Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ವಿಶ್ವ ಪರಿಸರ ದಿನ: ಪರಿಸರ ಸಂರಕ್ಷಣೆ ಮಹತ್ವ ಸಾರುವ ನುಡಿಮುತ್ತುಗಳು ಇಲ್ಲಿವೆ
ಜೂನ್ 5 ವಿಶ್ವ ಪರಿಸರ ದಿನಾಚರಣೆ. ಹಸಿರಿನ ಮಹತ್ವವನ್ನು ಜಗತ್ತಿನೆಲ್ಲೆಡೆ ಸಾರುವ ದಿನ. ಆದರೆ ಕಾಡು ಪರಿಸರ ರಕ್ಷಣೆ ಕೇವಲ ಈ ದಿನಕ್ಕೆ ಸೀಮಿತವಾಗಿರಬಾರದು. ಪ್ರತಿದಿನ ನಾವು ಮಾಡುವ ಪ್ರತಿ ಕೆಲಸದಲ್ಲೂ ಪರಿಸರವನ್ನ ಗಮನದಲ್ಲಿಟ್ಟುಕೊಳ್ಳಬೇಕು.ಈ ಕಾಡು, ಸ್ವಚ್ಛ ಪರಿಸರ ಎಷ್ಟು ಮುಖ್ಯ ಎಂಬುದನ್ನು ಸದ್ಯ ಇರುವ ಕೊರೊನಾವೇ ತೋರಿಸಿಕೊಟ್ಟಿದೆ. ನಮ್ಮ ದುರಾಸೆ ಬಿಟ್ಟು, ಪ್ರಾಮಾಣಿಕವಾಗಿ ಈ ವಿಚಾರದಲ್ಲಿ ಕೈ ಜೋಡಿಸಬೇಕು. ಇಲ್ಲಿ ಪರಿಸರ ಸಂರಕ್ಷಣೆಯ ಕುರಿತ ಅರಿವುಮೂಡಿಸುವ ನುಡಿಮುತ್ತುಗಳನ್ನು ನೀಡಲಾಗಿದೆ.
ವಿಶ್ವ ಪರಿಸರ ದಿನದಂದು ಪರಿಸರ ಸಂರಕ್ಷಣೆಯ ಉತ್ತಮ ಹಾಗೂ ಅರಿವು ಮೂಡಿಸುವ ಸಾಲುಗಳನ್ನು ಈ ಕೆಳಗೆ ನೀಡಲಾಗಿದೆ:

1. ''ಈಗ ಕಾಡುಗಳಿಲ್ಲದ, ಕಾಡುಪ್ರಾಣಿಗಳಿಲ್ಲದ ಪರಿಸರವು ಸ್ಮಶಾನಕ್ಕಿಂತ ಭೀಕರವಾಗಿ ಕಾಣುತ್ತದೆ" -ಪೂರ್ಣಚಂದ್ರ ತೇಜಸ್ವಿ
2. "ಪ್ರಕೃತಿ ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸುತ್ತದೆಯೇ ಹೊರತು, ಆತನ ದುರಾಸೆಯನ್ನಲ್ಲ" - ಮಹಾತ್ಮ ಗಾಂಧಿ
3. "ಭೂಮಿಯು ಸುಂದರವಾದ ವಧುವಿನಂತೆ, ಅವಳ ಸೌಂದರ್ಯವನ್ನು ಹೆಚ್ಚಿಸಲು ಯಾವುದೇ ಮಾನವ ನಿರ್ಮಿತ ಆಭರಣಗಳ ಅಗತ್ಯವಿಲ್ಲ" - ಖಲೀಲ್ ಗಿಬ್ರಾನ್
4. ವನಸುಮದೊಲೆನ್ನ ಜೀ.. ವನವು ವಿಕಸಿಸುವಂತೆ ಮನವನನುಗೊಳಿಸು ಗುರುವೇ- ಹೇ ದೇವ
ಜನಕೆ ಸಂತಸವೀವ.. ಘನನು ನಾನೆಂದೆಂಬ
ಎಣಿಕೆ ತೋರದೆ ಜಗದ ಪೊಗಳಿಕೆಗೆ ಬಾಯ್ ಬಿಡದೆ
ಕಾನನದಿ ಮಲ್ಲಿಗೆಯು.. ಮೌನದಿಂ ಬಿರಿದು ನಿಜ
ಸೌರಭವ ಸೂಸಿ ನಲವಿಂ.. ತಾನೆಲೆಯ ಪಿಂತಿರ್ದು
ದೀನತೆಯ ತೋರಿ ಅಭಿ
ಮಾನವನು ತೊರೆದು ಕೃತಕೃತ್ಯತೆಯ ಪಡೆವಂತೆ
ಉಪಕಾರಿ ನಾನು ಎ.. ನನ್ನು ಪ್ರಕೃತಿಯ ಜಗಕೆಂಬ
ವಿಪರೀತ ಮತಿಯನುಳಿದು.. ವಿಪುಲಾಶ್ರಯವನೀವ
ಸುಫಲಸುಮಭರಿತ ಪಾ
ದಪದಂತೆ ನೈಜಮಾದೊಳ್ಪಿಂ ಬಾಳ್ವವೊಲು
- ಡಿ.ವಿ.ಜಿ
5. ಓ-ಪೂಜಾರಿ
ಕೋಮಲ ಸುಮಗಳ ಕತ್ತನು ಕೊಯ್ದು
ಕಗ್ಗಲ್ಲಿನ ಕಗ್ಗತ್ತಲೆಗೊಯ್ದು
ಗುಡಿಯೊ ಕಲ್ಲಿಗೆ ಬಲಿಕೊಡದಿದ್ದರೆ
ಪರಮಾತ್ಮಗೆ ತೃಪ್ತಿಯೇ ಇಲ್ಲೇನು?
ಈ ಗಿಡದೊಳ ರಾರಾಜಿಸುತ್ತಿದ್ದರೆ
ಶಿವ ಪೂಜೆಯು ಸಲ್ಲುವುದಿಲ್ಲೇನು?
ಸೌಂದರ್ಯ ಸುಮ ನಯನವಕಿತ್ತರೆ
ಶಿವ ಮುಖ ಚಂದ್ರಿಕೆ ಚೆಲುವದು ಸತ್ತರೆ
ಭುವನಕೆ ಮಂಗಳವಾದೀತೆ?
ಬಿಡೋ ಅಲ್ಲರಲಿ ಆ ಹೂವು
ನೀ ಸೃಷ್ಟಿಸಲಿರದ ಚೆಲುವಿಗೆ
ನಿನ್ನಿಂದೇತಕೆ ಸಾವು
-ಕುವೆಂಪು



Click it and Unblock the Notifications















