Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಮಾಲೆಗಾಂವ್ ಸ್ಟೋಟ: 17 ವರ್ಷದ ಬಳಿಕ ಇಂದು ತೀರ್ಪು ಸಂಭವ! ಈ ಕೇಸ್ ನಿಮಗೆ ಗೊತ್ತಾ?
17 ವರ್ಷಗಳ ಹಿಂದೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಘಟನೆಯೊಂದರ ಸಂಬಂಧ ಇಂದು ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ. ಮಲೆಗಾಂವ್ ಸ್ಟೋಟ್ ಪ್ರಕರಣದಲ್ಲಿ ಇಂದು ಎನ್ಐಎ ವಿಶೇಷ ನ್ಯಾಯಾಲಯವು ತೀರ್ಪು ಪ್ರಕಟಿಸಲಿದೆ. ಸೆಪ್ಟೆಂಬರ್ 29, 2008 ರಂದು ಮುಂಬೈನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಪಟ್ಟಣದ ಮಸೀದಿಯ ಬಳಿ ಸೈಕಲ್ ಬಾಂಬ್ ಸ್ಟೋಟಗೊಂಡಿತ್ತು.
ಈ ಘಟನೆಯಲ್ಲಿ 6 ಮಂದಿ ಜೀವ ಕಳದುಕೊಂಡರು. ಹಾಗೆ 100ಕ್ಕೂ ಹೆಚ್ಚು ಮಂದಿ ಗಾಯಗೊಂಡರು. ನಂತರ 2018ರಲ್ಲಿ ಇದರ ವಿಚಾರಣೆ ಆರಂಭಗೊಂಡು 2025ರ ಏಪ್ರಿಲ್ನಲ್ಲಿ ವಿಚಾರಣೆ ಅಂತ್ಯಗೊಂಡಿತ್ತು. ಈ ಸುದೀರ್ಘ ವಿಚಾರಣೆಯ ಬಳಿಕ ಕೋರ್ಟ್ ಇಂದು ತೀರ್ಪು ಪ್ರಕಟಿಸುವ ಸಾಧ್ಯತೆಗಳಿವೆ. ಹೀಗಾಗಿ ಸುದೀರ್ಘ ತನಿಖೆ ಹಾಗೂ ವಿಚಾರಣೆಗೆ ಇಂದು ಅಂತ್ಯ ಬೀಳಬಹುದು.

ಏನಿದು ಘಟನೆ? ಆರೋಪಿಗಳು ಯಾರು?
ಬಿಜೆಪಿ ನಾಯಕಿ ಮತ್ತು ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಈ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ ಏಳು ಪ್ರಮುಖ ಆರೋಪಿಗಳಲ್ಲಿ ಸೇರಿದ್ದಾರೆ. ಇತರ ಆರೋಪಿಗಳಾದ ಮೇಜರ್ (ನಿವೃತ್ತ) ರಮೇಶ್ ಉಪಾಧ್ಯಾಯ, ಅಜಯ್ ರಹಿರ್ಕರ್, ಸುಧಾಕರ್ ದ್ವಿವೇದಿ, ಸುಧಾಕರ್ ಚತುರ್ವೇದಿ ಮತ್ತು ಸಮೀರ್ ಕುಲಕರ್ಣಿ ಸಹ ಸೇರಿದ್ದಾರೆ.
ಘಟನೆ ಹಿಂದಿನ ಉದ್ದೇಶವೇನು?
ಮಹಾರಾಷ್ಟ್ರದ ಮಲೆಗಾಂವ್ ಪ್ರದೇಶ ಮುಸ್ಲಿಂ ಬಾಹುಳ್ಯವುಳ್ಳ ಒಂದು ಚಿಕ್ಕ ಪ್ರದೇಶವಾಗಿ ಎಸ್ಐಟಿ ಕೋರ್ಟ್ಗೆ ಸಲ್ಲಿಸಿದ್ದ ಚಾರ್ಜ್ ಶೀಟ್ನಲ್ಲಿ ಈ ಸೈಕಲ್ ಬಾಂಬ್ ಬ್ಲಾಸ್ಟ್ ನಡೆಯಲು ಕಾರಣವೇನು ಎಂಬುದನ್ನು ವಿವರಿಸಲಾಗಿದೆ. ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಕಾಶ್ಮೀರದಿಂದ ಆರ್ಡಿಎಕ್ಸ್ ಅನ್ನು ತಂದು ಮಹಾರಾಷ್ಟ್ರದ ತಮ್ಮ ಮನೆಯಲ್ಲಿ ಸಂಗ್ರಹಿಸಿದ್ದರು ಎಂದು ವಾದಿಸಲಾಗಿತ್ತು. ರಂಜಾನ್ ಸಮಯದಲ್ಲಿ ಈ ಪ್ರದೇಶದಲ್ಲಿ ಅಶಾಂತಿ ಉಂಟು ಮಾಡುವುದು ಅವರ ಪ್ರಾಥಮಿಕ ಉದ್ದೇವಾಗಿತ್ತು ಎಂದು ಕೂಡ ವಾದಿಸಲಾಗಿತ್ತು.
