Latest Updates
-
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ!
ತನಗೆ ಕಚ್ಚಿದ ಹಾವು ಹಿಡಿದು ಮೂರು ಬಾರಿ ಕಚ್ಚಿದ ವ್ಯಕ್ತಿ: ಬದುಕಿ ಉಳಿದಿದ್ಯಾರು ಗೊತ್ತಾ?
ಮಳೆಗಾಲದಲ್ಲಿ ನಮಗೆ ಎಲ್ಲೆಂದರಲ್ಲಿ ಹಾವುಗಳು ನೋಡಲು ಸಿಗುತ್ತವೆ. ಹಾಗೆ ಅವುಗಳಿಂದ ಅಪಾಯವೂ ಹೆಚ್ಚಾಗುತ್ತದೆ. ಇನ್ನು ಹಾವು ಕಚ್ಚುವುದರಿಂದ ಭಾರತದಲ್ಲಿ ಲಕ್ಷ ಲಕ್ಷ ಮಂದಿ ಸಾವಿಗೀಡಾಗುತ್ತಾರೆ. ಅದರಲ್ಲೂ ಹಳ್ಳಿ ಪ್ರದೇಶದಲ್ಲಿ ಈ ಪ್ರಮಾಣ ಹೆಚ್ಚಾಗಿದೆ. ಇನ್ನು ನಿಮಗೇನಾದರು ಹಾವು ಕಡಿದರೆ ನೀವು ಏನು ಮಾಡುತ್ತೀರಿ?
ಹಾವು ಕಚ್ಚಿದಾಗ ಮೊದಲು ಅದು ಯಾವ ಹಾವು ಎಂಬುದನ್ನು ಪತ್ತೆ ಮಾಡಲು ಮುಂದಾಗಿ ಪ್ರಥಮ ಚಿಕಿತ್ಸೆ ತಿಳಿದಿದ್ದರೆ ಅದನ್ನು ಮಾಡುತ್ತಾರೆ ಇಲ್ಲವೆ ತಕ್ಷಣ ಹತ್ತಿರದ ಆಸ್ಪತ್ರೆಗೆ ತೆರಳುತ್ತಾರೆ. ಇದು ಸಾಮಾನ್ಯವಾಗಿ ಎಲ್ಲರು ಮಾಡುವ ಪ್ರಕ್ರಿಯೆ. ಹೀಗೆ ಮಾಡಿದರೆ ಮಾತ್ರ ಜೀವು ಉಳಿಯುವ ಸಾಧ್ಯತೆ ಹೆಚ್ಚು. ಹಾವು ಕಚ್ಚಿದಾಗಿನಿಂದ ಪ್ರತಿ ಸೆಕೆಂಡ್ ಸಹ ಪ್ರಮುಖವಾಗಿರುತ್ತದೆ.

ಆದರೆ ಇಲ್ಲೊಂದು ಘಟನೆಯಲ್ಲಿ ವ್ಯಕ್ತಿಯೊಬ್ಬ ತನಗೆ ಕಚ್ಚಿದ ಹಾವಿಗೆ ತಿರುಗಿ ಕಚ್ಚಿದ್ದಾನೆ. ಬಿಹಾರದ ರಜೌಲಿಯ ಸಣ್ಣ ಹಳ್ಳಿಯಲ್ಲಿ ವಾಸವಿರುವ ಸಂತೋಷ್ ಎಂಬಾತನಿಗೆ ಹಾವು ಕಚ್ಚಿತ್ತು. ಆದರೆ ಆತ ಹಾವು ಕಚ್ಚಿದಾಗ ಆಸ್ಪತ್ರೆಗೆ ಓಡದೆ ತಿರುಗಿ ಹಾವಿಗೆ ಕಚ್ಚಿದ್ದಾನೆ. ಆತ ಚಿಕ್ಕವನಿರುವಾಗ ಆತನಿಗೆ ಯಾರೋ ಹೇಳಿದ್ದರಂತೆ ಹಾವು ಕಚ್ಚಿದರೆ ತಿರುಗಿಸಿ ನೀವು ಎರಡು ಬಾರಿ ಕಚ್ಚಬೇಕು ಎಂದಿದ್ದರಂತೆ.
ಹೀಗಾಗಿ ಹಾವು ಕಚ್ಚಿದಾಗ ಆತ ಹಿಂದೂ ಮುಂದು ನೋಡದೆ ಹಾವಿಗೆ ಎರಡು ಬಾರಿ ಕಚ್ಚಿದ್ದಾನೆ. ಇನ್ನೊಂದು ಅಚ್ಚರಿ ಎಂದರೆ ಹಾವಿನಿಂದ ಕಚ್ಚಿಸಿಕೊಂಡಿದ್ದ ಸಂತೋಷ್ ಬದುಕುಳಿದರೆ ಆತನ ಕಚ್ಚಿದ ಹಾವು ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಜಾರ್ಖಂಡ್ನ ಸಂತೋಷ್ ಲೋಹರ್ ಎಂದು ಗುರುತಿಸಲಾದ ಕಾರ್ಮಿಕ, ರಾಜೌಲ್ನಲ್ಲಿ ರೈಲು ಮಾರ್ಗ ನಿರ್ಮಿಸುವ ಕೆಲಸ ಮಾಡುತ್ತಿದ್ದ. ಮಂಗಳವಾರ ರಾತ್ರಿ ತಾನು ಮಲಗಿದ್ದ ಟೆಂಟ್ ಬಳಿ ವಿಷಕಾರಿ ಹಾವು ಕಚ್ಚಿದೆ. ಆದರೆ ಹಾವು ಕಚ್ಚಿದಾಗ ಎದ್ದು ಬಿದ್ದು ಓಡುವ ಬದಲು ಆತ ಹಾವನ್ನು ಹಿಡಿದಿದ್ದಾನೆ. ಬಳಿಕ ಹಾವಿಗೆ ಮೂರು ಬಾರಿ ಕಚ್ಚಿದ್ದಾನೆ.
