Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
Mahagauri Mantra In Kannada: ನವರಾತ್ರಿಯ 9ನೇ ದಿನ ಮಹಾಗೌರಿ ಪೂಜೆ, ಮಂತ್ರ ಇಲ್ಲಿದೆ
ನವರಾತ್ರಿಯ ಸಂಭ್ರಮದಲ್ಲಿ 8 ದಿನವನ್ನು ಅತ್ಯಂತ ವಿಶೇಷ ಎಂದು ಪರಿಗಣಿಸಲಾಗುತ್ತದೆ. 9 ದಿನಗಳ ಆಚರಣೆಯಲ್ಲಿ 8ನೇ ದಿನ ಮಹಾಗೌರಿಯನ್ನು ಆರಾಧಿಸಲಾಗುತ್ತದೆ. ಈ ದಿನದಂದು ಮಾ ದುರ್ಗಾ ಮಾತೆಯ ಎಂಟನೇ ರೂಪವಾದ ಮಾ ಮಹಾಗೌರಿಯನ್ನು ಪೂಜಿಸಲಾಗುತ್ತದೆ. ಆಕೆಯ ಮೈಬಣ್ಣವು ಸಂಪೂರ್ಣವಾಗಿ ಸುಂದರವಾಗಿರುತ್ತದೆ. ಆಕೆಯನ್ನು ಶಂಖ, ಚಂದ್ರನೊಂದಿಗೆ ಹೋಲಿಸಲಾಗುತ್ತದೆ.
ದುರ್ಗೆ ಒಂದೊಂದು ದಿನ ಒಂದೊಂದು ಅವತಾರದಲ್ಲಿ ಭೂಮಿಗೆ ಬರುತ್ತಾಳೆ. ಹಾಗೆ ಭಕ್ತರ ಬೇಡಿಕೆಗಳನ್ನು ಆಕೆ ಇಡೇರಿಸುತ್ತಾಳೆ ಎಂಬ ನಂಬಿಕೆ ಇದೆ. ನವರಾತ್ರಿಯ 8ನೇ ದಿನದಂದು ದುರ್ಗೆ ಮಹಾಗೌರಿಗೆ ಸಮರ್ಪಿತವಾದ ದಿನವಾಗಿದೆ. ದುರ್ಗೆಯ ಮಹಾಗೌರಿಯ ಅವತಾರದಲ್ಲಿ 8ನೇ ದಿನ ಭೂಮಿಗೆ ಬರುತ್ತಾಳೆ ಎಂಬ ನಂಬಿಕೆ ಇದೆ.

ಮಹಾಗೌರಿಯು 16ನೇ ವಯಸ್ಸಿನವರಾಗಿರುವರು. ಗೌರಿ ಎಂದರೆ ಆಕೆಯು ಗಿರಿ ಅಥವಾ ಪರ್ವತದ ಮಗಳೆಂದು ಹೇಳಲಾಗುತ್ತದೆ. ಗೂಳಿ ಮೇಲೆ ಪ್ರಯಾಣಿಸುವ ಗೌರಿ ತನ್ನ ಕೈಯಲ್ಲಿ ತ್ರಿಶೂಲದೊಂದಿಗೆ ಢಮರುಗ ಹಿಡಿದಿರುತ್ತಾಳೆ. ಆಕೆ ಬಿಳಿ ಬಟ್ಟೆ ಧರಿಸಿರುವರು ಮತ್ತು ಆಕೆಯ ಮುಖವು ತಂಪಾಗಿರುವ ಚಂದ್ರನಂತೆ ಹೊಳೆಯುತ್ತಿರುತ್ತದೆ.
ದುರ್ಗೆಯ ಈ 9 ಅವತಾರಗಳ ಪೈಕಿ ಮಹಾಗೌರಿ ಅವತಾರಕ್ಕೆ ತನ್ನದೇ ಮಹತ್ವವಿದೆ. ಆಕೆ ಬಿಳಿ ವಸ್ತ್ರದ ಹಾಲಿನಂತ ಮೈಬಣ್ಣ ಹೊಂದಿರುವ ಗೌರಿ. ಹಾಗೆ ಆಕೆ ದುಷ್ಟರನ್ನು ಸಂಹಾರ ಮಾಡುವ ಮುನ್ನ ಆಕೆ ಪ್ರಶಾಂತವಾಗಿ ಧ್ಯಾನಕ್ಕೆ ಕುಳಿತುಕೊಳ್ಳುವ ಅವತಾರ ಎಂಬ ವಾದವೂ ಇದೆ.
ಮಹಾಗೌರಿಯ ಕಥೆ ಏನು?
