Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ದೀಪಾವಳಿ ಶುಭ ಕೋರಲು ಗರಿ ಗರಿ ನೋಟುಗಳಿಗೆ ಬೆಂಕಿ ಹಚ್ಚಿದ: ವಿಡಿಯೋ ವೈರಲ್
ಭಾರತೀಯ ಸಂಸ್ಕೃತಿಯಲ್ಲಿ ಹಣಕ್ಕೆ ಒಂದು ಪ್ರಾಮುಖ್ಯತೆ ಇದೆ. ಹಣವನ್ನ ಲಕ್ಷ್ಮಿ ದೇವಿಗೆ ಹೋಲಿಸಲಾಗಿದೆ. ಹೀಗಾಗಿ ನಾವು ಹಣವನ್ನು ಎಲ್ಲೆಂದರಲ್ಲಿ ಇಡುವುದು, ಹೇಗೆಂದರೆ ಹಾಗೆ ಬಳಸಲು ಇಷ್ಟಪಡುವುದಿಲ್ಲ. ಹಣಕ್ಕೆ ಪೂಜೆ ಸಲ್ಲಿಸುವ ಸಂಪ್ರದಾಯವಿದೆ. ಲಕ್ಷ್ಮಿ ಪೂಜೆಯಲ್ಲಿ ಧನ ಲಾಭದ ನಿರೀಕ್ಷೆಯಲ್ಲಿ ಹಣಕ್ಕೆ ಪೂಜೆ ಮಾಡಲಾಗುತ್ತದೆ.
ಹಾಗೆ ನಾವು ನೋಟು, ನಾಣ್ಯಗಳು ಕೆಳಗೆ ಬಿದ್ದಾಗ ಇಲ್ಲವೆ ಕಾಲಿನಿಂದ ತುಳಿದಾಗ ಅದಕ್ಕೆ ನಮಸ್ಕಾರ ಮಾಡಿಕೊಳ್ಳುತ್ತೇವೆ. ಮನೆಯಲ್ಲೂ ಕೂಡ ಜೋಪಾನವಾಗಿ ಇಟ್ಟುಕೊಳ್ಳುತ್ತೇವೆ. ಬಲಗೈ ಮೂಲಕ ಹಣದ ವ್ಯವಹಾರಗಳು ಮಾಡುವುದು ಕೂಡ ಒಂದು ರೂಢಿಯಾಗಿ ನಡೆದುಕೊಂಡು ಬಂದಿದೆ. ಆದ್ರೆ ಇಲ್ಲೊಬ್ಬ ನೋಟುಗಳಿಗೆ ಬೆಂಕಿ ಹಚ್ಚಿ ಸಂಭ್ರಮಿಸಿದ್ದಾನೆ.

ನಿಮಗೆ ಈ ಘಟನೆ ವಿಚಿತ್ರ ಎನಿಸಬಹುದು. ಆತ ನೋಟುಗಳನ್ನು ಒಂದು ಕಡೆ ಜೋಡಿಸಿ ಅದಕ್ಕೆ ಬೆಂಕಿ ಹಚ್ಚಿ ದೀಪಾವಳಿಯ ಶುಭಾಶಯ ಕೋರಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಲೈಕ್ಸ್, ಫಾಲೋವರ್ಸ್ ಪಡೆಯಲು ಹಾಗೂ ವೀವ್ಸ್ಗಾಗಿ ಎಂತಹ ಚಿತ್ರ ವಿಚಿತ್ರ ವಿಡಿಯೋಗಳ ಹಂಚಿಕೊಳ್ಳುತ್ತಾರೆ ಎನ್ನುವುದನ್ನು ನೀವು ನೋಡಿರುತ್ತೀರಿ. ಆದ್ರೆ ಇಲ್ಲೊಬ್ಬನ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಆತ ನೂರು ರೂಪಾಯಿ ಹಾಗೂ 500 ರೂಪಾಯಿ ನೋಟನ್ನು ಒಂದು ಕಡೆ ಇಟ್ಟು ಅದಕ್ಕೆ ಬೆಂಕಿ ಹಚ್ಚುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇದರಲ್ಲಿ ಗರಿಗರಿಯಾಗಿರುವ 100 ರೂಪಾಯಿ ಹಾಗೂ 500 ರೂಪಾಯಿ ನೋಟು ನೋಡಬಹುದು. ಆತ ಈ ನೋಟುಗಳಿಗೆ ಬೆಂಕಿ ಹಚ್ಚಿದ್ದಾನೆ. ಈ ವಿಡಿಯೋ ನೋಡಿದ ಮಂದಿ ಆತನ ವಿರುದ್ಧ ಕಿಡಿಕಾರಿದ್ದಾರೆ.
