Latest Updates
-
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ!
ತುಂಬಾ ಶುಭ ಯೋಗದಲ್ಲಿ ಬಂದಿದೆ ಪರಮ ಏಕಾದಶಿ: ಹೀಗೆ ಮಾಡಿದರೆ ಪೂಜ್ಯ ಫಲ ಹೆಚ್ಚುತ್ತೆ
ಹಿಂದೂಗಳಿಗೆ ಏಕಾದಶಿಯ ದಿನ ತುಂಬಾ ಮಹತ್ವವಾದ ದಿನ. ಈ ದಿನ ಯಾರು ಶ್ರೀವಿಷ್ಣುವನ್ನು ಭಕ್ತಿಯಿಂದ ಆರಾಧಿಸುತ್ತಾರೋ ಅವರ ಇಷ್ಟಾರ್ಥಗಳು ನೆರವಾಗುವುದು ಎಂದು ಹೇಳಲಾಗುವುದು. ಪ್ರತಿಯೊಂದು ಏಕಾದಶಿಗೆ ಅದರದ್ದೇ ಆದ ಮಹತ್ವವಿದೆ. ಆಗಸ್ಟ್ 12ಕ್ಕೆ ಪರಮ ಏಕಾದಶಿಯನ್ನು ಆಚರಿಸಲಾಗುವುದು. ಈ ಪರಮ ಏಕಾದಶಿಯನ್ನು ಆಚರಿಸುವುದರಿಂದ ಪರಮಾತ್ಮನ ಕೃಪೆಗೆ ಪಾತ್ರರಾಗಬಹುದು, ಆದ್ದರಿಂದ ಬದುಕಿನಲ್ಲಿರುವ ಎಲ್ಲಾ ಕಷ್ಟಗಳು ದೂರಾಗುವುದು ಎಂಬುವುದು ಶ್ರೀ ವಿಷ್ಣುವಿನ ಬಲವಾದ ನಂಬಿಕೆ.

ಏಕಾದಶಿ ತಿಥಿ ಪ್ರಾರಂಭ" ಆಗಸ್ಟ್ 11 ಸಂಜೆ 05:06ಕ್ಕೆ
ಏಕಾದಶಿ ತಿಥಿ ಮುಕ್ತಾಯ: ಆಗಸ್ಟ್ 12 ಸಂಜೆ 06:01ಕ್ಕೆ
ವ್ರತ ಪಾರಣ ಸಮಯ: ಆಗಸ್ಟ್ 13 ಬೆಳಗ್ಗೆ 05:49ರಿಂದ 08:19ರವರೆಗೆ
ತುಂಬಾ ಶುಭ ಯೋಗದಲ್ಲಿ ಬಂದಿದೆ ಪರಮ ಏಕಾದಶಿ
ಈ ವರ್ಷ ಪರಮ ಏಕಾದಶಿ ತುಂಬಾನೇ ಶುಭಯೋಗವಾದ ಹರ್ಷಣ ಯೋಗದಲ್ಲಿ ಬಂದಿದೆ
ಹರ್ಷಣ ಯೋಗ ಎಂದರೇನು?
ಜ್ಯೋತಿಷ್ಯ ಪ್ರಕಾರ 27 ಯೋಗಗಳಲ್ಲಿ ಹರ್ಷಣ ಯೋಗ ಕೂಡ ಒಂದಾಗಿದೆ. ಸೂರ್ಯ, ಚಂದ್ರ ಅಶ್ವಿನಿ ನಕ್ಷತ್ರದಲ್ಲಿದ್ದಾಗ ಹರ್ಷಣ ಯೋಗ ಉಂಟಾಗುವುದು. ಇದು ತುಂಬಾ ಶುಭ ಯೋಗವಾಗಿದೆ. ಹರ್ಷಣ ಯೋಗದಲ್ಲಿ ಜನಿಸಿದರೆ ತುಂಬಾ ಶುಭ ಎಂದು ಪರಿಗಣಿಸಲಾಗುವುದು.