ದುರ್ಗೆ ಭೂಲೋಕದಲ್ಲಿ ಜನ್ಮ ಪಡೆದಳಂತೆ ಆದರೆ ಅದರಿಂದ ಮುಕ್ತಿ ಪಡೆಯಬೇಕಾದರೆ ಆಕೆ ಶಿವನನ್ನು ಮದುವೆಯಾಗಬೇಕಾಯಿತು. ಹೀಗಾಗಿ ನಾರದ ಮುನಿಗಳ ಸಲಹೆಯಂತೆ ದೇವಿಯು ಶಿವನನ್ನು ಒಲಿಸಿಕೊಳ್ಳಲು ಹಲವಾರು ತಪಸ್ಸನ್ನು ಮಾಡಿದಳು. ವರ್ಷಗಳ ಕಾಲ ತಪಸ್ಸು ಮಾಡಿದ್ದರಿಂದ ಆಕೆಯ ದೇಗದ ತುಂಬೆಲ್ಲಾ ಗಿಡ ಬಳಿ ಹಬ್ಬಿದವು, ಮಣ್ಣು ಆಕೆಯನ್ನು ತುಂಬಿಕೊಂಡಿತ್ತು. ಆಕೆ ಆಹಾರ ಹಾಗೂ ನೀರನ್ನು ಬಿಟ್ಟು ಸಂಪೂರ್ಣವಾಗಿ ತಪಸ್ಸಿನಲ್ಲಿ ತೊಡಗಿಕೊಳ್ಳುವರು. ಬಿಸಿಲಿನಿಂದಾಗಿ ಆಕೆಯ ದೇಹವು ಸಂಪೂರ್ಣವಾಗಿ ಕಪ್ಪಾಗಿತ್ತು. ಆಕೆಯ ತಪಸ್ಸಿನಿಂದ ಸಂತಸಗೊಂಡ ಶಿವನು ಪ್ರತ್ಯಕ್ಷನಾದನು. ಹಾಗೆ ಆಕೆಯ ಬೇಡಿಕೆ ಈಡೇರಿಸಿದನು.
ನಂತರ ಆಕೆಯ ದೇಹದ ಕೊಳೆಯನ್ನು ತೊಳೆಯಲು ಗಂಗೆಯಲ್ಲಿ ಕೇಳಿಕೊಂಡನಂತೆ, ನಂತರ ಮಹಾಗೌರಿಯು ಎಂದಿನಂತೆ ಬಿಳಿಯಾಗಿ ಹೊಳಪು ಬಂದಿತ್ತು. ಮಹಾಗೌರಿ ದೇವಿಯು ರಾಹುವಿನ ಅಧಿಪತಿ. ಜನ್ಮ ಕುಂಡಲಿಯಲ್ಲಿ ರಾಹುವಿನಿಂದ ಆಗಿರುವ ಎಲ್ಲಾ ರೀತಿಯ ಸಮಸ್ಯೆಗಳನ್ನು ನಿವಾರಣೆ ಮಾಡಿ, ತನ್ನ ಭಕ್ತರಿಗೆ ಸಮೃದ್ಧಿ ಹಾಗೂ ಆಧ್ಯಾತ್ಮಿಕ ಧಾನ್ಯ ನೀಡುವಳು ಎಂಬ ನಂಬಿಕೆ ಇದೆ.
ಮಹಾಗೌರಿ ದೇವಿಯ ಮಂತ್ರಗಳು
ಓಂ ದೇವಿ ಮಹಾಗೌರೈ ನಮಃ
ಓಂ ದೇವಿ ಮಹಾಗೌರೈ ನಮಃ ಶ್ವೇತಾ ವೃಶೇಸಾಮುದ್ರ ಶ್ವೇತಾಂಭರಧಾರ ಶುಚಿ
ಮಹಾಗೌರಿ ಶುಭಾಮ್ ಧ್ಯಾನಮಹದೇವ ಪ್ರಮೋದದಾ
ಶ್ವೇತಾ ವೃಶೇಸಾಮುದ್ರ ಶ್ವೇತಾಂಭರಧಾರ ಶುಚಿ
ಮಹಾಗೌರಿ ಶುಭಾಮ್ ಧ್ಯಾನಮಹದೇವ ಪ್ರಮೋದದಾ
ಶ್ವೇತೇ ವೃಷೇಷಾಮಾರೂಢ ಶ್ವೇತಾಂಬರಧರ ಶುಚಿಃ
ಮಹಾಗೌರಿ ಶುಭಂ ದದ್ಯನ್ ಮಹಾದೇವ್ ಪ್ರಮೋದದ



Click it and Unblock the Notifications