Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಸುಖ, ಶಾಂತಿ, ಸಮೃದ್ಧಿಗಾಗಿ ಈ ವಸ್ತುಗಳನ್ನು ತಪ್ಪದೇ ದೇವರ ಕೋಣೆಯಲ್ಲಿಡಿ
ಹಿಂದೂ ಧರ್ಮದಲ್ಲಿ ಪೂಜೆಗೆ ವಿಶೇಷ ಮಹತ್ವವಿದೆ. ಜೊತೆಗೆ, ಪೂಜೆಗೆ ಬಳಸುವ ಕೆಲವು ವಸ್ತುಗಳನ್ನು ತುಂಬಾ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಪೂಜೆಯ ಕೋಣೆಯಲ್ಲಿ ಕೆಲ ವಸ್ತುಗಳನ್ನು ಇಡುವುದರಿಂದ ಧನಾತ್ಮಕ ಶಕ್ತಿ ನೆಲೆಸುತ್ತದೆ ಎಂದು ಹೇಳಲಾಗುತ್ತದೆ. ಇದಲ್ಲದೆ, ನಿಮ್ಮ ಸಂತೋಷ ಮತ್ತು ಸಮೃದ್ಧಿಯ ಮಾರ್ಗವು ತೆರೆಯುತ್ತದೆ. ಹಾಗಾದರೆ, ಕಡ್ಡಾಯವಾಗಿ ಇಡಲೇಬೇಕಾದ ಕೆಲವು ವಸ್ತುಗಳು ಯಾವುವು ಎಂಬುದನ್ನು ಇಲ್ಲಿ ನೋಡೋಣ.
ಪೂಜೆಯ ಮನೆಯಲ್ಲಿ ಯಾವ ವಸ್ತುಗಳನ್ನು ಇಡುವುದರಿಂದ ಸಂತೋಷ, ಸಮೃದ್ಧಿ ಮತ್ತು ಸಂಪತ್ತು ಹೆಚ್ಚಾಗುತ್ತದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ಶಂಖ:
ಪೂಜೆಯ ಕೋಣೆಯಲ್ಲಿ ಶಂಖವನ್ನು ಇಡುವುದು ತುಂಬಾ ಮಂಗಳಕರ. ಸಾಗರ ಮಂಥನದ ಸಮಯದಲ್ಲಿ, ಲಕ್ಷ್ಮಿ ದೇವಿಯ ಜೊತೆಗೆ ಶಂಖವನ್ನು ಸಹ ಹೊರತೆಗೆಯಲಾಯಿತು. ಪೂಜೆಯ ನಂತರ ಶಂಖವನ್ನು ಊದುವುದು ಉತ್ತಮ. ಇದು ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂಪತ್ತನ್ನು ತರುತ್ತದೆ.

ಶಾಲಿಗ್ರಾಮ:
ಶಾಲಿಗ್ರಾಮವು ಭಗವಾನ್ ಶ್ರೀ ವಿಷ್ಣುವಿನ ರೂಪವಾಗಿದೆ. ಅದನ್ನು ಪೂಜಿಸಿದರೆ, ಭಗವಾನ್ ವಿಷ್ಣುವು ಪ್ರಸನ್ನನಾಗುತ್ತಾನೆ. ಶಾಲಿಗ್ರಾಮದ ದೇವತೆಯನ್ನು ತುಳಸಿ ಎಲೆಗಳಿಂದ ಪೂಜಿಸಲಾಗುತ್ತದೆ. ಇದು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.

ಗಂಟೆ/ಜಾಗಟೆ:
ಗಂಟೆಯ ಶಬ್ದವು ಧನಾತ್ಮಕ ಶಕ್ತಿಯನ್ನು ಮನೆಯಲ್ಲಿ ನೆಲಸುವಂತೆ ಮಾಡಿ, ನಕಾರಾತ್ಮಕ ಶಕ್ತಿಯನ್ನು ಹೊರಹಾಕುವುದು. ಜೊತೆಗೆ ನಿತ್ಯವೂ ಗಂಟೆ ಬಾರಿಸುವ ಮನೆಗಳಲ್ಲಿ ಅದರ ಪ್ರತಿಧ್ವನಿ ಕೇಳಿಸುತ್ತದೆ ಎನ್ನುತ್ತಾರೆ. ಆ ಮನೆಯಲ್ಲಿ ಸಕಾರಾತ್ಮಕತೆ ಉಳಿಯುತ್ತದೆ, ದುಷ್ಟ ಶಕ್ತಿಗಳು ದೂರ ಹೋಗುತ್ತವೆ.

ನವಿಲುಗರಿ:
ವಾಸ್ತು ಶಾಸ್ತ್ರದ ಪ್ರಕಾರ, ನವಿಲು ಗರಿಗಳನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಕೃಷ್ಣನ ಕಿರೀಟದಲ್ಲಿಯೂ ನವಿಲು ಗರಿಗಳನ್ನು ಇಡಲಾಗಿದೆ. ನವಿಲು ಗರಿ ಸಂಪತ್ತನ್ನು ತರುತ್ತದೆ. ಇದಲ್ಲದೆ, ಮನೆಯಲ್ಲಿ ಸಂತೋಷ ಮತ್ತು ಶಾಂತಿಯನ್ನು ನೆಲೆಸುವಂತೆ ಮಾಡುವುದು.

ಗಂಗಾಜಲ:
ಯಾವುದೇ ದೇವತೆಯ ಆರಾಧನೆ ಅಥವಾ ಪೂಜೆಗೆ ಗಂಗಾಜಲ ಅವಶ್ಯಕ. ಇದಕ್ಕೆ ವಿಶೇಷ ಮಹತ್ವವಿದೆ. ಹಿತ್ತಾಳೆ ಮತ್ತು ಬೆಳ್ಳಿಯ ಪಾತ್ರೆಗಳಲ್ಲಿ ಗಂಗಾಜಲವನ್ನು ಇಡುವುದರಿಂದ ದೇವಿ ಲಕ್ಷ್ಮಿಯು ಪ್ರಸನ್ನಳಾಗುತ್ತಾಳೆ. ಆದ್ದರಿಂದ ನಿಮ್ಮ ಮನೆಯ ದೇವರ ಕೋಣೆಯಲ್ಲಿ ಈ ವಸ್ತುಗಳನ್ನು ಇಡುವುದನ್ನು ಮರೆಯಬೇಡಿ.



Click it and Unblock the Notifications