Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಮಾರ್ಗಶಿರ ಮಾಸ ಶುರು: ಹಿಂದೂ ನಂಬಿಕೆ ಪ್ರಕಾರ ಈ ಧಾರ್ಮಿಕ ಕಾರಣಗಳಿಗೆ ಈ ಮಾಸ ವಿಶೇಷವಾಗಿದೆ
ಹಿಂದೂ ಪಂಚಾಂಗ ಪ್ರಕಾರ ಕಾರ್ತಿಕ ಮಾಸದ ನಂತರ ಬರುವ ಒಂಭತ್ತನೇ ಮಾಸವೇ ಮಾರ್ಗಶಿರ ಅಥವಾ ಮಾರ್ಗಶೀರ್ಷ. ಈ ವರ್ಷ ಮಾರ್ಗಶಿರ ಮಾಸವು ಡಿಸೆಂಬರ್ 2ರಿಂದ ಪ್ರಾರಂಭವಾಗಿ ಡಿಸೆಂಬರ್ 30ಕ್ಕೆ ಮುಕ್ತಾಯವಾಗಲಿದೆ, ಧಾರ್ಮಿಕ ಕಾರಣಗಳಿಂದ ಮಾರ್ಗಶಿರ ಮಾಸವು ತುಂಬಾನೇ ವಿಶೇಷತೆಯಿಂದ ಕೂಡಿದೆ. ಮಾರ್ಗಶಿರ ಮಾಸದಲ್ಲಿ ಬರುವ ಹಬ್ಬಗಳಾವುವು, ಮಾಘ ಸ್ನಾನದ ಮಹತ್ವವೇನು, ಈ ತಿಂಗಳಿನಲ್ಲಿ ಯಾವ ಕಾರ್ಯ ಮಾಡಿದರೆ ಒಳ್ಳೆಯದು ಈ ಬಗ್ಗೆ ನೋಡೋಣ:

ಮಾರ್ಗಶಿರ ಮಾಸದಲ್ಲಿ ಬರುವ ಹಬ್ಬಗಳು, ವ್ರತಗಳು
ಧರ್ನುಮಾಸ ಪ್ರಾರಂಭ ಡಿಸೆಂಬರ್ 16
ಸುಬ್ರಹ್ಮಣ್ಯ ಷಷ್ಠಿ ಡಿಸೆಂಬರ್ 6
ಗೀತಾ ಜಯಂತಿ: ಡಿಸೆಂಬರ್ 11
ಹನುಮಾನ್ ವ್ರತ: ಡಿಸೆಂಬರ್ 13
ದತ್ತಾತ್ರೇಯ ಜಯಂತ ಡಿಸೆಂಬರ್ 14
ಸಂಕಷ್ಟಹರ ಚತುರ್ಥಿ ವ್ರತ ಡಿಸೆಂಬರ್ 18ಕ್ಕೆ ಆಚರಿಸಲಾಗುವುದು.
ಮಾರ್ಗಶಿರ ಮಾಸದಲ್ಲಿ ಬರುವ ಏಕಾದಶಿ
ಡಿಸೆಂಬರ್ 11ಕ್ಕೆ: ಮೋಕ್ಷದ ಏಕಾದಶಿ
ಡಿಸೆಂಬರ್ 26: ಸಫಲಾ ಏಕಾದಶಿ
ಮಾರ್ಗಶಿರ ಮಾಸದಲ್ಲಿ ಬರುವ ಹುಣ್ಣಿಮೆ ಮತ್ತು ಅಮವಾಸ್ತೆ
ಡಿಸೆಂಬರ್ 15ಕ್ಕೆ ಹುಣ್ಣಿಮೆ
ಡಿಸೆಂಬರ್ 30ಕ್ಕೆ ಅಮವಾಸ್ಯೆ
ಮಾಘ ಸ್ನಾನಕ್ಕೆ ತುಂಬಾನೇ ಮಹತ್ವವಿದೆ
ಮಾರ್ಗಶಿರ ಮಾಸದಲ್ಲಿ ವ್ಯಕ್ತಿ ಬೇಗನೆ ಎದ್ದು ಸ್ನಾನ ಮಾಡಿ ದೇವರನ್ನು ಪೂಜಿಸಬೇಕು. ಈ ಮಾಸದಲ್ಲಿ ಬೆಳಗ್ಗೆ ಬೇಗನೆ ಎದ್ದು ನದಿಯಲ್ಲಿ ಸ್ನಾನ ಮಾಡಿದರೆ ಆರೋಗ್ಯದ ದೃಷ್ಟಿಯಿಂದಲೂ ತುಂಬಾ ಒಳ್ಳೆಯದು ಎಂದು ಹೇಳಲಾಗುವುದು. ಅಯ್ಯಪ್ಪಸ್ವಾಮಿ ವ್ರತ ನಿಯಮ ಪಾಲಿಸುವವರು ಈ ತಿಂಗಳಿನಲ್ಲಿ ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ ಅಯ್ಯಪ್ಪಸ್ವಾಮಿ ಮಂತ್ರಗಳನ್ನು ಪಠಿಸುತ್ತಾರೆ. ಮಾರ್ಗಶಿರ ಮಾಸದಲ್ಲಿ ಪೂಜೆ ಮಾಡುವುದರಿಂದ ದೇವರ ಕೃಪೆಗೆ ಪಾತ್ರರಾಗುತ್ತೇವೆ.
