Latest Updates
-
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್!
ಅಕ್ಟೋಬರ್ 25ಕ್ಕೆ ಪಾಪಾಂಕುಶ ಏಕಾದಶಿ: ಪೂಜಾ ಮುಹೂರ್ತ ಯಾವಾಗ, ಈ ವ್ರತ ಕತೆ ಓದಿದರೆ ಒಳ್ಳೆಯದು
ಏಕಾದಶಿ ಶ್ರೀ ವಿಷ್ಣುವಿನ ಆರಾಧನೆಗೆ ತುಂಬಾ ಶ್ರೇಷ್ಠ ದಿನ. ಈ ದಿನ ಶ್ರೀ ವಿಷ್ಣುವನ್ನು ಉಪವಾಸವಿದ್ದು ಭಕ್ತಿಯಿಂದ ಆರಾಧಿಸಿದರೆ ನಮ್ಮ ಇಷ್ಟಾರ್ಥಗಳು ನೆರವೇರುವುದು ಎಂದು ಹೇಳಲಾಗುವುದು. ಅಕ್ಟೋಬರ್ 25ಕ್ಕೆ ಪಾಪಾಂಕುಶ ಏಕಾದಶಿ. ಯಾರು ಈ ಏಕಾದಶಿಯನ್ನು ಆಚರಿಸುತ್ತಾರೋ ಅವರು ಎಲ್ಲಾ ಪಾಪಗಳಿಂದ ಮುಕ್ತರಾಗುತ್ತಾರೆ ಎಂಬ ನಂಬಿಕೆ.

ಪಾಪಾಂಕುಶ ಏಕಾದಶಿ ಪೂಜಾ ಮುಹೂರ್ತ
ದಿನಾಂಕ: ಅಕ್ಟೋಬರ್ 25
ಏಕಾದಶಿ ತಿಥಿ ಅಕ್ಟೋಬರ್ 24 ಮಧ್ಯಾಹ್ನ 03:14ಕ್ಕೆ ಆರಂಭವಾಗಿದೆ
ಏಕಾದಶಿ ತಿಥಿ ಅಕ್ಟೋಬರ್ 25 ಮಧ್ಯಾಹ್ನ 12:32ಕ್ಕೆ ಮುಕ್ತಾಯವಾಗುತ್ತದೆ
ಪಾರಣ ಏಕಾದಶಿ: ಅಕ್ಟೋಬರ್ 26 ಬೆಳಗ್ಗೆ 06:28ರಿಂದ 08:43ರವರೆಗೆ
ಈ ದಿನ ಏನು ಮಾಡಬೇಕು?
* ಈ ದಿನ ಉಪವಾಸವಿದ್ದು ಶ್ರೀ ವಿಷ್ಣುವನ್ನು ಆರಾಧಿಸಬೇಕು.
* ಈ ದಿನ ಪಾಪಾಂಕುಶ ಏಕಾದಶಿ ಕತೆ ಓದಿದರೆ ಅಥವಾ ಕೇಳಿದರೆ ಒಳ್ಳೆಯದು.
* ಸಂಜೆ ವಿಷ್ಣು ಸಹಸ್ರನಾಮ ಪಠಿಸಿ
* ಆರತಿ ಮಾಡಿದ ಸಾತ್ವಿಕ ಆಹಾರ ಸೇವಿಸಿ
ಈ ದಿನ ಏನು ಮಾಡಬಾರದು?
* ಈ ದಿನ ಕೋಪಗೊಳ್ಳಬಾರದು
* ಕೆಟ್ಟ ಕೆಲಸ ಮಾಡಬಾರದು
* ಮಾಂಸಾಹಾರ, ಮದ್ಯ ಸೇವನೆ ಮಾಡಬಾರದು
ಆಶ್ವಿನ್ ಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ಪಾಪಾಂಕುಶ ಏಕಾದಶಿ ಎಂದು ಕರೆಯಲಾಗುತ್ತದೆ. ಮಹಾಭಾರತದಲ್ಲಿ ಈ ಪಾಪಾಂಕುಶ ಏಕಾದಶಿಯ ಮಹತ್ವದ ಬಗ್ಗೆ ಉಲ್ಲೇಖವಿದೆ. ಯುಧಿಷ್ಠರ ಶ್ರೀಕೃಷ್ಣನ ಬಳಿ ಪಾಪಾಂಕುಶ ಏಕಾದಶಿಯ ಮಹತ್ವದ ಬಗ್ಗೆ ಕೇಳುತ್ತಾನೆ, ಆಗ ಶ್ರೀ ಕೃಷ್ಣ ಪರಮಾತ್ಮನು ಪಾಪಾಂಕುಶ ಏಕಾದಶಿಯ ಮಹತ್ವದ ಕುರಿತು ಈ ಕತೆಯನ್ನು ಹೇಳುತ್ತಾನೆ....