ಡಿಯೋಲಾಲಿ ಸೇನಾ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಸುಧಾಕರ್ ಚತುರ್ವೇದಿ ಮನೆಯಲ್ಲಿ ಬಾಂಬ್ ಅನ್ನು ಜೋಡಿಸುವ ಪ್ರಕ್ರಿಯೆ ನಡೆದಿತ್ತು. ಸೈಕಲ್ ಬಾಂಬ್ ಅನ್ನು ಪ್ರವೀಣ್ ಟಕ್ಕಲ್ಕಿ, ರಾಮ್ಜಿ ಕಲ್ಸಂಗ್ರ ಮತ್ತು ಸಂದೀಪ್ ಡಾಂಗೆ ಎಂಬುವವರು ನೋಡಿಕೊಂಡಿದ್ದರು ಎಂದು ಕೂಡ ವಿವರಿಸಲಾಗಿತ್ತು.
ನಿರ್ಣಾಯಕ ಎಲೆಕ್ಟ್ರಾನಿಕ್ ಪುರಾವೆಗಳಲ್ಲಿ ಸುಧಾಕರ್ ಧರ್ ದ್ವಿವೇದಿ ಅವರಿಗೆ ಸೇರಿದ ಲ್ಯಾಪ್ಟಾಪ್ನಿಂದ ರೆಕಾರ್ಡಿಂಗ್ಗಳು ಸೇರಿದ್ದವು, ಪುರೋಹಿತ್, ದ್ವಿವೇದಿ ಮತ್ತು ಉಪಾಧ್ಯಾಯ ಅವರ ಧ್ವನಿಯ ಮಾದರಿಗಳನ್ನು ಸಹ ಸಂಗ್ರಹಿಸಿ ಸಾಕ್ಷಿಯಾಗಿ ಸಲ್ಲಿಸಲಾಗಿತ್ತು. ಹಾಗೆ ಇವರೆಲ್ಲರು ಹಲವು ಪ್ರದೇಶದಲ್ಲಿ ಸಭೆ ಸೇರಿದ್ದರು. ತಮ್ಮದೇ ಸಂವಿಧಾನ ರಚನೆ, ಹಿಂದೂ ರಾಷ್ಟ್ರ, ತಮ್ಮದೇ ಧ್ವಜ, ಆರ್ಯವರ್ತ್ ಎಂಬ ಹಿಂದೂ ರಾಷ್ಟ್ರ ಸ್ಥಾಪನೆ ಉದ್ದೇಶದಿಂದ ಈ ಘಟನೆ ನಡೆದಿತ್ತು ಎಂದು ಎಟಿಎಸ್ ಆರೋಪಿಸಿತ್ತು.
ಈ ಘಟನೆ ಸಂಬಂಧ ಪ್ರಾಸಿಕ್ಯೂಷನ್ 323 ಸಾಕ್ಷಿಗಳನ್ನು ಪರೀಕ್ಷಿಸಿತು ಮತ್ತು ಕಾಲ್ ಡೇಟಾ ರೆಕಾರ್ಡ್ಸ್ ಮತ್ತು ಧ್ವನಿ ಮಾದರಿಗಳು ಸೇರಿದಂತೆ ತಾಂತ್ರಿಕ ಪುರಾವೆಗಳನ್ನು ಉಲ್ಲೇಖಿಸಿತು. ಹಾಗೆ ಈ ಸಾಕ್ಷಿಗಳಲ್ಲಿ 26 ಸಾಕ್ಷಿಗಳು ಮರಣ ಹೊಂದಿದ್ದವು, 39 ಸಾಕ್ಷಿಗಳು ಪ್ರತಿಕೂಲವಾಗಿ ಪ್ರಕರಣದಿಂದಲೇ ಹಿಂದೆ ಸರಿದರು. ಉಳಿದ 282 ಸಾಕ್ಷಿಗಳು ನ್ಯಾಯಾಲಯದಲ್ಲಿ ತಮ್ಮ ಹೇಳಿಕೆ ನೀಡಿದ್ದರು. ಹಾಗೆ 41 ಸಾಕ್ಷಿಗಳನ್ನು ಪ್ರಾಸಿಕ್ಯೂಷನ್ ಕೂ ಬಿಟ್ಟಿತ್ತು.
ಸದ್ಯ ಈ ಪ್ರಕರಣದಲ್ಲೀಗ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಸಾಧ್ವಿ ಪ್ರಜ್ಞಾ ಸೇರಿದಂತೆ ಕೆಲವು ಆರೋಪಿಗಳು ತನಿಖೆಯ ಸಮಯದಲ್ಲಿ ಎಟಿಎಸ್ ನಿಂದ ಚಿತ್ರಹಿಂಸೆ ನೀಡಲಾಗಿದೆ ಎಂದು ಆರೋಪಿಸಿದರು.



Click it and Unblock the Notifications