Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಾಲೆಗಾಂವ್ ಸ್ಟೋಟ: 17 ವರ್ಷದ ಬಳಿಕ ಇಂದು ತೀರ್ಪು ಸಂಭವ! ಈ ಕೇಸ್ ನಿಮಗೆ ಗೊತ್ತಾ?
17 ವರ್ಷಗಳ ಹಿಂದೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಘಟನೆಯೊಂದರ ಸಂಬಂಧ ಇಂದು ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ. ಮಲೆಗಾಂವ್ ಸ್ಟೋಟ್ ಪ್ರಕರಣದಲ್ಲಿ ಇಂದು ಎನ್ಐಎ ವಿಶೇಷ ನ್ಯಾಯಾಲಯವು ತೀರ್ಪು ಪ್ರಕಟಿಸಲಿದೆ. ಸೆಪ್ಟೆಂಬರ್ 29, 2008 ರಂದು ಮುಂಬೈನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಪಟ್ಟಣದ ಮಸೀದಿಯ ಬಳಿ ಸೈಕಲ್ ಬಾಂಬ್ ಸ್ಟೋಟಗೊಂಡಿತ್ತು.
ಈ ಘಟನೆಯಲ್ಲಿ 6 ಮಂದಿ ಜೀವ ಕಳದುಕೊಂಡರು. ಹಾಗೆ 100ಕ್ಕೂ ಹೆಚ್ಚು ಮಂದಿ ಗಾಯಗೊಂಡರು. ನಂತರ 2018ರಲ್ಲಿ ಇದರ ವಿಚಾರಣೆ ಆರಂಭಗೊಂಡು 2025ರ ಏಪ್ರಿಲ್ನಲ್ಲಿ ವಿಚಾರಣೆ ಅಂತ್ಯಗೊಂಡಿತ್ತು. ಈ ಸುದೀರ್ಘ ವಿಚಾರಣೆಯ ಬಳಿಕ ಕೋರ್ಟ್ ಇಂದು ತೀರ್ಪು ಪ್ರಕಟಿಸುವ ಸಾಧ್ಯತೆಗಳಿವೆ. ಹೀಗಾಗಿ ಸುದೀರ್ಘ ತನಿಖೆ ಹಾಗೂ ವಿಚಾರಣೆಗೆ ಇಂದು ಅಂತ್ಯ ಬೀಳಬಹುದು.

ಏನಿದು ಘಟನೆ? ಆರೋಪಿಗಳು ಯಾರು?
ಬಿಜೆಪಿ ನಾಯಕಿ ಮತ್ತು ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಈ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ ಏಳು ಪ್ರಮುಖ ಆರೋಪಿಗಳಲ್ಲಿ ಸೇರಿದ್ದಾರೆ. ಇತರ ಆರೋಪಿಗಳಾದ ಮೇಜರ್ (ನಿವೃತ್ತ) ರಮೇಶ್ ಉಪಾಧ್ಯಾಯ, ಅಜಯ್ ರಹಿರ್ಕರ್, ಸುಧಾಕರ್ ದ್ವಿವೇದಿ, ಸುಧಾಕರ್ ಚತುರ್ವೇದಿ ಮತ್ತು ಸಮೀರ್ ಕುಲಕರ್ಣಿ ಸಹ ಸೇರಿದ್ದಾರೆ.
ಘಟನೆ ಹಿಂದಿನ ಉದ್ದೇಶವೇನು?
ಮಹಾರಾಷ್ಟ್ರದ ಮಲೆಗಾಂವ್ ಪ್ರದೇಶ ಮುಸ್ಲಿಂ ಬಾಹುಳ್ಯವುಳ್ಳ ಒಂದು ಚಿಕ್ಕ ಪ್ರದೇಶವಾಗಿ ಎಸ್ಐಟಿ ಕೋರ್ಟ್ಗೆ ಸಲ್ಲಿಸಿದ್ದ ಚಾರ್ಜ್ ಶೀಟ್ನಲ್ಲಿ ಈ ಸೈಕಲ್ ಬಾಂಬ್ ಬ್ಲಾಸ್ಟ್ ನಡೆಯಲು ಕಾರಣವೇನು ಎಂಬುದನ್ನು ವಿವರಿಸಲಾಗಿದೆ. ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಕಾಶ್ಮೀರದಿಂದ ಆರ್ಡಿಎಕ್ಸ್ ಅನ್ನು ತಂದು ಮಹಾರಾಷ್ಟ್ರದ ತಮ್ಮ ಮನೆಯಲ್ಲಿ ಸಂಗ್ರಹಿಸಿದ್ದರು ಎಂದು ವಾದಿಸಲಾಗಿತ್ತು. ರಂಜಾನ್ ಸಮಯದಲ್ಲಿ ಈ ಪ್ರದೇಶದಲ್ಲಿ ಅಶಾಂತಿ ಉಂಟು ಮಾಡುವುದು ಅವರ ಪ್ರಾಥಮಿಕ ಉದ್ದೇವಾಗಿತ್ತು ಎಂದು ಕೂಡ ವಾದಿಸಲಾಗಿತ್ತು.
