Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
Main Door House Entrance Vastu Tips: ಬೆಳಗ್ಗೆ ಮನೆ ಬಾಗಿಲಿನಲ್ಲಿ ಈ 3 ವಸ್ತುಗಳನ್ನು ಚುಮುಕಿಸಿದರೆ ಅದೃಷ್ಟವೇ ಬದಲಾಗಲಿದೆ!
ಮನೆಯ ಮುಖ್ಯ ಬಾಗಿಲಿಗೆ ವಾಸ್ತು ಶಾಸ್ತ್ರದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಮತ್ತು ಮನೆಯ ಮುಖ್ಯ ಬಾಗಿಲಲ್ಲಿ ಧನಾತ್ಮಕ ಶಕ್ತಿಯು ಸಂಗ್ರಹವಾಗಿರುತ್ತೆ ಎಂದು ನಂಬಲಾಗಿದೆ. ಧಾರ್ಮಿಕ ನಂಬಿಕೆಯ ಪ್ರಕಾರ ಮನೆಯ ಎಲ್ಲಾ ಕಿಟಕಿಗಳು ಮತ್ತು ಬಾಗಿಲುಗಳನ್ನು ಬೆಳಿಗ್ಗೆ ಎದ್ದ ತಕ್ಷಣ ತೆರೆಯಬೇಕಂತೆ. ಈ ರೀತಿ ಮಾಡುವುದರಿಂದ ಲಕ್ಷ್ಮಿಯು ನಿಮ್ಮ ಮನೆಗೆ ಪ್ರವೇಶಿಸುತ್ತಾಳೆ ಎಂಬ ನಂಬಿಕೆ ಹಿಂದಿನಿಂದಲೂ ಇದೆ.

ವಾಸ್ತು ಪ್ರಕಾರ ಬೆಳಿಗ್ಗೆ ಎದ್ದ ತಕ್ಷಣ ಮನೆಯ ಎಲ್ಲಾ ಬಾಗಿಲು ಮತ್ತು ಕಿಟಕಿಗಳನ್ನು ತೆರೆಯುವುದರಿಂದ ಧನಾತ್ಮಕ ಶಕ್ತಿಯು ನಿಮ್ಮ ಮನೆಗೆ ಪ್ರವೇಶಿಸುತ್ತದೆ. ಮತ್ತು ಮನೆಯಲ್ಲಿದ್ದ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಇನ್ನೂ ಮುಖ್ಯವಾದ ವಿಚಾರ ಅಂದ್ರೆ ನಿಮ್ಮ ಮನೆ ಬಾಗಿಲಿನ ಮುಂಭಾಗ ಈ ಮೂರು ವಸ್ತುಗಳನ್ನು ಬೆಳಗ್ಗೆ ಎದ್ದ ತಕ್ಷಣ ಚುಮುಕಿಸೋದ್ರಿಂದ ಲಕ್ಷ್ಮೀಯೂ ನೇರವಾಗಿ ಮನೆಗೆ ಆಗಮಿಸುತ್ತಾಳಂತೆ. ಇದರಿಂದಾಗಿ ಮನೆಯಲ್ಲಿ ಸಂಪತ್ತು ಹಾಗೂ ಸಮೃದ್ಧಿ ಸದಾ ತುಂಬಿರುತ್ತಂತೆ. ಅಷ್ಟಕ್ಕೂ ಯಾವ ಮೂರು ವಸ್ತುಗಳನ್ನು ಮನೆ ಬಾಗಿಲಿನಲ್ಲಿ ಚುಮುಕಿಸಬೇಕು ಅನ್ನೋದನ್ನು ತಿಳಿಯೋಣ.
ಅರಿಶಿನ ನೀರನ್ನು ಚಿಮುಕಿಸಬೇಕು!
ಧಾರ್ಮಿಕ ನಂಬಿಕೆಗಳ ಪ್ರಕಾರ ಅರಿಶಿನವನ್ನು ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಅದನ್ನು ನೀರಿನಲ್ಲಿ ಬೆರೆಸಿ ಬೆಳಿಗ್ಗೆ ಮುಖ್ಯ ಬಾಗಿಲಿನ ಮೇಲೆ ಸಿಂಪಡಿಸಬೇಕು. ಹೀಗೆ ಮಾಡುವುದರಿಂದ ನಿಮ್ಮ ಮನೆಯಲ್ಲಿ ಐಶ್ವರ್ಯ ಹೆಚ್ಚುತ್ತದೆ. ಮತ್ತು ಲಕ್ಷ್ಮಿ ದೇವಿಯೂ ನಿಮ್ಮ ಮನೆಯತ್ತ ಆಕರ್ಷಿತಳಾಗುತ್ತಾಳೆ. ಬೆಳಗಿನ ಪೂಜೆಯ ಸಮಯದಲ್ಲಿ ತಾಮ್ರದ ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಅದರಲ್ಲಿ ಒಂದು ಚಿಟಿಕೆ ಅರಿಶಿನವನ್ನು ಹಾಕಿ.
