Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಹಾಶಿವರಾತ್ರಿ: ಶಿವಪೂಜೆಗೆ ಬಿಲ್ವೆಪತ್ರೆ ಹೇಗೆ ಮತ್ತು ಎಷ್ಟು ಅರ್ಪಿಸಬೇಕು?
ಗಣಪತಿಯನ್ನು ಪೂಜಿಸುವಾಗ ಗರಿಕೆ ಅರ್ಪಿಸುವುದು ಶ್ರೇಷ್ಠ ಅದರಂತೆಯೇ ಶಿವ ಪೂಜೆಯಲ್ಲಿ ಬಿಲ್ವಪತ್ರೆ ಇರಲೇಬೇಕು, ಎಲ್ಲಾ ಶಿವ ದೇವಾಲಯಗಳಲ್ಲಿ ಬಿಲ್ವಪತ್ರೆ ಗಿಡವನ್ನು ನೆಟ್ಟು ಬೆಳೆಸಲಾಗುವುದು. ಬಿಲ್ವಪತ್ರೆಯನ್ನು ಬಳಸುವುದಕ್ಕೂ ಕೆಲವೊಂದು ನಿಯಮವಿದೆ, ಶಿವ ಪೂಜೆಯಲ್ಲಿ ಅರ್ಪಿಸುವ ಬಿಲ್ವಪತ್ರೆ ಹೇಗಿರಬೇಕು? ಹೇಗೆ ಅರ್ಪಿಸಬೇಕು ಎಂದು ನೋಡೋಣ ಬನ್ನಿ:

ಶಿವ ಪೂಜೆಗೆ ಬಿಲ್ವೆ ಪತ್ರೆ ಎಲೆ ಹೇಗೆ ಆಯ್ಕೆ ಮಾಡಬೇಕು?
ನೀವು ಶಿವನ ಪೂಜೆಗೆ ಬಿಲ್ವೆಪತ್ರೆ ಎಲೆ ಕುಯ್ದು ತರುವಾಗ ಎಲ್ಲಾ ಎಲೆ ತರುವಂತಿಲ್ಲ, ಆ ಎಲೆಯ ಮೇಲೆ ಯಾವುದೇ ಬಿಳಿ ಚುಕ್ಕಿ ಇರಬಾರದು, ಇನ್ನು ಎಲೆ ಕೂತು ರಂಧ್ರ ಮಾಡಬಾರದು. ಅಲ್ಲದೆ ಒಂದೊಂದೇ ಎಲೆ ಕೀಳಬಾರದು, ನೀವು ಬಿಲ್ವೆಪತ್ರೆ ಎಲೆ ಆಯ್ಕೆ ಮಾಡುವಾಗ ಆ ದಂಟಿನಲ್ಲಿ ಮೂರು ಎಲೆ ಜೊತೆಯಾಗಿ ಇರಬೇಕು. ಎಲೆ ಹರಿದು ಹೋಗಿದ್ದರೆ ಅಂಥ ಎಲೆ ಬಳಸಬಾರದು.
ಏಕೆ ಮೂರು ಎಲೆ ಜೊತೆಗಿರುವಂತೆ ನಾವು ಎಲೆಗಳನ್ನು ಕೀಳಬೇಕು?
ಬಿಲ್ವೆಪತ್ರೆ ಮೂರು ಎಲೆ ಶಿವನ ಮೂರನೇ ಕಣ್ಣಿನ ಮಹತ್ವ ಹೇಳುತ್ತದೆ, ಶಿವ ಮೂರನೇ ಕಣ್ಣು ಬಿಟ್ಟರೆ ಈ ಜಗತ್ತು ಸುಟ್ಟು ಭಸ್ಮವಾಗುತ್ತದೆ ಎಂದು ಎಂದು ಹೇಳಲಾಗುವುದು, ಮೂರನೇ ಕಣ್ಣು ಜ್ಞಾನದ ಸಂಕೇತ ಕೂಡ ಹೌದು. ದೇವ-ಅಸುರರ ನಡುವೆ ಯುದ್ಧ ನಡೆದಾಗ ಶಿವನು ಮಾರಕ ಆಯುಧಗಳನ್ನು ತಮ್ಮ ದೇಹದೊಳಗೆ ಹೀರಿಕೊಳ್ಳುತ್ತಾನೆ, ಅದುವೇ ಮೂರನೇ ಕಣ್ಣು ಎಂದು ಹೇಳಲಾಗುವುದು.
