Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಧ್ಯಪ್ರಾಚ್ಯ ಸಂಘರ್ಷ: ಭಾರತದಲ್ಲಿ ಏರಿಕೆಯಾಗಲಿದೆ ಈ ವಸ್ತುಗಳ ಬೆಲೆ!
ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ಯುದ್ಧ ಐದನೇ ದಿನಕ್ಕೆ ಕಾಲಿಟ್ಟಿದೆ. ಹಾಗೆ ಈ ದಾಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹಾಗೆ ರಾಜತಾಂತ್ರಿಕವಾಗಿ ಹಲವು ರೀತಿಯ ಸಮಸ್ಯೆಗಳ ನಡುವೆ ಒಂದಿಷ್ಟು ಬದಲಾವಣೆಗಳಿಗೆ ಈಗ ಇಡೀ ಜಗತ್ತು ಸಿದ್ದವಾಗುತ್ತಿದೆ. ಹಾಗೆ ಈ ಯುದ್ದದ ಪರಿಣಾಣವು ಮಧ್ಯಪ್ರಾಚ್ಯ ದೇಶಗಳಿಗೆ ಮಾತ್ರವಲ್ಲದೆ ವಿಶ್ವದ ಹಲವು ದೇಶಗಳ ಆರ್ಥಿಕತೆಯ ಮೇಲೂ ತನ್ನ ಪರಿಣಾಮ ಉಂಟು ಮಾಡುವುದು ನೋಡಬಹುದು.
ಭಾರತಕ್ಕೂ ಕೂಡ ಈ ಯುದ್ಧದ ಬಿಸಿ ತಟ್ಟಲಿದೆ. ಮಧ್ಯಪ್ರಾಚ್ಯ ದೇಶಗಳಿಂದ ಭಾರತ ಹಲವು ವಸ್ತುಗಳ ಆಮದು ಮಾಡಿಕೊಳ್ಳುತ್ತದೆ. ಅದರಲ್ಲೂ ಮುಖ್ಯವಾಗಿ ಕಚ್ಚಾತೈಲಕ್ಕೆ ಹಾಗೆ ಅನಿಲ ಸಂಬಂಧಿತ ವಿಚಾರದಲ್ಲಿ ಭಾರತಕ್ಕೆ ದೊಡ್ಡ ಹೊಡೆತ ಬೀಳುವ ಸಾಧ್ಯತೆ ಇದೆ. ಹಾಗಾದ್ರೆ ಈ ಮಧ್ಯಪ್ರಾಚ್ಯದಲ್ಲಿನ ಘರ್ಷಣೆಯ ಕಾರಣದಿಂದಾಗಿ ಭಾರತದಲ್ಲಿ ಯಾವೆಲ್ಲಾ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಲಿದೆ ಎಂಬುದನ್ನು ನಾವಿಲ್ಲಿ ತಿಳಿದುಕೊಳ್ಳೋಣ.

ಕಚ್ಚಾ ತೈಲ ಮತ್ತು ತೈಲ ಉತ್ಪನ್ನಗಳು
ಮಧ್ಯಪ್ರಾಚ್ಯ ದೇಶಗಳಿಂದ ಭಾರತ ತೈಲ ಆಮದು ಮಾಡಿಕೊಳ್ಳುತ್ತದೆ. ಈ ಕಚ್ಚಾತೈಲ ದರದಲ್ಲಿ ಏರಿಕೆಯಾಗುವುದು ಹಲವು ಸಂಬಂಧಿತ ದರ ಏರಿಕೆಗೂ ಕಾರಣವಾಗುತ್ತದೆ. ಈಗಾಗಲೇ ಭಾರತದಲ್ಲಿ ತೈಲ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ. ಹೀಗಾಗಿ ಪೆಟ್ರೋಲ್ ಡೀಸೆಲ್ ಸೇರಿದಂತೆ ಅಡುಗೆ ಅನಿಲ ದರ ಕೂಡ ಏರಿಕೆಯಾಗುವ ಸಾಧ್ಯತೆ ಇರಲಿದೆ.
ದ್ವಿದಳ ಧಾನ್ಯಗಳು
ಭಾರತದಲ್ಲಿ ದ್ವಿದಳ ಧಾನ್ಯಗಳ ದರ ಏರಿಕೆಯಾಗುವುದು ನೋಡಬಹುದು. ಇದೇ ರೀತಿಯ ಸಂಘರ್ಷ ಇನ್ನೊಂದು ವಾರ ಮುಂದುವರೆದರೆ ಭಾರತದಲ್ಲಿ ಎಲ್ಲಾ ದ್ವಿದಳ ಧಾನ್ಯದ ದರ ಏರಿಕೆಯಾಗಲಿದೆ ಎಂದು ಅಖಿಲ ಭಾರತ ದಾಲ್ ಮಿಲ್ ಅಸೋಸಿಯೇಷನ್ನ ಅಧ್ಯಕ್ಷ ಸುರೇಶ್ ಅಗರ್ವಾಲ್ ಹೇಳಿದ್ದಾರೆ. ಭಾರತವು ತೊಗರಿ, ಉದ್ದು ಸೇರಿದಂತೆ ಹಲವು ದ್ವಿದಳ ಧಾನ್ಯಗಳನ್ನು ಆಮದು ಮಾಡಿಕೊಳ್ಳುತ್ತದೆ. ಬರೋಬ್ಬರಿ 5ರಿಂದ 6 ಮಿಲಿಯನ್ ಟನ್ ಧಾನ್ಯ ಆಮದು ಮಾಡಿಕೊಳ್ಳಲಾಗುತ್ತದೆ. ಇದು ಚಿಲ್ಲರೆ ಮಾರುಕಟ್ಟೆಯ ಮೇಲೆ ಪ್ರಭಾವ ಉಂಟು ಮಾಡುವುದರಿಂದ ದರ ಏರಿಕೆಯನ್ನು ನೋಡಬಹುದು.
