Latest Updates
-
ಬಿಸಿಗಾಳಿ ಕಾಟ: ಮದುವೆ ಡೇಟಿಂಗ್ ಪ್ಲಾನ್ ಹಾಳಾಗದಂತೆ ತಡೆಯುವುದು ಹೇಗೆ? -
ಬಾಲ್ಕನಿ ಅಲಂಕಾರ: ಹಬ್ಬದ ಸಂಭ್ರಮಕ್ಕೆ 10 ನಿಮಿಷದ ಮ್ಯಾಜಿಕ್ -
ಬಿಸಿಲಿನ ಬೇಗೆಗೆ ಈ ಪಾನೀಯಗಳೇ ಮದ್ದು, ತಂಪಾಗಿರಿ ಹೀಗೆ! -
ಬೈಸಾಕಿ ಮತ್ತು ವಿಷು ಹಬ್ಬದ ಲುಕ್: ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ -
ತೆಲಂಗಾಣ ಬಿಸಿಲ ಬೇಗೆ: ಫಿಟ್ ಆಗಿರಲು ಈ ತಪ್ಪುಗಳನ್ನು ಮಾಡಬೇಡಿ -
MI vs RCB ಮ್ಯಾಚ್ ನೋಡುವಾಗ ದಂಪತಿಗಳ ಜಗಳ ತಪ್ಪಿಸುವುದು ಹೇಗೆ? -
ವಿಷು, ಬೈಸಾಖಿ ಹಬ್ಬಕ್ಕೆ ನಿಮ್ಮ ಮನೆ ಮಿಂಚಬೇಕೆ? ಈ ಟಿಪ್ಸ್ ಫಾಲೋ ಮಾಡಿ -
ಗರ್ಭಿಣಿಯರ ಆಹಾರ ಕ್ರಮ: ಮಗುವಿನ ಆರೋಗ್ಯಕ್ಕೆ ಈ ಬದಲಾವಣೆ ಕಡ್ಡಾಯ! -
ಬೇಸಿಗೆ ಬಿಸಿಲಿಗೆ ತಂಪಾಗಲು ವೈರಲ್ ಆಗುತ್ತಿರುವ ಫ್ಯಾಷನ್ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ನಿಮ್ಮ ಫಿಟ್ನೆಸ್ ರೂಟೀನ್ ಬದಲಿಸಿ
24 ವರ್ಷಗಳ ಬಳಿಕ ಶ್ರಾವಣ ಸೋಮವಾರದಂದು ಬಂದಿದೆ ನಾಗರಪಂಚಮಿ: ಪ್ರದೋಷ ಕಾಲದಲ್ಲಿ ಪೂಜಾ ವಿಧಾನ
ಈ ವರ್ಷ ಶ್ರಾವಣ ಮಾಸ ಶಿವ ಭಕ್ತಿರಿಗೆ ತುಂಬಾನೇ ವಿಶೇಷವಾಗಿದೆ, ಅಧಿಕ ಮಾಸ ಬಂದಿದ್ದ ಕಾರಣ 2 ತಿಂಗಳು ಶ್ರಾವಣ ಮಾಸ ಬಂದಿದೆ. ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿ ಕೂಡ ಆಗಸ್ಟ್ 21ಕ್ಕೆ ನಾಗರ ಪಂಚಮಿ ಬಂದಿದೆ. ಈ ಬಾರಿ ನಾಗರ ಪಂಚಮಿ ಹಬ್ಬದ ವಿಶೇಷವೆಂದರೆ ಶ್ರಾವಣ ಸೋಮವಾರದಂದೇ ಬಂದಿದೆ. ಅದರಲ್ಲೂ ಸುಮಾರು 24 ವರ್ಷಗಳ ಬಳಿಕ ಶ್ರಾವಣ ಸೋಮವಾರದಂದು ನಾಗರ ಪಂಚಮಿ ಬಂದಿದೆ. ಆದ್ದರಿಂದ ಈ ಪ್ರದೋಷ ಕಾಲದಲ್ಲಿ ಶಿವನಿಗೆ ಮಾಡುವ ಪೂಜೆ ಮತ್ತಷ್ಟು ವಿಶೇಷವಾಗಿದೆ.

