Latest Updates
-
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ!
Mahagauri Mantra In Kannada: ನವರಾತ್ರಿಯ 9ನೇ ದಿನ ಮಹಾಗೌರಿ ಪೂಜೆ, ಮಂತ್ರ ಇಲ್ಲಿದೆ
ನವರಾತ್ರಿಯ ಸಂಭ್ರಮದಲ್ಲಿ 8 ದಿನವನ್ನು ಅತ್ಯಂತ ವಿಶೇಷ ಎಂದು ಪರಿಗಣಿಸಲಾಗುತ್ತದೆ. 9 ದಿನಗಳ ಆಚರಣೆಯಲ್ಲಿ 8ನೇ ದಿನ ಮಹಾಗೌರಿಯನ್ನು ಆರಾಧಿಸಲಾಗುತ್ತದೆ. ಈ ದಿನದಂದು ಮಾ ದುರ್ಗಾ ಮಾತೆಯ ಎಂಟನೇ ರೂಪವಾದ ಮಾ ಮಹಾಗೌರಿಯನ್ನು ಪೂಜಿಸಲಾಗುತ್ತದೆ. ಆಕೆಯ ಮೈಬಣ್ಣವು ಸಂಪೂರ್ಣವಾಗಿ ಸುಂದರವಾಗಿರುತ್ತದೆ. ಆಕೆಯನ್ನು ಶಂಖ, ಚಂದ್ರನೊಂದಿಗೆ ಹೋಲಿಸಲಾಗುತ್ತದೆ.
ದುರ್ಗೆ ಒಂದೊಂದು ದಿನ ಒಂದೊಂದು ಅವತಾರದಲ್ಲಿ ಭೂಮಿಗೆ ಬರುತ್ತಾಳೆ. ಹಾಗೆ ಭಕ್ತರ ಬೇಡಿಕೆಗಳನ್ನು ಆಕೆ ಇಡೇರಿಸುತ್ತಾಳೆ ಎಂಬ ನಂಬಿಕೆ ಇದೆ. ನವರಾತ್ರಿಯ 8ನೇ ದಿನದಂದು ದುರ್ಗೆ ಮಹಾಗೌರಿಗೆ ಸಮರ್ಪಿತವಾದ ದಿನವಾಗಿದೆ. ದುರ್ಗೆಯ ಮಹಾಗೌರಿಯ ಅವತಾರದಲ್ಲಿ 8ನೇ ದಿನ ಭೂಮಿಗೆ ಬರುತ್ತಾಳೆ ಎಂಬ ನಂಬಿಕೆ ಇದೆ.

ಮಹಾಗೌರಿಯು 16ನೇ ವಯಸ್ಸಿನವರಾಗಿರುವರು. ಗೌರಿ ಎಂದರೆ ಆಕೆಯು ಗಿರಿ ಅಥವಾ ಪರ್ವತದ ಮಗಳೆಂದು ಹೇಳಲಾಗುತ್ತದೆ. ಗೂಳಿ ಮೇಲೆ ಪ್ರಯಾಣಿಸುವ ಗೌರಿ ತನ್ನ ಕೈಯಲ್ಲಿ ತ್ರಿಶೂಲದೊಂದಿಗೆ ಢಮರುಗ ಹಿಡಿದಿರುತ್ತಾಳೆ. ಆಕೆ ಬಿಳಿ ಬಟ್ಟೆ ಧರಿಸಿರುವರು ಮತ್ತು ಆಕೆಯ ಮುಖವು ತಂಪಾಗಿರುವ ಚಂದ್ರನಂತೆ ಹೊಳೆಯುತ್ತಿರುತ್ತದೆ.
ದುರ್ಗೆಯ ಈ 9 ಅವತಾರಗಳ ಪೈಕಿ ಮಹಾಗೌರಿ ಅವತಾರಕ್ಕೆ ತನ್ನದೇ ಮಹತ್ವವಿದೆ. ಆಕೆ ಬಿಳಿ ವಸ್ತ್ರದ ಹಾಲಿನಂತ ಮೈಬಣ್ಣ ಹೊಂದಿರುವ ಗೌರಿ. ಹಾಗೆ ಆಕೆ ದುಷ್ಟರನ್ನು ಸಂಹಾರ ಮಾಡುವ ಮುನ್ನ ಆಕೆ ಪ್ರಶಾಂತವಾಗಿ ಧ್ಯಾನಕ್ಕೆ ಕುಳಿತುಕೊಳ್ಳುವ ಅವತಾರ ಎಂಬ ವಾದವೂ ಇದೆ.
ಮಹಾಗೌರಿಯ ಕಥೆ ಏನು?