ಮೂರು ಎಲೆಗಳನ್ನು ಈ ಅರ್ಥಗಳನ್ನೂ ಕೂಡ ಸೂಚಿಸುತ್ತದೆ
ಮೂರು ಎಲೆಗಳನ್ನು ಏಕೆ ಅರ್ಪಿಸಬೇಕು ಎಂಬುವುದನ್ನು ಹೀಗೆ ಕೂಡ ವಿಶ್ಲೇಷಲಾಗುವುದು
ಈ ಮೂರು ಎಲೆಗಳು ತಾಮಸ ಅಂದರೆ ದೇಹ
ರಜಸ ಅಂದರೆ ಭಾವನೆ
ಸಾತ್ವಿಕ ಅಂದರೆ ಬುದ್ಧಿ ಇದನ್ನು ಸೂಚಿಸುತ್ತದೆ ಎಂದು ಹೇಳಲಾಗುವುದು.
ಈ ಮೂರು ಎಲೆ ಅರ್ಪಿಸುವ ಮೂಲಕ ನಾವು ಕಾಯ, ವಾಚ, ಮನಸ್ಸಾ ದೇವರಿಗೆ ನಮ್ಮನ್ನು ನಾವು ಅರ್ಪಿಸಿಕೊಂಡಿದ್ದೇವೆ ಎಂಬುವುದನ್ನು ಸೂಚಿಸುತ್ತದೆ.
ಪೌರಾಣಿಕ ನಂಬಿಕ ಪ್ರಕಾರ
ಬಿಲ್ವೆಪತ್ರೆ ಎಲೆಯಲ್ಲಿ ತ್ರಿಮೂರ್ತಿಗಳಾದ ಬ್ರಹ್ಮ,ವಿಷ್ಣು, ಶಿವ ನೆಲೆಸಿದ್ದಾರೆ ಎಂದು ಹೇಳಲಾಗುವುದು.
ಬಿಲ್ವೆಪತ್ರೆ ಎಲೆಯನ್ನು ಶಿವಲಿಂಗಕ್ಕೆ ಹೇಗೆ ಅರ್ಪಿಸಬೇಕು?
ನೀವು ಶಿವಲಿಂಗಕ್ಕೆ ಬಿಲ್ವೆಪತ್ರೆ ಎಲೆಯನ್ನು ಅರ್ಪಿಸುವಾಗ ಹಾಗೆಯೇ ಅರ್ಪಿಸಬೇಡಿ, ಅದರ ತೊಟ್ಟು ನಮ್ಮ ಕಡೆ ಎಲೆಯ ತುದಿ ಶಿವಲಿಂಗದ ಕಡೆ ಇರುವಂತೆ ಅರ್ಪಿಸಬೇಕು, ಹೀಗೆ ಅರ್ಪಿಸುವುದರಿಂದ ಎಲೆತಟ್ಟುವಿನ ಮೂಲಕ ಶಿವತತ್ತ್ವ ಆ ಪರಿಸರದಲ್ಲಿ ಹರಡುವುದು ಎಂದು ಹೇಳಲಾಗುವುದು.
