Latest Updates
-
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ಶವವೆಂದು ಹೊರತೆಗೆಯಲು ಬಂದರೆ ನೀರಿನಿಂದ ಎದ್ದು ಬಂದ ವ್ಯಕ್ತಿ..! ಪೊಲೀಸರು ಶಾಕ್!
ಕೆಲವೊಮ್ಮೆ ಆನ್ಲೈನ್ನಲ್ಲಿ ಎಂತೆಂತಹ ವಿಚಿತ್ರ ವಿಡಿಯೋಗಳು ಹರಿದಾಡುತ್ತವೆ ಅಂದ್ರೆ ನಾವು ನೋಡಿ ಶಾಕ್ ಆಗುತ್ತೇವೆ. ಅದೇ ರೀತಿ ಇಲ್ಲೊಂದು ವಿಡಿಯೋ ಸಹ ನೋಡುಗರಲ್ಲಿ ಅಚ್ಚರಿ ಜೊತೆ ಒಂದಿಷ್ಟು ನಗು ತರಿಸಿದೆ. ಆನ್ಲೈನ್ನಲ್ಲಿ ಈ ವಿಡಿಯೋ ನೋಡಿದ ಮಂದಿ ಶಾಕ್ ಜೊತೆಗೆ ಇಂತಹ ವಿಡಿಯೋ ಈವರೆಗೂ ನೋಡಿಲ್ಲ ಎನ್ನುತ್ತಿದ್ದಾರೆ.
ವಿಡಿಯೋವೊಂದರಲ್ಲಿ ಪೊಲೀಸರು ಹೊಳೆಯ ದಡದಲ್ಲಿ ಬಿದ್ದಿರುವ ವ್ಯಕ್ತಿಯನ್ನು ಶವವೆಂದು ಹೊರ ತೆಗೆಯಲು ಬಂದಾಗ ಅಲ್ಲೊಂದು ಅಚ್ಚರಿ ಕಾದಿತ್ತು. ಹೊಳೆಯಲ್ಲಿ ಮಲಗಿದ್ದ ವ್ಯಕ್ತಿ ಎದ್ದು ಬಂದಿರುವುದು ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ತೆಲಂಗಾಣದ ಕೊಳದಲ್ಲಿ ತೇಲುತ್ತಿರುವ ವ್ಯಕ್ತಿಯನ್ನು ಸ್ಥಳೀಯರು ಪತ್ತೆ ಹಚ್ಚಿದ್ದರು.

ಈ ಹೊಳೆಯಲ್ಲಿ ತೇಲುತ್ತಿರುವುದ ಕಂಡು ಸ್ಥಳೀಯರೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಅವರು 108 ಆಂಬುಲೆನ್ಸ್ಗೆ ಕರೆ ಮಾಡಿ ಸ್ಥಳಕ್ಕೆ ಬರಲು ಸೂಚಿಸಿದ್ದಾರೆ. ಹನುಮಕೊಂಡದ ರೆಡ್ಡಿಪುರಂ ಕೋವೆಲಕುಂಟ್ಲಾ ಬಳಿಯ ಹೊಳೆಯಲ್ಲಿ ಈ ಘಟನೆ ನಡೆದಿದೆ.
ಕಲ್ಲು ಕ್ವಾರಿ ಕೆಲಸಗಾರನಾಗಿದ್ದ ಈ ವ್ಯಕ್ತಿ ಸುಮಾರು 5 ಗಂಟೆಗಳ ಕಾಲ ನೀರಿನಲ್ಲಿ ಮಲಗಿರುವುದು ಕಂಡುಬಂದಿದೆ. ಇದನ್ನು ನೋಡಿಯೇ ಜನರು ಪೊಲೀಸರಿಗೆ ಶವ ತೇಲುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರು ಸ್ಥಳಕ್ಕೆ ಬಂದು ಶವ ಮೇಲೆ ಎತ್ತುವಾಗ ಆತ ಎಚ್ಚರಗೊಂಡಿದ್ದಾನೆ. ಇದನ್ನು ಕಂಡು ಪೊಲೀಸರು ಶಾಕ್ ಆಗಿದ್ದಾರೆ.
ಆತ ಬಿಸಿಲಿನಲ್ಲಿ ಮದ್ಯಪಾನ ಮಾಡಿ ಹೊಳೆಯ ದಡದಲ್ಲಿ ಗಾಢ ನಿದ್ರೆಗೆ ಜಾರಿದ್ದಾನೆ, ಆದರೆ ಸತತ 5 ಗಂಟೆಗಳ ಕಾಲ ನೋಡಿದ್ದ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಘಟನಾ ಸ್ಥಳದಲ್ಲಿ ಜನಸಮೂಹ ಜಮಾಯಿಸುತ್ತಿದ್ದಂತೆ ಪೊಲೀಸರು "ದೇಹ"ವನ್ನು ಕೈಯಿಂದ ಹಿಡಿದುಕೊಂಡು ಸೂಕ್ಷ್ಮವಾಗಿ ದಡಕ್ಕೆ ಎಳೆಯಲು ಪ್ರಾರಂಭಿಸಿದರು. ಥಟ್ಟನೆ ಎಚ್ಚರಗೊಂಡ ಆತ ಪೊಲೀಸ್ ಕಡೆ ತಿರುಗಿ ನಾನು ಬದುಕಿರುವುದಾಗಿ ಹೇಳುತ್ತಿದ್ದಾನೆ.
