Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಜನವರಿ 29ಕ್ಕೆ ಮೌನಿ ಅಮವಾಸ್ಯೆ: ಈ ದಿನ ಏನು ಮಾಡಬೇಕು, ಧಾರ್ಮಿಕ ನಿಯಮಗಳೇನಿದೆ?
ಜನವರಿ 29ಕ್ಕೆ ಮೌನಿ ಅಮವಾಸ್ಯೆ, ಧಾರ್ಮಿಕ ದೃಷ್ಟಿಯಿಂದ ಈ ದಿನ ತುಂಬಾನೇ ಮಹತ್ವವಾದ ದಿನ. ಈ ದಿನ ಕುಂಭಸ್ನಾನಕ್ಕೆ ತುಂಬಾನೇ ಮಹತ್ವವಿದೆ, ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಮೋಕ್ಷ ಸಿಗುತ್ತದೆ ಎಂದು ಕುಂಭಮೇಳಕ್ಕೆ ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಮೌನಿ ಅಮವಾಸ್ಯೆಯಂದು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಮೋಕ್ಷ ಸಿಗುತ್ತದೆ ಎಂಬ ನಂಬಿಕೆ.

ಮೌನಿ ಅಮವಾಸ್ಯೆಯಂದು ಸೂರ್ಯ ಮತ್ತು ಚಂದ್ರ ಮಕರ ರಾಶಿಯಲ್ಲಿರುತ್ತದೆ, ಹಾಗಾಗಿ ಈ ದಿನದಂದು ಧನಾತ್ಮಕ ಶಕ್ತಿ ಅಧಿಕವಿರುತ್ತದೆ ಎಂದು ಧಾರ್ಮಿಕ ಶಾಸ್ತ್ರ ಹೇಳುತ್ತದೆ. ಈ ಕಾರಣದಿಂದಲೇ ಈ ದಿನಕ್ಕೆ ಯೋಗಿಗಳು, ಅಘೋರಿಗಳು, ಸಂನ್ಯಾಸಿಗಳು, ನಾಗಾ ಸಾಧುಗಳು ತುಂಬಾನೇ ಪ್ರಾಮುಖ್ಯತೆ ನೀಡುತ್ತಾರೆ. ಈ ದಿನದಂದು ವಿಶೇಷ ಪೂಜೆಗಳನ್ನು ಮಾಡಲಾಗುವುದು. ಈ ದಿನದಂದು ಮಹಾಕುಂಭದ ಅಮೃತ ಸ್ನಾನ ನಡೆಯಲಿದೆ. ಈ ದಿನ ಮಾಡುವ ದಾನಕ್ಕೆ ತುಂಬಾನೇ ಮಹತ್ವವಿದೆ.
ಮೌನಿ ಅಮವಾಸ್ಯೆಯಂದುಏನು ಮಾಡಿದರೆ ಒಳಿತಾಗುತ್ತದೆ? ಏನು ಮಾಡಬಾರದು ಎಂಬ ಕೆಲ ಧಾರ್ಮಿಕ ನಿಯಮಗಳಿವೆ, ಅವುಗಳ ಬಗ್ಗೆ ನೋಡುವುದಾದರೆ:
ಏನು ಮಾಡಬೇಕು?
ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ ಶ್ರೀ ವಿಷ್ಣುವನ್ನು ಪೂಜಿಸಬೇಕು
ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಮಹಾಪುಣ್ಯವೆಂದು ಭಾವಿಸಲಾಗದೆ. ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಸಾಧ್ಯವಾಗದವರು ಮನೆಯಲ್ಲಿ ಸ್ನಾನ ನೀರಿಗೆ ಸ್ವಲ್ಪ ಗಂಗಾಜಲ ಸೇರಿಸಿ ಸ್ನಾನ ಮಾಡಬೇಕು.
ಈ ದಿನ ಉಪವಾಸವಿದ್ದು ಪೂಜೆ ಕಾರ್ಯಗಳನ್ನು ಮಾಡಬೇಕು.
ಮೌನಿ ಅಮವಾಸ್ಯೆಯಂದು ಮಾಡುವ ದಾನ ಧರ್ಮಕ್ಕೆ ತುಂಬಾನೇ ಮಹತ್ವವಿದೆ.ಈ ದಿನ ಬಡವರಿಗೆ ಆಹಾರ ವಸ್ತುಗಳನ್ನು ದಾನ ಮಾಡಿ, ವಸ್ತ್ರಗಳನ್ನು ದಾನ ಮಾಡಿ.
ಈ ದಿನ ಪಿತೃತರ್ಪಣಕ್ಕೆ ಕೂಡ ಸೂಕ್ತವಾದ ದಿನವಾಗಿದೆ. ಪಿತೃತರ್ಪಣ ಮಾಡುವುದರಿಂದ ಪಿತೃದೋಷವಿದ್ದರೆ ಅದು ನಿವಾರಣೆಯಾಗುತ್ತದೆ.
ಮೌನಿ ಅಮವಾಸ್ಯೆಗೆ ಏನು ಮಾಡಬಾರದು?
ಈ ದಿನ ಮೀನು, ಮಾಂಸ, ಮದ್ಯ ಇವುಗಳಿಂದ ದೂರವಿರಬೇಕು
ಹಿರಿಯರನ್ನು ಅಗೌರವದಿಂದ ಕಾಣಬೇಡಿ
ಕಾಗೆ, ನಾಯಿ ಈ ಬಗೆಯ ಪ್ರಾಣಿಗಳನ್ನು ನೋಯಿಸಬೇಡಿ, ಇದರಿಂದಪಿತೃದೋಷ ಉಂಟಾಗುವುದು
ಮನೆಯನ್ನು ಗಲೀಜಾಗಿ ಇಡಬಾರದು, ಇವೆಲ್ಲಾ ನಕರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಮನೆಗೆ ಒಳ್ಳೆಯದಲ್ಲ.



Click it and Unblock the Notifications