Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
Main Door House Entrance Vastu Tips: ಬೆಳಗ್ಗೆ ಮನೆ ಬಾಗಿಲಿನಲ್ಲಿ ಈ 3 ವಸ್ತುಗಳನ್ನು ಚುಮುಕಿಸಿದರೆ ಅದೃಷ್ಟವೇ ಬದಲಾಗಲಿದೆ!
ಮನೆಯ ಮುಖ್ಯ ಬಾಗಿಲಿಗೆ ವಾಸ್ತು ಶಾಸ್ತ್ರದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಮತ್ತು ಮನೆಯ ಮುಖ್ಯ ಬಾಗಿಲಲ್ಲಿ ಧನಾತ್ಮಕ ಶಕ್ತಿಯು ಸಂಗ್ರಹವಾಗಿರುತ್ತೆ ಎಂದು ನಂಬಲಾಗಿದೆ. ಧಾರ್ಮಿಕ ನಂಬಿಕೆಯ ಪ್ರಕಾರ ಮನೆಯ ಎಲ್ಲಾ ಕಿಟಕಿಗಳು ಮತ್ತು ಬಾಗಿಲುಗಳನ್ನು ಬೆಳಿಗ್ಗೆ ಎದ್ದ ತಕ್ಷಣ ತೆರೆಯಬೇಕಂತೆ. ಈ ರೀತಿ ಮಾಡುವುದರಿಂದ ಲಕ್ಷ್ಮಿಯು ನಿಮ್ಮ ಮನೆಗೆ ಪ್ರವೇಶಿಸುತ್ತಾಳೆ ಎಂಬ ನಂಬಿಕೆ ಹಿಂದಿನಿಂದಲೂ ಇದೆ.

ವಾಸ್ತು ಪ್ರಕಾರ ಬೆಳಿಗ್ಗೆ ಎದ್ದ ತಕ್ಷಣ ಮನೆಯ ಎಲ್ಲಾ ಬಾಗಿಲು ಮತ್ತು ಕಿಟಕಿಗಳನ್ನು ತೆರೆಯುವುದರಿಂದ ಧನಾತ್ಮಕ ಶಕ್ತಿಯು ನಿಮ್ಮ ಮನೆಗೆ ಪ್ರವೇಶಿಸುತ್ತದೆ. ಮತ್ತು ಮನೆಯಲ್ಲಿದ್ದ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಇನ್ನೂ ಮುಖ್ಯವಾದ ವಿಚಾರ ಅಂದ್ರೆ ನಿಮ್ಮ ಮನೆ ಬಾಗಿಲಿನ ಮುಂಭಾಗ ಈ ಮೂರು ವಸ್ತುಗಳನ್ನು ಬೆಳಗ್ಗೆ ಎದ್ದ ತಕ್ಷಣ ಚುಮುಕಿಸೋದ್ರಿಂದ ಲಕ್ಷ್ಮೀಯೂ ನೇರವಾಗಿ ಮನೆಗೆ ಆಗಮಿಸುತ್ತಾಳಂತೆ. ಇದರಿಂದಾಗಿ ಮನೆಯಲ್ಲಿ ಸಂಪತ್ತು ಹಾಗೂ ಸಮೃದ್ಧಿ ಸದಾ ತುಂಬಿರುತ್ತಂತೆ. ಅಷ್ಟಕ್ಕೂ ಯಾವ ಮೂರು ವಸ್ತುಗಳನ್ನು ಮನೆ ಬಾಗಿಲಿನಲ್ಲಿ ಚುಮುಕಿಸಬೇಕು ಅನ್ನೋದನ್ನು ತಿಳಿಯೋಣ.
ಅರಿಶಿನ ನೀರನ್ನು ಚಿಮುಕಿಸಬೇಕು!
ಧಾರ್ಮಿಕ ನಂಬಿಕೆಗಳ ಪ್ರಕಾರ ಅರಿಶಿನವನ್ನು ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಅದನ್ನು ನೀರಿನಲ್ಲಿ ಬೆರೆಸಿ ಬೆಳಿಗ್ಗೆ ಮುಖ್ಯ ಬಾಗಿಲಿನ ಮೇಲೆ ಸಿಂಪಡಿಸಬೇಕು. ಹೀಗೆ ಮಾಡುವುದರಿಂದ ನಿಮ್ಮ ಮನೆಯಲ್ಲಿ ಐಶ್ವರ್ಯ ಹೆಚ್ಚುತ್ತದೆ. ಮತ್ತು ಲಕ್ಷ್ಮಿ ದೇವಿಯೂ ನಿಮ್ಮ ಮನೆಯತ್ತ ಆಕರ್ಷಿತಳಾಗುತ್ತಾಳೆ. ಬೆಳಗಿನ ಪೂಜೆಯ ಸಮಯದಲ್ಲಿ ತಾಮ್ರದ ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಅದರಲ್ಲಿ ಒಂದು ಚಿಟಿಕೆ ಅರಿಶಿನವನ್ನು ಹಾಕಿ.
