Latest Updates
-
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು? -
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ಇಂದು ರಾತ್ರಿ ದೆಹಲಿ-ಎನ್ಸಿಆರ್ನಲ್ಲಿ ಭೀಕರ ಮಳೆ: ಹೊರಗೆ ಹೋಗುವ ಪ್ಲಾನ್ ಇದೆಯಾ? ಎಚ್ಚರ!
ಜನವರಿ 29ಕ್ಕೆ ಮೌನಿ ಅಮವಾಸ್ಯೆ: ಈ ದಿನ ಏನು ಮಾಡಬೇಕು, ಧಾರ್ಮಿಕ ನಿಯಮಗಳೇನಿದೆ?
ಜನವರಿ 29ಕ್ಕೆ ಮೌನಿ ಅಮವಾಸ್ಯೆ, ಧಾರ್ಮಿಕ ದೃಷ್ಟಿಯಿಂದ ಈ ದಿನ ತುಂಬಾನೇ ಮಹತ್ವವಾದ ದಿನ. ಈ ದಿನ ಕುಂಭಸ್ನಾನಕ್ಕೆ ತುಂಬಾನೇ ಮಹತ್ವವಿದೆ, ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಮೋಕ್ಷ ಸಿಗುತ್ತದೆ ಎಂದು ಕುಂಭಮೇಳಕ್ಕೆ ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಮೌನಿ ಅಮವಾಸ್ಯೆಯಂದು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಮೋಕ್ಷ ಸಿಗುತ್ತದೆ ಎಂಬ ನಂಬಿಕೆ.

ಮೌನಿ ಅಮವಾಸ್ಯೆಯಂದು ಸೂರ್ಯ ಮತ್ತು ಚಂದ್ರ ಮಕರ ರಾಶಿಯಲ್ಲಿರುತ್ತದೆ, ಹಾಗಾಗಿ ಈ ದಿನದಂದು ಧನಾತ್ಮಕ ಶಕ್ತಿ ಅಧಿಕವಿರುತ್ತದೆ ಎಂದು ಧಾರ್ಮಿಕ ಶಾಸ್ತ್ರ ಹೇಳುತ್ತದೆ. ಈ ಕಾರಣದಿಂದಲೇ ಈ ದಿನಕ್ಕೆ ಯೋಗಿಗಳು, ಅಘೋರಿಗಳು, ಸಂನ್ಯಾಸಿಗಳು, ನಾಗಾ ಸಾಧುಗಳು ತುಂಬಾನೇ ಪ್ರಾಮುಖ್ಯತೆ ನೀಡುತ್ತಾರೆ. ಈ ದಿನದಂದು ವಿಶೇಷ ಪೂಜೆಗಳನ್ನು ಮಾಡಲಾಗುವುದು. ಈ ದಿನದಂದು ಮಹಾಕುಂಭದ ಅಮೃತ ಸ್ನಾನ ನಡೆಯಲಿದೆ. ಈ ದಿನ ಮಾಡುವ ದಾನಕ್ಕೆ ತುಂಬಾನೇ ಮಹತ್ವವಿದೆ.
ಮೌನಿ ಅಮವಾಸ್ಯೆಯಂದುಏನು ಮಾಡಿದರೆ ಒಳಿತಾಗುತ್ತದೆ? ಏನು ಮಾಡಬಾರದು ಎಂಬ ಕೆಲ ಧಾರ್ಮಿಕ ನಿಯಮಗಳಿವೆ, ಅವುಗಳ ಬಗ್ಗೆ ನೋಡುವುದಾದರೆ:
ಏನು ಮಾಡಬೇಕು?
ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ ಶ್ರೀ ವಿಷ್ಣುವನ್ನು ಪೂಜಿಸಬೇಕು
ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಮಹಾಪುಣ್ಯವೆಂದು ಭಾವಿಸಲಾಗದೆ. ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಸಾಧ್ಯವಾಗದವರು ಮನೆಯಲ್ಲಿ ಸ್ನಾನ ನೀರಿಗೆ ಸ್ವಲ್ಪ ಗಂಗಾಜಲ ಸೇರಿಸಿ ಸ್ನಾನ ಮಾಡಬೇಕು.
ಈ ದಿನ ಉಪವಾಸವಿದ್ದು ಪೂಜೆ ಕಾರ್ಯಗಳನ್ನು ಮಾಡಬೇಕು.
ಮೌನಿ ಅಮವಾಸ್ಯೆಯಂದು ಮಾಡುವ ದಾನ ಧರ್ಮಕ್ಕೆ ತುಂಬಾನೇ ಮಹತ್ವವಿದೆ.ಈ ದಿನ ಬಡವರಿಗೆ ಆಹಾರ ವಸ್ತುಗಳನ್ನು ದಾನ ಮಾಡಿ, ವಸ್ತ್ರಗಳನ್ನು ದಾನ ಮಾಡಿ.
ಈ ದಿನ ಪಿತೃತರ್ಪಣಕ್ಕೆ ಕೂಡ ಸೂಕ್ತವಾದ ದಿನವಾಗಿದೆ. ಪಿತೃತರ್ಪಣ ಮಾಡುವುದರಿಂದ ಪಿತೃದೋಷವಿದ್ದರೆ ಅದು ನಿವಾರಣೆಯಾಗುತ್ತದೆ.
ಮೌನಿ ಅಮವಾಸ್ಯೆಗೆ ಏನು ಮಾಡಬಾರದು?
ಈ ದಿನ ಮೀನು, ಮಾಂಸ, ಮದ್ಯ ಇವುಗಳಿಂದ ದೂರವಿರಬೇಕು
ಹಿರಿಯರನ್ನು ಅಗೌರವದಿಂದ ಕಾಣಬೇಡಿ
ಕಾಗೆ, ನಾಯಿ ಈ ಬಗೆಯ ಪ್ರಾಣಿಗಳನ್ನು ನೋಯಿಸಬೇಡಿ, ಇದರಿಂದಪಿತೃದೋಷ ಉಂಟಾಗುವುದು
ಮನೆಯನ್ನು ಗಲೀಜಾಗಿ ಇಡಬಾರದು, ಇವೆಲ್ಲಾ ನಕರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಮನೆಗೆ ಒಳ್ಳೆಯದಲ್ಲ.



Click it and Unblock the Notifications