Latest Updates
-
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ? -
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್!
ಮಹಾ ಶಿವರಾತ್ರಿ 2024: ಈ ವಸ್ತು ಶಿವನಿಗೆ ಅರ್ಪಿಸಿದರೆ ಇಷ್ಟಾರ್ಥ ಸಿದ್ಧಿ..!
ಹಿಂದೂ ಧರ್ಮದ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿಯನ್ನು ಎಲ್ಲಾ ಕಡೆಗಳಲ್ಲೂ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಈ ಮಂಗಳಕರ ದಿನದಲ್ಲಿ ಶಿವನ ಮೆಚ್ಚಿಸಲು ಉಪವಾಸ, ವಿಶೇಷ ಪೂಜೆ, ಜಾಗರಣೆ ಮಾಡಲಾಗುತ್ತದೆ. ಹೀಗಾಗಿ ಪರಮಶಿವನ ಪೂಜೆಗೆ ಈ ದಿನ ಬಹಳ ಉತ್ತಮ ಎಂದು ಪರಿಗಣಿಸಲಾಗಿದೆ.
ಈ ವರ್ಷದ ಮಹಾ ಶಿವರಾತ್ರಿಯನ್ನು 8 ಮಾರ್ಚ್ 2024 ರಂದು ಆಚರಿಸಲಾಗುತ್ತದೆ. ಈ ಹಬ್ಬದಂದು ಶಿವನಿಗೆ ಯಾವ ಆಹಾರ ನೈವೇದ್ಯ ಅಥವಾ ಅರ್ಪಿಸಿದರೆ ಇಷ್ಟಾರ್ಥ ನೆರವೇರಲಿದೆ ಎಂಬುದನ್ನು ನಾವಿಂದು ನೋಡೋಣ. ಹಾಗೂ ಆ ಆಹಾರದ ಆರೋಗ್ಯದ ಅಂಶವೇನು ಎಂಬುದನ್ನು ತಿಳಿದುಕೊಳ್ಳೋಣ.

1. ಬೇಲ್/ಬೇಲದ ಹಣ್ಣು (ವುಡ್ ಆಪಲ್)
ಭಗವಾನ್ ಶಿವನಿಗೆ ಬೇಲದ ಹಣ್ಣುಗಳು ತುಂಬಾ ಇಷ್ಟ ಎಂದು ನಂಬಲಾಗಿದೆ. ಬೇಲ್ ಮರವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ ಮತ್ತು ಈ ಹಣ್ಣನ್ನು ಮತ್ತು ಎಲೆಯನ್ನು ಶಿವನಿಗೆ ಅರ್ಪಿಸಲಾಗುತ್ತದೆ. ಈ ಹಣ್ಣಿನಲ್ಲಿ ವಿಟಮಿನ್ ಎ, ಬಿ ಮತ್ತು ಸಿ ಮತ್ತು ಕ್ಯಾಲ್ಸಿಯಂ ಮತ್ತು ರಂಜಕದಂತಹ ಖನಿಜಗಳಲ್ಲಿ ಸಮೃದ್ಧವಾಗಿದೆ. ಇದು ಜೀರ್ಣಕಾರಿ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ ಮತ್ತು ಮಲಬದ್ಧತೆ ಮತ್ತು ಅತಿಸಾರದಂತಹ ವಿವಿಧ ಜೀರ್ಣಕಾರಿ ಅಸ್ವಸ್ಥತೆಗಳಿಗೆ ಚಿಕಿತ್ಸೆ ನೀಡಲು ಇದನ್ನು ಬಳಸಲಾಗುತ್ತದೆ. ಈ ಎಲ್ಲಾ ಕಾರಣದಿಂದಾಗಿಯೂ ಈ ಹಣ್ಣಿನ ಬಳಕೆ ಹೆಚ್ಚಾಗಿದೆ.
2. ಹಾಲು
ಹಾಲನ್ನು ಶಿವನ ಅಚ್ಚುಮೆಚ್ಚಿನ ನೈವೇದ್ಯವೆಂದು ಪರಿಗಣಿಸಲಾಗಿದೆ. ಪೂಜೆಯ ಸಮಯದಲ್ಲಿ ಇದನ್ನು ಹೆಚ್ಚಾಗಿ ಶಿವಲಿಂಗಕ್ಕೆ ಅಭಿಷೇಕ ಮಾಡಲಾಗುತ್ತದೆ. ಹಾಲಿನ ಅಭಿಷೇಕ ಮಾಡುವುದರಿಂದ ಶಿವ ಸಂಪನ್ನನಾಗುತ್ತಾನೆ ಎಂದು ನಂಬಲಾಗಿದೆ.
3. ಜೇನು ತುಪ್ಪ
ಜೇನುತುಪ್ಪವು ಶಿವನಿಗೆ ಮತ್ತೊಂದು ನೆಚ್ಚಿನ ನೈವೇದ್ಯವಾಗಿದೆ. ಅವನಿಗೆ ಸಮರ್ಪಿತವಾದ ವಿವಿಧ ಆಚರಣೆಗಳು ಮತ್ತು ಸಮಾರಂಭಗಳಲ್ಲಿ ಇದನ್ನು ಹೆಚ್ಚಾಗಿ ಬಳಸಲಾಗುತ್ತದೆ. ಜೊತೆಗೆ ಶಿವನ ತೀರ್ಥದಲ್ಲಿ ಹಾಲು ಮತ್ತು ಜೇನು ತುಪ್ಪ ಮಿಶ್ರಣವಿರುತ್ತದೆ.
