Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೌನಿ ಅಮವಾಸ್ಯೆ ಯಾವಾಗ? ಪಿತೃದೋಷ, ಶನಿದೋಷ ನಿವಾರಣೆಗೆ ಏನು ಮಾಡಬೇಕು?
ಹಿಂದೂ ಧರ್ಮದಲ್ಲಿ ಅಮವಾಸ್ಯೆಗೆ, ಹುಣ್ಣಿಮೆಗೆ ತುಂಬಾನೇ ಮಹತ್ವ ನೀಡಲಾಗುವುದು, ಅದರಲ್ಲಿಯೂ ಕೆಲವೊಂದು ಅಮವಾಸ್ಯೆಗಳು ಧಾರ್ಮಿಕ ಕಾರಣದಿಂದ ಮತ್ತಷ್ಟು ಮಹತ್ವವನ್ನು ಪಡೆದಿದೆ, ಅದರಲ್ಲೊಂದು ಮೌನಿ ಅಮವಾಸ್ಯೆ, ಇದೀಗ ಕುಂಭಮೇಳ ನಡೆಯುತ್ತಿದೆ, ಈ ದಿನದಂದು ಕುಂಭಮೇಳದಲ್ಲಿ ಭಾಗವಹಿಸಲೆಂದು ಭಕ್ತರ ದಂಡೇ ಹರಿದು ಹೋಗುತ್ತಿದೆ. ಈ ಮೌನಿ ಅಮವಾಸ್ಯೆ ಯಾವಾಗ? ಈ ಅಮವಾಸ್ಯೆಯ ಪ್ರಾಮುಖ್ಯತೆ ಏನು? ಈ ದಿನ ಏನು ಪರಿಹಾರ ಮಾಡಿದರೆ ಒಳ್ಳೆಯದು ಎಂಬ ಧಾರ್ಮಿಕ ಮಾಹಿತಿಗಳ ಬಗ್ಗೆ ತಿಳಿಯೋಣ:

ಈ ವರ್ಷ ಮೌನಿ ಅಮವಾಸ್ಯೆ ಯಾವಾಗ?
2025ರಲ್ಲಿ ಮೌನಿ ಅಮವಾಸ್ಯೆನ್ನು ಜನವರಿ 29ರಂದು ಆರಿಸಲಾಗುತ್ತಿದೆ. ಅಮವಾಸ್ಯೆ ತಿಥಿ ಜನವರಿ 28 ರಾತ್ರಿ 7:35ಕ್ಕೆ ಶುರುವಾಗಿ ಜನವರಿ29 ಸಂಜೆ 06:05ಕ್ಕೆ ಮುಕ್ತಾಯವಾಗಲಿದೆ.
ಈ ದಿನ ಲಕ್ಷಾಂತರ ಭಕ್ತರು ಕುಂಭಮೇಳಕ್ಕೆ ಹೋಗುತ್ತಿರುವುದು ಏಕೆ?
ಕುಂಭಮೇಳದಲ್ಲಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿ ಪುಣ್ಯ ಕಟ್ಟಿಕೊಳ್ಳಲು ಭಕ್ತರು ಕುಂಭಮೇಳಕ್ಕೆ ಬರ್ತಾ ಇದ್ದಾರೆ, ಅದರಲ್ಲಿಯೂ ಮೌನಿ ಅಮವಾಸ್ಯೆಯ ದಿನದಂದು ಕುಂಭಸ್ನಾನ ಮಾಡಿದರೆ ಪಾಪಗಳೆಲ್ಲಾ ತೊಳೆದು ಹೋಗುವುದು, ನಮಗೆ ಮೋಕ್ಷ ಸಿಗುತ್ತದೆ ಅಲ್ಲದೆ ರೋಗ ರುಜಿನಗಳಿಂದ ಮುಕ್ತರಾಗುತ್ತೇವೆ ಎಂಬ ನಂಬಿಕೆ, ಹೀಗಾಗಿ ಈ ದಿನ ತ್ರಿವೇಣಿ ಸಂಗಮದಲ್ಲಿ ಮಾಡುವ ಸ್ನಾನಕ್ಕೆ ತುಂಬಾನೇ ವಿಶೇಷವಿದೆ, ಈ ಸುವರ್ಣ ಸಂದರ್ಭ ಮಿಸ್ ಮಾಡಬಾರದು ಎಂದು ಕುಂಭಮೇಳದತ್ತ ಹೋಗ್ತಾ ಇದ್ದಾರೆ.
ಈ ದಿನ ಪಿಂಡ ಪ್ರಧಾನ ಮಾಡಲಾಗುವುದು
ಈ ದಿನ ಪಿತೃ ತರ್ಪಣ ನೀಡುವುದರಿಂದ ಗತಿಸಿದ ಹಿರಿಯರಿಗೆ ಮೋಕ್ಷ ಸಿಗುವುದು. ಪಿತೃದೋಷವಿದ್ದರೆ ಮನುಷ್ಯ ಬದುಕಿನಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾನೆ, ಪಿತೃದೋಷ ನಿವಾರಣೆಯಿಂದ ನಮ್ಮ ಬದುಕಿಗೆ ಒಳಿತಾಗುತ್ತದೆ, ಆದ್ದರಿಂದ ಪಿತೃದೋಷ ನಿವಾರಣೆಗೆ ಮೌನಿ ಅಮವಾಸ್ಯೆಯಂದು ಪಿತೃತರ್ಪಣ ನೀಡುವುದು ಒಳ್ಳೆಯದು.