ಪೂಜೆ ಮುಗಿದ ನಂತರ ಈ ನೀರನ್ನು ತಂದು ಮುಖ್ಯ ಬಾಗಿಲಿಗೆ ಚಿಮುಕಿಸಿ. ಹೀಗೆ ಮಾಡುವುದರಿಂದ ನಿಮ್ಮ ಮನೆಯ ಸುತ್ತ ಧನಾತ್ಮಕ ಶಕ್ತಿ ಹೆಚ್ಚುತ್ತದೆ. ಮತ್ತು ನಿಮ್ಮ ಮನೆಯಲ್ಲಿ ಯಾವತ್ತೂ ಯಾವುದೇ ಕೊರತೆ ಉಂಟಾಗುವುದಿಲ್ಲ.
ಗಂಗಾಜಲ ಚಿಮುಕಿಸಬೇಕು!
ಧಾರ್ಮಿಕ ನಂಬಿಕೆಗಳಲ್ಲಿ ಗಂಗಾಜಲವನ್ನು ಪವಿತ್ರ ಜಲವೆಂದು ಪರಿಗಣಿಸಲಾಗಿದೆ. ಗಂಗಾಜಲಕ್ಕೆ ಎಲ್ಲಾ ರೀತಿಯ ಋಣಾತ್ಮಕತೆಯನ್ನು ಹೋಗಲಾಡಿಸುವ ಶಕ್ತಿಯಿದೆ ಎಂದು ಹೇಳಲಾಗುತ್ತದೆ. ಪ್ರತಿದಿನ ಮನೆಯ ಮುಖ್ಯ ಬಾಗಿಲಿಗೆ ಗಂಗಾಜಲದ ಕೆಲವು ಹನಿಗಳನ್ನು ಸಿಂಪಡಿಸಿ. ಹೀಗೆ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಮತ್ತು ನಿಮ್ಮ ಒತ್ತಡ ದೂರವಾಗುತ್ತದೆ. ಅಲ್ಲದೆ ಎಲ್ಲಾ ರೀತಿಯ ನಕಾರಾತ್ಮಕತೆಯು ನಿಮ್ಮ ಮನೆಯಿಂದ ಹೊರಹೋಗುತ್ತದೆ.
ಉಪ್ಪು ನೀರು ಚುಮುಕಿಸಿ!
ವಾಸ್ತವವಾಗಿ ಉಪ್ಪನ್ನು ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಅನೇಕ ಜನರು ತಮ್ಮ ಮನೆಯನ್ನು ಪ್ರತಿದಿನ ಉಪ್ಪು ನೀರಿನಿಂದ ಒರೆಸುತ್ತಾರೆ. ಇದಲ್ಲದೇ ಪ್ರತಿನಿತ್ಯ ನೀರಿನೊಂದಿಗೆ ಉಪ್ಪನ್ನು ಮುಖ್ಯ ಬಾಗಿಲಿಗೆ ಚಿಮುಕಿಸಿದರೆ ಎಲ್ಲಾ ರೀತಿಯ ಬ್ಯಾಕ್ಟೀರಿಯಾಗಳು ನಾಶವಾಗುತ್ತವೆ.
ಅಷ್ಟೇ ಅಲ್ಲದೇ, ಯಾವುದೇ ರೀತಿಯ ನಕಾರಾತ್ಮಕ ಶಕ್ತಿಯು ನಿಮ್ಮ ಮನೆಗೆ ಪ್ರವೇಶಿಸಲು ಬಿಡುವುದಿಲ್ಲ. ಉಪ್ಪು ನೀರನ್ನು ಸಿಂಪಡಿಸುವುದರಿಂದ ಎಲ್ಲಾ ರೀತಿಯ ರೋಗಗಳು ಮತ್ತು ದೋಷಗಳು ನಿಮ್ಮ ಮನೆಯಿಂದ ದೂವಾಗುತ್ತೆ ಎನ್ನುವ ನಂಬಿಕೆಯಿದೆ.



Click it and Unblock the Notifications











