Latest Updates
-
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ!
ನಾಯಿ ಕಚ್ಚಿದ ಬಳಿಕ ಹಸಿ ಮಾಂಸ ತಿನ್ನುವ ವ್ಯಕ್ತಿ.! ಕಂಡ ಕಂಡವರ ಮೇಲೂ ದಾಳಿ!
ದೇಶದಲ್ಲಿ ಬೀದಿ ನಾಯಿ ಕಡಿತದಿಂದಾಗಿ ದಾಳಿಯಿಂದಾಗಿ ವರ್ಷವೊಂದಕ್ಕೆ ಸಾವಿರಾರು ಮಂದಿ ಮರಣ ಹೊಂದುತ್ತಾರೆ. ನಿತ್ಯವು ಬೀದಿ ನಾಯಿಗಳು ಒಬ್ಬರಿಗಾದರು ದಾಳಿ ಮಾಡಿ ಗಾಯಗೊಳಿಸುವ ಪ್ರಕರಣ ನಡೆಯುತ್ತಲೇ ಇರುತ್ತದೆ. ಅದರಲ್ಲೂ ನಗರ ಪ್ರದೇಶದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಮಕ್ಕಳಿಗಂತೂ ನಾಯಿಗಳು ಶತ್ರುಗಳಂತೆ ಕಾಡುತ್ತವೆ.
ಇನ್ನು ನಾಯಿ ಕಚ್ಚಿದರೆ ರೇಬಿಸ್ ರೋಗ ಕಾಡುತ್ತದೆ. ಇದು ಸಾವು ಸಹ ಉಂಟುಮಾಡುವ ಸಾಧ್ಯತೆ ಇರುತ್ತದೆ. ಆದ್ರೆ ಇಲ್ಲೊಂದು ಪ್ರಕರಣ ಈಗ ಎಲ್ಲರು ಅಚ್ಚರಿಗೆ ಒಳಗಾಗುವಂತೆ ಮಾಡಿದೆ. ಮಧ್ಯ ಪ್ರದೇಶದ ವ್ಯಕ್ತಿಗೆ ನಾಯಿ ಕಚ್ಚಿದ ಬಳಿಕ ಈಗ ಆತ ನಾಯಿಯಂತೆ ವರ್ತಿಸಲು ಆರಂಭಿಸಿದ್ದಾನೆ.

ಮಧ್ಯಪ್ರದೇಶದ ಸಾಗರ್ ಪ್ರದೇಶದ ನಿವಾಸಿಯಾಗಿರುವ ಸೋನು ಎಂಬ ವ್ಯಕ್ತಿಗೆ ನಾಯಿ ಕಚ್ಚಿತ್ತು. ಆದರೆ ಈಗ ಆತ ನಾಯಿಯಂತೆ ವರ್ತಿಸಲು ಆರಂಭಿಸಿದ್ದಾನೆ ಎಂದು ತಿಳಿದುಬಂದಿದೆ. ಸೋನು ತರಕಾರಿ ತರಲೆಂದು ಮಾರುಕಟ್ಟೆಗೆ ತೆರಳಿದಾಗ ನಾಯಿಯೊಂದು ಅಟ್ಟಿಸಿಕೊಂಡು ಬಂದು ಕಚ್ಚಿತ್ತು. ಇದಾಗಿ ವಾರದ ಬಳಿಕ ಆತ ನಾಯಿಯಂತೆ ವರ್ತಿಸುತ್ತಿದ್ದ ಎಂದು ವರದಿಯಾಗಿದೆ.
ಸೋನುವಿನ ಈ ವರ್ತನೆ ಕಂಡು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಹಾಗೂ ಭೀತಿಯಲ್ಲಿ ದಿನ ಕಳೆಯುತ್ತಿದ್ದಾರೆ. ಆತ ಜನರ ಮೇಲೆ ದಾಳಿ ಮಾಡಿ ಕಚ್ಚಲು ಮುಂದಾಗುವುದು, ಹಸಿ ಮಾಂಸ ತಿನ್ನುವುದು ಸೇರಿ ಹಲವು ವಿಚಿತ್ರ ವರ್ತನೆ ತೋರಿಸುತ್ತಿರುವುದು ಆತಂಕ ಹೆಚ್ಚಾಗಲು ಕಾರಣವಾಗಿದೆ. ನಾಯಿ ಕಚ್ಚಿದ ಬಳಿಕ ಮಾರುಕಟ್ಟೆಯ ಮಂದಿ ಸೇರಿ ರೇಬಿಸ್ ಇಂಜೆಕ್ಷನ್ ಹಾಕಿಸಿದ್ದರು. ಎಲ್ಲಾ ರೀತಿಯ ಚಿಕಿತ್ಸಯನ್ನೂ ಸಹ ಕೊಡಿಸಿದ್ದರು.