ಶಿವರಾತ್ರಿಯ ದಿನದಂದು ಬಿಲ್ವೆಪತ್ರೆ ಎಲೆ ಕೀಳಬೇಡಿ
ಸೋಮವಾರದ ದಿನ, ಶಿವರಾತ್ರಿಯ ದಿನ ಬಿಲ್ವೆಪತ್ರೆ ಎಲೆ ಕೀಳಬೇಡಿ, ಒಮ್ಮೆ ಶಿವಲಿಂಗಕ್ಕೆ ಅರ್ಪಿಸಿದ ಬಿಲ್ವೆಪತ್ರೆ ಎಲೆಯನ್ನು ಮತ್ತೊಮ್ಮೆ ಬಳಸಬಾರದು. ಬಿಲ್ವೆಪತ್ರೆ ಎಲೆಯನ್ನು ಕೀಳುವಾಗ ಸ್ನಾನ ಮಾಡಿ ಮಡಿ ಬಟ್ಟೆ ಧರಿಸಿ ನಂತರ ಕೀಳಿ. ಸ್ಕಂದ ಪುರಾಣದಲ್ಲಿ ಬಿಲ್ವೆ ಪತ್ರೆ ಮರದಲ್ಲಿ ಪಾರ್ವತಿ ನೆಲೆಸಿದ್ದಾಳೆ ಎಂದು ಹೇಳಲಾಗುವುದು.
ಬಿಲ್ವೆಪತ್ರೆ ಎಲೆ ಅರ್ಪಿಸದೆ ಪೂಜೆ ಶಿವ ಪೂಜೆ ಮಾಡಿದರೆ ಅದು ಸಂಪೂರ್ಣವಾಗ ಉವುದಿಲ್ಲ, ಹಾಗಾಗಿ ಶಿವಪೂಜೆಯಲ್ಲಿ ಬಿಲ್ವೆಪತ್ರೆ ಎಲೆ ಇರಲೇಬೇಕು.
ಮೂಲತೋಭವರೂಪಾಯ ಮಧ್ಯತೋ ಮೃದುರೂಪಿಣಿ
ಅಗ್ರತಃ ಶಿವರೂಪಾಯ ಪತ್ರ್ನೆವೇರ್ದಸ್ವರೂಪಿಣಿ
ಸ್ಕಂದೇ ವೇದಾಂತರೂಪೆಯ ತರುರಾಜಯಃ ತೆ ನಮಃ
ಸರ್ವಕಾಮಪ್ರದಾಮ್ ಬಿಲ್ವಮ್ ದಾರಿದ್ರ್ಯ ಪ್ರಣಾಶನಂ ಬಿಲ್ವಾತ್ಪಾತ್ರಂ ನಾಸ್ಪಿ ಯೇನ ತುಷ್ಯತಿ ಶಂಕರ
ಈ ಮಂತ್ರ ಪಠಣೆ ಮೂಲಕ ಬಿಲ್ವೆಪತ್ರೆ ಎಲೆಯನ್ನು ಅರ್ಪಿಸಲಾಗುವುದು.
ಬಿಲ್ವೆಪತ್ರೆ ಎಲೆಯನ್ನು ಮನೆಯ ಸಮೀಪ ಬೆಳೆಯಲ್ಲ
ಈ ಬಿಲ್ವೆಪತ್ರೆ ಎಲೆಯನ್ನು ಮನೆಯ ಸಮೀಪವಾಗಲಿ, ತೋಟದಲ್ಲಿ ಆಗ್ಲಿ ಬೆಳಯಲ್ಲ,ಈ ಮರದ ನೆರಳು ಮನೆಗೆ ಬೀಳಬಾರದು ಅಂತಾರೆ. ದೇವಾಲಯದಲ್ಲಿ ಬೆಳೆಯುತ್ತಾರೆ, ರಸ್ತೆಗಳಲ್ಲಿಯೂ ಕಾಣಬಹುದು.
ಬಿಲ್ವೆಪತ್ರೆ ಎಲೆ ಅನೇಕ ಔಷಧೀಯ ಗುಣಗಳನ್ನು ಹೊಂದಿರುವ ಎಲೆಯಾಗಿದೆ.



Click it and Unblock the Notifications