Latest Updates
-
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ!
ಮಹಾ ಶಿವರಾತ್ರಿ 2025: ವಾಟ್ಸಾಪ್ ಡಿಪಿ, ಸ್ಟೇಟಸ್ಗಾಗಿ ಎಐ ರಚಿತ ಅದ್ಭುತ ಚಿತ್ರಗಳು ಇಲ್ಲಿವೆ...!!
ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಮಹಾ ಶಿವರಾತ್ರಿಯನ್ನು ದೇಶದಾದ್ಯಂತ ಆಚರಿಸುತ್ತಾರೆ. ಶಿವನ ದೇವಾಲಯದಲ್ಲಿ ಈ ದಿನವು ಬಹಳ ಅದ್ದೂರಿಯಾಗಿ ನೆರವೇರಲಿದೆ. ಹಾಗೆ ಎಲ್ಲಾ ಕಡೆಗಳಲ್ಲಿ ಶಿವನಾಮಸ್ಮರಣೆ, ಜಪ, ಭಜನೆ, ಜಾಗರಣೆ ನಡೆಯುವುದು ನಾವು ನೋಡಬಹುದು, ಈ ದಿನ ಶಿವ ಹಾಗೂ ಪಾರ್ವತಿ ವಿವಾಹವಾದ ದಿನ ಎಂದು ಪರಿಗಣಿಸಲಾಗಿದೆ. ಹೀಗಾಗಿ ರಾತ್ರಿಯ ಜಾಗರಣೆಯಿಂದ ಬಹಳದ್ಟು ಲಾಭ ನೀವು ಪಡೆಯಬದುದಂತೆ.

ಪ್ರತಿ ವರ್ಷ ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಮಹಾ ಶಿವರಾತ್ರಿ ಆಚರಣೆ ಮಾಡಲಾಗುತ್ತದೆ. ಶಿವರಾತ್ರಿ ಭಗವಾನ್ ಶಿವನಿಗೆ ಅತ್ಯಂತ ಪ್ರಿಯವಾದ ದಿನವಾಗಿದೆ. ಚಳಿಗಾಲ ಕೊನೆಗೊಂಡು ವಸಂತ ಮತ್ತು ಬೇಸಿಗೆ ಪ್ರಾರಂಭವಾಗುವ ದಿನ ಕೂಡ ಇದಾಗಿರಲಿದೆ.
ಶಿವರಾತ್ರಿಯಲ್ಲಿ ಜಾಗರಣೆ ಹಾಗೂ ಉಪವಾಸ ವ್ರತಕ್ಕೆ ಬಹಳ ಮಹತ್ವವಿದೆ. ಶಿವರಾತ್ರಿಯ ಉಪವಾಸ ಹಾಗೂ ಜಾಗರಣೆ ಮಾಡುವುದು ಅಶ್ಚಮೇಧ ಯಾಗ ಮಾಡಿದಂತೆ ಎಂಬ ನಂಬಿಕೆಯೂ ಇದೆ. ನಿಮ್ಮ ಸಂಕಷ್ಟಗಳ ನಿವಾರಣೆಗೆ ಈ ದಿನ ಮೀಸಲಿಡಬಹುದು ಎಂದು ಹೇಳಲಾಗಿದೆ.
ಈ ದಿನದಂದು ಶಿವನಿಗೆ ಹಾಲು-ಜೇನಿನ ಅಭಿಷೇಕ ಮಾಡಿಸಿ, ಬಿಲ್ವಪತ್ರೆ, ಹೂವು ಅರ್ಪಿಸಿ ಶಿವನ ಮಂತ್ರ ಪಠಿಸಲಾಗುತ್ತದೆ. ಹಾಗೆ ಶಿವನ ಹಲವು ನಾಮಸ್ಮರಣೆಯು ಈ ದಿನದ ವಿಶೇವಾಗಿದ್ದು, ಈ ಮೂಲಕ ಶಿವನ ಕೃಪೆಗೆ ಪಾತ್ರರಾಗಬಹುದು.
ಈ ದಿನ ಮಹಾಶಿವನಿಗೆ ರುದ್ರಾಭಿಷೇಕ ಮಾಡುವುದರಿಂದ ಇಷ್ಟಾರ್ಥಗಳು ನೆರವೇರಲಿದೆ ಎಂದು ಹೇಳಲಾಗಿದೆ. ಈ ದಿನ ಸೂರ್ಯನಿಗೆ ಆರ್ಘ್ಯ ಅರ್ಪಿಸುವುದರಿಂದ ನಿಮ್ಮ ಜೀವನದಲ್ಲಿನ ಬಹಳಷ್ಟು ಕಷ್ಟಗಳನ್ನು ನಿವಾರಣೆ ಮಾಡಬಹುದು.
ನೀವು ಉಪವಾಸ ಮಾಡದರೆ ಅದರ ಸಂಪೂರ್ಣ ಫಲ ಪಡೆಯಲು ಆ ರಾತ್ರಿ ಜಾಗರಣೆ ಮಾಡಬೇಕು ಎಂದು ಹೇಳಲಾಗಿದೆ. ಈ ಉಪವಾಸದ ಸಮಯದಲ್ಲಿ ನೀರು ಕೂಡ ಸೇವಿಸಬಾರದು.
ಇನ್ನು ಕೆಲವರಿಗೆ ಅನಾರೋಗ್ಯ ಸಮಸ್ಯೆಯಿಂದ ಪೂರ್ಣ ಪ್ರಮಾಣದ ಉಪವಾಸ ಮಾಡಲು ಸಾಧ್ಯವಿಲ್ಲವೋ ಅಂತವರು ಹಾಲು, ಹಣ್ಣು, ನೀರು ಸೇವಿಸಬಹುದಾಗಿದೆ.
ಈ ದಿನದಂದು ಉಪವಾಸ ಮಾಡುವುದರಿಂದ ದೇಹದಲ್ಲಿರುವ ಕಶ್ಮಲವನ್ನು ಹೊರ ಹಾಕಬಹುದು. ಅಲ್ಲದೆ ಉಪವಾಸ ಮಾಡುವ ಮೂಲಕ ತಾಮಸ ಗುಣ ನಿಯಂತ್ರಿಸಬಹುದು.
ಬ್ರಹ್ಮಾಂಡದ ಎರಡು ಅತ್ಯುನ್ನತ ಶಕ್ತಿಗಳಾದ ಶಿವ ಹಾಗೂ ಪಾರ್ವತಿಯ ಸಂಯೋಗದ ಪ್ರತೀಕವಾಗಿ ಮಹಾಶಿವರಾತ್ರಿಯ ಆಚರಣೆ ಮಾಡಲಾಗುತ್ತದೆ ಎಂದು ನಂಬಲಾಗಿದೆ. ಹಾಗೆ ಸಮುದ್ರ ಮಂಥನದ ವೇಳೆ ಉದ್ಭವಿಸಿದ ವಿಷವನ್ನು ಆತ ಕುಡಿದ ದಿನವಾಗಿಯೂ ಇದನ್ನು ಕರೆಯಲಾಗಿದೆ.



Click it and Unblock the Notifications