ಡಿಯೋಲಾಲಿ ಸೇನಾ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಸುಧಾಕರ್ ಚತುರ್ವೇದಿ ಮನೆಯಲ್ಲಿ ಬಾಂಬ್ ಅನ್ನು ಜೋಡಿಸುವ ಪ್ರಕ್ರಿಯೆ ನಡೆದಿತ್ತು. ಸೈಕಲ್ ಬಾಂಬ್ ಅನ್ನು ಪ್ರವೀಣ್ ಟಕ್ಕಲ್ಕಿ, ರಾಮ್ಜಿ ಕಲ್ಸಂಗ್ರ ಮತ್ತು ಸಂದೀಪ್ ಡಾಂಗೆ ಎಂಬುವವರು ನೋಡಿಕೊಂಡಿದ್ದರು ಎಂದು ಕೂಡ ವಿವರಿಸಲಾಗಿತ್ತು.
ನಿರ್ಣಾಯಕ ಎಲೆಕ್ಟ್ರಾನಿಕ್ ಪುರಾವೆಗಳಲ್ಲಿ ಸುಧಾಕರ್ ಧರ್ ದ್ವಿವೇದಿ ಅವರಿಗೆ ಸೇರಿದ ಲ್ಯಾಪ್ಟಾಪ್ನಿಂದ ರೆಕಾರ್ಡಿಂಗ್ಗಳು ಸೇರಿದ್ದವು, ಪುರೋಹಿತ್, ದ್ವಿವೇದಿ ಮತ್ತು ಉಪಾಧ್ಯಾಯ ಅವರ ಧ್ವನಿಯ ಮಾದರಿಗಳನ್ನು ಸಹ ಸಂಗ್ರಹಿಸಿ ಸಾಕ್ಷಿಯಾಗಿ ಸಲ್ಲಿಸಲಾಗಿತ್ತು. ಹಾಗೆ ಇವರೆಲ್ಲರು ಹಲವು ಪ್ರದೇಶದಲ್ಲಿ ಸಭೆ ಸೇರಿದ್ದರು. ತಮ್ಮದೇ ಸಂವಿಧಾನ ರಚನೆ, ಹಿಂದೂ ರಾಷ್ಟ್ರ, ತಮ್ಮದೇ ಧ್ವಜ, ಆರ್ಯವರ್ತ್ ಎಂಬ ಹಿಂದೂ ರಾಷ್ಟ್ರ ಸ್ಥಾಪನೆ ಉದ್ದೇಶದಿಂದ ಈ ಘಟನೆ ನಡೆದಿತ್ತು ಎಂದು ಎಟಿಎಸ್ ಆರೋಪಿಸಿತ್ತು.
ಈ ಘಟನೆ ಸಂಬಂಧ ಪ್ರಾಸಿಕ್ಯೂಷನ್ 323 ಸಾಕ್ಷಿಗಳನ್ನು ಪರೀಕ್ಷಿಸಿತು ಮತ್ತು ಕಾಲ್ ಡೇಟಾ ರೆಕಾರ್ಡ್ಸ್ ಮತ್ತು ಧ್ವನಿ ಮಾದರಿಗಳು ಸೇರಿದಂತೆ ತಾಂತ್ರಿಕ ಪುರಾವೆಗಳನ್ನು ಉಲ್ಲೇಖಿಸಿತು. ಹಾಗೆ ಈ ಸಾಕ್ಷಿಗಳಲ್ಲಿ 26 ಸಾಕ್ಷಿಗಳು ಮರಣ ಹೊಂದಿದ್ದವು, 39 ಸಾಕ್ಷಿಗಳು ಪ್ರತಿಕೂಲವಾಗಿ ಪ್ರಕರಣದಿಂದಲೇ ಹಿಂದೆ ಸರಿದರು. ಉಳಿದ 282 ಸಾಕ್ಷಿಗಳು ನ್ಯಾಯಾಲಯದಲ್ಲಿ ತಮ್ಮ ಹೇಳಿಕೆ ನೀಡಿದ್ದರು. ಹಾಗೆ 41 ಸಾಕ್ಷಿಗಳನ್ನು ಪ್ರಾಸಿಕ್ಯೂಷನ್ ಕೂ ಬಿಟ್ಟಿತ್ತು.
ಸದ್ಯ ಈ ಪ್ರಕರಣದಲ್ಲೀಗ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಸಾಧ್ವಿ ಪ್ರಜ್ಞಾ ಸೇರಿದಂತೆ ಕೆಲವು ಆರೋಪಿಗಳು ತನಿಖೆಯ ಸಮಯದಲ್ಲಿ ಎಟಿಎಸ್ ನಿಂದ ಚಿತ್ರಹಿಂಸೆ ನೀಡಲಾಗಿದೆ ಎಂದು ಆರೋಪಿಸಿದರು.



Click it and Unblock the Notifications