ಪೂಜೆ ಮುಗಿದ ನಂತರ ಈ ನೀರನ್ನು ತಂದು ಮುಖ್ಯ ಬಾಗಿಲಿಗೆ ಚಿಮುಕಿಸಿ. ಹೀಗೆ ಮಾಡುವುದರಿಂದ ನಿಮ್ಮ ಮನೆಯ ಸುತ್ತ ಧನಾತ್ಮಕ ಶಕ್ತಿ ಹೆಚ್ಚುತ್ತದೆ. ಮತ್ತು ನಿಮ್ಮ ಮನೆಯಲ್ಲಿ ಯಾವತ್ತೂ ಯಾವುದೇ ಕೊರತೆ ಉಂಟಾಗುವುದಿಲ್ಲ.
ಗಂಗಾಜಲ ಚಿಮುಕಿಸಬೇಕು!
ಧಾರ್ಮಿಕ ನಂಬಿಕೆಗಳಲ್ಲಿ ಗಂಗಾಜಲವನ್ನು ಪವಿತ್ರ ಜಲವೆಂದು ಪರಿಗಣಿಸಲಾಗಿದೆ. ಗಂಗಾಜಲಕ್ಕೆ ಎಲ್ಲಾ ರೀತಿಯ ಋಣಾತ್ಮಕತೆಯನ್ನು ಹೋಗಲಾಡಿಸುವ ಶಕ್ತಿಯಿದೆ ಎಂದು ಹೇಳಲಾಗುತ್ತದೆ. ಪ್ರತಿದಿನ ಮನೆಯ ಮುಖ್ಯ ಬಾಗಿಲಿಗೆ ಗಂಗಾಜಲದ ಕೆಲವು ಹನಿಗಳನ್ನು ಸಿಂಪಡಿಸಿ. ಹೀಗೆ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಮತ್ತು ನಿಮ್ಮ ಒತ್ತಡ ದೂರವಾಗುತ್ತದೆ. ಅಲ್ಲದೆ ಎಲ್ಲಾ ರೀತಿಯ ನಕಾರಾತ್ಮಕತೆಯು ನಿಮ್ಮ ಮನೆಯಿಂದ ಹೊರಹೋಗುತ್ತದೆ.
ಉಪ್ಪು ನೀರು ಚುಮುಕಿಸಿ!
ವಾಸ್ತವವಾಗಿ ಉಪ್ಪನ್ನು ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಅನೇಕ ಜನರು ತಮ್ಮ ಮನೆಯನ್ನು ಪ್ರತಿದಿನ ಉಪ್ಪು ನೀರಿನಿಂದ ಒರೆಸುತ್ತಾರೆ. ಇದಲ್ಲದೇ ಪ್ರತಿನಿತ್ಯ ನೀರಿನೊಂದಿಗೆ ಉಪ್ಪನ್ನು ಮುಖ್ಯ ಬಾಗಿಲಿಗೆ ಚಿಮುಕಿಸಿದರೆ ಎಲ್ಲಾ ರೀತಿಯ ಬ್ಯಾಕ್ಟೀರಿಯಾಗಳು ನಾಶವಾಗುತ್ತವೆ.
ಅಷ್ಟೇ ಅಲ್ಲದೇ, ಯಾವುದೇ ರೀತಿಯ ನಕಾರಾತ್ಮಕ ಶಕ್ತಿಯು ನಿಮ್ಮ ಮನೆಗೆ ಪ್ರವೇಶಿಸಲು ಬಿಡುವುದಿಲ್ಲ. ಉಪ್ಪು ನೀರನ್ನು ಸಿಂಪಡಿಸುವುದರಿಂದ ಎಲ್ಲಾ ರೀತಿಯ ರೋಗಗಳು ಮತ್ತು ದೋಷಗಳು ನಿಮ್ಮ ಮನೆಯಿಂದ ದೂವಾಗುತ್ತೆ ಎನ್ನುವ ನಂಬಿಕೆಯಿದೆ.



Click it and Unblock the Notifications