Latest Updates
-
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು!
ವಿಶ್ವ ಪರಿಸರ ದಿನ: ಪರಿಸರ ಸಂರಕ್ಷಣೆ ಮಹತ್ವ ಸಾರುವ ನುಡಿಮುತ್ತುಗಳು ಇಲ್ಲಿವೆ
ಜೂನ್ 5 ವಿಶ್ವ ಪರಿಸರ ದಿನಾಚರಣೆ. ಹಸಿರಿನ ಮಹತ್ವವನ್ನು ಜಗತ್ತಿನೆಲ್ಲೆಡೆ ಸಾರುವ ದಿನ. ಆದರೆ ಕಾಡು ಪರಿಸರ ರಕ್ಷಣೆ ಕೇವಲ ಈ ದಿನಕ್ಕೆ ಸೀಮಿತವಾಗಿರಬಾರದು. ಪ್ರತಿದಿನ ನಾವು ಮಾಡುವ ಪ್ರತಿ ಕೆಲಸದಲ್ಲೂ ಪರಿಸರವನ್ನ ಗಮನದಲ್ಲಿಟ್ಟುಕೊಳ್ಳಬೇಕು.ಈ ಕಾಡು, ಸ್ವಚ್ಛ ಪರಿಸರ ಎಷ್ಟು ಮುಖ್ಯ ಎಂಬುದನ್ನು ಸದ್ಯ ಇರುವ ಕೊರೊನಾವೇ ತೋರಿಸಿಕೊಟ್ಟಿದೆ. ನಮ್ಮ ದುರಾಸೆ ಬಿಟ್ಟು, ಪ್ರಾಮಾಣಿಕವಾಗಿ ಈ ವಿಚಾರದಲ್ಲಿ ಕೈ ಜೋಡಿಸಬೇಕು. ಇಲ್ಲಿ ಪರಿಸರ ಸಂರಕ್ಷಣೆಯ ಕುರಿತ ಅರಿವುಮೂಡಿಸುವ ನುಡಿಮುತ್ತುಗಳನ್ನು ನೀಡಲಾಗಿದೆ.
ವಿಶ್ವ ಪರಿಸರ ದಿನದಂದು ಪರಿಸರ ಸಂರಕ್ಷಣೆಯ ಉತ್ತಮ ಹಾಗೂ ಅರಿವು ಮೂಡಿಸುವ ಸಾಲುಗಳನ್ನು ಈ ಕೆಳಗೆ ನೀಡಲಾಗಿದೆ:

1. ''ಈಗ ಕಾಡುಗಳಿಲ್ಲದ, ಕಾಡುಪ್ರಾಣಿಗಳಿಲ್ಲದ ಪರಿಸರವು ಸ್ಮಶಾನಕ್ಕಿಂತ ಭೀಕರವಾಗಿ ಕಾಣುತ್ತದೆ" -ಪೂರ್ಣಚಂದ್ರ ತೇಜಸ್ವಿ
2. "ಪ್ರಕೃತಿ ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸುತ್ತದೆಯೇ ಹೊರತು, ಆತನ ದುರಾಸೆಯನ್ನಲ್ಲ" - ಮಹಾತ್ಮ ಗಾಂಧಿ
3. "ಭೂಮಿಯು ಸುಂದರವಾದ ವಧುವಿನಂತೆ, ಅವಳ ಸೌಂದರ್ಯವನ್ನು ಹೆಚ್ಚಿಸಲು ಯಾವುದೇ ಮಾನವ ನಿರ್ಮಿತ ಆಭರಣಗಳ ಅಗತ್ಯವಿಲ್ಲ" - ಖಲೀಲ್ ಗಿಬ್ರಾನ್
4. ವನಸುಮದೊಲೆನ್ನ ಜೀ.. ವನವು ವಿಕಸಿಸುವಂತೆ ಮನವನನುಗೊಳಿಸು ಗುರುವೇ- ಹೇ ದೇವ
ಜನಕೆ ಸಂತಸವೀವ.. ಘನನು ನಾನೆಂದೆಂಬ
ಎಣಿಕೆ ತೋರದೆ ಜಗದ ಪೊಗಳಿಕೆಗೆ ಬಾಯ್ ಬಿಡದೆ
ಕಾನನದಿ ಮಲ್ಲಿಗೆಯು.. ಮೌನದಿಂ ಬಿರಿದು ನಿಜ
ಸೌರಭವ ಸೂಸಿ ನಲವಿಂ.. ತಾನೆಲೆಯ ಪಿಂತಿರ್ದು
ದೀನತೆಯ ತೋರಿ ಅಭಿ
ಮಾನವನು ತೊರೆದು ಕೃತಕೃತ್ಯತೆಯ ಪಡೆವಂತೆ
ಉಪಕಾರಿ ನಾನು ಎ.. ನನ್ನು ಪ್ರಕೃತಿಯ ಜಗಕೆಂಬ
ವಿಪರೀತ ಮತಿಯನುಳಿದು.. ವಿಪುಲಾಶ್ರಯವನೀವ
ಸುಫಲಸುಮಭರಿತ ಪಾ
ದಪದಂತೆ ನೈಜಮಾದೊಳ್ಪಿಂ ಬಾಳ್ವವೊಲು
- ಡಿ.ವಿ.ಜಿ
5. ಓ-ಪೂಜಾರಿ
ಕೋಮಲ ಸುಮಗಳ ಕತ್ತನು ಕೊಯ್ದು
ಕಗ್ಗಲ್ಲಿನ ಕಗ್ಗತ್ತಲೆಗೊಯ್ದು
ಗುಡಿಯೊ ಕಲ್ಲಿಗೆ ಬಲಿಕೊಡದಿದ್ದರೆ
ಪರಮಾತ್ಮಗೆ ತೃಪ್ತಿಯೇ ಇಲ್ಲೇನು?
ಈ ಗಿಡದೊಳ ರಾರಾಜಿಸುತ್ತಿದ್ದರೆ
ಶಿವ ಪೂಜೆಯು ಸಲ್ಲುವುದಿಲ್ಲೇನು?
ಸೌಂದರ್ಯ ಸುಮ ನಯನವಕಿತ್ತರೆ
ಶಿವ ಮುಖ ಚಂದ್ರಿಕೆ ಚೆಲುವದು ಸತ್ತರೆ
ಭುವನಕೆ ಮಂಗಳವಾದೀತೆ?
ಬಿಡೋ ಅಲ್ಲರಲಿ ಆ ಹೂವು
ನೀ ಸೃಷ್ಟಿಸಲಿರದ ಚೆಲುವಿಗೆ
ನಿನ್ನಿಂದೇತಕೆ ಸಾವು
-ಕುವೆಂಪು



Click it and Unblock the Notifications



