Latest Updates
-
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ -
ಮಧುರೈಗೆ ಹೋಗ್ತಿದ್ದೀರಾ? ಈ ಪವಿತ್ರ ದೇಗುಲಗಳಿಗೂ ಭೇಟಿ ನೀಡೋದನ್ನ ಮರೀಬೇಡಿ.. ಪಟ್ಟಿ ಇಲ್ಲಿದೆ -
ಈ 3 ರಾಶಿಗಳಿಗೆ ಜೀವನದಲ್ಲಿ ಏರಿಳಿತಗಳು! ಹಳೆಯ ನೆನಪುಗಳು ಕಾಡುತ್ತೆ
ಮಿಥುನ ಸಂಕ್ರಾಂತಿ 2023 : ಶುಭ ಮುಹೂರ್ತ, ಪೂಜಾ ವಿಧಾನ ಮತ್ತು ಮಹತ್ವವೇನು?
ಸಂಕ್ರಾತಿಯು ಸೂರ್ಯ ದೇವನಿಗೆ ಸಂಬಂಧಿಸಿದ್ದಾಗಿದೆ. ವರ್ಷದಲ್ಲಿ ಒಟ್ಟು ಹನ್ನೆರಡು ಸಂಕ್ರಾಂತಿಗಳು ಸಂಭವಿಸುತ್ತದೆ. ಪ್ರತಿ ತಿಂಗಳ ಸಂಕ್ರಾತಿಗೂ ಅದರದ್ದೇ ಆದ ಮಹತ್ವವಿದೆ. ಈ ತಿಂಗಳಿನಲ್ಲಿ ಮಿಥುನ ಸಂಕ್ರಾತಿ ಸಂಭವಿಸುತ್ತಿದೆ. ಸೂರ್ಯದೇವನು ವೃಷಭ ರಾಶಿಯಿಂದ ಮಿಥುನ ರಾಶಿಗೆ ಬರುವಾಗ ಈ ಮಿಥುನ ಸಂಕ್ರಾತಿ ಸಂಭವಿಸುತ್ತದೆ.
ಈ ಆಷಾಢ ತಿಂಗಳ ಜೂನ್ 15, 2023ರಂದು ಮಿಥುನ ಸಂಕ್ರಾಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಅಷ್ಟಕ್ಕು ಮಿಥುನ ಸಂಕ್ರಾಂತಿ ಯಾವಾಗ ಸಂಭವಿಸುತ್ತದೆ? ಅದರ ಮಹತ್ವ ಎಂಥಹದ್ದು ಅನ್ನೋದನ್ನು ತಿಳಿಯೋಣ.
ಮಿಥುನ ಸಂಕ್ರಾಂತಿ 2023 : ದಿನಾಂಕ ಮತ್ತು ಸಮಯ
ಪುಣ್ಯ ಕಾಲ - ಜೂನ್ 15, 2023, ಸಂಜೆ 6:29 ರಿಂದ ರಾತ್ರಿ 7:20 ವರೆಗೆ
ಮಹಾ ಪುಣ್ಯ ಕಾಲ - ಜೂನ್ 15, 2023, ಸಂಜೆ 6:29 ರಿಂದ ರಾತ್ರಿ 7:20 ವರೆಗೆ
ಮಿಥುನ ಸಂಕ್ರಾಂತಿ 2023 ರ ಮಹತ್ವ
ಜೂನ್ 15, 2023ರಂದು ಮಿಥುನ ಸಂಕ್ರಾತಿಯನ್ನು ಆಚರಣೆ ಮಾಡಲಾಗುತ್ತಿದೆ. ಸೂರ್ಯನು ವೃಷಭ ರಾಶಿಯಿಂದ ಮಿಥುನ ರಾಶಿಗೆ ಪ್ರವೇಶ ಮಾಡೋದನ್ನು ಮಿಥುನ ಸಂಕ್ರಾಂತಿಯನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ದಿನವನ್ನು ದಕ್ಷಿಣ ಭಾರತದಲ್ಲಿ ಮಿಥುನ ಸಂಕ್ರಮಣಂ ಎಂದೂ ಕರೆಯುತ್ತಾರೆ. ಮತ್ತು ಹಿಂದೂ ಸಂಪ್ರದಾಯಗಳು ಮತ್ತು ಪದ್ಧತಿಗಳ ಪ್ರಕಾರ ಇದು ಅತ್ಯಂತ ಮಂಗಳಕರ ದಿನವಾಗಿದೆ. ಈ ದಿನದಂದು ಒಡಿಶಾದಲ್ಲಿ ಕೃಷಿ ಹಬ್ಬ ಆಚರಿಸುತ್ತಾರೆ. ಈ ದಿನ ಜನ ಭೂಮಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ.
