Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಲೋಕಸಭಾ ಚುನಾವಣೆಯಲ್ಲಿ ಯಾರು ಜಯಭೇರಿ ಭಾರಿಸುತ್ತಾರೆ? ಜ್ಯೋತಿಷ್ಯಿ ನುಡಿದ ಭವಿಷ್ಯವೇನು?
ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದತ್ತ ವಿಶ್ವದ ಗಮನವಿದೆ, ಜೂನ್ ನಾಲ್ಕು ತುಂಬಾ ಮಹತ್ವವಾದ ದಿನ, ಸಾಮಾನ್ಯ ಪ್ರಜೆಗಳು ತಮ್ಮ ನಾಯಕ ಯಾರಾಗಿರಬೇಕೆಂದು ಯಾರನ್ನ ಆಯ್ಕೆ ಮಾಡಿದ್ದಾರೆ ಎಂದು ತಿಳಿಯುವ ದಿನ.

ಚುನಾವಣೆಯಲ್ಲಿ ಯಾವ ಪಕ್ಷಗಳು ಎಷ್ಟು ಸೀಟುಗಳನ್ನು ಗಳಿಸುತ್ತದೆ ಎಂಬುವುದರ ಬಗ್ಗೆ ಹಲವಾರು ಎಕ್ಸಿಟ್ ಪೋಲ್ಗಳು ಬಂದಿವೆ. ಹಲವಾರು ಚುನಾವಣೆ ಭವಿಷ್ಯ ಈಗಾಗಲೇ ಬಂದಿದೆ. ಅದರಲ್ಲೂ ಖ್ಯಾತ ಕುಂಡಲಿ ಜ್ಯೋತಿಷಿ ಕೆಎಂ ಸಿನ್ಹಾ ಅವರು ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ಭವಿಷ್ಯ ನುಡಿದಿದ್ದಾರೆ.
ಜ್ಯೋತಿಷಿ ನುಡಿದ ಭವಿಷ್ಯದಲ್ಲಿ ಯಾರಿಗೆ ಹೆಚ್ಚು ಸೀಟುಗಳು ಸಿಗಲಿದೆ?
ಕುಂಡಲಿ ನೋಡಿ ಜ್ಯೋತಿಷ್ಯ ಹೇಳುವುದರಲ್ಲಿ ಪ್ರಸಿದ್ಧವಾಗಿರುವ ಕೆಎಂ ಸಿನ್ಹಾರವರು ಎನ್ಡಿಎ 400ರ ಗಡಿ ದಾಟಲಿದೆ ಎಂದು ಭವಿಷ್ಯ ನುಡಿದ್ದಾರೆ, ಅದರಲ್ಲೂ ಬಿಜೆಪಿ 315 ಸ್ಥಾನ ಗೆಲ್ಲುವುದು ಪಕ್ಕಾ ಎಂಬ ಭವಿಷ್ಯವಾಣಿ ನುಡಿದಿದ್ದಾರೆ, ಇದರ ಜೊತೆಗೆ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಿರುಗಾಳಿಯೇ ಬೀಸಲಿದೆ ಎಂದು ಭವಿಷ್ಯ ನುಡಿದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಅವರು ನುಡಿದ ಭವಿಷ್ಯ ಮಿತ್ರ ಪಕ್ಷಗಳಿಗೆ ದುಃಸ್ವಪ್ನವಾಗಿದೆ
ಸಿನ್ಹ ಅವರು ಪಶ್ಚಿಮ ಬಂಗಾಳದಲ್ಲಿ 25 ರಿಂದ 28 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂಬ ಅಚ್ಚರಿಯ ಭವಿಷ್ಯ ನುಡಿದಿದ್ದಾರೆ. ಮಮತಾ ಬ್ಯಾನರ್ಜಿ ಕಟ್ಟಿಕೊಂಡಿರುವ ಭದ್ರಕೋಟೆಯಲ್ಲಿ ಬಿಜೆಪಿ ಅಷ್ಟೊಂದು ಸೀಟುಗನ್ನು ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದ್ದರೂ ನಿಜಕ್ಕೂ ಅಚ್ಚರಿಗೆ ಕಾರಣವಾಗಿದೆ. ಇದಲ್ಲದೆ ಅವರು ಹಿಮಾಚಲದಲ್ಲಿ 4, ಉತ್ತರಖಂಡದ 5 ಸ್ಥಾನಗಳು ಬಿಜೆಪಿ ಪಾಲಾಗಿದೆ ಎಂದು ಭವಿಷ್ಯ ನುಡಿದಿದ್ದಾರೆ.
ರಾಹು-ಕೇತು ಸ್ಥಾನ ನೋಡಿ ಭವಿಷ್ಯ ನುಡಿದಿದ್ದಾರೆ
ಸಿನ್ಹಾರವರು ರಾಹು-ಕೇತು ಸ್ಥಾನ ಎನ್ಡಿಎ ಸರ್ಕಾರಕ್ಕೆ ಅನುಕೂಲಕರವಾಗಿದೆ. ಎನ್ಡಿಎ 400 ಗಡಿ ದಾಟಲಿದೆ, ಬಿಜೆಪಿ 315 ಸ್ಥಾನ ಗೆಲ್ಲಲಿದೆ ಎಂಬ ಭವಿಷ್ಯ ನುಡಿದಿದ್ದಾರೆ. ಇವರ ಭವಿಷ್ಯವನ್ನು ಕಾಂಗ್ರೆಸ್ನವರು ಮೋದಿ ಭಕ್ತರ ಭವಿಷ್ಯ ಎಂದು ಟೀಕೆ ಮಾಡಿದರೆ ಇವರು ಮಾತ್ರ ನನ್ನ ಭವಿಷ್ಯ ಮಾತ್ರ ಇದುವರೆಗೆ ಸುಳ್ಳಾಗಿಲ್ಲ ಎಂಬ ಹೇಳುತ್ತಿದ್ದಾರೆ.
ಜಯ ಯಾರಿಗೆ ಒಲಿದಿದೆ ಎಂದು ಜೂನ್ 4ಕ್ಕೆ ಗೊತ್ತಾಗಲಿದೆ
ಈ ಬಾರಿಯ ಚುನಾವಣೆ ಸಾಕಷ್ಟು ಕುತೂಹಲ ಕೆರಳಿಸಿದೆ, ಎನ್ಡಿಎ ಸರಕಾರಕ್ಕೆ ಅಷ್ಟೇ ಸವಾಲುಗಳನ್ನು ಇಂಡಿಯಾ ಮೈತ್ರಿಕೂಟ ನೀಡಿತ್ತು, ಜನರ ಒಲವು ಯಾರ ಕಡೆಗೆ ಇದೆ ಎಂಬ ಕುತೂಹಲ ಕ್ಷಣ ಕ್ಷಣ ಹೆಚ್ಚಾಗುತ್ತಿದೆ...



Click it and Unblock the Notifications