ಮಾರ್ಗಶೀರ್ಷ ಮಾಸದಲ್ಲಿ ದಾನಕ್ಕೂ ಮಹತ್ವವಿದೆ
ಈ ಮಾಸದಲ್ಲಿ ಅನ್ನದಾನ,ಬೆಳ್ಳಿದಾನ ಶ್ರೇಷ್ಠವೆಂದು ಪರಿಗಣಿಸಲಾಗಿದೆ. ಈ ದಾನಗಳನ್ನು ಮಾಡುವುದರಿಂದ ವ್ಯಕ್ತಿಯು ಪಾಪದಿಂದ ಮುಕ್ತನಾಗುತ್ತಾನೆ, ಅವನ ವಂಶವೃದ್ಧಿಸುತ್ತದೆ ಎಂದು ನಂಬಲಾಗಿದೆ.
ಮಾಸಗಳಲ್ಲಿ ನಾನು ಮಾರ್ಗಶಿರ ಮಾಸ ಎಂದಿದ್ದ ಶ್ರೀಕೃಷ್ಣ
ಶ್ರೀ ಕೃಷ್ಣನು ಭಗವದ್ಗೀತೆಯಲ್ಲಿ "ಮಾಸಾನಾಮ್ ಮಾರ್ಗಶೀರ್ಷಃ ಅಹಮ್ ಋತೂನಾಮ್ ಕುಸುಮ ಆಕರಃ -ಸಾಮದ ಗಾನಗಳಲ್ಲಿ ಬೃಹತ್ ಸಾಮವೆಂಬ ಗಾನ ನಾನು" ಎಂಬ ಮಾತು ಹೇಳುತ್ತಾನೆ, ಶ್ರೀ ಕೃಷ್ಣನು ಅರ್ಜುನನಿಗೆ ಗೀತೋಪದೇಶ ಮಾಡಿದ್ದು ಕೂಡ ಇದೇ ಮಾಸದಲ್ಲಿ ಎಂದು ಹೇಳಲಾಗುತ್ತಿದೆ. ಶ್ರೀಕೃಷ್ಣ ಅರ್ಜುನನಿಗೆ ಗೀತೋಪದೇಶ ಮಾಡಿದ ದಿನವನ್ನು ಗೀತಾ ಜಯಂತಿ, ಮೋಕ್ಷದಾ ಏಕಾದಶಿ ಎದು ಆಚರಿಸಲಾಗಿದೆ.
ಮಾರ್ಶಶಿರ ಮಾಸದ ಹುಣ್ಣಿಮೆಯಂದು ತ್ತಾತ್ರೇಯ ಜಯಂತಿಯನ್ನು ಆಚರಿಸಲಾಗುವುದು, ಈ ಮಾಸದಲ್ಲಿ ಬರುವ ಸಫಲಾ ಏಕಾದಶಿಯಂದು ಏಕಾದಶಿ ಆಚರಣೆ ಮಾಡಿದರೆ ಜ್ಞಾನ ಹೆಚ್ಚಾಗುವುದು ಎಂದು ಕರೆಯಲಾಗುವುದು. ಈ ಮಾಸದಲ್ಲಿ ಸ್ಕಂದ ಷಷ್ಠಿಗೆ ಸುಬ್ರಹ್ಮಣ್ಯನಿಗೆ ಪೂಜೆ ಮಾಡುತ್ತಾರೆ. ಈ ದಿನ ಪೂಜೆ ಮಾಡುವುದರಿಂದ ಸರ್ಪದೋಷ ನಿವಾರಣೆಯಾಗಲಿದೆ, ಸಂತಾನ ಭಾಗ್ಯ ಅಪೇಕ್ಷಿಸಿ ಪೂಜೆ ಸಲ್ಲಿಸುವವರೆಗೆ ಒಳ್ಳೆಯ ಫಲ ಸಿಗುವುದು, ಕಷ್ಟಗಳು ದೂರಾಗುವುದು. ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದಿನ ವಿಶೇಷ ಪೂಜೆ ಇರಲಿದೆ, ಲಕ್ಷಾಂತರ ಭಕ್ತಾಧಿಗಳು ಸೇರಲಿದ್ದಾರೆ.



Click it and Unblock the Notifications