ಯಾವುದೇ ಕಾರಣಕ್ಕೂ ಈ 5 ಜನರನ್ನು ನಿದ್ದೆಯಿಂದ ಎದ್ದೇಳಿಸಲು ಹೋಗಬೇಡಿ ; ಚಾಣಕ್ಯ

ನಿದ್ದೆ ಅನ್ನೋದು ಮನುಷ್ಯನಿಗೆ ತುಂಬಾನೇ ಮುಖ್ಯ. ಆರೋಗ್ಯ ಚೆನ್ನಾಗಿರಲು ಕೂಡ ನಿದ್ದೆ ತುಂಬಾನೇ ಮುಖ್ಯವಾಗುತ್ತದೆ. ಗಾಢ ನಿದ್ರೆಯಲ್ಲಿರಬೇಕಾದರೆ ಯಾರಾದರೂ ತೊಂದರೆ ಮಾಡಿದರೆ ಕೆಟ್ಟ ಕೋಪ ಬರುತ್ತದೆ. ಅಷ್ಟೇ ಯಾಕೆ ಪುರಾಣಗಳಲ್ಲೂ ನಿದ್ದೆಯ ಬಗ್ಗೆ ಉಲ್ಲೇಖವಾಗಿದೆ.

Waking These People From Sleep Will Kill You says Chanakya Niti in Kannada

ನೀವು ಯಾರನ್ನೂ ಬೇಕಾದರೂ ನಿದ್ದೆಯಿಂದ ಎಬ್ಬಿಸಿ ತೊಂದರೆ ಇಲ್ಲ ಆದ್ರೆ ಈ 5 ಜನರ ಸಹವಾಸಕ್ಕೆ ಹೋಗಲೇಬೇಡಿ ಎಂದು ಚಾಣಕ್ಯ ಹೇಳಿದ್ದಾರೆ. ಹಾಗಾದ್ರೆ ಚಾಣಕ್ಯ ಹೇಳುತ್ತಿರುವ ಆ 5 ಜನ ಯಾರು? ಆ 5 ಜನರ ನಿದ್ದೆಗೆ ತೊಂದರೆ ಆದರೆ ಅಪಾಯ ಎದುರಾಗಲಿದ್ಯಾ? ಹೇಳ್ತೀವಿ.

1. ರಾಜ

1. ರಾಜ

ಚಾಣಕ್ಯನ ಪ್ರಕಾರ ರಾಜನನ್ನು ನಿದ್ದೆಯಿಂದ ಎಬ್ಬಿಸಲು ಹೋಗಬೇಡಿ ಯಾಕಂದ್ರೆ ಇದರಿಂದ ನೀವು ಆತನ ಕೋಪಕ್ಕೆ ಗುರಿಯಾಗಬಹುದು. ಈಗಿನ ಕಾಲದಲ್ಲಿ ರಾಜ ಇಲ್ಲದಿರೋದರಿಂದ ಮಂತ್ರಿ ಅಥವಾ ಅಧಿಕಾರಿಗಳನ್ನ ರಾಜನ ಸ್ಥಾನದಲ್ಲಿ ಪರಿಗಣಿಸಬಹುದು. ನಮಗಿಂತ ಉನ್ನತ ಸ್ಥಾನದಲ್ಲಿರುವವರನ್ನು ನಿದ್ದೆಯಿಂದ ಎಬ್ಬಿಸಿ ಅವರಿಗೆ ತೊಂದರೆ ಮಾಡೋದಕ್ಕೆ ಹೋಗಬೇಡಿ. ಇದರಿಂದ ಅವರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ.

2. ಸಿಂಹ

2. ಸಿಂಹ

ಸಿಂಹ ಕಾಡಿನ ರಾಜ ಹಾಗೂ ಇದೊಂದು ವ್ಯಾಘ್ರ ಪ್ರಾಣಿ ಎಂಬುದು ಎಲ್ಲರಿಗೂ ಗೊತ್ತು. ಚಾಣಕ್ಯನ ಪ್ರಕಾರ ಸಿಂಹವನ್ನು ನಿದ್ದೆಯಿಂದ ಎಬ್ಬಿಸುವುದು ಮಹಾ ಅಪಾಯ. ಇದು ನಿಮ್ಮ ಪ್ರಾಣಕ್ಕೆ ಕುತ್ತು ತರಬಹುದು. ಅಪ್ಪಿ ತಪ್ಪಿಯೂ ಸಿಂಹದ ತಂಟೆಗೆ ಹೋಗಲೇಬೇಡಿ. ಸಿಂಹದ ಹತ್ತಿರ ಹೋಗೋದಕ್ಕೂ ಭಯ ಪಡುತ್ತೇವೆ ಅಂತದ್ರಲ್ಲಿ ಅದನ್ನು ನಿದ್ದೆಯಿಂದ ಎಬ್ಬಿಸಲು ಹೋದರೆ ನಮ್ಮ ಕತೆ ಮುಗಿಯಿತು ಎಂದರ್ಥ.