ಮಾರುಕಟ್ಟೆಯ ಮಂದಿ ಹಾಗೂ ನೆರ ಹೊರೆಯವರು ಈಗ ಸೋನುವನ್ನು ಕಂಡರೆ ಭಯಪಡುತ್ತಾರೆ. ನಾಯಿ ಕಚ್ಚಿದ ಬಳಿಕ ಆತ ಬಹಳ ಆಕ್ರಮಣಕಾರಿಯಾಗಿ ಕಾಣಿಸುತ್ತಿದ್ದಾನಂತೆ. ಕೆಲವು ಸಮಯದಲ್ಲಿ ಸೌಮ್ಯವಾಗಿದ್ದರೆ ಮತ್ತೆ ಕೆಲವು ಸಮಯದಲ್ಲಿ ಆಕ್ರಮಣ ಮಾಡುವಂತೆ ಆತನ ವರ್ತನೆ ಬದಲಾಗಿರುತ್ತದೆ ಎಂದು ಅಲ್ಲಿನ ಸ್ಥಳೀಯರು ಹೇಳುತ್ತಾರೆ.
ಸೋನುವಿಗೆ ಈಗ ಹೆಚ್ಚುವರಿ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿದುಬಂದಿದೆ. ಆದರೆ ರೇಬಿಸ್ ಚುಚ್ಚು ಮದ್ದು ಪಡೆದಿದ್ದರೂ ಈ ರೀತಿಯ ವರ್ತನೆ ಕಂಡುಬಂದಿರುವುದು ಎಲ್ಲರಲ್ಲೂ ಆತಂಕ ಹುಟ್ಟಿಸಿದೆ. ಈ ರೇಬಿಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದಿಲ್ಲ. ಜೊತೆಗೆ ಈ ರೀತಿಯ ವರ್ತನೆಗೆ ನಾಯಿ ಕಚ್ಚುವಿಕೆಯೂ ಕಾರಣವಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ನಾಯಿ ಕಚ್ಚಿದ ಬಳಿಕ ನಾಯಿಯಂತೆ ವರ್ತಿಸಲು ಸಾಧ್ಯವಿಲ್ಲ. ಇದು ಆತನ ಮಾನಸಿಕ ಸ್ಥಿತಿಯ ಕಾರಣವಾಗಿದೆ. ಆತ ಮದ್ಯಪಾನಿಯಾಗಿದ್ದು, ಈ ವರ್ತನೆ ಆತನಿಗೆ ಮದ್ಯ ವ್ಯಸನದ ಕಾರಣದಿಂದ ಬಂದಿದೆಯೇ ಹೊರತು ನಾಯಿ ಕಡಿತದಿಂದ ಅಲ್ಲ ಎಂದು ಬುಂದೇಲ್ಖಂಡ್ ವೈದ್ಯಕೀಯ ಕಾಲೇಜಿನ ಡಾ ಸುಮಿತ್ ರಾವತ್ ತಿಳಿಸಿದ್ದಾರೆ. ಆದರೆ ಇದನ್ನು ನಿರ್ಲಕ್ಷಿಸುವಂತಿಲ್ಲ. ಆತನಿಂದ ಆದಷ್ಟು ಅಂತರ ಕಾಯ್ದುಕೊಳ್ಳುವುದು ಒಳ್ಳೆಯದು ಎಂದು ಸಹ ಅವರು ಹೇಳಿದ್ದಾರೆ.
ನಮಗೆ ತಿಳಿಯದ ವಿಚಾರ ಏನೆಂದರೆ ಯಾವ ನಾಯಿಗೆ ರೇಬಿಸ್ ಇರುತ್ತೋ ಆ ನಾಯಿ ಕಚ್ಚಿದಾಗ ಮಾತ್ರ ನಮ್ಮ ಪ್ರಾಣಕ್ಕೆ ಹಾನಿಯಾಗಬಹುದು. ಆದರೆ ಉಳಿದಂತೆ ಯಾವುದೇ ನಾಯಿ ಕಚ್ಚಿದಾಗ ಸರಳ ಚಿಕಿತ್ಸೆಯಲ್ಲಿ ಗುಣಮುಖರಾಗುತ್ತೇವೆ. ಈ ರೇಬಿಸ್ನಿಂದ ಸಾವು ಸಹ ಸಂಭವಿಸುತ್ತದೆ. ನಾಯಿ ಕಚ್ಚಿದ ಬಳಿಕ ಹರಡುವ ವೈರಸ್ ಹಾಗೂ ಅಲರ್ಜಿಯಿಂದಾಗಿ ಹಲವು ರೀತಿಯ ಸಮಸ್ಯೆ ಎದುರಿಸಬೇಕಾಗುತ್ತದೆ.
ಒಂದು ಸಮೀಕ್ಷೆ ಪ್ರಕಾರ ಭಾರತದಲ್ಲಿ ಸುಮಾರು 25 ಮಿಲಿಯನ್ಗೂ ಅಧಿಕ ನಾಯಿಗಳಿವೆ. ಪ್ರತಿ 2 ಸೆಕೆಂಡ್ಗೆ ಒಬ್ಬ ಮನುಷ್ಯ ನಾಯಿ ಕಡಿತಕ್ಕೆ ಒಳಗಾಗುತ್ತಿದ್ದಾನೆ. ಪ್ರತಿ 30 ನಿಮಿಷಕ್ಕೆ ಒಬ್ಬ ನಾಯಿ ಕಡಿತದಿಂದ ರೇಬಿಸ್ ಬಂದು ಸಾವನ್ನಪ್ಪುತ್ತಿದ್ದಾನೆ 2021ರ ಸರ್ವೆಯೊಂದು ತಿಳಿಸಿತ್ತು.



Click it and Unblock the Notifications