Latest Updates
-
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್!
24 ವರ್ಷಗಳ ಬಳಿಕ ಶ್ರಾವಣ ಸೋಮವಾರದಂದು ಬಂದಿದೆ ನಾಗರಪಂಚಮಿ: ಪ್ರದೋಷ ಕಾಲದಲ್ಲಿ ಪೂಜಾ ವಿಧಾನ
ಈ ವರ್ಷ ಶ್ರಾವಣ ಮಾಸ ಶಿವ ಭಕ್ತಿರಿಗೆ ತುಂಬಾನೇ ವಿಶೇಷವಾಗಿದೆ, ಅಧಿಕ ಮಾಸ ಬಂದಿದ್ದ ಕಾರಣ 2 ತಿಂಗಳು ಶ್ರಾವಣ ಮಾಸ ಬಂದಿದೆ. ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿ ಕೂಡ ಆಗಸ್ಟ್ 21ಕ್ಕೆ ನಾಗರ ಪಂಚಮಿ ಬಂದಿದೆ. ಈ ಬಾರಿ ನಾಗರ ಪಂಚಮಿ ಹಬ್ಬದ ವಿಶೇಷವೆಂದರೆ ಶ್ರಾವಣ ಸೋಮವಾರದಂದೇ ಬಂದಿದೆ. ಅದರಲ್ಲೂ ಸುಮಾರು 24 ವರ್ಷಗಳ ಬಳಿಕ ಶ್ರಾವಣ ಸೋಮವಾರದಂದು ನಾಗರ ಪಂಚಮಿ ಬಂದಿದೆ. ಆದ್ದರಿಂದ ಈ ಪ್ರದೋಷ ಕಾಲದಲ್ಲಿ ಶಿವನಿಗೆ ಮಾಡುವ ಪೂಜೆ ಮತ್ತಷ್ಟು ವಿಶೇಷವಾಗಿದೆ.

ನಾಗರ ಪಂಚಮಿಯಂದು ನಾಗದೇವರನ್ನು ಪೂಜಿಸಲಾಗುವುದು. ನಾಗನನ್ನೇ ಶಿವ ಮಾಲೆಯಾಗಿ ಧರಿಸಿದ್ದಾನೆ. ನಾಗನನ್ನು ಪೂಜಿಸುವುದರಿಂದ ಶಿವನ ಕೃಪೆಯೂ ದೊರೆಯಲಿದೆ, ಈ ದಿನ 7ನೇ ಶ್ರಾವಣ ಸೋಮವಾರ ಆಚರಿಸಲಾಗುವುದು. ಈ ದಿನ ನೀವು ಶ್ರಾವಣ ಸೋಮವಾರ ವ್ರತ ಪಾಲಿಸುವುದರಿಂದ ನಿಮಗೆ ಸಿಗುವ ಪೂಜೆಯ ಫಲ ದ್ವಿಗುಣವಾಗಲಿದೆ. ಬೆಳಗ್ಗೆ ನಾಗಮೂರ್ತಿಗೆ ಪೂಜೆಯನ್ನು ಮಾಡಿ ಸಂಜೆ ಹೊತ್ತಿನಲ್ಲಿ ಶಿವನ ಆರಾಧನೆ ಹೇಗೆ ಮಾಡಬೇಕು ಎಂದು ನೋಡೋಣ ಬನ್ನಿ:
24 ವರ್ಷಗಳ ನಂತರ ಶ್ರಾವಣ ಸೋಮವಾರದಂದು ಬಂದಿದೆ ನಾಗರ ಪಂಚಮಿ
ಆಗಸ್ಟ್ 21ಕ್ಕೆ 7ನೇ ಶ್ರಾವಣ ಸೋಮವಾರ, ಇದೇ ದಿನ ನಾಗರ ಪಂಚಮಿ, ಈ ದಿನ ಶಿವಯೋಗವಿದೆ. ಶಿವ ಯೋಗವನ್ನು ಅತ್ಯಂತ ಶುಭ ಯೋಗ ಎಂದು ಪರಿಗಣಿಸಲಾಗಿದೆ. ಈ ದಿನ ಚಿತ್ರ ನಕ್ಷತ್ರವೂ ಇರುತ್ತದೆ. 24 ವರ್ಷಗಳ ಬಳಿಕ ಇಂಥದ್ದೊಂದು ಶುಭ ದಿನ ಬಂದಿದೆ.
ಈ ದಿನ ಶಿವ ಪೂಜೆಗೆ ಶುಭ ಮುಹೂರ್ತ
ಪ್ರದೋಷ ಕಾಲ ಮುಹೂರ್ತ: 21 ಆಗಸ್ಟ್ 2023 ಸಂಜೆ 05:27 ರಿಂದ 08:27 ರವರೆಗೆ
ಶ್ರಾವಣ ಮಾಸದ ಸೋಮವಾರದಂದು ಪ್ರದೋಷ ಪೂಜೆ
* ಶ್ರಾವಣ ಸೋಮವಾರ ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಶುಭ್ರ ಬಟ್ಟೆ ಧರಿಸಬೇಕು.
* ನಂತರ ದೀಪವನ್ನು ಹಚ್ಚಿ ಪೂಜೆ ಮಾಡಿ ನಂಗರ ನಾಗಮೂರ್ತಿಗಳಿಗೆ ಪೂಜೆಯನ್ನು ಸಲ್ಲಿಸಬೇಕು.
* ಈ ದಿನ ಉಪವಾಸವಿದ್ದರೆ ತುಂಬಾ ಒಳ್ಳೆಯದು.
* ನಂತರ ಸಂಜೆ, ಪ್ರದೋಷ ಕಾಲದ ಪೂಜೆಯ ಸಮಯದಲ್ಲಿ, ಹಾಲು, ಮೊಸರು, ತುಪ್ಪ, ಜೇನುತುಪ್ಪ ಮತ್ತು ಗಂಗಾಜಲವನ್ನು ಬೆರೆಸಿ ಪಂಚಾಮೃತದಿಂದ ಶಿವಲಿಂಗಕ್ಕೆ ಅಭಿಷೇಕ ಮಾಡಬೇಕು.
* ಶಿವನಿಗೆ ಬಿಲ್ವೆಪತ್ರೆಯನ್ನು ಅರ್ಪಿಸಿ.
* ಶಿವನಿಗೆ ಆರತಿ ಮಾಡಿ ಶಿವನ ಮಂತ್ರಗಳನ್ನು ಪಠಿಸಿ.



Click it and Unblock the Notifications