3. ಮಾಂಸಹಾರಿ ಪ್ರಾಣಿಗಳು

3. ಮಾಂಸಹಾರಿ ಪ್ರಾಣಿಗಳು

ಮಾಂಸಹಾರಿ ಪ್ರಾಣಿಗಳ ತಂಟೆಗೆ ಹೋಗಬೇಡಿ ಅಂತಾರೆ ಚಾಣಕ್ಯ. ಹೊಟ್ಟೆತುಂಬಾ ತಿಂದು ಗಾಢ ನಿದ್ದೆಯಲ್ಲಿರುವ ಪ್ರಾಣಿಗಳನ್ನು ನಿದ್ದೆಯಿಂದ ಎಬ್ಬಿಸಲು ಹೋದರೆ ಸುಮ್ನೆ ಬಿಡ್ತಾವಾ? ಅಟ್ಟಾಡಿಸಿಕೊಂಡು ಬಂದು ನಮ್ಮ ಪ್ರಾಣಕ್ಕೆ ಆಪತ್ತು ತರಬಹುದು. ಅಷ್ಟೇ ಯಾಕೆ ನಾವು ನಮ್ಮ ಮನೆಯಲ್ಲೇ ಸಾಕಿದ ನಾಯಿಯನ್ನೇ ಉದಾಹರಣೆಯಾಗಿ ತೆಗೆದುಕೊಳ್ಳಿ ಊಟ ಹಾಗೂ ನಿದ್ದೆಯ ಸಮಯದಲ್ಲಿ ಅದಕ್ಕೆ ತೊಂದರೆ ಮಾಡಿದ್ರೆ ಮಾಲೀಕ ಅನ್ನೋದನ್ನು ನೋಡದೇನೆ ಬೊಗಳೋದಕ್ಕೆ ಶುರು ಮಾಡುತ್ತದೆ.

4. ಮೂರ್ಖ

4. ಮೂರ್ಖ

ಮೂರ್ಖನನ್ನು ನಿದ್ದೆಯಿಂದ ಎಬ್ಬಿಸಿಲು ಹೋದರೆ ತೊಂದರೆಯನ್ನು ನೀವೆ ನಿಮ್ಮ ಕೈಯಾರೆ ಆಹ್ವಾನಿಸಿದಂತೆ ಎಂದು ಚಾಣಕ್ಯ ಹೇಳಿದ್ದಾರೆ. ಮೂರ್ಖನಿಗೆ ನೀವು ಯಾವುದಾದರೂ ಒಂದು ವಿಷಯವನ್ನು ಮನ ಮುಟ್ಟುವಂತೆ ಹೇಳಿದರೆ ಅದು ವ್ಯರ್ಥವೇ ಸರಿ. ಯಾಕೆಂದರೆ ಆತ ಅರ್ಥ ಆದಂತೆ ನಟಿಸಬೇಕು ಅಷ್ಟೇ, ಅದನ್ನು ಬಿಟ್ಟು ಅವನ ತಲೆಗೆ ಏನು ಹೋಗೋದೇ ಇಲ್ಲ. ಅದೇನೋ ಗಾದೆಯಿದ್ಯಲ್ಲ ಕೋಣನ ಮುಂದೆ ಕಿನ್ನರಿ ಬಾರಿಸೋದು ಅಂತ ಹಾಗೆಯೇ ಆಗುತ್ತೆ.

5. ಮಗು

5. ಮಗು

ಚಾಣಕ್ಯನ ಪ್ರಕಾರ ಮಗುವನ್ನು ನಿದ್ದೆಯಿಂದ ಎಬ್ಬಿಸುವುದು ಆಪತ್ತು. ನಿಮ್ಮ ಮನೆಯಲ್ಲಿ ಮಕ್ಕಳಿದ್ರೆ ನಿಮಗೆ ಚೆನ್ನಾಗಿ ಗೊತ್ತಿರುತ್ತೆ. ಮಕ್ಕಳು ಎಚ್ಚರವಿದ್ದಾಗ ನಮಗೆ ಯಾವ ರೀತಿ ತೊಂದರೆ ನೀಡ್ತಾರೆ ಅಂತ ಮಗು ಒಮ್ಮೆ ಮಲಗಿದ್ರೆ ಸಾಕು ಅಂತ ಎಲ್ಲರೂ ಕಾಯ್ತಿರ್ತಾರೆ. ಅಪ್ಪಿ ತಪ್ಪಿ ಏನಾದ್ರು ಮಲಗಿದ ಮಗುವನ್ನು ಎಬ್ಬಿಸಿದ್ರೆ ನಮ್ಮ ಕತೆ ಮುಗಿತು. ಸರಿಯಾಗಿ ನಿದ್ದೆ ಬಾರದೇ ಹೋದರೆ ಮಕ್ಕಳು ಸಿಕ್ಕಾಪಟ್ಟೆ ಆಳುತ್ತಾರೆ. ನಂತರ ಇಡೀ ದಿನ ಅವರನ್ನು ಸಮಾಧಾನ ಮಾಡೋದರಲ್ಲೇ ನಮ್ಮ ಸಮಯ ಕಳೆದು ಹೋಗುತ್ತದೆ.

ಜೀವನದಲ್ಲಿ ಪ್ರತಿಯೊಂದು ಹೆಜ್ಜೆ ಇಡಬೇಕಾದರೂ ಅಲ್ಲಿ ಮುಂದಾಲೋಚನೆ ಎನ್ನುವುದು ತುಂಬಾನೇ ಮುಖ್ಯವಾಗುತ್ತದೆ. ಏನೇ ಕೆಲಸ ಮಡಬೇಕಾದರೂ ಅಲ್ಲಿ ಮುಂದಾಲೋಚನೆ ಬಹಳ ಮುಖ್ಯ. ಇಲ್ಲವಾದರೆ ಆಪತ್ತು ಎದುರಾಗೋದು ಖಂಡಿತ.

English summary

Waking These People From Sleep Will Kill You says Chanakya Niti in Kannada

According to Chanakya Says That it is dangerous to Waking These 5 People From Sleep. Know more.
X
Desktop Bottom Promotion