Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
24 ವರ್ಷಗಳ ಬಳಿಕ ಶ್ರಾವಣ ಸೋಮವಾರದಂದು ಬಂದಿದೆ ನಾಗರಪಂಚಮಿ: ಪ್ರದೋಷ ಕಾಲದಲ್ಲಿ ಪೂಜಾ ವಿಧಾನ
ಈ ವರ್ಷ ಶ್ರಾವಣ ಮಾಸ ಶಿವ ಭಕ್ತಿರಿಗೆ ತುಂಬಾನೇ ವಿಶೇಷವಾಗಿದೆ, ಅಧಿಕ ಮಾಸ ಬಂದಿದ್ದ ಕಾರಣ 2 ತಿಂಗಳು ಶ್ರಾವಣ ಮಾಸ ಬಂದಿದೆ. ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿ ಕೂಡ ಆಗಸ್ಟ್ 21ಕ್ಕೆ ನಾಗರ ಪಂಚಮಿ ಬಂದಿದೆ. ಈ ಬಾರಿ ನಾಗರ ಪಂಚಮಿ ಹಬ್ಬದ ವಿಶೇಷವೆಂದರೆ ಶ್ರಾವಣ ಸೋಮವಾರದಂದೇ ಬಂದಿದೆ. ಅದರಲ್ಲೂ ಸುಮಾರು 24 ವರ್ಷಗಳ ಬಳಿಕ ಶ್ರಾವಣ ಸೋಮವಾರದಂದು ನಾಗರ ಪಂಚಮಿ ಬಂದಿದೆ. ಆದ್ದರಿಂದ ಈ ಪ್ರದೋಷ ಕಾಲದಲ್ಲಿ ಶಿವನಿಗೆ ಮಾಡುವ ಪೂಜೆ ಮತ್ತಷ್ಟು ವಿಶೇಷವಾಗಿದೆ.

ನಾಗರ ಪಂಚಮಿಯಂದು ನಾಗದೇವರನ್ನು ಪೂಜಿಸಲಾಗುವುದು. ನಾಗನನ್ನೇ ಶಿವ ಮಾಲೆಯಾಗಿ ಧರಿಸಿದ್ದಾನೆ. ನಾಗನನ್ನು ಪೂಜಿಸುವುದರಿಂದ ಶಿವನ ಕೃಪೆಯೂ ದೊರೆಯಲಿದೆ, ಈ ದಿನ 7ನೇ ಶ್ರಾವಣ ಸೋಮವಾರ ಆಚರಿಸಲಾಗುವುದು. ಈ ದಿನ ನೀವು ಶ್ರಾವಣ ಸೋಮವಾರ ವ್ರತ ಪಾಲಿಸುವುದರಿಂದ ನಿಮಗೆ ಸಿಗುವ ಪೂಜೆಯ ಫಲ ದ್ವಿಗುಣವಾಗಲಿದೆ. ಬೆಳಗ್ಗೆ ನಾಗಮೂರ್ತಿಗೆ ಪೂಜೆಯನ್ನು ಮಾಡಿ ಸಂಜೆ ಹೊತ್ತಿನಲ್ಲಿ ಶಿವನ ಆರಾಧನೆ ಹೇಗೆ ಮಾಡಬೇಕು ಎಂದು ನೋಡೋಣ ಬನ್ನಿ:
24 ವರ್ಷಗಳ ನಂತರ ಶ್ರಾವಣ ಸೋಮವಾರದಂದು ಬಂದಿದೆ ನಾಗರ ಪಂಚಮಿ
ಆಗಸ್ಟ್ 21ಕ್ಕೆ 7ನೇ ಶ್ರಾವಣ ಸೋಮವಾರ, ಇದೇ ದಿನ ನಾಗರ ಪಂಚಮಿ, ಈ ದಿನ ಶಿವಯೋಗವಿದೆ. ಶಿವ ಯೋಗವನ್ನು ಅತ್ಯಂತ ಶುಭ ಯೋಗ ಎಂದು ಪರಿಗಣಿಸಲಾಗಿದೆ. ಈ ದಿನ ಚಿತ್ರ ನಕ್ಷತ್ರವೂ ಇರುತ್ತದೆ. 24 ವರ್ಷಗಳ ಬಳಿಕ ಇಂಥದ್ದೊಂದು ಶುಭ ದಿನ ಬಂದಿದೆ.
ಈ ದಿನ ಶಿವ ಪೂಜೆಗೆ ಶುಭ ಮುಹೂರ್ತ
ಪ್ರದೋಷ ಕಾಲ ಮುಹೂರ್ತ: 21 ಆಗಸ್ಟ್ 2023 ಸಂಜೆ 05:27 ರಿಂದ 08:27 ರವರೆಗೆ
ಶ್ರಾವಣ ಮಾಸದ ಸೋಮವಾರದಂದು ಪ್ರದೋಷ ಪೂಜೆ
* ಶ್ರಾವಣ ಸೋಮವಾರ ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಶುಭ್ರ ಬಟ್ಟೆ ಧರಿಸಬೇಕು.
* ನಂತರ ದೀಪವನ್ನು ಹಚ್ಚಿ ಪೂಜೆ ಮಾಡಿ ನಂಗರ ನಾಗಮೂರ್ತಿಗಳಿಗೆ ಪೂಜೆಯನ್ನು ಸಲ್ಲಿಸಬೇಕು.
* ಈ ದಿನ ಉಪವಾಸವಿದ್ದರೆ ತುಂಬಾ ಒಳ್ಳೆಯದು.
* ನಂತರ ಸಂಜೆ, ಪ್ರದೋಷ ಕಾಲದ ಪೂಜೆಯ ಸಮಯದಲ್ಲಿ, ಹಾಲು, ಮೊಸರು, ತುಪ್ಪ, ಜೇನುತುಪ್ಪ ಮತ್ತು ಗಂಗಾಜಲವನ್ನು ಬೆರೆಸಿ ಪಂಚಾಮೃತದಿಂದ ಶಿವಲಿಂಗಕ್ಕೆ ಅಭಿಷೇಕ ಮಾಡಬೇಕು.
* ಶಿವನಿಗೆ ಬಿಲ್ವೆಪತ್ರೆಯನ್ನು ಅರ್ಪಿಸಿ.
* ಶಿವನಿಗೆ ಆರತಿ ಮಾಡಿ ಶಿವನ ಮಂತ್ರಗಳನ್ನು ಪಠಿಸಿ.



Click it and Unblock the Notifications