ಹಾವಿಗೆ ಕಚ್ಚಿದ ಬಳಿಕ ಆತನ ಕೋಪ ಇಳಿಯಲಿಲ್ಲ. ಬಳಿಕ ಹಾವಿಗೆ ಹೊಡೆದಿದ್ದಾನೆ ಎಂದು ಇಳಿದುಬಂದಿದೆ, ಕೆಲ ಹೊತ್ತಿನ ಬಳಿಕ ಹಾವು ಮೃತಪಟ್ಟಿದೆ. ಹಾವು ಕಚ್ಚಿದಾಗ ಅದರ ವಿಷ ಏರಬಾರದು ಎಂದರೆ ಹಾವಿಗೆ ಎರಡು ಬಾರಿ ಕಚ್ಚಬೇಕು ಎಂಬ ನಂಬಿಕೆ ಇದೆ ಎಂದು ಆತ ಹೇಳಿಕೊಂಡಿದ್ದಾನೆ. ಇದೇ ಕಾರಣಕ್ಕೆ ಆತ ಹಾವಿಗೆ ತಿರುಗಿ ಕಚ್ಚಿದ್ದನಂತೆ.
ಸದ್ಯ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸರಿಯಾದ ಸಮಯಕ್ಕೆ ಆತ ಆಸ್ಪತ್ರೆ ಸೇರಿದ್ದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಹಾವು ಕಚ್ಚಿದಾಗ ಏನು ಮಾಡಬೇಕು?
ಹಾವು ಕಚ್ಚಿದ ಸಂದರ್ಭದಲ್ಲಿ ಕಚ್ಚಿದ ಜಾಗಕ್ಕೆ ಯಾವುದಾದರೂ ಚಾಕುವಿಂದ ಸ್ವಲ್ಪ ಗಾಯವನ್ನು ದೊಡ್ಡದು ಮಾಡಿ ವಿಷವನ್ನು ಹೊಂದಿರುವ ರಕ್ತವನ್ನು ಹೊರಹಾಕಬೇಕು. ಇದರ ಬಳಿಕ ಪೊಟಾಶಿಯಂ ಪಾರಾಗ್ನೆಟ್ ಪುಡಿಯನ್ನು ಗಾಯಕ್ಕೆ ಹಾಕಬೇಕು. ಆದರೆ ಗಾಯಕ್ಕೆ ಬಾಯಿ ಇಟ್ಟು ರಕ್ತ ಹೀರಿ ಹೊರಹಾಕುವ ಕಾರ್ಯ ಮಾಡಬಾರದು. ಅಲ್ಲದೆ ಪ್ರಥಮ ಚಿಕಿತ್ಸೆಗೆಂದು ಬಹಳ ಕಾಲ ಸಮಯ ವ್ಯರ್ಥ ಮಾಡಬಾರದು. ಮೊದಲ ಆಧ್ಯತೆ ಆಸ್ಪತ್ರೆಗೆ ತೆರಳುವುದೇ ಆಗಿರಬೇಕು. 50 ಗ್ರಾಂ ದೇಶೀಯ ತುಪ್ಪಕ್ಕೆ 2-3 ಗ್ರಾಂ ಫಿಟ್ಕರಿ ಹುಡಿಯನ್ನು ಬೆರೆಸಿ ಹಾವು ಕಡಿದ ಜಾಗಕ್ಕೆ ಹಚ್ಚಿಕೊಳ್ಳಬೇಕು, ಹೀಗೆ ಮಾಡುವುದರಿಂದ ವಿಷಕಾರಿ ರಕ್ತ ದೇಹ ಸೇರುವ ಪ್ರಕ್ರಿಯೆ ನಿಧಾನವಾಗಬಹುದು.
ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕರಿಬೇವಿನ ಎಲೆಗಳಿಂದ ಚಿಕಿತ್ಸೆ ಮಾಡಬಹುದು. ಯಾವುದೇ ಆಹಾರದ ರುಚಿಯನ್ನು ಹೆಚ್ಚಿಸುವ ಕರಿಬೇವಿನ ಗಂಜಿಯಿಂದ ವಿಷವನ್ನು ತೆಗೆಯಬಹುದು ಮತ್ತು ಹಾವು ಕಡಿತಕ್ಕೆ ಚಿಕಿತ್ಸೆ ನೀಡಬಹುದು.ಕೆಲವೊಂದು ಹಾವುಗಳ ವಿಷವು ಅಧಿಕವಾಗಿರುವ ಕಾರಣದಿಂದ ತಕ್ಷಣ ಸಾವು ಸಂಭವಿಸುತ್ತದೆ. ಒಂದು ವೇಳೆ ಯಾವ ಹಾವು ಕಚ್ಚಿದೆ ಎಂದು ಸರಿಯಾಗಿ ತಿಳಿದಿದ್ದರೆ ಈ ಮದ್ದನ್ನು ಬಳಸಬಹುದು.



Click it and Unblock the Notifications