ದುರ್ಗೆ ಭೂಲೋಕದಲ್ಲಿ ಜನ್ಮ ಪಡೆದಳಂತೆ ಆದರೆ ಅದರಿಂದ ಮುಕ್ತಿ ಪಡೆಯಬೇಕಾದರೆ ಆಕೆ ಶಿವನನ್ನು ಮದುವೆಯಾಗಬೇಕಾಯಿತು. ಹೀಗಾಗಿ ನಾರದ ಮುನಿಗಳ ಸಲಹೆಯಂತೆ ದೇವಿಯು ಶಿವನನ್ನು ಒಲಿಸಿಕೊಳ್ಳಲು ಹಲವಾರು ತಪಸ್ಸನ್ನು ಮಾಡಿದಳು. ವರ್ಷಗಳ ಕಾಲ ತಪಸ್ಸು ಮಾಡಿದ್ದರಿಂದ ಆಕೆಯ ದೇಗದ ತುಂಬೆಲ್ಲಾ ಗಿಡ ಬಳಿ ಹಬ್ಬಿದವು, ಮಣ್ಣು ಆಕೆಯನ್ನು ತುಂಬಿಕೊಂಡಿತ್ತು. ಆಕೆ ಆಹಾರ ಹಾಗೂ ನೀರನ್ನು ಬಿಟ್ಟು ಸಂಪೂರ್ಣವಾಗಿ ತಪಸ್ಸಿನಲ್ಲಿ ತೊಡಗಿಕೊಳ್ಳುವರು. ಬಿಸಿಲಿನಿಂದಾಗಿ ಆಕೆಯ ದೇಹವು ಸಂಪೂರ್ಣವಾಗಿ ಕಪ್ಪಾಗಿತ್ತು. ಆಕೆಯ ತಪಸ್ಸಿನಿಂದ ಸಂತಸಗೊಂಡ ಶಿವನು ಪ್ರತ್ಯಕ್ಷನಾದನು. ಹಾಗೆ ಆಕೆಯ ಬೇಡಿಕೆ ಈಡೇರಿಸಿದನು.
ನಂತರ ಆಕೆಯ ದೇಹದ ಕೊಳೆಯನ್ನು ತೊಳೆಯಲು ಗಂಗೆಯಲ್ಲಿ ಕೇಳಿಕೊಂಡನಂತೆ, ನಂತರ ಮಹಾಗೌರಿಯು ಎಂದಿನಂತೆ ಬಿಳಿಯಾಗಿ ಹೊಳಪು ಬಂದಿತ್ತು. ಮಹಾಗೌರಿ ದೇವಿಯು ರಾಹುವಿನ ಅಧಿಪತಿ. ಜನ್ಮ ಕುಂಡಲಿಯಲ್ಲಿ ರಾಹುವಿನಿಂದ ಆಗಿರುವ ಎಲ್ಲಾ ರೀತಿಯ ಸಮಸ್ಯೆಗಳನ್ನು ನಿವಾರಣೆ ಮಾಡಿ, ತನ್ನ ಭಕ್ತರಿಗೆ ಸಮೃದ್ಧಿ ಹಾಗೂ ಆಧ್ಯಾತ್ಮಿಕ ಧಾನ್ಯ ನೀಡುವಳು ಎಂಬ ನಂಬಿಕೆ ಇದೆ.
ಮಹಾಗೌರಿ ದೇವಿಯ ಮಂತ್ರಗಳು
ಓಂ ದೇವಿ ಮಹಾಗೌರೈ ನಮಃ
ಓಂ ದೇವಿ ಮಹಾಗೌರೈ ನಮಃ ಶ್ವೇತಾ ವೃಶೇಸಾಮುದ್ರ ಶ್ವೇತಾಂಭರಧಾರ ಶುಚಿ
ಮಹಾಗೌರಿ ಶುಭಾಮ್ ಧ್ಯಾನಮಹದೇವ ಪ್ರಮೋದದಾ
ಶ್ವೇತಾ ವೃಶೇಸಾಮುದ್ರ ಶ್ವೇತಾಂಭರಧಾರ ಶುಚಿ
ಮಹಾಗೌರಿ ಶುಭಾಮ್ ಧ್ಯಾನಮಹದೇವ ಪ್ರಮೋದದಾ
ಶ್ವೇತೇ ವೃಷೇಷಾಮಾರೂಢ ಶ್ವೇತಾಂಬರಧರ ಶುಚಿಃ
ಮಹಾಗೌರಿ ಶುಭಂ ದದ್ಯನ್ ಮಹಾದೇವ್ ಪ್ರಮೋದದ



Click it and Unblock the Notifications