Latest Updates
-
ಬೇಸಿಗೆ ಮದುವೆ ಸಂಭ್ರಮ: ಬಿಸಿಲ ಬೇಗೆಯಿಂದ ಅತಿಥಿಗಳನ್ನು ರಕ್ಷಿಸಲು ಇಲ್ಲಿದೆ ಮಾಸ್ಟರ್ ಪ್ಲಾನ್ -
ಮೇ 2-3ರ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಗಿಡಗಳನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಭಾರತದಲ್ಲಿ ಸುಡುವ ಬಿಸಿಲು: ಹೀಟ್ ವೇವ್ನಿಂದ ಪಾರಾಗಲು ಇಲ್ಲಿವೆ ಬೆಸ್ಟ್ ಡಯಟ್ ಮತ್ತು ಹೈಡ್ರೇಶನ್ ಟಿಪ್ಸ್! -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಕರಣ್ ಜೋಹರ್ ಅಬ್ಬರ, ಭಾರತೀಯ ಫ್ಯಾಷನ್ ಲೋಕದ ಹೊಸ ಸಂಚಲನ! -
ಮೇ ತಿಂಗಳ ಬಿಸಿಲ ಧಗೆ: ನಿಮ್ಮ ಬೆಳಗಿನ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳದಿದ್ದರೆ ಕಷ್ಟ! -
ಎವೆಲಿನ್ ಶರ್ಮಾ ವಿಚ್ಛೇದನ: ಮಕ್ಕಳ ಭವಿಷ್ಯಕ್ಕಾಗಿ ಈ ಜೋಡಿ ಆರಿಸಿದ ಹೊಸ ದಾರಿ ಯಾವುದು? -
ಬಿಸಿಲ ಧಗೆಗೆ ತಂಪಾದ ಗುಡ್ ನ್ಯೂಸ್: ಮೇ 8 ರಿಂದ ಶುರುವಾಗಲಿದೆ ಗ್ರೇಟ್ ಸಮ್ಮರ್ ಸೇಲ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಪದ್ಧತಿಯಿಂದ ಇಡೀ ದಿನ ಇರಿ ಫ್ರೆಶ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ ಕೂಲ್ ಆಗಿರಿ! -
ಬಿಸಿಗಾಳಿಯ ಅಬ್ಬರ: ನಿಮ್ಮ ಫಿಟ್ನೆಸ್ ದಿನಚರಿಯನ್ನು ಬದಲಾಯಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ!
700 ವರ್ಷಗಳ ಬಳಿಕ ಮಹಾಷ್ಟಮಿ ಶುಭ ಯೋಗ: ಈ ರಾಶಿಗಳಿಗೆ ಅದೃಷ್ಟ ಕೈ ಹಿಡಿಯಲಿದೆ
ಚೈತ್ರ ನವರಾತ್ರಿಯಲ್ಲಿ ದೇವಿ ದುರ್ಗೆಯ ಆರಾಧನೆ ಮಾಡಲಾಗುವುದು. ಶಾರದೀಯ ನವರಾತ್ರಿಯಂತೆಯೇ ಈ ನವರಾತ್ರಿಯಲ್ಲಿ ದೇವಿಯ 9 ಸ್ವರೂಪಗಳನ್ನು ಆರಾಧಿಸಲಾಗುವುದು. ಈ ಬಾರಿ ಚೈತ್ರ ನವರಾತ್ರಿಯ ಅಷ್ಟಮಿ ದಿನಾಂಕವು ತುಂಬಾ ವಿಶೇಷವಾಗಿದೆ, ಏಕೆಂದರೆ ಮಹಾ ಅಷ್ಟಮಿಯಂದು ಗ್ರಹಗಳ ಅದ್ಭುತ ಸಂಯೋಜನೆ ರೂಪಗೊಳ್ಳಲಿದೆ.
ಈ ರೀತಿ ಗ್ರಹಗಳ ಸಂಯೋಜನೆ ಬರೋಬರಿ 700 ವರ್ಷಗಳ ನಂತರ ಸಂಭವಿಸಲಿದೆ. ಗುರು ಮೀನ ರಾಶಿಯಲ್ಲಿದೆ, ಬುಧವು ಮೇಷ ರಾಶಿಯಲ್ಲಿ ಸಾಗಲಿದ್ದಾನೆ. ಮತ್ತೊಂದೆಡೆ, ಸೂರ್ಯನು ಮೀನರಾಶಿಯಲ್ಲಿದ್ದಾನೆ ಮತ್ತು ಶನಿ ತನ್ನದೇ ಆದ ರಾಶಿಯಾದ ಕುಂಭ ರಾಶಿಯಲ್ಲಿದೆ. ಅದಲ್ಲದೆ ಶುಕ್ರ ಮತ್ತು ರಾಹು ಮೇಷ ರಾಶಿಯಲ್ಲಿದೆ.ಇದರಿಂದಾಗಿ ಮಹಾ ಸಂಯೋಗವು ಸೃಷ್ಟಿಯಾಗುತ್ತಿದೆ.

