Latest Updates
-
ಮುಂಬೈನಲ್ಲಿ ವರುಣನ ಆರ್ಭಟ: ರೆಡ್ ಅಲರ್ಟ್ ಘೋಷಣೆ, ಪ್ರಯಾಣಿಕರೇ ಎಚ್ಚರ! -
ದೆಹಲಿ-ಎನ್ಸಿಆರ್ನಲ್ಲಿ ಧೂಳಿನ ಆರ್ಭಟ: ಹೊರಗೆ ಹೋಗುವ ಮುನ್ನ ಎಚ್ಚರ, ಮನೆಯಲ್ಲೇ ಫಿಟ್ ಆಗಿರಲು ಈ 8 ನಿಮಿಷದ ಟಿಪ್ಸ್! -
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು!
ಮೇಷ ರಾಶಿಯಲ್ಲಿ ಬುಧ ಗೋಚರ : ಈ 4 ರಾಶಿಯವರು ಜಾಗ್ರತೆಯಿಂದಿರಬೇಕು
ಬುಧ ಗ್ರಹವನ್ನು ನಮ್ಮ ಜೀವನದಲ್ಲಿ ತಾರ್ಕಿಕ ಸಾಮರ್ಥ್ಯ, ವ್ಯವಹಾರ ಮತ್ತು ಬುದ್ಧಿವಂತಿಕೆಯ ಅಂಶವೆಂದು ನಂಬಲಾಗಿದೆ. ಹಾಗೂ ಬುಧನನ್ನು ಪ್ರಕೃತಿಯ ಅತ್ಯಂತ ಶಾಂತ ಗ್ರಹವೆಂದು ಪರಿಗಣಿಸಲಾಗುತ್ತದೆ. ಮೇಷ ರಾಶಿಯಲ್ಲಿ ಬುಧವನ್ನು ಗೋಚಾರವಾಗೋದ್ರಿಂದ ಮಿಶ್ರಫಲವನ್ನು ಪಡೆಯಬೇಕಾಗುತ್ತದೆ. ಬುಧನನ್ನು ಆತನ ಸ್ವಭಾವದಲ್ಲಿ ಉಗ್ರ ಗ್ರಹವೆಂದು ಪರಿಗಣಿಸಲಾಗಿದೆ.
ಇದೇ ಮಾರ್ಚ್ 31, 2023 ರಂದು ಬುಧವು ಮೇಷ ರಾಶಿಯಲ್ಲಿ ಉದಯಿಸಲಿದೆ. ಜ್ಯೋತಿಷ್ಯದ ಪ್ರಕಾರ, ರಾಶಿಚಕ್ರದ ಚಿಹ್ನೆಗಳು ಇದರ ಪ್ರಭಾವಕ್ಕೆ ಒಳಗಾಗುತ್ತದೆ. ಅದ್ರಲ್ಲೂ ಈ ನಾಲ್ಕು ರಾಶಿಚಕ್ರದ ಮೇಲೆ ಇದರ ಪರಿಣಾಮವು ಗಂಭಿರವಾಗಿರಲಿದೆ. ಹಾಗಾದ್ರೆ ಆ ಮೂರು ರಾಶಿಗಳು ಯಾವುದು ಅನ್ನೋದನ್ನ ತಿಳಿಯೋಣ.

ವೃಷಭ ರಾಶಿ
ಬುಧನು ಮೇಷ ರಾಶಿಯಲ್ಲಿ ಉಗಮ ಆಗೋದ್ರಿಂದ ವೃಷಭ ರಾಶಿಯವರ ಆರ್ಥಿಕ ಪರಿಸ್ಥಿತಿಯು ಏರುಪೇರಾಗುವ ಸಾಧ್ಯತೆ ಇದೆ. ವ್ಯಾಪಾರಿಗಳು ಈ ಸಮಯದಲ್ಲಿ ಯಾವುದೇ ರೀತಿಯ ಹೊಸ ವ್ಯವಹಾರಕ್ಕೆ ಕೈ ಹಾಕಬಾರದು. ಇನ್ನೂ ಹೂಡಿಕೆ ಮಾಡುವ ಬಗ್ಗೆ ಯೋಚಿಸಲೇಬೇಡಿ. ಪ್ರಯಣದ ಸಮಯದಲ್ಲಿ ನೀವು ಸಣ್ಣ ಆರೋಗ್ಯ ಸಮಸ್ಯೆಗಳನ್ನು ಎದುರಿಸಬಹುದು. ಹೀಗಾಗಿ ಆಹಾರದ ಬಗ್ಗೆ ವಿಶೇಷ ಗಮನ ಕೊಡೋದು ಮುಖ್ಯ.
ವೃಶ್ಚಿಕ ರಾಶಿ
ಈ ಸಮಯದಲ್ಲಿ ನೀವು ನಿಮ್ಮ ಜೀವನದಲ್ಲಿ ಅನೇಕ ಸವಾಲುಗಳನ್ನು ಎದುರಿಸಬೇಕಾದ ಸಾಧ್ಯತೆಗಳಿದೆ. ಇನ್ನು ನಿಮ್ಮ ವೃತ್ತಿಜೀವನದಲ್ಲಿ ನೀವು ಅನೇಕ ಏರಿಳಿತಗಳನ್ನು ಎದುರಿಸುತ್ತೀರಿ. ಈ ಸಮಯ ಆಟಗಾರರಿಗೆ ಅನುಕೂಲಕರವಾಗಿರುವುದಿಲ್ಲ. ಈ ಸಮಯದಲ್ಲಿ ನೀವು ನಿಮ್ಮ ಖರ್ಚುಗಳನ್ನು ನಿಯಂತ್ರಿಸುವುದು ತುಂಬಾನೇ ಮುಖ್ಯ. ವೆಚ್ಚವನ್ನು ನಿಯಂತ್ರಿಸದಿದ್ದರೆ ಭವಿಷ್ಯದಲ್ಲಿ ನೀವು ನಷ್ಟವನ್ನು ಅನುಭವಿಸಬೇಕಾಗುತ್ತದೆ.
ತುಲಾ ರಾಶಿ
ತುಲಾ ರಾಶಿಯವರು ಆರ್ಥಿಕವಾಗಿ ಮುಂಜಾಗರೂಕರಾಗಿರಬೇಕು. ಈ ಸಮಯದಲ್ಲಿ ನಿಮ್ಮ ಖರ್ಚುಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ. ನೀವು ಖರ್ಚು ಮಾಡಲು ಬಯಸದ ಎಲ್ಲಾ ವಿಷಯಗಳಿಗೆ ನೀವು ಖರ್ಚು ಮಾಡಬೇಕಾಗಿ ಬರಬಹುದು.
ಕುಂಭ ರಾಶಿ
ಕುಂಭ ರಾಶಿಯವರು ಹಣಕಾಸಿನ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಈ ಸಮಯದಲ್ಲಿ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ. ಇಲ್ಲದಿದ್ದರೆ, ಭವಿಷ್ಯದಲ್ಲಿ ನೀವು ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗಬಹುದು. ನೀವು ಮೊದಲಿಗೆ ಬಜೆಟ್ ತಯಾರಿಸಿಕೊಂಡು ನಂತರ ಅದಕ್ಕೆ ಅನುಗುಣವಾಗಿ ಖರ್ಚು ಮಾಡಿದರೆ ಉತ್ತಮ.



Click it and Unblock the Notifications