ಮಿಥುನ ಸಂಕ್ರಾತಿ ತುಂಬಾನೇ ವಿಶೇಷವಾದ ದಿನ. ಈ ದಿನ ದಾನ ಕಾರ್ಯಗಳಿಗೆ ತುಂಬಾನೇ ಪವಿತ್ರವಾದ ದಿನ. ಈ ದಿನ ಜನರು ಭಗವಾನ್ ಸೂರ್ಯನಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ. ಮೊದಲು ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡುತ್ತಾರೆ. ನಂತರ ಹರಿದ್ವಾರ, ಋಷಿಕೇಶ ಮತ್ತು ಇತರ ಪ್ರಮುಖ ಸ್ಥಳಗಳಿಗೆ ಭೇಟಿ ನೀಡುತ್ತಾರೆ. ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಿದವರು ಹಿಂದಿನ ಪಾಪಗಳಿಂದ ಮುಕ್ತಿ ಹೊಂದುತ್ತಾರೆ ಎಂಬ ನಂಬಿಕೆ ಇದೆ.
ಈ ಶುಭದಿನದಂದು ಆದಷ್ಟು ಒಳ್ಳೆಯ ಕಾರ್ಯಗಳನ್ನು ಮಾಡಿ. ಇದರಿಂದ ಪಾಪ ಪರಿಹಾರವಾಗುತ್ತೆ ಅನ್ನೋ ನಂಬಿಕೆಯಿದೆ. ಈ ದಿನ ಬಡ-ಬಗ್ಗರಿಗೆ ಬಟ್ಟೆ ಮತ್ತು ಆಹಾರಗಳನ್ನು ದಾನ ಮಾಡೋದ್ರಿಂದ ನಿಮ್ಮ ಬಾಳಲ್ಲಿ ಅದೃಷ್ಟ, ಸಮೃದ್ಧಿ ಮತ್ತು ಸಂತೋಷ ಹೆಚ್ಚಾಗುತ್ತಂತೆ. ಇನ್ನೂ ಈ ದಿನ ಧರ್ಮ ಕಾರ್ಯಗಳನ್ನು ಮಾಡೋದ್ರಿಂದ ನಿಮಗೆ ಒಳಿತಾಗಲಿದೆ.

ಮಿಥುನ ಸಂಕ್ರಾಂತಿಯಂದು ಪೂಜಾ ವಿಧಿ ಹೇಗಿರಬೇಕು?
- ಬೆಳಿಗ್ಗೆ ಸೂರ್ಯೋದಯಕ್ಕೆ ಮುಂಚೆ ಎದ್ದು ಸ್ನಾನ ಮಾಡಿ. ನಂತರ ಧ್ಯಾನ ಮಾಡುತ್ತಾ ತಾಮ್ರದ ಪಾತ್ರೆಯಲ್ಲಿ ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸಿ.
- ಕೆಂಪು ಹೂವುಗಳು, ಶ್ರೀಗಂಧ, ಧೂಪ, ದೀಪವನ್ನು ಬೆಳಗಿದ ನಂತರ ಸೂರ್ಯ ದೇವನನ್ನು ನೆನೆದು ನಿಂತಲ್ಲೇ 7 ಬಾರಿ ಪ್ರದಕ್ಷಿಣೆ ಹಾಕಿ.
- ಸೂರ್ಯದೇವನನ್ನು ಪೂಜಿಸಿದ ನಂತರ ಉಳಿದ ನೀರನ್ನು ನೆಲದ ಮೇಲೆ ಬೀಳಲು ಬಿಡಬೇಡಿ. ಆದರೆ ಅದನ್ನು ಸಸ್ಯಗಳಿಗೆ ಹಾಕಿ.
- ಈ ದಿನ ಸೂರ್ಯ ದೇವನಿಗೆ ಶ್ರೀಗಂಧ, ಸಿಂಧೂರ, ಹಣ್ಣುಗಳು ಮತ್ತು ಅರಿಶಿನವನ್ನು ಅರ್ಪಿಸಲಾಗುತ್ತದೆ.
ಮಿಥುನ್ ಸಂಕ್ರಾಂತಿಯ ಫಲ ಹೇಗಿರುತ್ತದೆ?
- ಮಿಥುನ ಸಂಕ್ರಾಂತಿಯು ಪ್ರಾಣಿಗಳಿಗೆ ಒಳ್ಳೆಯದು.
- ವಸ್ತುಗಳ ಬೆಲೆ ಸಾಮಾನ್ಯವಾಗಿರುತ್ತದೆ.
- ಸಂಪತ್ತು ಸಮೃದ್ಧಿಯನ್ನು ತರುತ್ತದೆ. ಮತ್ತು ಜನರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯುತ್ತಾರೆ.
- ಮಿಥುನ ಸಂಕ್ರಾಂತಿಯ ಪ್ರಭಾವದಿಂದ ಧಾನ್ಯ ಸಂಗ್ರಹಣೆ ಹೆಚ್ಚುತ್ತದೆ. ಮತ್ತು ರಾಷ್ಟ್ರಗಳ ನಡುವಿನ ಸಂಬಂಧಗಳು ಉತ್ತಮವಾಗುತ್ತದೆ.
ಮಿಥುನ ಸಂಕ್ರಾತಿಯನ್ನು ಭಕ್ತಿಯಿಂದ ಆಚರಣೆ ಮಾಡಿದರೆ ಎಲ್ಲಾ ರೀತಿ ಕಷ್ಟ-ಕಾರ್ಪಣ್ಯಗಳಿಗೆ ಪರಿಹಾರ ಕಂಡುಕೊಳ್ಳಬಹುದು.



Click it and Unblock the Notifications











