Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಸುಖ, ಶಾಂತಿ, ಸಮೃದ್ಧಿಗಾಗಿ ಈ ವಸ್ತುಗಳನ್ನು ತಪ್ಪದೇ ದೇವರ ಕೋಣೆಯಲ್ಲಿಡಿ
ಹಿಂದೂ ಧರ್ಮದಲ್ಲಿ ಪೂಜೆಗೆ ವಿಶೇಷ ಮಹತ್ವವಿದೆ. ಜೊತೆಗೆ, ಪೂಜೆಗೆ ಬಳಸುವ ಕೆಲವು ವಸ್ತುಗಳನ್ನು ತುಂಬಾ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಪೂಜೆಯ ಕೋಣೆಯಲ್ಲಿ ಕೆಲ ವಸ್ತುಗಳನ್ನು ಇಡುವುದರಿಂದ ಧನಾತ್ಮಕ ಶಕ್ತಿ ನೆಲೆಸುತ್ತದೆ ಎಂದು ಹೇಳಲಾಗುತ್ತದೆ. ಇದಲ್ಲದೆ, ನಿಮ್ಮ ಸಂತೋಷ ಮತ್ತು ಸಮೃದ್ಧಿಯ ಮಾರ್ಗವು ತೆರೆಯುತ್ತದೆ. ಹಾಗಾದರೆ, ಕಡ್ಡಾಯವಾಗಿ ಇಡಲೇಬೇಕಾದ ಕೆಲವು ವಸ್ತುಗಳು ಯಾವುವು ಎಂಬುದನ್ನು ಇಲ್ಲಿ ನೋಡೋಣ.
ಪೂಜೆಯ ಮನೆಯಲ್ಲಿ ಯಾವ ವಸ್ತುಗಳನ್ನು ಇಡುವುದರಿಂದ ಸಂತೋಷ, ಸಮೃದ್ಧಿ ಮತ್ತು ಸಂಪತ್ತು ಹೆಚ್ಚಾಗುತ್ತದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ಶಂಖ:
ಪೂಜೆಯ ಕೋಣೆಯಲ್ಲಿ ಶಂಖವನ್ನು ಇಡುವುದು ತುಂಬಾ ಮಂಗಳಕರ. ಸಾಗರ ಮಂಥನದ ಸಮಯದಲ್ಲಿ, ಲಕ್ಷ್ಮಿ ದೇವಿಯ ಜೊತೆಗೆ ಶಂಖವನ್ನು ಸಹ ಹೊರತೆಗೆಯಲಾಯಿತು. ಪೂಜೆಯ ನಂತರ ಶಂಖವನ್ನು ಊದುವುದು ಉತ್ತಮ. ಇದು ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂಪತ್ತನ್ನು ತರುತ್ತದೆ.

ಶಾಲಿಗ್ರಾಮ:
ಶಾಲಿಗ್ರಾಮವು ಭಗವಾನ್ ಶ್ರೀ ವಿಷ್ಣುವಿನ ರೂಪವಾಗಿದೆ. ಅದನ್ನು ಪೂಜಿಸಿದರೆ, ಭಗವಾನ್ ವಿಷ್ಣುವು ಪ್ರಸನ್ನನಾಗುತ್ತಾನೆ. ಶಾಲಿಗ್ರಾಮದ ದೇವತೆಯನ್ನು ತುಳಸಿ ಎಲೆಗಳಿಂದ ಪೂಜಿಸಲಾಗುತ್ತದೆ. ಇದು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.

ಗಂಟೆ/ಜಾಗಟೆ:
ಗಂಟೆಯ ಶಬ್ದವು ಧನಾತ್ಮಕ ಶಕ್ತಿಯನ್ನು ಮನೆಯಲ್ಲಿ ನೆಲಸುವಂತೆ ಮಾಡಿ, ನಕಾರಾತ್ಮಕ ಶಕ್ತಿಯನ್ನು ಹೊರಹಾಕುವುದು. ಜೊತೆಗೆ ನಿತ್ಯವೂ ಗಂಟೆ ಬಾರಿಸುವ ಮನೆಗಳಲ್ಲಿ ಅದರ ಪ್ರತಿಧ್ವನಿ ಕೇಳಿಸುತ್ತದೆ ಎನ್ನುತ್ತಾರೆ. ಆ ಮನೆಯಲ್ಲಿ ಸಕಾರಾತ್ಮಕತೆ ಉಳಿಯುತ್ತದೆ, ದುಷ್ಟ ಶಕ್ತಿಗಳು ದೂರ ಹೋಗುತ್ತವೆ.

ನವಿಲುಗರಿ:
ವಾಸ್ತು ಶಾಸ್ತ್ರದ ಪ್ರಕಾರ, ನವಿಲು ಗರಿಗಳನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಕೃಷ್ಣನ ಕಿರೀಟದಲ್ಲಿಯೂ ನವಿಲು ಗರಿಗಳನ್ನು ಇಡಲಾಗಿದೆ. ನವಿಲು ಗರಿ ಸಂಪತ್ತನ್ನು ತರುತ್ತದೆ. ಇದಲ್ಲದೆ, ಮನೆಯಲ್ಲಿ ಸಂತೋಷ ಮತ್ತು ಶಾಂತಿಯನ್ನು ನೆಲೆಸುವಂತೆ ಮಾಡುವುದು.

ಗಂಗಾಜಲ:
ಯಾವುದೇ ದೇವತೆಯ ಆರಾಧನೆ ಅಥವಾ ಪೂಜೆಗೆ ಗಂಗಾಜಲ ಅವಶ್ಯಕ. ಇದಕ್ಕೆ ವಿಶೇಷ ಮಹತ್ವವಿದೆ. ಹಿತ್ತಾಳೆ ಮತ್ತು ಬೆಳ್ಳಿಯ ಪಾತ್ರೆಗಳಲ್ಲಿ ಗಂಗಾಜಲವನ್ನು ಇಡುವುದರಿಂದ ದೇವಿ ಲಕ್ಷ್ಮಿಯು ಪ್ರಸನ್ನಳಾಗುತ್ತಾಳೆ. ಆದ್ದರಿಂದ ನಿಮ್ಮ ಮನೆಯ ದೇವರ ಕೋಣೆಯಲ್ಲಿ ಈ ವಸ್ತುಗಳನ್ನು ಇಡುವುದನ್ನು ಮರೆಯಬೇಡಿ.



Click it and Unblock the Notifications