Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ಮಹಾ ಶಿವರಾತ್ರಿ 2025: ವಾಟ್ಸಾಪ್ ಡಿಪಿ, ಸ್ಟೇಟಸ್ಗಾಗಿ ಎಐ ರಚಿತ ಅದ್ಭುತ ಚಿತ್ರಗಳು ಇಲ್ಲಿವೆ...!!
ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಮಹಾ ಶಿವರಾತ್ರಿಯನ್ನು ದೇಶದಾದ್ಯಂತ ಆಚರಿಸುತ್ತಾರೆ. ಶಿವನ ದೇವಾಲಯದಲ್ಲಿ ಈ ದಿನವು ಬಹಳ ಅದ್ದೂರಿಯಾಗಿ ನೆರವೇರಲಿದೆ. ಹಾಗೆ ಎಲ್ಲಾ ಕಡೆಗಳಲ್ಲಿ ಶಿವನಾಮಸ್ಮರಣೆ, ಜಪ, ಭಜನೆ, ಜಾಗರಣೆ ನಡೆಯುವುದು ನಾವು ನೋಡಬಹುದು, ಈ ದಿನ ಶಿವ ಹಾಗೂ ಪಾರ್ವತಿ ವಿವಾಹವಾದ ದಿನ ಎಂದು ಪರಿಗಣಿಸಲಾಗಿದೆ. ಹೀಗಾಗಿ ರಾತ್ರಿಯ ಜಾಗರಣೆಯಿಂದ ಬಹಳದ್ಟು ಲಾಭ ನೀವು ಪಡೆಯಬದುದಂತೆ.

ಪ್ರತಿ ವರ್ಷ ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಮಹಾ ಶಿವರಾತ್ರಿ ಆಚರಣೆ ಮಾಡಲಾಗುತ್ತದೆ. ಶಿವರಾತ್ರಿ ಭಗವಾನ್ ಶಿವನಿಗೆ ಅತ್ಯಂತ ಪ್ರಿಯವಾದ ದಿನವಾಗಿದೆ. ಚಳಿಗಾಲ ಕೊನೆಗೊಂಡು ವಸಂತ ಮತ್ತು ಬೇಸಿಗೆ ಪ್ರಾರಂಭವಾಗುವ ದಿನ ಕೂಡ ಇದಾಗಿರಲಿದೆ.
ಶಿವರಾತ್ರಿಯಲ್ಲಿ ಜಾಗರಣೆ ಹಾಗೂ ಉಪವಾಸ ವ್ರತಕ್ಕೆ ಬಹಳ ಮಹತ್ವವಿದೆ. ಶಿವರಾತ್ರಿಯ ಉಪವಾಸ ಹಾಗೂ ಜಾಗರಣೆ ಮಾಡುವುದು ಅಶ್ಚಮೇಧ ಯಾಗ ಮಾಡಿದಂತೆ ಎಂಬ ನಂಬಿಕೆಯೂ ಇದೆ. ನಿಮ್ಮ ಸಂಕಷ್ಟಗಳ ನಿವಾರಣೆಗೆ ಈ ದಿನ ಮೀಸಲಿಡಬಹುದು ಎಂದು ಹೇಳಲಾಗಿದೆ.
ಈ ದಿನದಂದು ಶಿವನಿಗೆ ಹಾಲು-ಜೇನಿನ ಅಭಿಷೇಕ ಮಾಡಿಸಿ, ಬಿಲ್ವಪತ್ರೆ, ಹೂವು ಅರ್ಪಿಸಿ ಶಿವನ ಮಂತ್ರ ಪಠಿಸಲಾಗುತ್ತದೆ. ಹಾಗೆ ಶಿವನ ಹಲವು ನಾಮಸ್ಮರಣೆಯು ಈ ದಿನದ ವಿಶೇವಾಗಿದ್ದು, ಈ ಮೂಲಕ ಶಿವನ ಕೃಪೆಗೆ ಪಾತ್ರರಾಗಬಹುದು.
ಈ ದಿನ ಮಹಾಶಿವನಿಗೆ ರುದ್ರಾಭಿಷೇಕ ಮಾಡುವುದರಿಂದ ಇಷ್ಟಾರ್ಥಗಳು ನೆರವೇರಲಿದೆ ಎಂದು ಹೇಳಲಾಗಿದೆ. ಈ ದಿನ ಸೂರ್ಯನಿಗೆ ಆರ್ಘ್ಯ ಅರ್ಪಿಸುವುದರಿಂದ ನಿಮ್ಮ ಜೀವನದಲ್ಲಿನ ಬಹಳಷ್ಟು ಕಷ್ಟಗಳನ್ನು ನಿವಾರಣೆ ಮಾಡಬಹುದು.
ನೀವು ಉಪವಾಸ ಮಾಡದರೆ ಅದರ ಸಂಪೂರ್ಣ ಫಲ ಪಡೆಯಲು ಆ ರಾತ್ರಿ ಜಾಗರಣೆ ಮಾಡಬೇಕು ಎಂದು ಹೇಳಲಾಗಿದೆ. ಈ ಉಪವಾಸದ ಸಮಯದಲ್ಲಿ ನೀರು ಕೂಡ ಸೇವಿಸಬಾರದು.
ಇನ್ನು ಕೆಲವರಿಗೆ ಅನಾರೋಗ್ಯ ಸಮಸ್ಯೆಯಿಂದ ಪೂರ್ಣ ಪ್ರಮಾಣದ ಉಪವಾಸ ಮಾಡಲು ಸಾಧ್ಯವಿಲ್ಲವೋ ಅಂತವರು ಹಾಲು, ಹಣ್ಣು, ನೀರು ಸೇವಿಸಬಹುದಾಗಿದೆ.
ಈ ದಿನದಂದು ಉಪವಾಸ ಮಾಡುವುದರಿಂದ ದೇಹದಲ್ಲಿರುವ ಕಶ್ಮಲವನ್ನು ಹೊರ ಹಾಕಬಹುದು. ಅಲ್ಲದೆ ಉಪವಾಸ ಮಾಡುವ ಮೂಲಕ ತಾಮಸ ಗುಣ ನಿಯಂತ್ರಿಸಬಹುದು.
ಬ್ರಹ್ಮಾಂಡದ ಎರಡು ಅತ್ಯುನ್ನತ ಶಕ್ತಿಗಳಾದ ಶಿವ ಹಾಗೂ ಪಾರ್ವತಿಯ ಸಂಯೋಗದ ಪ್ರತೀಕವಾಗಿ ಮಹಾಶಿವರಾತ್ರಿಯ ಆಚರಣೆ ಮಾಡಲಾಗುತ್ತದೆ ಎಂದು ನಂಬಲಾಗಿದೆ. ಹಾಗೆ ಸಮುದ್ರ ಮಂಥನದ ವೇಳೆ ಉದ್ಭವಿಸಿದ ವಿಷವನ್ನು ಆತ ಕುಡಿದ ದಿನವಾಗಿಯೂ ಇದನ್ನು ಕರೆಯಲಾಗಿದೆ.



Click it and Unblock the Notifications