ಮೌನಿ ಅಮವಾಸ್ಯೆಯಂದು ಈ ಪರಿಹಾರ ಮಾಡಿದರೆ ಒಳ್ಳೆಯದು
ಈ ದಿನ ಶ್ರೀವಿಷ್ಣುವಿಗೆ ಪೂಜೆ ಸಲ್ಲಿಸಿ ಬಡವರಿಗೆ ನಿಮ್ಮಿಂದಾಗುವಂತೆ ದಾನ ಮಾಡಿ, ಆಹಾರ ವಸ್ತುಗಳನ್ನು, ವಸ್ತ್ರಗಳನ್ನು ದಾನ ಮಾಡಿ ಇದರ ಜೊತೆಗೆ ನೀವು ಕಪ್ಪು ಎಳ್ಳು ಇಟ್ಟು ದಾನ ಮಾಡಿ. ಹೀಗೆ ದಾನ ಮಾಡುವುದರಿಂದ ಒಳಿತಾಗುತ್ತದೆ ಎಂದು ಹೇಳಲಾಗುವುದು.
ಈ ದಿನ ಪವಿತ್ರ ನದಿಯಲ್ಲಿ ದಾನ ಮಾಡಿದರೆ ದೇಹಕ್ಕೆ, ಮನಸ್ಸಿಗೆ ಒಳ್ಳೆಯದು ಎಂದು ಹೇಳಲಾಗುವುದು.
ಇನ್ನು ಶನಿ ದೋಷವಿರುವವರು ಈ ದಿನ ಶನಿ ದೇವಾಲಯಕ್ಕೆ ಹೋಗಿ ಕಪ್ಪು ಎಳ್ಳು ದಾನ ಮಾಡಿದರೆ ತುಂಬಾನೇ ಒಳ್ಳೆಯದು, ಇದರಿಂದ ಶನಿದೋಷ ಸ್ವಲ್ಪ ಕಡಿಮೆಯಾಗುವುದು.
ಈಗ ಮಕರ ರಾಶಿ, ಕುಂಭ ರಾಶಿ, ಮೀನ ರಾಶಿಯಲ್ಲಿ ಶನಿ ಸಾಡೇಸಾತಿ ನಡೆಯುತ್ತಿದೆ. ಈ ರಾಶಿಯವರು ಈ ದಿನ ಪರಿಹಾರ ಮಾಡುವುದರಿಂದ ಶನಿದೋಷ ನಿವಾರಣೆಯಾಗಲಿದೆ.
ಜ್ಯೋತಿಷ್ಯ ದೃಷ್ಟಿಯಿಂದಲೂ ಈ ದಿನ ಮಹತ್ವದ್ದಾಗಿದೆ
ಈ ದಿನದಂದು ಸೂರ್ಯ, ಬುಧ, ಚಂದ್ರ ಮಕರ ರಾಶಿಯಲ್ಲಿ ಸಂಯೋಗವಾಗುವುದರಿಂದ ತ್ರಿಗ್ರಾಹಿ ಯೋಗ ಉಂಟು ಮಾಡುತ್ತಿದೆ. ಅಲ್ಲದೆ ಶುಕ್ರನು ಮೀನ ರಾಶಿಯಲ್ಲಿರುವುದರಿಂದ ಮಾಳವ್ಯ ಯೋಗ, ಮಕರ ರಾಶಿಯಲ್ಲಿ ಬುಧಾದಿತ್ಯ ಯೋಗ ಕೂಡ ಇರಲಿದೆ. ಈ ಕಾರಣದಿಂದ ಈ ದಿನ ಮತ್ತಷ್ಟು ವಿಶೇಷವಾಗಿದೆ.
ಈ ದಿನದ ಪೂಜಾ ವಿಧಿಗಳು
ಬೆಳಗ್ಗೆ ಬೇಗನೆ ಎದ್ದು ಗಂಗಾ ಸ್ನಾನ ಮಾಡಬೇಕು, ಸ್ನಾನ ನೀರಿಗೆ ಗಂಗಾಜಲ ಹಾಕಿಯೂ ಮಾಡಬಹುದು
ನಂತರ ಮಡಿ ಬಟ್ಟೆ ಧರಿಸಿ ಸೂರ್ಯನಿಗೆ ಆರ್ಘ್ಯ ಅರ್ಪಿಸಲಾಗುವುದು
ನಂತರ ಉಪವಾಸವಿದ್ದ ತೀರಿ ಹೋದ ಪಿತೃಗಳಿಗೆ ಪಿಂಡ ಪ್ರಧಾನ ಮಾಡಿ
ನಂತರ ದೇವರ ಪೂಜೆ ಮಾಡಿ
ಈ ದಿನ ಶ್ರೀ ವಿಷ್ಣುವಿಗೆ ವಿಶೇಷ ಪೂಜೆ ಮಾಡಿ.



Click it and Unblock the Notifications