ದೀಪಾವಳಿಯಲ್ಲಿ ಈ ರೀತಿ ಹುಚ್ಚುತನ ತೋರಿರುವುದು ಖಂಡನೀಯ ಎಂದು ಆಕ್ರೋಶ ಹೊರಹಾಕಿದ್ದಾರೆ. ಹೀಗೆ ನೋಟುಗಳನ್ನು ಸುಡುವುದರಿಂದ ಆತನಿಗೆ ಯಾವ ಖುಷಿ ಸಿಕ್ಕಿದೆ ತಿಳಿದುಕೊಳ್ಳಿ ಎಂದು ಒಬ್ಬರು ಬರೆದುಕೊಂಡಿದ್ದಾರೆ.
ಇದೊಂದು ಅತಿರೇಕದ ಮೂರ್ಖತನ, ಹೀಗೆ ಹಣದ ಮೇಲೆ ದರ್ಪ ತೋರಿಸುವುದು ಒಳ್ಳೆಯ ಗುಣವಲ್ಲ. ಆ ಹಣವನ್ನು ಯಾರಿಗಾದರು ದೀಪಾವಳಿಯ ಉಡುಗೊರೆ ರೂಪದಲ್ಲಿ ನೀಡಬಹುದಿತ್ತು. ಇದರಿಂದ ಆತನಿಗೂ ಒಂದಿಷ್ಟು ಪುಣ್ಯ ಬರುತ್ತಿತ್ತು ಎಂದು ಮತ್ತೊಬ್ಬರು ಬರೆದುಕೊಂಡಿದ್ದಾರೆ.
ಕುಮಾರ್ ದಿನೇಶ್ ಬಾಯ್ ಎಂಬ ಇನ್ಸ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಹಾಗೆ ವಿಡಿಯೋದಲ್ಲಿ ಫುಲ್ ಆಫ್ ಆನ್ ಎಂಬ ಬರಹ ಸಹ ಇದೆ. ಇದು ದೀಪಾವಳಿಯ ಕಾರಣಕ್ಕೆ ಆತ ನೋಟುಗಳಿಗೆ ಬೆಂಕಿ ಹಚ್ಚಿದ್ದಾನೆ ಎಂಬುದಂತು ತಿಳಿದುಬರುತ್ತಿದೆ. ಮತ್ತೆ ಕೆಲವರು ಈ ನೋಟುಗಳು ನಕಲಿ ಎಂದು ಶಂಕಿಸಿದ್ದಾರೆ.
ಆತ ಬೆಂಕಿ ಹಚ್ಚಿರುವ ನೋಟುಗಳು ನಕಲಿಯಾಗಿದೆ. ಇಲ್ಲದಿದ್ದರೆ ಇಂತಹ ಕೃತ್ಯ ಮಾಡಲು ಯಾರಿಗೂ ಮನಸ್ಸು ಬರುವುದಿಲ್ಲ ಎಂದು ಮತ್ತೊಬ್ಬ ಬಳಕೆದಾರರು ಅಂದಾಜಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬರೋಬ್ಬರಿ 1 ಮಿಲಿಯನ್ಗೂ ಅಧಿಕ ವೀಕ್ಷಣೆ ಕಂಡಿದೆ. ಹಾಗೆ ಆಕ್ರೋಶಕ್ಕೂ ಕೂಡ ಕಾರಣವಾಗಿದೆ. ಆತ ಉದ್ದೇಶ ಪೂರ್ವಕವಾಗಿಯೇ ಈ ರೀತಿಯ ವಿಡಿಯೋ ಮಾಡಿದ್ದಾನೆ. ಇದು ನಕಲಿ ನೋಟು ಎನ್ನುವುದರಲ್ಲಿ ಅನುಮಾನವೇ ಇಲ್ಲ ಎಂದು ಕೆಲವರು ಹೇಳಿದ್ದಾರೆ.



Click it and Unblock the Notifications