Latest Updates
-
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ
ಜನವರಿ 29ಕ್ಕೆ ಮೌನಿ ಅಮವಾಸ್ಯೆ: ಈ ದಿನ ಏನು ಮಾಡಬೇಕು, ಧಾರ್ಮಿಕ ನಿಯಮಗಳೇನಿದೆ?
ಜನವರಿ 29ಕ್ಕೆ ಮೌನಿ ಅಮವಾಸ್ಯೆ, ಧಾರ್ಮಿಕ ದೃಷ್ಟಿಯಿಂದ ಈ ದಿನ ತುಂಬಾನೇ ಮಹತ್ವವಾದ ದಿನ. ಈ ದಿನ ಕುಂಭಸ್ನಾನಕ್ಕೆ ತುಂಬಾನೇ ಮಹತ್ವವಿದೆ, ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಮೋಕ್ಷ ಸಿಗುತ್ತದೆ ಎಂದು ಕುಂಭಮೇಳಕ್ಕೆ ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಮೌನಿ ಅಮವಾಸ್ಯೆಯಂದು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಮೋಕ್ಷ ಸಿಗುತ್ತದೆ ಎಂಬ ನಂಬಿಕೆ.

ಮೌನಿ ಅಮವಾಸ್ಯೆಯಂದು ಸೂರ್ಯ ಮತ್ತು ಚಂದ್ರ ಮಕರ ರಾಶಿಯಲ್ಲಿರುತ್ತದೆ, ಹಾಗಾಗಿ ಈ ದಿನದಂದು ಧನಾತ್ಮಕ ಶಕ್ತಿ ಅಧಿಕವಿರುತ್ತದೆ ಎಂದು ಧಾರ್ಮಿಕ ಶಾಸ್ತ್ರ ಹೇಳುತ್ತದೆ. ಈ ಕಾರಣದಿಂದಲೇ ಈ ದಿನಕ್ಕೆ ಯೋಗಿಗಳು, ಅಘೋರಿಗಳು, ಸಂನ್ಯಾಸಿಗಳು, ನಾಗಾ ಸಾಧುಗಳು ತುಂಬಾನೇ ಪ್ರಾಮುಖ್ಯತೆ ನೀಡುತ್ತಾರೆ. ಈ ದಿನದಂದು ವಿಶೇಷ ಪೂಜೆಗಳನ್ನು ಮಾಡಲಾಗುವುದು. ಈ ದಿನದಂದು ಮಹಾಕುಂಭದ ಅಮೃತ ಸ್ನಾನ ನಡೆಯಲಿದೆ. ಈ ದಿನ ಮಾಡುವ ದಾನಕ್ಕೆ ತುಂಬಾನೇ ಮಹತ್ವವಿದೆ.
ಮೌನಿ ಅಮವಾಸ್ಯೆಯಂದುಏನು ಮಾಡಿದರೆ ಒಳಿತಾಗುತ್ತದೆ? ಏನು ಮಾಡಬಾರದು ಎಂಬ ಕೆಲ ಧಾರ್ಮಿಕ ನಿಯಮಗಳಿವೆ, ಅವುಗಳ ಬಗ್ಗೆ ನೋಡುವುದಾದರೆ:
ಏನು ಮಾಡಬೇಕು?
ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ ಶ್ರೀ ವಿಷ್ಣುವನ್ನು ಪೂಜಿಸಬೇಕು
ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಮಹಾಪುಣ್ಯವೆಂದು ಭಾವಿಸಲಾಗದೆ. ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಸಾಧ್ಯವಾಗದವರು ಮನೆಯಲ್ಲಿ ಸ್ನಾನ ನೀರಿಗೆ ಸ್ವಲ್ಪ ಗಂಗಾಜಲ ಸೇರಿಸಿ ಸ್ನಾನ ಮಾಡಬೇಕು.
ಈ ದಿನ ಉಪವಾಸವಿದ್ದು ಪೂಜೆ ಕಾರ್ಯಗಳನ್ನು ಮಾಡಬೇಕು.
ಮೌನಿ ಅಮವಾಸ್ಯೆಯಂದು ಮಾಡುವ ದಾನ ಧರ್ಮಕ್ಕೆ ತುಂಬಾನೇ ಮಹತ್ವವಿದೆ.ಈ ದಿನ ಬಡವರಿಗೆ ಆಹಾರ ವಸ್ತುಗಳನ್ನು ದಾನ ಮಾಡಿ, ವಸ್ತ್ರಗಳನ್ನು ದಾನ ಮಾಡಿ.
ಈ ದಿನ ಪಿತೃತರ್ಪಣಕ್ಕೆ ಕೂಡ ಸೂಕ್ತವಾದ ದಿನವಾಗಿದೆ. ಪಿತೃತರ್ಪಣ ಮಾಡುವುದರಿಂದ ಪಿತೃದೋಷವಿದ್ದರೆ ಅದು ನಿವಾರಣೆಯಾಗುತ್ತದೆ.
ಮೌನಿ ಅಮವಾಸ್ಯೆಗೆ ಏನು ಮಾಡಬಾರದು?
ಈ ದಿನ ಮೀನು, ಮಾಂಸ, ಮದ್ಯ ಇವುಗಳಿಂದ ದೂರವಿರಬೇಕು
ಹಿರಿಯರನ್ನು ಅಗೌರವದಿಂದ ಕಾಣಬೇಡಿ
ಕಾಗೆ, ನಾಯಿ ಈ ಬಗೆಯ ಪ್ರಾಣಿಗಳನ್ನು ನೋಯಿಸಬೇಡಿ, ಇದರಿಂದಪಿತೃದೋಷ ಉಂಟಾಗುವುದು
ಮನೆಯನ್ನು ಗಲೀಜಾಗಿ ಇಡಬಾರದು, ಇವೆಲ್ಲಾ ನಕರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಮನೆಗೆ ಒಳ್ಳೆಯದಲ್ಲ.



Click it and Unblock the Notifications