ಪರಮ ಏಕಾದಶಿಯಂದು ಈ ಕಾರ್ಯಗಳನ್ನು ಮಾಡುವುದರಿಂದ ಪೂಜ್ಯ ಫಲ ಹೆಚ್ಚಾಗುವುದು
ಉಪವಾಸವಿದ್ದು ಪರಮ ಏಕಾದಶಿಯನ್ನು ಆಚರಿಸಬೇಕು
ಯಾರು ಈ ಏಕಾದಶಿಯನ್ನು ಆಚರಿಸುತ್ತಾರೋ ಅವರಿಗೆ ಮೋಕ್ಷ ಸಿಗಲಿದೆ, ಕೀರ್ತಿ ಹೆಚ್ಚಾಗಲಿದೆ. ಈ ದಿನ ಭಕ್ತಿಯಿಂದ ಶ್ರೀ ವಿಷ್ಣುವಿನ ಪೂಜೆ ಮಾಡಿ. ಪೂಜೆಯಲ್ಲಿ ಹಳದಿ ಹೂಗಳು, ಹಣ್ಣುಗಳನ್ನು ಸೇರಿಸಿ. ಪೂಜೆಯಲ್ಲಿ ತುಳಸಿ ಕಡ್ಡಾಯವಾಗಿ ಬಳಸಿ, ಶ್ರೀ ವಿಷ್ಣುವಿಗೆ ಪಂಚಾಮೃತ ಅರ್ಪಿಸಿ.
ಶನಿವಾರದಂದು ಬಂದಿದೆ ಏಕಾದಶಿ
ಶನಿವಾರ ಶನಿದೇವನ ಆರಾಧನೆಗೆ ಮೀಸಲಾಗಿರುವ ದಿನ. ಈ ದಿನ ಏಕಾದಶಿ ಬಂದಿದೆ, ಈ ದಿನ ಶ್ರೀ ವಿಷ್ಣುವಿಗೆ ಪೂಜೆ ಮಾಡಿ ನಂತರ ಆಲದ ಮರದ ಕೆಳಗಡೆ ಎಳ್ಳೆಣ್ಣೆ ದೀಪ ಹಚ್ಚಿದರೆ ಶನಿಕೃಪೆಗೆ ಪಾತ್ರರಾಗುವಿರಿ.
ಹರಿಹರನ ಅನುಗ್ರಹಕ್ಕೆ
ಶ್ರಾವಣ ಮಾಸ, ಈ ದಿನ ಹರಿಹರನ ಆಶೀರ್ವಾದ ಪಡೆಯಲು ಶ್ರೀ ವಿಷ್ಣು ಹಾಗೂ ಶಿವನನ್ನು ಆರಾಧಿಸಿ. ಶಿವನಿಗೆ ಹಾಲಿನೊಂದಿಗೆ ಕುಂಕುಮವನ್ನು ಅರ್ಪಿಸಿ. ಹರಿಹರನ ಪೂಜೆ ಮಾಡುವುದರಿಂದ ವೈವಾಹಿಕ ಜೀವನ ಚೆನ್ನಾಗಿರಲಿದೆ, ಅಲ್ಲದೆ ವೈವಾಹಿಕ ಜೀವನದಲ್ಲಿ ಸಮಸ್ಯೆಗಳಿದ್ದರೆ ದೂರಾಗುವುದು.
ಹನುಮಂತನ ಪೂಜೆ ಮಾಡಿ
ಶನಿವಾರದ ಪರಮ ಏಕಾದಶಿಯಂದು ಹನುಮಂತನ ದೇಗುಲಕ್ಕೂ ಭೇಟಿ ನೀಡಿ, ದೇವರಿಗೆ ಸಿಂಧೂರ ಅರ್ಪಿಸಿ, ಹನುಮಾನ್ ಚಾಲೀಸ ಪಠಿಸಿ.
ಸಂಜೆ ಹೊತ್ತು ತುಳಸಿಗೆ ಪೂಜೆ ಮಾಡಿ
ಈ ದಿನ ಸಂಜೆ ತುಳಸಿ ಗಿಡದ ಕೆಳಗಡೆ ತುಪ್ಪದ ದೀಪ ಹಚ್ಚಿ ತುಳಸಿಯನ್ನು ಪೂಜಿಸಿ.
ದಾನಧರ್ಮದ ಮಹತ್ವ
ಈ ದಿನ ಮಾಡುವ ಧಾನಧರ್ಮದಿಂದ ಪೂಜೆಯ ಫಲ ಹೆಚ್ಚಾಗಲಿದೆ. ನಿಮಗೆ ಕೈಯಲ್ಲಾದಂತೆ ಬಡ ಬಗ್ಗರಿಗೆ ಸಹಾಯ ಮಾಡಿ, ನಿರ್ಗತಿಕರಿಗೆ ಆಹಾರವನ್ನು ನೀಡಿ.



Click it and Unblock the Notifications
