Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಏ.14ಕ್ಕೆ ಮೇಷ ಸಂಕ್ರಾಂತಿ: ಈ ದಿನದ ಮಹತ್ವವೇನು? ಒಳಿತಾಗಲು ಈ ದಿನ ಮಾಡಬೇಕಾದ ಪರಿಹಾರಗಳೇನು?
ಗ್ರಹಗಳ ಅಧಿಪತಿಯಾಗಿರುವ ಸೂರ್ಯ ಪ್ರತಿತಿಣಗಳು ತನ್ನ ಪಠ ಬದಲಾಯಿಸುತ್ತಾನೆ. ಸೂರ್ಯ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸಿದಾಗ ಅದನ್ನು ಸೂರ್ಯ ಸಂಕ್ರಾಂತಿ ಎಂದು ಕರೆಯಲಾಗುವುದು. ಈ ಏಪ್ರಿಲ್ 14ಕ್ಕೆ ಸೂರ್ಯನು ಹಿಂದೂ ಮಾಸದ ಮೊದಲ ತಿಂಗಳಾದ ಮೇಷ ರಾಶಿಯನ್ನು ಪ್ರವೇಶಿಸಲಿದೆ.
ಹಿಂದೂ ಕ್ಯಾಲೆಂಡರ್ ಪ್ರಕಾರ ಹಿಂದೂ ಹೊಸ ವರ್ಷ ಪ್ರಾರಂಭವಾಗುವುದೇ ಮೇಷ ಸಂಕ್ರಾಂತಿಯಿಂದ. ಈ ವರ್ಷ ಮೇಷ ಸಂಕ್ರಾಂತಿಯನ್ನು ವೈಶಾಖ ಮಾಸದಲ್ಲಿ ಆಚರಿಸಲಾಗುವುದು, ಇಂಗ್ಲಿಷ್ ಕ್ಯಾಲೆಂಡರ್ ಪ್ರಕಾರ ಏಪ್ರಿಲ್ 14ಕ್ಕೆ ಮೇಷ ಸಂಕ್ರಾಂತಿ.

ಮೇಷ ಸಂಕ್ರಾಂತಿ ದಿನಾಂಕ ಮತ್ತು ಸಮಯ
ಮೇಷ ಸಂಕ್ರಾಂತಿ ಪುಣ್ಯ ಕಾಲ: ಏಪ್ರಿಲ್ 14, 2023 ಬೆಳಗ್ಗೆ 10:55ರಿಂದ ಸಂಜೆ 06:46ರವರೆಗೆ
ಮೇಷ ಸಂಕ್ರಾಂತಿ ಮಹಾ ಪುಣ್ಯ ಕಾಲ: ಏಪ್ರಿಲ್14, 2023 ಮಧ್ಯಾಹ್ನ 01:04ರಿಂದ 05:20ರವರೆಗೆ
ಮೇಷ ಸಂಕ್ರಾಂತಿ ಮಹತ್ವ
ಮೇಷ ಸಂಕ್ರಾಂತಿಯನ್ನು ಅತ್ಯಂತ ಶುಭ ದಿನವೆಂದು ಪರಿಗಣಿಸಲಾಗಿದೆ. ಈ ದಿನ ಹರಿದ್ವಾರ, ಕಾಶಿ, ರಿಷಿಕೇಶ್, ಮಥುರಾ ಮತ್ತಿತರ ಪುಣ್ಯ ಸ್ಥಳಗಳಿಗೆ ಹೋಗಿ ಪುಣ್ಯ ನದಿಗಳಲ್ಲಿ ಈ ದಿನ ಜನರು ಸ್ನಾನ ಮಾಡುತ್ತಾರೆ. ಹೀಗೆ ಮಾಡುವುದರಿಂದ ಮೋಕ್ಷ ಸಿಗುವುದು ಎಂಬ ನಂಬಿಕೆ. ಈ ದಿನ ಭಕ್ತರು ಶಿವ ಹಾಗೂ ಶ್ರೀ ವಿಷ್ಣುವಿಗೆ ವಿಶೇಷ ಪೂಜೆಯನ್ನು ಸಲ್ಲಿಸುತ್ತಾರೆ.
