Latest Updates
-
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು!
24 ವರ್ಷಗಳ ಬಳಿಕ ಶ್ರಾವಣ ಸೋಮವಾರದಂದು ಬಂದಿದೆ ನಾಗರಪಂಚಮಿ: ಪ್ರದೋಷ ಕಾಲದಲ್ಲಿ ಪೂಜಾ ವಿಧಾನ
ಈ ವರ್ಷ ಶ್ರಾವಣ ಮಾಸ ಶಿವ ಭಕ್ತಿರಿಗೆ ತುಂಬಾನೇ ವಿಶೇಷವಾಗಿದೆ, ಅಧಿಕ ಮಾಸ ಬಂದಿದ್ದ ಕಾರಣ 2 ತಿಂಗಳು ಶ್ರಾವಣ ಮಾಸ ಬಂದಿದೆ. ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿ ಕೂಡ ಆಗಸ್ಟ್ 21ಕ್ಕೆ ನಾಗರ ಪಂಚಮಿ ಬಂದಿದೆ. ಈ ಬಾರಿ ನಾಗರ ಪಂಚಮಿ ಹಬ್ಬದ ವಿಶೇಷವೆಂದರೆ ಶ್ರಾವಣ ಸೋಮವಾರದಂದೇ ಬಂದಿದೆ. ಅದರಲ್ಲೂ ಸುಮಾರು 24 ವರ್ಷಗಳ ಬಳಿಕ ಶ್ರಾವಣ ಸೋಮವಾರದಂದು ನಾಗರ ಪಂಚಮಿ ಬಂದಿದೆ. ಆದ್ದರಿಂದ ಈ ಪ್ರದೋಷ ಕಾಲದಲ್ಲಿ ಶಿವನಿಗೆ ಮಾಡುವ ಪೂಜೆ ಮತ್ತಷ್ಟು ವಿಶೇಷವಾಗಿದೆ.

ನಾಗರ ಪಂಚಮಿಯಂದು ನಾಗದೇವರನ್ನು ಪೂಜಿಸಲಾಗುವುದು. ನಾಗನನ್ನೇ ಶಿವ ಮಾಲೆಯಾಗಿ ಧರಿಸಿದ್ದಾನೆ. ನಾಗನನ್ನು ಪೂಜಿಸುವುದರಿಂದ ಶಿವನ ಕೃಪೆಯೂ ದೊರೆಯಲಿದೆ, ಈ ದಿನ 7ನೇ ಶ್ರಾವಣ ಸೋಮವಾರ ಆಚರಿಸಲಾಗುವುದು. ಈ ದಿನ ನೀವು ಶ್ರಾವಣ ಸೋಮವಾರ ವ್ರತ ಪಾಲಿಸುವುದರಿಂದ ನಿಮಗೆ ಸಿಗುವ ಪೂಜೆಯ ಫಲ ದ್ವಿಗುಣವಾಗಲಿದೆ. ಬೆಳಗ್ಗೆ ನಾಗಮೂರ್ತಿಗೆ ಪೂಜೆಯನ್ನು ಮಾಡಿ ಸಂಜೆ ಹೊತ್ತಿನಲ್ಲಿ ಶಿವನ ಆರಾಧನೆ ಹೇಗೆ ಮಾಡಬೇಕು ಎಂದು ನೋಡೋಣ ಬನ್ನಿ:
24 ವರ್ಷಗಳ ನಂತರ ಶ್ರಾವಣ ಸೋಮವಾರದಂದು ಬಂದಿದೆ ನಾಗರ ಪಂಚಮಿ
ಆಗಸ್ಟ್ 21ಕ್ಕೆ 7ನೇ ಶ್ರಾವಣ ಸೋಮವಾರ, ಇದೇ ದಿನ ನಾಗರ ಪಂಚಮಿ, ಈ ದಿನ ಶಿವಯೋಗವಿದೆ. ಶಿವ ಯೋಗವನ್ನು ಅತ್ಯಂತ ಶುಭ ಯೋಗ ಎಂದು ಪರಿಗಣಿಸಲಾಗಿದೆ. ಈ ದಿನ ಚಿತ್ರ ನಕ್ಷತ್ರವೂ ಇರುತ್ತದೆ. 24 ವರ್ಷಗಳ ಬಳಿಕ ಇಂಥದ್ದೊಂದು ಶುಭ ದಿನ ಬಂದಿದೆ.
ಈ ದಿನ ಶಿವ ಪೂಜೆಗೆ ಶುಭ ಮುಹೂರ್ತ
ಪ್ರದೋಷ ಕಾಲ ಮುಹೂರ್ತ: 21 ಆಗಸ್ಟ್ 2023 ಸಂಜೆ 05:27 ರಿಂದ 08:27 ರವರೆಗೆ
ಶ್ರಾವಣ ಮಾಸದ ಸೋಮವಾರದಂದು ಪ್ರದೋಷ ಪೂಜೆ
* ಶ್ರಾವಣ ಸೋಮವಾರ ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಶುಭ್ರ ಬಟ್ಟೆ ಧರಿಸಬೇಕು.
* ನಂತರ ದೀಪವನ್ನು ಹಚ್ಚಿ ಪೂಜೆ ಮಾಡಿ ನಂಗರ ನಾಗಮೂರ್ತಿಗಳಿಗೆ ಪೂಜೆಯನ್ನು ಸಲ್ಲಿಸಬೇಕು.
* ಈ ದಿನ ಉಪವಾಸವಿದ್ದರೆ ತುಂಬಾ ಒಳ್ಳೆಯದು.
* ನಂತರ ಸಂಜೆ, ಪ್ರದೋಷ ಕಾಲದ ಪೂಜೆಯ ಸಮಯದಲ್ಲಿ, ಹಾಲು, ಮೊಸರು, ತುಪ್ಪ, ಜೇನುತುಪ್ಪ ಮತ್ತು ಗಂಗಾಜಲವನ್ನು ಬೆರೆಸಿ ಪಂಚಾಮೃತದಿಂದ ಶಿವಲಿಂಗಕ್ಕೆ ಅಭಿಷೇಕ ಮಾಡಬೇಕು.
* ಶಿವನಿಗೆ ಬಿಲ್ವೆಪತ್ರೆಯನ್ನು ಅರ್ಪಿಸಿ.
* ಶಿವನಿಗೆ ಆರತಿ ಮಾಡಿ ಶಿವನ ಮಂತ್ರಗಳನ್ನು ಪಠಿಸಿ.



Click it and Unblock the Notifications