ಪಾಪಾಂಕುಶ ಏಕಾದಶಿಯ ಕತೆ
ವಿಂಧ್ಯ ಪರ್ವತದ ಮೇಲೆ ಕ್ರೋಧನ ಎಂಬ ಬೇಟೆಗಾರನಿದ್ದ. ಅವನು ತುಂಬಾ ಕ್ರೂರಿ, ಅವನು ತುಂಬಾ ಪಾಪಗಳನ್ನು ಮಾಡುತ್ತಿದ್ದ. ಅವನ ಪಾಪದ ಕೊಡ ತುಂಬಿದ ಮೇಲೆ ಯಮಧೂತರು ಆತನ ಬಳಿ ಬರುತ್ತಾರೆ. ಯಮಧೂತರು ನಾಳೆ ನಿನ್ನ ಪ್ರಾಣ ಹೋಗಲಿದೆ ಎಂದು ಹೇಳಿ ಹೋಗುತ್ತಾರೆ. ಇದನ್ನು ಕೇಳಿದ ಆ ಕ್ರೂರಿಗೂ ಭಯ ಉಂಟಾಗುವುದು. ಆ ಕೊನೆಯ ಕ್ಷಣದಲ್ಲಿ ಆತನಿಗೆ ತಾನು ಮಾಡಿದ ಪಾಪದ ಅರಿವು ಉಂಟಾಗುತ್ತದೆ. ಆವಾಗ ಆತ ಪಾಪದಿಮದ ಮುಕ್ತನಾಗಲು ಬಯಸುತ್ತಾನೆ. ಆವಾಗ ಅಲ್ಲಿಗೆ ಬರುವ ಋಷಿ ಅವನಿಗೆ ಪಾಪಾಂಕುಶ ಏಕಾದಶಿ ಕುರಿತು ಮಹತ್ವದ ಕುರಿತು ತಿಳಿಸುತ್ತಾರೆ. ಅದರಂತೆ ಕ್ರೋಧನ ಪಾಪಾಂಕುಶ ಏಕಾದಶಿ ವ್ರತ ಮಾಡುತ್ತಾನೆ ಇದರಿಂದ ಆತನ ಪಾಪಗಳು ದೂರಾಗುವುದು. ಯಮಧೂತರು ಬರುತ್ತಾರೆ, ನೋಡಿದರೆ ಆತ ಪಾಪಮುಕ್ತನಾಗಿರುತ್ತಾನೆ, ಆತನನ್ನು ಸ್ವರ್ಗಕ್ಕೆ ಕರೆದುಕೊಂಡು ಹೋಗುತ್ತಾರೆ.
ಪಾಪಾಂಕುಶ ಏಕಾದಶಿಯಂದು ಈ ಮಂತ್ರ ಪಠಿಸಿ
ಶಾಂತಾಕಾರಂ ಭುಜಂಗಶಯನಂ ಪದ್ಮನಾಭಂ ಸುರೇಶಂ|
ವಿಶ್ವಧರಂ ಗಗನ ಸದೃಶಂ ಮೇಘವರ್ಣ ಶುಭಾಂಗಂ|
ಲಕ್ಷ್ಮೀಕಾಂತ ಕಮಲನಯನಂ ಯೋಗಿಭಿರ್ಧ್ಯಾನಗಮ್ಯಂ ವಂದೇ ವಿಷ್ಣು ಭವಭಯಹರಂ ಸರ್ವ ಲೋಕೈಕನಾಥಂ||
ಯಂ ಬ್ರಹ್ಮ ವರುಣೈಂದ್ರು ರುದ್ರಮೃತಃ ಸ್ತುನ್ವಾನಿ ದಿವ್ಯೈ ಸ್ತವೈವೇದೇಃ|
ಸಾಂಗ ಪದಕ್ರಮೋಪನಿಷದೈ ಗಾರ್ಯಂತಿ ಯಂ ಸಾಮಗಾಃ||
ಧ್ಯಾನಾವಸ್ಥಿತ ತದ್ಗತೇನ್ ಮನಸಾ ಪಶ್ಯತಿ ಯಂ ಯೋಗಿನೋ|



Click it and Unblock the Notifications