ಈ ಸಮಯದಲ್ಲಿ, ಮಾಲವ್ಯ, ಕೇದಾರ, ಹಂಸ ಮತ್ತು ಮಹಾಭಾಗ್ಯ ಯೋಗ ರಚನೆಯಾಗಲಿದೆ. ಜ್ಯೋತಿಷ್ಯ ಶಾಸ್ತ್ರವು ಈ ಯೋಗ ಕೆಲ ರಾಶಿಗಳಿಗೆ ಅದೃಷ್ಟದ ಯೋಗ ತಂದಿದೆ ಎಂದು ಹೇಳುತ್ತದೆ. ಆ ಅದೃಷ್ಟದ ರಾಶಿಗಳಾವುವು ಎಂದು ನೋಡೋಣ ಬನ್ನಿ:
ಮಿಥುನ ರಾಶಿ
ಅದೃಷ್ಟ ಮಿಥುನ ರಾಶಿಯವರ ಕೈ ಹಿಡಿಯಲಿದೆ. ಈ ಅವಧಿಯಲ್ಲಿ ನಿಮ್ಮ ಪ್ರತಿಯೊಂದು ಕೆಲಸವು ಯಶಸ್ಸು ಆಗಲಿದೆ. ಅವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ. ವಿವಾಹಿತರ ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ಏನಾದರೂ ಇಬ್ಬರ ನಡುವೆ ಭಿನ್ನಾಭಿಪ್ರಾಯ ಇದ್ದರೆ ಎಲ್ಲವೂ ಸರಿಯಾಗಲಿದೆ. ಈ ಸಮಯ ವ್ಯಾಪಾರಸ್ಥರಿಗೆ ಒಳ್ಳೆಯ ಲಾಭ ತಂದು ಕೊಡಲಿದೆ.
ಕರ್ಕ ರಾಶಿ
ಮಹಾ ಅಷ್ಟಮಿಯ ದಿನದಂದು ಹಂಸ ಮತ್ತು ಮಾಲವ್ಯ ರಾಜಯೋಗವು ಕರ್ಕ ರಾಶಿಯವರಿಗೆ ಮಂಗಳಕರವಾಗಿರುತ್ತದೆ. ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಸ್ಥಾನ ಪ್ರತಿಷ್ಠೆ ಸಾಧಿಸಬಹುದು. ನಿರುದ್ಯೋಗಿಗಳು ಉತ್ತಮ ಉದ್ಯೋಗವನ್ನು ಪಡೆಯಬಹುದು. ಕೆಲಸ ಬದಲಾಯಿಸಲು ಯೋಚಿಸುತ್ತಿದ್ದರೆ ಒಳ್ಳೆಯ ಆಫರ್ಗಳು ಸಿಗಲಿವೆ. ವ್ಯಾಪಾರಸ್ಥರು ಲಾಭ ಗಳಿಸುವುರಿ, ಆರ್ಥಿಕವಾಗಿ ತುಂಬಾ ಸುಧಾರಣೆಯಾಗಲಿದೆ.
ಕನ್ಯಾರಾಶಿ
ಕನ್ಯಾ ರಾಶಿಯವರಿಗೆ ಈ ಸಮಯ ಶುಭಕರವಾಗಿರುತ್ತದೆ. ಈ ಸಮಯವು ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲಕರವಾಗಿದೆ. ಈ ಸಮಯವು ಉದ್ಯಮಿಗಳಿಗೂ ಉತ್ತಮವಾಗಿರುತ್ತದೆ. ಇದರೊಂದಿಗೆ, ನಿರುದ್ಯೋಗಿಗಳು ಹೊಸ ಉದ್ಯೋಗವನ್ನು ಪಡೆಯಬಹುದು. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.
ಮೀನ ರಾಶಿ
ಈ ಅವಧಿಯಲ್ಲಿ ಮೀನ ರಾಶಿಯವರ ಸಾಮಾಜಿಕ ಸ್ಥಾನಮಾನ ಹೆಚ್ಚಾಗಲಿದೆ. ವ್ಯಾಪಾರಸ್ಥರೂ ಒಳ್ಳೆಯ ಲಾಭ ಗಳಿಸುವಿರಿ. ಉದ್ಯೋಗಸ್ಥರು ಪ್ರಗತಿಯನ್ನು ಕಾಣುವಿರಿ. ನಿಮ್ಮ ಸ್ಥಗಿತಗೊಂಡ ಎಲ್ಲಾ ಕೆಲಸಗಳು ಪೂರ್ಣಗೊಳ್ಳುತ್ತವೆ. ಒಟ್ಟಿನಲ್ಲಿ ಈ ಯೋಗ ನಿಮಗೆ ತುಂಬಾನೇ ಮಂಗಳಕರವಾಗಿದೆ.
ಅಷ್ಟಮಿಯಂದು ಈ ಪರಿಹಾರ ಮಾಡಿದರೆ ಇನ್ನೂ ಒಳ್ಳೆಯದು
* ಈ ದಿನ ಉಪವಾಸವಿದ್ದು ದೇವಿಯ ಆರಾಧನೆ ಮಾಡಿದರೆ ಒಳ್ಳೆಯದು. ಹೋಮ- ಹವನ ಮಾಡಲು ಈ ದಿನ ಶುಭವಾಗಿದೆ.
* ಅಷ್ಟಮಿ ದಿನ 9 ಚಿಕ್ಕ ಹುಡುಗಿಯರಿಗೆ ಉಡುಗೊರೆ ನೀಡಿ
* ಈ ದಿನ ತಾಯಿಗೆ ಉಡುಗೊರೆ ನೀಡಿ



Click it and Unblock the Notifications