನ್ನು ಇಲ್ಲಿ ನೋಡೋಣ.

ಪೂಜೆಯ ಮನೆಯಲ್ಲಿ ಯಾವ ವಸ್ತುಗಳನ್ನು ಇಡುವುದರಿಂದ ಸಂತೋಷ, ಸಮೃದ್ಧಿ ಮತ್ತು ಸಂಪತ್ತು ಹೆಚ್ಚಾಗುತ್ತದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ಶಂಖ:

ಶಂಖ:

ಪೂಜೆಯ ಕೋಣೆಯಲ್ಲಿ ಶಂಖವನ್ನು ಇಡುವುದು ತುಂಬಾ ಮಂಗಳಕರ. ಸಾಗರ ಮಂಥನದ ಸಮಯದಲ್ಲಿ, ಲಕ್ಷ್ಮಿ ದೇವಿಯ ಜೊತೆಗೆ ಶಂಖವನ್ನು ಸಹ ಹೊರತೆಗೆಯಲಾಯಿತು. ಪೂಜೆಯ ನಂತರ ಶಂಖವನ್ನು ಊದುವುದು ಉತ್ತಮ. ಇದು ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂಪತ್ತನ್ನು ತರುತ್ತದೆ.

ಶಾಲಿಗ್ರಾಮ:

ಶಾಲಿಗ್ರಾಮ:

ಶಾಲಿಗ್ರಾಮವು ಭಗವಾನ್ ಶ್ರೀ ವಿಷ್ಣುವಿನ ರೂಪವಾಗಿದೆ. ಅದನ್ನು ಪೂಜಿಸಿದರೆ, ಭಗವಾನ್ ವಿಷ್ಣುವು ಪ್ರಸನ್ನನಾಗುತ್ತಾನೆ. ಶಾಲಿಗ್ರಾಮದ ದೇವತೆಯನ್ನು ತುಳಸಿ ಎಲೆಗಳಿಂದ ಪೂಜಿಸಲಾಗುತ್ತದೆ. ಇದು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.

ಗಂಟೆ/ಜಾಗಟೆ:

ಗಂಟೆ/ಜಾಗಟೆ:

ಗಂಟೆಯ ಶಬ್ದವು ಧನಾತ್ಮಕ ಶಕ್ತಿಯನ್ನು ಮನೆಯಲ್ಲಿ ನೆಲಸುವಂತೆ ಮಾಡಿ, ನಕಾರಾತ್ಮಕ ಶಕ್ತಿಯನ್ನು ಹೊರಹಾಕುವುದು. ಜೊತೆಗೆ ನಿತ್ಯವೂ ಗಂಟೆ ಬಾರಿಸುವ ಮನೆಗಳಲ್ಲಿ ಅದರ ಪ್ರತಿಧ್ವನಿ ಕೇಳಿಸುತ್ತದೆ ಎನ್ನುತ್ತಾರೆ. ಆ ಮನೆಯಲ್ಲಿ ಸಕಾರಾತ್ಮಕತೆ ಉಳಿಯುತ್ತದೆ, ದುಷ್ಟ ಶಕ್ತಿಗಳು ದೂರ ಹೋಗುತ್ತವೆ.

ನವಿಲುಗರಿ:

ನವಿಲುಗರಿ:

ವಾಸ್ತು ಶಾಸ್ತ್ರದ ಪ್ರಕಾರ, ನವಿಲು ಗರಿಗಳನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಕೃಷ್ಣನ ಕಿರೀಟದಲ್ಲಿಯೂ ನವಿಲು ಗರಿಗಳನ್ನು ಇಡಲಾಗಿದೆ. ನವಿಲು ಗರಿ ಸಂಪತ್ತನ್ನು ತರುತ್ತದೆ. ಇದಲ್ಲದೆ, ಮನೆಯಲ್ಲಿ ಸಂತೋಷ ಮತ್ತು ಶಾಂತಿಯನ್ನು ನೆಲೆಸುವಂತೆ ಮಾಡುವುದು.

ಗಂಗಾಜಲ:

ಗಂಗಾಜಲ:

ಯಾವುದೇ ದೇವತೆಯ ಆರಾಧನೆ ಅಥವಾ ಪೂಜೆಗೆ ಗಂಗಾಜಲ ಅವಶ್ಯಕ. ಇದಕ್ಕೆ ವಿಶೇಷ ಮಹತ್ವವಿದೆ. ಹಿತ್ತಾಳೆ ಮತ್ತು ಬೆಳ್ಳಿಯ ಪಾತ್ರೆಗಳಲ್ಲಿ ಗಂಗಾಜಲವನ್ನು ಇಡುವುದರಿಂದ ದೇವಿ ಲಕ್ಷ್ಮಿಯು ಪ್ರಸನ್ನಳಾಗುತ್ತಾಳೆ. ಆದ್ದರಿಂದ ನಿಮ್ಮ ಮನೆಯ ದೇವರ ಕೋಣೆಯಲ್ಲಿ ಈ ವಸ್ತುಗಳನ್ನು ಇಡುವುದನ್ನು ಮರೆಯಬೇಡಿ.

English summary

Vastu Rules for Home Temple: Always Keep These Things in your Place of Worship in Kannada

Here we talking about Vastu Rules for Home Temple: Always Keep These Things in your Place of Worship in Kannada, read on
Story first published: Thursday, February 17, 2022, 21:06 [IST]
X
Desktop Bottom Promotion