ಶವವೆಂದು ಮೇಲೆ ಎತ್ತಲು ಬಂದ ಪೊಲೀಸರು ಇದ್ದಕ್ಕಿದ್ದಂತೆ ಎಚ್ಚರಗೊಂಡ ವ್ಯಕ್ತಿ ಕಂಡು ಶಾಕ್ ಆಗಿದ್ದಾರೆ. ಅಚ್ಚರಿ ಎಂದರೆ ಆತ ಕಲ್ಲು ಕ್ವಾರಿಯ ನೌಕರನಾಗಿದ್ದು, ಮದ್ಯಪಾನ ಮಾಡಿ ಬೇಸಿಗೆಯ ಬಿಸಿ ತಾಳಲಾಗದೆ ಹೊಳೆಯ ಬದಿಯಲ್ಲಿ ಮಲಗಿರುವುದಾಗಿ ಹೇಳಿದ್ದಾನೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ವಿಡಿಯೋ ನೋಡಿದ ಮಂದಿ ನಗುವಿನಲ್ಲಿ ಮುಳುಗಿದ್ದಾರೆ. ಪೊಲೀಸರೇ ಈ ವಿಚಿತ್ರ ಘಟನೆಯಿಂದ ನಗೆ ಕಡಲಲ್ಲಿ ತೇಲಿದ್ದಾರೆ. ಅಲ್ಲಿದ್ದವರು ಸಹ ಅಚ್ಚರಿಯಲ್ಲಿ ನಗುವಿನಲ್ಲಿ ತೇಲಿದ್ದಾರೆ.
ಜೊತೆಗೆ ವಿಡಿಯೋ ನೋಡಿದ ನೆಟ್ಟಿಗರು ಸಹ ಇಂತಹ ವಿಡಿಯೋ ಎಂದಿಗೂ ನೋಡಿಲ್ಲ ಎನ್ನುತ್ತಿದ್ದಾರೆ. ನಾವು ಇದು ನಿಜವಾಗಲು ಶವದ ವಿಡಿಯೋ ಎಂದುಕೊಂಡಿದ್ದವು. ಆದರೆ ಕೊನೆಯಲ್ಲಿ ಟ್ವಿಸ್ಟ್ ಕಂಡು ಅಚ್ಚರಿ ಹೊರಹಾಕಿದ್ದಾರೆ. ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ.
ಆತ ನೆಲ್ಲೂರು ಜಿಲ್ಲೆಯ ಕವಲಿ ಪ್ರದೇಶದ ಸ್ಥಳೀಯರೆಂದು ಗುರುತಿಸಲಾಗಿದೆ. ಆತ ಆಯಾಸವನ್ನು ನಿವಾರಿಸಲು ನೀರಿನಲ್ಲಿ ನಿದ್ದೆ ಮಾಡಲು ಮುಂದಾಗಿದ್ದನಂತೆ. ಆತನ ಪ್ರಕಾರ ನಿತ್ಯ 12 ಗಂಟೆ ಕೆಲಸ ಮಾಡುತ್ತಾನಂತೆ. ಸ್ವಲ್ಪ ಸಮಯ ವಿಶ್ರಾಂತಿ ಪಡೆಯಲು ಮುಂದಾಗಿರುವುದಾಗಿ ಹೇಳಿದ್ದಾನೆ. ಜೊತೆಗೆ ಮನೆಗೆ ಹೋಗಲು ಹಣ ನೀಡಿ ಎಂದು ಪೊಲೀಸರನ್ನೇ ಕೇಳಿದ ಆತ 50 ರೂಪಾಯಿ ಪಡೆದು ಅಲ್ಲಿಂದ ತೆರಳಿದ್ದಾನೆ ಎಂದು ತಿಳಿದುಬಂದಿದೆ.
ಸದ್ಯ ಈ ವಿಡಿಯೋ ನೋಡಿದ ಮಂದಿ ಬಿದ್ದು ಬಿದ್ದು ನಗುತ್ತಿದ್ದಾರೆ. ಆತನ ನಿದ್ರೆ ಹಾಳು ಮಾಡಿದ್ದೀರಿ ಎಂದು ಕೆಲವರು ತಮಾಷೆ ಮಾಡುತ್ತಿದ್ದಾರೆ.



Click it and Unblock the Notifications