Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಹಾ ಶಿವರಾತ್ರಿ 2025: ವಾಟ್ಸಾಪ್ ಡಿಪಿ, ಸ್ಟೇಟಸ್ಗಾಗಿ ಎಐ ರಚಿತ ಅದ್ಭುತ ಚಿತ್ರಗಳು ಇಲ್ಲಿವೆ...!!
ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಮಹಾ ಶಿವರಾತ್ರಿಯನ್ನು ದೇಶದಾದ್ಯಂತ ಆಚರಿಸುತ್ತಾರೆ. ಶಿವನ ದೇವಾಲಯದಲ್ಲಿ ಈ ದಿನವು ಬಹಳ ಅದ್ದೂರಿಯಾಗಿ ನೆರವೇರಲಿದೆ. ಹಾಗೆ ಎಲ್ಲಾ ಕಡೆಗಳಲ್ಲಿ ಶಿವನಾಮಸ್ಮರಣೆ, ಜಪ, ಭಜನೆ, ಜಾಗರಣೆ ನಡೆಯುವುದು ನಾವು ನೋಡಬಹುದು, ಈ ದಿನ ಶಿವ ಹಾಗೂ ಪಾರ್ವತಿ ವಿವಾಹವಾದ ದಿನ ಎಂದು ಪರಿಗಣಿಸಲಾಗಿದೆ. ಹೀಗಾಗಿ ರಾತ್ರಿಯ ಜಾಗರಣೆಯಿಂದ ಬಹಳದ್ಟು ಲಾಭ ನೀವು ಪಡೆಯಬದುದಂತೆ.

ಪ್ರತಿ ವರ್ಷ ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಮಹಾ ಶಿವರಾತ್ರಿ ಆಚರಣೆ ಮಾಡಲಾಗುತ್ತದೆ. ಶಿವರಾತ್ರಿ ಭಗವಾನ್ ಶಿವನಿಗೆ ಅತ್ಯಂತ ಪ್ರಿಯವಾದ ದಿನವಾಗಿದೆ. ಚಳಿಗಾಲ ಕೊನೆಗೊಂಡು ವಸಂತ ಮತ್ತು ಬೇಸಿಗೆ ಪ್ರಾರಂಭವಾಗುವ ದಿನ ಕೂಡ ಇದಾಗಿರಲಿದೆ.
ಶಿವರಾತ್ರಿಯಲ್ಲಿ ಜಾಗರಣೆ ಹಾಗೂ ಉಪವಾಸ ವ್ರತಕ್ಕೆ ಬಹಳ ಮಹತ್ವವಿದೆ. ಶಿವರಾತ್ರಿಯ ಉಪವಾಸ ಹಾಗೂ ಜಾಗರಣೆ ಮಾಡುವುದು ಅಶ್ಚಮೇಧ ಯಾಗ ಮಾಡಿದಂತೆ ಎಂಬ ನಂಬಿಕೆಯೂ ಇದೆ. ನಿಮ್ಮ ಸಂಕಷ್ಟಗಳ ನಿವಾರಣೆಗೆ ಈ ದಿನ ಮೀಸಲಿಡಬಹುದು ಎಂದು ಹೇಳಲಾಗಿದೆ.
ಈ ದಿನದಂದು ಶಿವನಿಗೆ ಹಾಲು-ಜೇನಿನ ಅಭಿಷೇಕ ಮಾಡಿಸಿ, ಬಿಲ್ವಪತ್ರೆ, ಹೂವು ಅರ್ಪಿಸಿ ಶಿವನ ಮಂತ್ರ ಪಠಿಸಲಾಗುತ್ತದೆ. ಹಾಗೆ ಶಿವನ ಹಲವು ನಾಮಸ್ಮರಣೆಯು ಈ ದಿನದ ವಿಶೇವಾಗಿದ್ದು, ಈ ಮೂಲಕ ಶಿವನ ಕೃಪೆಗೆ ಪಾತ್ರರಾಗಬಹುದು.
ಈ ದಿನ ಮಹಾಶಿವನಿಗೆ ರುದ್ರಾಭಿಷೇಕ ಮಾಡುವುದರಿಂದ ಇಷ್ಟಾರ್ಥಗಳು ನೆರವೇರಲಿದೆ ಎಂದು ಹೇಳಲಾಗಿದೆ. ಈ ದಿನ ಸೂರ್ಯನಿಗೆ ಆರ್ಘ್ಯ ಅರ್ಪಿಸುವುದರಿಂದ ನಿಮ್ಮ ಜೀವನದಲ್ಲಿನ ಬಹಳಷ್ಟು ಕಷ್ಟಗಳನ್ನು ನಿವಾರಣೆ ಮಾಡಬಹುದು.
ನೀವು ಉಪವಾಸ ಮಾಡದರೆ ಅದರ ಸಂಪೂರ್ಣ ಫಲ ಪಡೆಯಲು ಆ ರಾತ್ರಿ ಜಾಗರಣೆ ಮಾಡಬೇಕು ಎಂದು ಹೇಳಲಾಗಿದೆ. ಈ ಉಪವಾಸದ ಸಮಯದಲ್ಲಿ ನೀರು ಕೂಡ ಸೇವಿಸಬಾರದು.
ಇನ್ನು ಕೆಲವರಿಗೆ ಅನಾರೋಗ್ಯ ಸಮಸ್ಯೆಯಿಂದ ಪೂರ್ಣ ಪ್ರಮಾಣದ ಉಪವಾಸ ಮಾಡಲು ಸಾಧ್ಯವಿಲ್ಲವೋ ಅಂತವರು ಹಾಲು, ಹಣ್ಣು, ನೀರು ಸೇವಿಸಬಹುದಾಗಿದೆ.
ಈ ದಿನದಂದು ಉಪವಾಸ ಮಾಡುವುದರಿಂದ ದೇಹದಲ್ಲಿರುವ ಕಶ್ಮಲವನ್ನು ಹೊರ ಹಾಕಬಹುದು. ಅಲ್ಲದೆ ಉಪವಾಸ ಮಾಡುವ ಮೂಲಕ ತಾಮಸ ಗುಣ ನಿಯಂತ್ರಿಸಬಹುದು.
ಬ್ರಹ್ಮಾಂಡದ ಎರಡು ಅತ್ಯುನ್ನತ ಶಕ್ತಿಗಳಾದ ಶಿವ ಹಾಗೂ ಪಾರ್ವತಿಯ ಸಂಯೋಗದ ಪ್ರತೀಕವಾಗಿ ಮಹಾಶಿವರಾತ್ರಿಯ ಆಚರಣೆ ಮಾಡಲಾಗುತ್ತದೆ ಎಂದು ನಂಬಲಾಗಿದೆ. ಹಾಗೆ ಸಮುದ್ರ ಮಂಥನದ ವೇಳೆ ಉದ್ಭವಿಸಿದ ವಿಷವನ್ನು ಆತ ಕುಡಿದ ದಿನವಾಗಿಯೂ ಇದನ್ನು ಕರೆಯಲಾಗಿದೆ.



Click it and Unblock the Notifications


















