Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಶವವೆಂದು ಹೊರತೆಗೆಯಲು ಬಂದರೆ ನೀರಿನಿಂದ ಎದ್ದು ಬಂದ ವ್ಯಕ್ತಿ..! ಪೊಲೀಸರು ಶಾಕ್!
ಕೆಲವೊಮ್ಮೆ ಆನ್ಲೈನ್ನಲ್ಲಿ ಎಂತೆಂತಹ ವಿಚಿತ್ರ ವಿಡಿಯೋಗಳು ಹರಿದಾಡುತ್ತವೆ ಅಂದ್ರೆ ನಾವು ನೋಡಿ ಶಾಕ್ ಆಗುತ್ತೇವೆ. ಅದೇ ರೀತಿ ಇಲ್ಲೊಂದು ವಿಡಿಯೋ ಸಹ ನೋಡುಗರಲ್ಲಿ ಅಚ್ಚರಿ ಜೊತೆ ಒಂದಿಷ್ಟು ನಗು ತರಿಸಿದೆ. ಆನ್ಲೈನ್ನಲ್ಲಿ ಈ ವಿಡಿಯೋ ನೋಡಿದ ಮಂದಿ ಶಾಕ್ ಜೊತೆಗೆ ಇಂತಹ ವಿಡಿಯೋ ಈವರೆಗೂ ನೋಡಿಲ್ಲ ಎನ್ನುತ್ತಿದ್ದಾರೆ.
ವಿಡಿಯೋವೊಂದರಲ್ಲಿ ಪೊಲೀಸರು ಹೊಳೆಯ ದಡದಲ್ಲಿ ಬಿದ್ದಿರುವ ವ್ಯಕ್ತಿಯನ್ನು ಶವವೆಂದು ಹೊರ ತೆಗೆಯಲು ಬಂದಾಗ ಅಲ್ಲೊಂದು ಅಚ್ಚರಿ ಕಾದಿತ್ತು. ಹೊಳೆಯಲ್ಲಿ ಮಲಗಿದ್ದ ವ್ಯಕ್ತಿ ಎದ್ದು ಬಂದಿರುವುದು ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ತೆಲಂಗಾಣದ ಕೊಳದಲ್ಲಿ ತೇಲುತ್ತಿರುವ ವ್ಯಕ್ತಿಯನ್ನು ಸ್ಥಳೀಯರು ಪತ್ತೆ ಹಚ್ಚಿದ್ದರು.

ಈ ಹೊಳೆಯಲ್ಲಿ ತೇಲುತ್ತಿರುವುದ ಕಂಡು ಸ್ಥಳೀಯರೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಅವರು 108 ಆಂಬುಲೆನ್ಸ್ಗೆ ಕರೆ ಮಾಡಿ ಸ್ಥಳಕ್ಕೆ ಬರಲು ಸೂಚಿಸಿದ್ದಾರೆ. ಹನುಮಕೊಂಡದ ರೆಡ್ಡಿಪುರಂ ಕೋವೆಲಕುಂಟ್ಲಾ ಬಳಿಯ ಹೊಳೆಯಲ್ಲಿ ಈ ಘಟನೆ ನಡೆದಿದೆ.
ಕಲ್ಲು ಕ್ವಾರಿ ಕೆಲಸಗಾರನಾಗಿದ್ದ ಈ ವ್ಯಕ್ತಿ ಸುಮಾರು 5 ಗಂಟೆಗಳ ಕಾಲ ನೀರಿನಲ್ಲಿ ಮಲಗಿರುವುದು ಕಂಡುಬಂದಿದೆ. ಇದನ್ನು ನೋಡಿಯೇ ಜನರು ಪೊಲೀಸರಿಗೆ ಶವ ತೇಲುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರು ಸ್ಥಳಕ್ಕೆ ಬಂದು ಶವ ಮೇಲೆ ಎತ್ತುವಾಗ ಆತ ಎಚ್ಚರಗೊಂಡಿದ್ದಾನೆ. ಇದನ್ನು ಕಂಡು ಪೊಲೀಸರು ಶಾಕ್ ಆಗಿದ್ದಾರೆ.
ಆತ ಬಿಸಿಲಿನಲ್ಲಿ ಮದ್ಯಪಾನ ಮಾಡಿ ಹೊಳೆಯ ದಡದಲ್ಲಿ ಗಾಢ ನಿದ್ರೆಗೆ ಜಾರಿದ್ದಾನೆ, ಆದರೆ ಸತತ 5 ಗಂಟೆಗಳ ಕಾಲ ನೋಡಿದ್ದ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಘಟನಾ ಸ್ಥಳದಲ್ಲಿ ಜನಸಮೂಹ ಜಮಾಯಿಸುತ್ತಿದ್ದಂತೆ ಪೊಲೀಸರು "ದೇಹ"ವನ್ನು ಕೈಯಿಂದ ಹಿಡಿದುಕೊಂಡು ಸೂಕ್ಷ್ಮವಾಗಿ ದಡಕ್ಕೆ ಎಳೆಯಲು ಪ್ರಾರಂಭಿಸಿದರು. ಥಟ್ಟನೆ ಎಚ್ಚರಗೊಂಡ ಆತ ಪೊಲೀಸ್ ಕಡೆ ತಿರುಗಿ ನಾನು ಬದುಕಿರುವುದಾಗಿ ಹೇಳುತ್ತಿದ್ದಾನೆ.
