Latest Updates
-
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ? -
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ? -
ಮದುವೆ ಅಥವಾ ಡೇಟಿಂಗ್ ಪ್ಲಾನ್ ಮಾಡಿದ್ದೀರಾ? ಇಂದಿನ ಹವಾಮಾನದ ಅಬ್ಬರಕ್ಕೆ ನಿಮ್ಮ ತಯಾರಿ ಹೇಗಿರಲಿ?
ಮಾರ್ಗಶಿರ ಮಾಸ ಶುರು: ಹಿಂದೂ ನಂಬಿಕೆ ಪ್ರಕಾರ ಈ ಧಾರ್ಮಿಕ ಕಾರಣಗಳಿಗೆ ಈ ಮಾಸ ವಿಶೇಷವಾಗಿದೆ
ಹಿಂದೂ ಪಂಚಾಂಗ ಪ್ರಕಾರ ಕಾರ್ತಿಕ ಮಾಸದ ನಂತರ ಬರುವ ಒಂಭತ್ತನೇ ಮಾಸವೇ ಮಾರ್ಗಶಿರ ಅಥವಾ ಮಾರ್ಗಶೀರ್ಷ. ಈ ವರ್ಷ ಮಾರ್ಗಶಿರ ಮಾಸವು ಡಿಸೆಂಬರ್ 2ರಿಂದ ಪ್ರಾರಂಭವಾಗಿ ಡಿಸೆಂಬರ್ 30ಕ್ಕೆ ಮುಕ್ತಾಯವಾಗಲಿದೆ, ಧಾರ್ಮಿಕ ಕಾರಣಗಳಿಂದ ಮಾರ್ಗಶಿರ ಮಾಸವು ತುಂಬಾನೇ ವಿಶೇಷತೆಯಿಂದ ಕೂಡಿದೆ. ಮಾರ್ಗಶಿರ ಮಾಸದಲ್ಲಿ ಬರುವ ಹಬ್ಬಗಳಾವುವು, ಮಾಘ ಸ್ನಾನದ ಮಹತ್ವವೇನು, ಈ ತಿಂಗಳಿನಲ್ಲಿ ಯಾವ ಕಾರ್ಯ ಮಾಡಿದರೆ ಒಳ್ಳೆಯದು ಈ ಬಗ್ಗೆ ನೋಡೋಣ:

ಮಾರ್ಗಶಿರ ಮಾಸದಲ್ಲಿ ಬರುವ ಹಬ್ಬಗಳು, ವ್ರತಗಳು
ಧರ್ನುಮಾಸ ಪ್ರಾರಂಭ ಡಿಸೆಂಬರ್ 16
ಸುಬ್ರಹ್ಮಣ್ಯ ಷಷ್ಠಿ ಡಿಸೆಂಬರ್ 6
ಗೀತಾ ಜಯಂತಿ: ಡಿಸೆಂಬರ್ 11
ಹನುಮಾನ್ ವ್ರತ: ಡಿಸೆಂಬರ್ 13
ದತ್ತಾತ್ರೇಯ ಜಯಂತ ಡಿಸೆಂಬರ್ 14
ಸಂಕಷ್ಟಹರ ಚತುರ್ಥಿ ವ್ರತ ಡಿಸೆಂಬರ್ 18ಕ್ಕೆ ಆಚರಿಸಲಾಗುವುದು.
ಮಾರ್ಗಶಿರ ಮಾಸದಲ್ಲಿ ಬರುವ ಏಕಾದಶಿ
ಡಿಸೆಂಬರ್ 11ಕ್ಕೆ: ಮೋಕ್ಷದ ಏಕಾದಶಿ
ಡಿಸೆಂಬರ್ 26: ಸಫಲಾ ಏಕಾದಶಿ
ಮಾರ್ಗಶಿರ ಮಾಸದಲ್ಲಿ ಬರುವ ಹುಣ್ಣಿಮೆ ಮತ್ತು ಅಮವಾಸ್ತೆ
ಡಿಸೆಂಬರ್ 15ಕ್ಕೆ ಹುಣ್ಣಿಮೆ
ಡಿಸೆಂಬರ್ 30ಕ್ಕೆ ಅಮವಾಸ್ಯೆ
ಮಾಘ ಸ್ನಾನಕ್ಕೆ ತುಂಬಾನೇ ಮಹತ್ವವಿದೆ
ಮಾರ್ಗಶಿರ ಮಾಸದಲ್ಲಿ ವ್ಯಕ್ತಿ ಬೇಗನೆ ಎದ್ದು ಸ್ನಾನ ಮಾಡಿ ದೇವರನ್ನು ಪೂಜಿಸಬೇಕು. ಈ ಮಾಸದಲ್ಲಿ ಬೆಳಗ್ಗೆ ಬೇಗನೆ ಎದ್ದು ನದಿಯಲ್ಲಿ ಸ್ನಾನ ಮಾಡಿದರೆ ಆರೋಗ್ಯದ ದೃಷ್ಟಿಯಿಂದಲೂ ತುಂಬಾ ಒಳ್ಳೆಯದು ಎಂದು ಹೇಳಲಾಗುವುದು. ಅಯ್ಯಪ್ಪಸ್ವಾಮಿ ವ್ರತ ನಿಯಮ ಪಾಲಿಸುವವರು ಈ ತಿಂಗಳಿನಲ್ಲಿ ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ ಅಯ್ಯಪ್ಪಸ್ವಾಮಿ ಮಂತ್ರಗಳನ್ನು ಪಠಿಸುತ್ತಾರೆ. ಮಾರ್ಗಶಿರ ಮಾಸದಲ್ಲಿ ಪೂಜೆ ಮಾಡುವುದರಿಂದ ದೇವರ ಕೃಪೆಗೆ ಪಾತ್ರರಾಗುತ್ತೇವೆ.