ರಸಗೊಬ್ಬರ
ಹಾರ್ಮುಜ್ ಜಲಸಂಧಿಯ ಮೂಲಕ ರಸಗೊಬ್ಬರ ಪೂರೈಕೆಯಲ್ಲಿ ಅಡಚಣೆ ಉಂಟಾಗಬಹುದು, ಇದು ಬೆಲೆಗಳ ಹೆಚ್ಚಳಕ್ಕೆ ಕಾರಣವಾಗಲಿದೆ. ಜೂನ್ನಲ್ಲಿ ಪ್ರಾರಂಭವಾಗುವ ಭಾರತದ ಖಾರಿಫ್ ಋತುವಿಗೆ ಇರಾನ್ ಯೂರಿಯಾ ಮತ್ತು ಅಮೋನಿಯಾದ ಪ್ರಮುಖ ಉತ್ಪಾದಕ ರಾಷ್ಟ್ರವಾಗಿದೆ. ಹೀಗಾಗಿ ಮುಂದೆ ಈ ರಸಗೊಬ್ಬರ ದರ ಕೂಡ ಏರಿಕೆಯಾಗಬಹುದು. ಇದರಿಂದ ಭಾರತದಲ್ಲಿ ಬೆಳೆಗಳ ಮೇಲೆ ಪ್ರಭಾವ ಉಂಟಾಗುವುದಲ್ಲದೆ ರೈತರಿಗೆ ಸಮಸ್ಯೆ ಎದುರಾಗಬಹುದು ಎಂದು ಅಂದಾಜಿಸಲಾಗಿದೆ.
ಯಾವ ವಸ್ತುಗಳ ದರ ಇಳಿಕೆ
ಮಧ್ಯಪ್ರಾಚ್ಯದಲ್ಲಿನ ಯುದ್ಧದ ಕಾರಣದಿಂದಾಗಿ ಹಲವು ವಸ್ತುಗಳ ದರ ಏರಿಕೆಯಾದರೆ ಕೆಲ ವಸ್ತುಗಳ ದರದಲ್ಲಿ ಇಳಿಕೆಯನ್ನು ಸಹ ಗಮನಿಸಬಹುದು. ರಫ್ತು ಕಡಿಮೆಯಾಗುವ ಕಾರಣದಿಂದ ಉತ್ಪನ್ನಗಳ ಸಂಗ್ರಹ ಹೆಚ್ಚಳವಾಗುವ ಕಾರಣದಿಂದ ದರ ಇಳಿಕೆ ನೋಡಬಹುದು. ಅದ್ರಲ್ಲೂ ಮುಖ್ಯವಾಗಿ ಈರುಳ್ಳಿ ದರ ಈಗಾಗಲೇ ಇಳಿಕೆಯಾಗುತ್ತಿದೆ. ಭಾರತವು ಈರುಳ್ಳಿ ರಫ್ತು ಹೆಚ್ಚಾಗಿ ಮಾಡುತ್ತದೆ. ಆದ್ರೆ ಬಂದರು ಕಾರ್ಯಾಚರಣೆ ಬಂದ್ ಆಗಿದ್ದು, ರಫ್ತು ಮಾರುಕಟ್ಟೆ ಸ್ಥಗಿತಗೊಂಡಿದೆ. ಹೀಗಾಗಿ ಭಾರತದಲ್ಲಿ ಈರುಳ್ಳಿ ಬೆಲೆ ಈಗ ನೆಲಕಚ್ಚಿದೆ. ಇದೇ ರೀತಿಯ ಪರಿಸ್ಥಿತಿ ಮುಂದುವರೆದರೆ ಈರುಳ್ಳಿ ದರ ಪಾತಾಳ ಕಾಣಲಿದೆ. ಹಾಗೆ ಭಾರತದಿಂದ ಮಧ್ಯಪ್ರಾಚ್ಯಕ್ಕೆ ರಫ್ತಾಗುತ್ತಿದ್ದ ಮಸಾಲೆ ಪದಾರ್ಥಗಳಿ, ಜವಳಿ ಉತ್ಪನ್ನಗಳು ದೇಶೀಯ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಲಿದೆ.



Click it and Unblock the Notifications