ದೇಶದ ವಿವಿಧ ಕಡೆ ವಿವಿಧ ಹೆಸರಿನಿಂದ ಆಚರಿಸಲಾಗುವುದು
* ಕರ್ನಾಟಕದಲ್ಲಿ ಮೇಷ ಸಂಕ್ರಾಂತಿಯೆಂದು ಆಚರಿಸಲಾಗುವುದು
* ತಮಿಳುನಾಡಿನಲ್ಲಿ ಪುತ್ತಾಂಡ್ ಅಂದರೆ ಹೊಸ ವರ್ಷವೆಂದು ಆಚರಿಸಲಾಗುವುದು.
* ಕೇರಳದಲ್ಲಿ ಈ ದಿನ ಶ್ರೀ ವಿಷ್ಣುವನ್ನು ಆರಾಧಿಸಲಾಗುವುದು.
* ಒಡಿಸ್ಸಾದಲ್ಲಿ ಪನ ಸಂಕ್ರಾಂತಿ ಎಂದು ಆಚರಿಸಲಾಗುವುದು.
* ಪಶ್ಚಿಮ ಬಂಗಾಳದಲ್ಲಿ ನಬ ಬರ್ಷ ಎಂದರೆ ಹೊಸ ವರ್ಷ ಎಂದು ಆಚರಿಸಲಾಗುವುದು.
* ಅಸ್ಸಾಂ ಹಾಗೂ ಪಂಜಾಬ್ನಲ್ಲಿ ಬಿಹು ಎಂದು ಆಚರಿಸಲಾಗುವುದು.
ಈ ದಿನ ಏನು ಮಾಡಬೇಕು?
* ಬೆಳಗ್ಗೆ ಬೇಗನೆ ಎದ್ದು ಪುಣ್ಯ ನದಿಯಲ್ಲಿ ಸ್ನಾನ ಮಾಡಬೇಕು.
* ನದಿಗೆ ಹೋಗಿ ಸ್ನಾನ ಮಾಡಲು ಸಾಧ್ಯವಾಗದವರು ತಮ್ಮ ಸ್ನಾನದ ನೀರಿಗೆ ಸ್ವಲ್ಪ ಗಂಗಾಜಲ ಹಾಕಿ ಸ್ನಾನ ಮಾಡಬೇಕು.
* ನಂತರ ಸೂರ್ಯನಿಗೆ ಆರ್ಘ್ಯ ಸಲ್ಲಿಸಿ, ಕುಟುಂಬದ ಒಳಿತಿಗಾಗಿ ಪ್ರಾರ್ಥಿಸಿ.
* ನಂತರ ದೇವರಿಗೆ ದೀಪ ಹಚ್ಚಿ ಶಿವ, ಶ್ರೀ ವಿಷ್ಣುವಿಗೆ ಪೂಜೆ ಸಲ್ಲಿಸಲಾಗುವುದು.
ಈ ದಿನ ಕಷ್ಟಗಳ ನಿವಾರಣೆಗೆ ಈ ಪರಿಹಾರ ಮಾಡಿ
* ಸೂರ್ಯನಿಗೆ ಆರ್ಘ್ಯ ಸಲ್ಲಿಸಿ, ಸೂರ್ಯನ ಮಂತ್ರಗಳನ್ನು ಪಠಿಸಿ
* ಬ್ರಾಹ್ಮಣರಿಗೆ ವಸ್ತ್ರಗಳನ್ನು ನೀಡಿ
* ಅಗ್ಯತವಿರುವವರಿಗೆ ಆಹಾರ, ವಸ್ತ್ರಗಳನ್ನು ದಾನ ಮಾಡಿ.
* ವೃದ್ಧಾಶ್ರಮಕ್ಕೆ ಹೋಗಿ ಆಹಾರ ದಾನ ಮಾಡಿ.
* ಪಿತೃದೋಷವಿರುವವರು ಪಿತೃಪೂಜೆ ಮಾಡಿಸಿ.
ಆದಿತ್ಯ ಹೃದಯಂ ಮಂತ್ರ:
।। ಆದಿತ್ಯಹೃದಯಂ ಪುಣ್ಯಂ ಸರ್ವಶತ್ರುವಿನಾಶನಮ್
ಜಯಾವಹಂ ಜಪಂ ನಿತ್ಯಮಕ್ಷಯಂ ಪರಮಂ ಶಿವಮ್ ।।



Click it and Unblock the Notifications