4. ಮೊಸರು
ಮೊಸರನ್ನು ಹಿಂದೂ ಧರ್ಮದಲ್ಲಿ ದೈವಿಕ ಆಹಾರವೆಂದು ಪರಿಗಣಿಸಲಾಗುತ್ತದೆ ಮತ್ತು ಇದನ್ನು ಹೆಚ್ಚಾಗಿ ಶಿವನಿಗೆ ಅರ್ಪಿಸಲಾಗುತ್ತದೆ. ಇದನ್ನು ವಿವಿಧ ಆಚರಣೆಗಳು ಮತ್ತು ಸಮಾರಂಭಗಳಲ್ಲಿಯೂ ಬಳಸಲಾಗುತ್ತದೆ. ಶಿವ ಲಿಂಗಕ್ಕೆ ಮೊಸರಿನ ಅಭಿಷೇಕ ಮಾಡುವುದು ಶಿವನ ಆರ್ಶೀವಾದ ಪಡೆಯಲು ಇರುವ ಮಾರ್ಗವಾಗಿದೆ.
5. ಪಾಯಸ
ಶಿವರಾತ್ರಿಯಂದು ಶಿವನಿಗೆ ಯಾವುದಾದರು ಪಾಯಸ ಮಾಡಿ ನೈವೇದ್ಯ ಮಾಡಬೇಕಂತೆ. ಪಾಯಸದಲ್ಲಿ ಹಾಲು, ಒಣದ್ರಾಕ್ಷಿ, ಗೋಡಂಬಿಯಂತಹ ಒಣ ಹಣ್ಣುಗಳು ಇದ್ದರೆ ಶಿವನಿಗೆ ಪ್ರೀತಿಯಂತೆ. ಹೀಗಾಗಿ ಶಿವರಾತ್ರಿಯಂದು ಪ್ರಸಾದದಲ್ಲಿ ಪಾಯಸವನ್ನೂ ಸೇರಿಸಿ.
6. ಪಂಚಾಮೃತ
ಶಿವನ ಆರಾಧನೆಯಲ್ಲಿ ಪಂಚಾಮೃತ ಇಲ್ಲದಿದ್ದರೆ ಆ ಪೂಜೆ ಪೂರ್ಣವಾವುದೇ ಇಲ್ಲ. ಪಂಚಾಮೃತ ಎಂದರೆ ಹಸುವಿನ ಹಾಲು, ತುಪ್ಪ, ಸಕ್ಕರೆ, ಮೊಸರು ಹಾಗೂ ಜೇನುತುಪ್ಪ. ಈ ಎಲ್ಲಾ ಅಂಶಗಳನ್ನು ಬೆರೆಸಿ ತೀರ್ಥ ಮಾಡಬಹುದು, ಇಲ್ಲವೆ ಎಲ್ಲವನ್ನೂ ಬೇರೆ ಬೇರೆಯಾಗಿ ನೈವೇದ್ಯ ಮಾಡಬಹುದು.
7. ಭೂ ಚಕ್ರ ಗಡ್ಡೆ ಅಥವಾ ಕಂಡ್ಮೂಲ್
ಭೂ ಚಕ್ರ ಗಡ್ಡೆ ಎಂದು ಕರೆಯಲ್ಪಡುವ ರಾಮ ಕಂಡ್ಮೂಲ್ ಸಹ ಶಿವನಿಗೆ ಪ್ರಿಯವಾದ ಆಹಾರವಂತೆ. ಆದರೆ ಈ ಫಲ ಸಿಗುವುದು ಬಲು ಅಪರೂಪವಾಗಿದ್ದು, ಕಾಡುಗಳಲ್ಲಿ ಮಾತ್ರ ದೊರೆಯುತ್ತದೆ. ಕೆಲವು ಬಾರಿ ಮಾರುಕಟ್ಟೆಗೂ ಬರಬಹುದು. ಇದರಲ್ಲಿ ಮಾಡಿದ ಯಾವುದಾದರು ಖಾದ್ಯ ಶಿವನಿಗೆ ಅರ್ಪಿಸಿದರೆ ನಿಮ್ಮ ಇಷ್ಟಾರ್ಥ ಇಡೇರುವುದು ಎನ್ನಲಾಗಿದೆ.
8. ಹಣ್ಣುಗಳಿಂದ ಮಾಡಿದ ಮಾಲ್ಪುವಾ
ಭಂಗಿ ಪುಡಿ ಮಿಶ್ರಿತ ಹಾಗೂ ಒಣ ಹಣ್ಣುಗಳಿಂದ ಮಾಡಲಾದ ಮಾಲ್ಪುವಾ ಸಿಹಿ ತಿಂಡಿಯು ಶಿವನಿಗೆ ಅತ್ಯಂತ ಪ್ರಿಯವಾದ ಆಹಾರವಾಗಿದೆ ಎಂದು ನಂಬಲಾಗಿದೆ. ಹೀಗಾಗಿ ಶಿವರಾತ್ರಿಯಂದು ಈ ಸಿಹಿ ತಿಂಡಿ ಮಾಡಿ ಶಿವನಿಗೆ ಅರ್ಪಿಸಿದರೆ ನಿಮ್ಮ ಪ್ರಾರ್ಥನೆಗೆ ಫಲ ಸಿಗುವುದು ಖಚಿತ.



Click it and Unblock the Notifications