ಶವವೆಂದು ಮೇಲೆ ಎತ್ತಲು ಬಂದ ಪೊಲೀಸರು ಇದ್ದಕ್ಕಿದ್ದಂತೆ ಎಚ್ಚರಗೊಂಡ ವ್ಯಕ್ತಿ ಕಂಡು ಶಾಕ್ ಆಗಿದ್ದಾರೆ. ಅಚ್ಚರಿ ಎಂದರೆ ಆತ ಕಲ್ಲು ಕ್ವಾರಿಯ ನೌಕರನಾಗಿದ್ದು, ಮದ್ಯಪಾನ ಮಾಡಿ ಬೇಸಿಗೆಯ ಬಿಸಿ ತಾಳಲಾಗದೆ ಹೊಳೆಯ ಬದಿಯಲ್ಲಿ ಮಲಗಿರುವುದಾಗಿ ಹೇಳಿದ್ದಾನೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ವಿಡಿಯೋ ನೋಡಿದ ಮಂದಿ ನಗುವಿನಲ್ಲಿ ಮುಳುಗಿದ್ದಾರೆ. ಪೊಲೀಸರೇ ಈ ವಿಚಿತ್ರ ಘಟನೆಯಿಂದ ನಗೆ ಕಡಲಲ್ಲಿ ತೇಲಿದ್ದಾರೆ. ಅಲ್ಲಿದ್ದವರು ಸಹ ಅಚ್ಚರಿಯಲ್ಲಿ ನಗುವಿನಲ್ಲಿ ತೇಲಿದ್ದಾರೆ.
ಜೊತೆಗೆ ವಿಡಿಯೋ ನೋಡಿದ ನೆಟ್ಟಿಗರು ಸಹ ಇಂತಹ ವಿಡಿಯೋ ಎಂದಿಗೂ ನೋಡಿಲ್ಲ ಎನ್ನುತ್ತಿದ್ದಾರೆ. ನಾವು ಇದು ನಿಜವಾಗಲು ಶವದ ವಿಡಿಯೋ ಎಂದುಕೊಂಡಿದ್ದವು. ಆದರೆ ಕೊನೆಯಲ್ಲಿ ಟ್ವಿಸ್ಟ್ ಕಂಡು ಅಚ್ಚರಿ ಹೊರಹಾಕಿದ್ದಾರೆ. ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ.
ಆತ ನೆಲ್ಲೂರು ಜಿಲ್ಲೆಯ ಕವಲಿ ಪ್ರದೇಶದ ಸ್ಥಳೀಯರೆಂದು ಗುರುತಿಸಲಾಗಿದೆ. ಆತ ಆಯಾಸವನ್ನು ನಿವಾರಿಸಲು ನೀರಿನಲ್ಲಿ ನಿದ್ದೆ ಮಾಡಲು ಮುಂದಾಗಿದ್ದನಂತೆ. ಆತನ ಪ್ರಕಾರ ನಿತ್ಯ 12 ಗಂಟೆ ಕೆಲಸ ಮಾಡುತ್ತಾನಂತೆ. ಸ್ವಲ್ಪ ಸಮಯ ವಿಶ್ರಾಂತಿ ಪಡೆಯಲು ಮುಂದಾಗಿರುವುದಾಗಿ ಹೇಳಿದ್ದಾನೆ. ಜೊತೆಗೆ ಮನೆಗೆ ಹೋಗಲು ಹಣ ನೀಡಿ ಎಂದು ಪೊಲೀಸರನ್ನೇ ಕೇಳಿದ ಆತ 50 ರೂಪಾಯಿ ಪಡೆದು ಅಲ್ಲಿಂದ ತೆರಳಿದ್ದಾನೆ ಎಂದು ತಿಳಿದುಬಂದಿದೆ.
ಸದ್ಯ ಈ ವಿಡಿಯೋ ನೋಡಿದ ಮಂದಿ ಬಿದ್ದು ಬಿದ್ದು ನಗುತ್ತಿದ್ದಾರೆ. ಆತನ ನಿದ್ರೆ ಹಾಳು ಮಾಡಿದ್ದೀರಿ ಎಂದು ಕೆಲವರು ತಮಾಷೆ ಮಾಡುತ್ತಿದ್ದಾರೆ.



Click it and Unblock the Notifications