ಮಾರ್ಗಶೀರ್ಷ ಮಾಸದಲ್ಲಿ ದಾನಕ್ಕೂ ಮಹತ್ವವಿದೆ
ಈ ಮಾಸದಲ್ಲಿ ಅನ್ನದಾನ,ಬೆಳ್ಳಿದಾನ ಶ್ರೇಷ್ಠವೆಂದು ಪರಿಗಣಿಸಲಾಗಿದೆ. ಈ ದಾನಗಳನ್ನು ಮಾಡುವುದರಿಂದ ವ್ಯಕ್ತಿಯು ಪಾಪದಿಂದ ಮುಕ್ತನಾಗುತ್ತಾನೆ, ಅವನ ವಂಶವೃದ್ಧಿಸುತ್ತದೆ ಎಂದು ನಂಬಲಾಗಿದೆ.
ಮಾಸಗಳಲ್ಲಿ ನಾನು ಮಾರ್ಗಶಿರ ಮಾಸ ಎಂದಿದ್ದ ಶ್ರೀಕೃಷ್ಣ
ಶ್ರೀ ಕೃಷ್ಣನು ಭಗವದ್ಗೀತೆಯಲ್ಲಿ "ಮಾಸಾನಾಮ್ ಮಾರ್ಗಶೀರ್ಷಃ ಅಹಮ್ ಋತೂನಾಮ್ ಕುಸುಮ ಆಕರಃ -ಸಾಮದ ಗಾನಗಳಲ್ಲಿ ಬೃಹತ್ ಸಾಮವೆಂಬ ಗಾನ ನಾನು" ಎಂಬ ಮಾತು ಹೇಳುತ್ತಾನೆ, ಶ್ರೀ ಕೃಷ್ಣನು ಅರ್ಜುನನಿಗೆ ಗೀತೋಪದೇಶ ಮಾಡಿದ್ದು ಕೂಡ ಇದೇ ಮಾಸದಲ್ಲಿ ಎಂದು ಹೇಳಲಾಗುತ್ತಿದೆ. ಶ್ರೀಕೃಷ್ಣ ಅರ್ಜುನನಿಗೆ ಗೀತೋಪದೇಶ ಮಾಡಿದ ದಿನವನ್ನು ಗೀತಾ ಜಯಂತಿ, ಮೋಕ್ಷದಾ ಏಕಾದಶಿ ಎದು ಆಚರಿಸಲಾಗಿದೆ.
ಮಾರ್ಶಶಿರ ಮಾಸದ ಹುಣ್ಣಿಮೆಯಂದು ತ್ತಾತ್ರೇಯ ಜಯಂತಿಯನ್ನು ಆಚರಿಸಲಾಗುವುದು, ಈ ಮಾಸದಲ್ಲಿ ಬರುವ ಸಫಲಾ ಏಕಾದಶಿಯಂದು ಏಕಾದಶಿ ಆಚರಣೆ ಮಾಡಿದರೆ ಜ್ಞಾನ ಹೆಚ್ಚಾಗುವುದು ಎಂದು ಕರೆಯಲಾಗುವುದು. ಈ ಮಾಸದಲ್ಲಿ ಸ್ಕಂದ ಷಷ್ಠಿಗೆ ಸುಬ್ರಹ್ಮಣ್ಯನಿಗೆ ಪೂಜೆ ಮಾಡುತ್ತಾರೆ. ಈ ದಿನ ಪೂಜೆ ಮಾಡುವುದರಿಂದ ಸರ್ಪದೋಷ ನಿವಾರಣೆಯಾಗಲಿದೆ, ಸಂತಾನ ಭಾಗ್ಯ ಅಪೇಕ್ಷಿಸಿ ಪೂಜೆ ಸಲ್ಲಿಸುವವರೆಗೆ ಒಳ್ಳೆಯ ಫಲ ಸಿಗುವುದು, ಕಷ್ಟಗಳು ದೂರಾಗುವುದು. ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದಿನ ವಿಶೇಷ ಪೂಜೆ ಇರಲಿದೆ, ಲಕ್ಷಾಂತರ ಭಕ್ತಾಧಿಗಳು ಸೇರಲಿದ್ದಾರೆ.



Click it and Unblock the Notifications