ನಾಗರ ಪಂಚಮಿಯಂದು ನಾಗದೇವರನ್ನು ಪೂಜಿಸಲಾಗುವುದು. ನಾಗನನ್ನೇ ಶಿವ ಮಾಲೆಯಾಗಿ ಧರಿಸಿದ್ದಾನೆ. ನಾಗನನ್ನು ಪೂಜಿಸುವುದರಿಂದ ಶಿವನ ಕೃಪೆಯೂ ದೊರೆಯಲಿದೆ, ಈ ದಿನ 7ನೇ ಶ್ರಾವಣ ಸೋಮವಾರ ಆಚರಿಸಲಾಗುವುದು. ಈ ದಿನ ನೀವು ಶ್ರಾವಣ ಸೋಮವಾರ ವ್ರತ ಪಾಲಿಸುವುದರಿಂದ ನಿಮಗೆ ಸಿಗುವ ಪೂಜೆಯ ಫಲ ದ್ವಿಗುಣವಾಗಲಿದೆ. ಬೆಳಗ್ಗೆ ನಾಗಮೂರ್ತಿಗೆ ಪೂಜೆಯನ್ನು ಮಾಡಿ ಸಂಜೆ ಹೊತ್ತಿನಲ್ಲಿ ಶಿವನ ಆರಾಧನೆ ಹೇಗೆ ಮಾಡಬೇಕು ಎಂದು ನೋಡೋಣ ಬನ್ನಿ:
24 ವರ್ಷಗಳ ನಂತರ ಶ್ರಾವಣ ಸೋಮವಾರದಂದು ಬಂದಿದೆ ನಾಗರ ಪಂಚಮಿ
ಆಗಸ್ಟ್ 21ಕ್ಕೆ 7ನೇ ಶ್ರಾವಣ ಸೋಮವಾರ, ಇದೇ ದಿನ ನಾಗರ ಪಂಚಮಿ, ಈ ದಿನ ಶಿವಯೋಗವಿದೆ. ಶಿವ ಯೋಗವನ್ನು ಅತ್ಯಂತ ಶುಭ ಯೋಗ ಎಂದು ಪರಿಗಣಿಸಲಾಗಿದೆ. ಈ ದಿನ ಚಿತ್ರ ನಕ್ಷತ್ರವೂ ಇರುತ್ತದೆ. 24 ವರ್ಷಗಳ ಬಳಿಕ ಇಂಥದ್ದೊಂದು ಶುಭ ದಿನ ಬಂದಿದೆ.
ಈ ದಿನ ಶಿವ ಪೂಜೆಗೆ ಶುಭ ಮುಹೂರ್ತ
ಪ್ರದೋಷ ಕಾಲ ಮುಹೂರ್ತ: 21 ಆಗಸ್ಟ್ 2023 ಸಂಜೆ 05:27 ರಿಂದ 08:27 ರವರೆಗೆ
ಶ್ರಾವಣ ಮಾಸದ ಸೋಮವಾರದಂದು ಪ್ರದೋಷ ಪೂಜೆ
* ಶ್ರಾವಣ ಸೋಮವಾರ ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಶುಭ್ರ ಬಟ್ಟೆ ಧರಿಸಬೇಕು.
* ನಂತರ ದೀಪವನ್ನು ಹಚ್ಚಿ ಪೂಜೆ ಮಾಡಿ ನಂಗರ ನಾಗಮೂರ್ತಿಗಳಿಗೆ ಪೂಜೆಯನ್ನು ಸಲ್ಲಿಸಬೇಕು.
* ಈ ದಿನ ಉಪವಾಸವಿದ್ದರೆ ತುಂಬಾ ಒಳ್ಳೆಯದು.
* ನಂತರ ಸಂಜೆ, ಪ್ರದೋಷ ಕಾಲದ ಪೂಜೆಯ ಸಮಯದಲ್ಲಿ, ಹಾಲು, ಮೊಸರು, ತುಪ್ಪ, ಜೇನುತುಪ್ಪ ಮತ್ತು ಗಂಗಾಜಲವನ್ನು ಬೆರೆಸಿ ಪಂಚಾಮೃತದಿಂದ ಶಿವಲಿಂಗಕ್ಕೆ ಅಭಿಷೇಕ ಮಾಡಬೇಕು.
* ಶಿವನಿಗೆ ಬಿಲ್ವೆಪತ್ರೆಯನ್ನು ಅರ್ಪಿಸಿ.
* ಶಿವನಿಗೆ ಆರತಿ ಮಾಡಿ ಶಿವನ ಮಂತ್ರಗಳನ್ನು ಪಠಿಸಿ.



Click it and Unblock the Notifications











