Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜನವರಿ 29ಕ್ಕೆ ಮೌನಿ ಅಮವಾಸ್ಯೆ: ಈ ದಿನ ಏನು ಮಾಡಬೇಕು, ಧಾರ್ಮಿಕ ನಿಯಮಗಳೇನಿದೆ?
ಜನವರಿ 29ಕ್ಕೆ ಮೌನಿ ಅಮವಾಸ್ಯೆ, ಧಾರ್ಮಿಕ ದೃಷ್ಟಿಯಿಂದ ಈ ದಿನ ತುಂಬಾನೇ ಮಹತ್ವವಾದ ದಿನ. ಈ ದಿನ ಕುಂಭಸ್ನಾನಕ್ಕೆ ತುಂಬಾನೇ ಮಹತ್ವವಿದೆ, ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಮೋಕ್ಷ ಸಿಗುತ್ತದೆ ಎಂದು ಕುಂಭಮೇಳಕ್ಕೆ ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಮೌನಿ ಅಮವಾಸ್ಯೆಯಂದು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಮೋಕ್ಷ ಸಿಗುತ್ತದೆ ಎಂಬ ನಂಬಿಕೆ.

ಮೌನಿ ಅಮವಾಸ್ಯೆಯಂದು ಸೂರ್ಯ ಮತ್ತು ಚಂದ್ರ ಮಕರ ರಾಶಿಯಲ್ಲಿರುತ್ತದೆ, ಹಾಗಾಗಿ ಈ ದಿನದಂದು ಧನಾತ್ಮಕ ಶಕ್ತಿ ಅಧಿಕವಿರುತ್ತದೆ ಎಂದು ಧಾರ್ಮಿಕ ಶಾಸ್ತ್ರ ಹೇಳುತ್ತದೆ. ಈ ಕಾರಣದಿಂದಲೇ ಈ ದಿನಕ್ಕೆ ಯೋಗಿಗಳು, ಅಘೋರಿಗಳು, ಸಂನ್ಯಾಸಿಗಳು, ನಾಗಾ ಸಾಧುಗಳು ತುಂಬಾನೇ ಪ್ರಾಮುಖ್ಯತೆ ನೀಡುತ್ತಾರೆ. ಈ ದಿನದಂದು ವಿಶೇಷ ಪೂಜೆಗಳನ್ನು ಮಾಡಲಾಗುವುದು. ಈ ದಿನದಂದು ಮಹಾಕುಂಭದ ಅಮೃತ ಸ್ನಾನ ನಡೆಯಲಿದೆ. ಈ ದಿನ ಮಾಡುವ ದಾನಕ್ಕೆ ತುಂಬಾನೇ ಮಹತ್ವವಿದೆ.
ಮೌನಿ ಅಮವಾಸ್ಯೆಯಂದುಏನು ಮಾಡಿದರೆ ಒಳಿತಾಗುತ್ತದೆ? ಏನು ಮಾಡಬಾರದು ಎಂಬ ಕೆಲ ಧಾರ್ಮಿಕ ನಿಯಮಗಳಿವೆ, ಅವುಗಳ ಬಗ್ಗೆ ನೋಡುವುದಾದರೆ:
ಏನು ಮಾಡಬೇಕು?
ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ ಶ್ರೀ ವಿಷ್ಣುವನ್ನು ಪೂಜಿಸಬೇಕು
ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಮಹಾಪುಣ್ಯವೆಂದು ಭಾವಿಸಲಾಗದೆ. ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಸಾಧ್ಯವಾಗದವರು ಮನೆಯಲ್ಲಿ ಸ್ನಾನ ನೀರಿಗೆ ಸ್ವಲ್ಪ ಗಂಗಾಜಲ ಸೇರಿಸಿ ಸ್ನಾನ ಮಾಡಬೇಕು.
ಈ ದಿನ ಉಪವಾಸವಿದ್ದು ಪೂಜೆ ಕಾರ್ಯಗಳನ್ನು ಮಾಡಬೇಕು.
ಮೌನಿ ಅಮವಾಸ್ಯೆಯಂದು ಮಾಡುವ ದಾನ ಧರ್ಮಕ್ಕೆ ತುಂಬಾನೇ ಮಹತ್ವವಿದೆ.ಈ ದಿನ ಬಡವರಿಗೆ ಆಹಾರ ವಸ್ತುಗಳನ್ನು ದಾನ ಮಾಡಿ, ವಸ್ತ್ರಗಳನ್ನು ದಾನ ಮಾಡಿ.
ಈ ದಿನ ಪಿತೃತರ್ಪಣಕ್ಕೆ ಕೂಡ ಸೂಕ್ತವಾದ ದಿನವಾಗಿದೆ. ಪಿತೃತರ್ಪಣ ಮಾಡುವುದರಿಂದ ಪಿತೃದೋಷವಿದ್ದರೆ ಅದು ನಿವಾರಣೆಯಾಗುತ್ತದೆ.
ಮೌನಿ ಅಮವಾಸ್ಯೆಗೆ ಏನು ಮಾಡಬಾರದು?
ಈ ದಿನ ಮೀನು, ಮಾಂಸ, ಮದ್ಯ ಇವುಗಳಿಂದ ದೂರವಿರಬೇಕು
ಹಿರಿಯರನ್ನು ಅಗೌರವದಿಂದ ಕಾಣಬೇಡಿ
ಕಾಗೆ, ನಾಯಿ ಈ ಬಗೆಯ ಪ್ರಾಣಿಗಳನ್ನು ನೋಯಿಸಬೇಡಿ, ಇದರಿಂದಪಿತೃದೋಷ ಉಂಟಾಗುವುದು
ಮನೆಯನ್ನು ಗಲೀಜಾಗಿ ಇಡಬಾರದು, ಇವೆಲ್ಲಾ ನಕರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಮನೆಗೆ ಒಳ್ಳೆಯದಲ್ಲ.



Click it and Unblock the Notifications